Homeಮುಖಪುಟಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

ಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ನಡೆಸಿದ ಮಹಾ ನೇಮಕಾತಿ ಚಾಲನೆಯಲ್ಲಿ ಸಂಭವಿಸಿದ ಬಹು ಕೋಟಿ ಹಗರಣದ ಬಗ್ಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಕುರಿತು ತನಿಖೆ ಮಾಡಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಲೋಚಿಸುತ್ತಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು, ದಿ ವೈರ್, 2019 ರಲ್ಲಿ ನಡೆದ ಸರ್ಕರಿ ನೇಮಕಾತಿಯಲ್ಲಿ ಮಹಾ ಅಕ್ರಮ ನಡೆದಿದೆ ಎಂದು ತನಿಖಾ ವರದಿ ಮಾಡಿತ್ತು. 11 ವಿಭಾಗಗಳಲ್ಲಿ ವರ್ಗ ’ಸಿ’ ಮತ್ತು ವರ್ಗ ’ಡಿ’ ಹುದ್ದೆಗಳನ್ನು ಭರ್ತಿ ಮಾಡಬೇಕಾಗುವ ಅಕ್ರಮ ನೇಮಕಾತಿ ಮಾಡಿಕೊಳ್ಳಲಾಗಿತ್ತು.

ನಿನ್ನೆ ಮಾರ್ಚ್ 5 ರಂದು ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ದಿ ವೈರ್‌ನ ವೀಕ್ಷಣೆಯಂತೆಯೇ, ಪಟೋಲೆ ಕೂಡ ಹಗರಣದ ವ್ಯಾಪ್ತಿಯನ್ನು ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯ ಹಗರಣದೊಂದಿಗೆ ಹೋಲಿಸಿದ್ದಾರೆ. ಇದನ್ನು ಸಾಮಾನ್ಯವಾಗಿ ವ್ಯಾಪಮ್ ಹಗರಣ ಎಂದು ಕರೆಯಲಾಗುತ್ತದೆ. ಈ ಮೆಗಾಭರ್ತಿ ಘೋಟಾಲಾ (ಮೆಗಾ ನೇಮಕಾತಿ ಹಗರಣ) ಮಧ್ಯಪ್ರದೇಶದಲ್ಲಿ ಪತ್ತೆಯಾದ ವ್ಯಾಪಂ ಹಗರಣಕ್ಕಿಂತ ದೊಡ್ಡದಾಗಿದೆ. ಮಹಾಪರಿಷ್ಠರ ಹೆಸರಿನಲ್ಲಿ, ಹಿಂದಿನ ಸರ್ಕಾರವು ಹಲವಾರು ಸಾವಿರ ಆಕಾಂಕ್ಷಿಗಳ ಜೀವನ ಮತ್ತು ಕನಸುಗಳನ್ನು ಹಾಳು ಮಾಡಿದೆ ಎಂದು ಪಟೋಲೆ ಸದನದಲ್ಲಿ ಹೇಳಿದರು.

2017 ಮತ್ತು 2019 ರ ನಡುವೆ ರಾಜ್ಯದ 25 ಇಲಾಖೆಗಳಲ್ಲಿ 30,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ 35.5 ಲಕ್ಷ ಆಕಾಂಕ್ಷಿಗಳ ಭವಿಷ್ಯವನ್ನು ಮಹಾಪರೀಕ್ಷಾ ಪೋರ್ಟಲ್ ನಿರ್ಧರಿಸಬೇಕಿತ್ತು. ವ್ಯಾಪಂ ಹಗರಣದಂತೆ, ಮಹಾರಾಷ್ಟ್ರದಲ್ಲೂ ಸಾವಿರಾರು ಅಭ್ಯರ್ಥಿಗಳು ನೇಮಕಾತಿ ಅಕ್ರಮವನ್ನು ಆರೋಪಿಸಿದ್ದರು. ಮಹಾ-ಐಟಿ ಇಲಾಖೆಯು ಖಾಸಗಿ ಕಂಪನಿಗಳಾದ ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಜೊತೆ ಒಪ್ಪಂದ ಮಾಡಿಕೊಂಡು ಅಕ್ರಮ ಎಸಗಿತ್ತು ಎಂದು ಆರೋಪ ಮಾಡಲಾಗಿತ್ತು.

ವೈರ್‌ನ ವರದಿಯು 2019 ರಲ್ಲಿ ವಿವಿಧ ಇಲಾಖೆಗಳಲ್ಲಿ ’ಸಿ’ ಮತ್ತು ಕ್ಲಾಸ್ ’ಡಿ’ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ವ್ಯವಸ್ಥಿತ ಜಾಲವನ್ನು ಬಹಿರಂಗಪಡಿಸಿತ್ತು. ಪರೀಕ್ಷೆಗಳನ್ನು ಮಹಾರಾಷ್ಟ್ರ ಪೋರ್ಟಲ್ ನಿರ್ವಹಿಸಿದ್ದು, ಇದನ್ನು ಮಹಾರಾಷ್ಟ್ರ ಮಾಹಿತಿ ತಂತ್ರಜ್ಞಾನ ನಿಗಮ ನಿರ್ವಹಿಸಿತ್ತು.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ಕಳೆದ ವರ್ಷ ಮೇ ತಿಂಗಳಲ್ಲಿ ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಹುಲ್ ದ್ವಿವೇದಿ ತಮ್ಮ ಜಿಲ್ಲೆಯಲ್ಲಿ ನಡೆಸಿದ ಪರೀಕ್ಷೆಗಳಲ್ಲಿನ ವ್ಯತ್ಯಾಸಗಳನ್ನು ಬಹಿರಂಗಪಡಿಸುವ 12 ಪುಟಗಳ ಭೀಕರ ವರದಿಯನ್ನು ಬರೆದಿದ್ದರು. ಅಹ್ಮದ್‌ನಗರ ಜಿಲ್ಲೆಯಲ್ಲಿ ಕನಿಷ್ಟ 14 ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಸಂಶಯಾಸ್ಪದರು ಎಂದು ಕಂಡುಬಂದಿದೆ. ಹಲವಾರು ನಕಲಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ದ್ವಿವೇದಿ ಕಂಡುಹಿಡಿದಿದ್ದರು.

ಆಳಕ್ಕೆ ಇಳಿದು ನೋಡಿದಾಗ, ದಿ ವೈರ್‌ನ ತನಿಖೆಯು ವಂಚನೆಯನ್ನು ಅಹ್ಮದ್‌ನಗರಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಆದರೆ ಇದು ವ್ಯಾಪಕ ಹಗರಣವಾಗಿದೆ, ಈ ರಾಜ್ಯ ನೇಮಕಾತಿ ಪರೀಕ್ಷೆಗಳನ್ನು ನಡೆಸಿದ ಎಲ್ಲಾ 34 ಜಿಲ್ಲೆಗಳಲ್ಲೂ ಅಕ್ರಮ ನಡೆದಿದೆ. ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ಹಿಡಿದು, ಭಾವಚಿತ್ರಗಳು ಮತ್ತು ಸಹಿಗಳಲ್ಲಿ ಹೊಂದಾಣಿಕೆಯಾಗದ ನೂರಾರು ಪ್ರಕರಣಗಳು ಬಯಲಿಗೆ ಬಂದಿದ್ದವು. ಪರೀಕ್ಷಾ ಹಾಲ್‌ಗೆ ಪ್ರವೇಶಿಸುವಾಗ ನೂರಾರು ಅಭ್ಯರ್ಥಿಗಳು ಪತ್ತೇದಾರಿ ಕ್ಯಾಮೆರಾಗಳು ಮತ್ತು ಮೈಕ್ರೊಫೋನ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ಎಂದು ವೈರ್ ಒತ್ತೆ ಹಚ್ಚಿತ್ತು.

ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಎಂಬ ಎರಡು ಕಂಪನಿಗಳ ಗೋಲ್‌ಮಾಲ್ ಈಗ ಮತ್ತೆ ಸದಸನದಲ್ಲಿ ಚರ್ಚೆಗೆ ಬಂದಿದೆ. ಜೊತೆಗೆ ಮಹಾ-ಐಟಿ ಇಲಾಖೆಯ ಮಾಜಿ ನಾಮಿನಿ ನಿರ್ದೇಶಕ ಕೌಸ್ತುಬ್ ಧಾವ್ಸೆ ಪಾತ್ರ ಕೂಡ ಚರ್ಚೆಗೆ ಬಂದಿದೆ. ಫಡ್ನವೀಸ್ ಅವರ ನಿಕಟವರ್ತಿಯಾಗಿದ್ದ ಧಾವ್ಸೆ ಅವರು ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಆಗಿದ್ದರು ಮತ್ತು ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡ ಕೂಡಲೇ ಕಳೆದ ಡಿಸೆಂಬರ್‌ನಲ್ಲಿ ಮಹಾ-ಐಟಿ ನಿರ್ದೇಶಕರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

ಧಾವ್ಸೆಗೆ ಜಂಟಿ ಕಾರ್ಯದರ್ಶಿ ಸ್ಥಾನಮಾನ ನೀಡಲಾಗಿತ್ತು (ಅವರು ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯದಲ್ಲಿದ್ದ ಅಧಿಕಾರಿಯಾಗಿದ್ದರು ಮತ್ತು ಈಗ ಪ್ರತಿಪಕ್ಷದ ನಾಯಕರಾಗಿರುವ ಫಡ್ನವೀಸ್ ಅವರ ಮುಖ್ಯ ನೀತಿ ಸಲಹೆಗಾರರಾಗಿದ್ದಾರೆ) ಮತ್ತು ಅವರಿಗೆ ಪಕ್ಷದ ವಾರ್‌ ರೂಮ್ ಉಸ್ತುವಾರಿ ವಹಿಸಲಾಗಿತ್ತು.

ದಿ ವೈರ್‌ನ ವರದಿಯನ್ನು ಅನುಸರಿಸಿ, ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ತಮ್ಮ ಕಚೇರಿ ಕುರಿತ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಶಾಸಕ ರೋಹಿತ್ ಪವಾರ್ ಕೂಡ ತಕ್ಷಣ ಕ್ರಮ ಕೈಗೊಳ್ಳಲು ಕೋರಿದ್ದರು. ಆದರೆ ಅಂತಿಮವಾಗಿ ಯಾವುದೇ ಕ್ರಮವನ್ನು ಪ್ರಾರಂಭಿಸಲಿಲ್ಲ.

ಮಾರ್ಚ್ 5 ರಂದು, ಮಾಧ್ಯಮಗಳಲ್ಲಿ ಇದೇ ರೀತಿಯ ವರದಿಗಳನ್ನು ಅನುಸರಿಸಿ, ಈ ವಿಷಯವು ಮತ್ತೆ ಗಮನಕ್ಕೆ ಬಂದಿದೆ. ಈ ಪರೀಕ್ಷೆಗಳು ಸಾಮಾನ್ಯ ಆಡಳಿತ ಸಚಿವಾಲಯ (ಜಿಎಡಿ) ನಿರ್ವಹಿಸುವ ಆಡಳಿತ ಸೇವೆಗಳ ಒಂದು ಭಾಗವಾಗಿದೆ. ಇತರ ಖಾತೆಗಳ ಜೊತೆಗೆ, ಫಡ್ನವೀಸ್ ಜಿಎಡಿಯನ್ನು ನಿಭಾಯಿಸಿದ್ದರು ಮತ್ತು ರಾಜ್ಯದಲ್ಲಿ ಮಹಾಭರ್ತಿ (ಮೆಗಾ ನೇಮಕಾತಿ) ಅಭಿಯಾನವನ್ನು ನೇರವಾಗಿ ಮೇಲ್ವಿಚಾರಣೆ ಮಾಡಿದ್ದರು. ಈಗ ಈ ಬಂಡವಾಳವು ಈಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಇದೆ. ಈಗ ಹಗರಣದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....