Homeಮುಖಪುಟಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

ಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ನಡೆಸಿದ ಮಹಾ ನೇಮಕಾತಿ ಚಾಲನೆಯಲ್ಲಿ ಸಂಭವಿಸಿದ ಬಹು ಕೋಟಿ ಹಗರಣದ ಬಗ್ಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಕುರಿತು ತನಿಖೆ ಮಾಡಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಲೋಚಿಸುತ್ತಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು, ದಿ ವೈರ್, 2019 ರಲ್ಲಿ ನಡೆದ ಸರ್ಕರಿ ನೇಮಕಾತಿಯಲ್ಲಿ ಮಹಾ ಅಕ್ರಮ ನಡೆದಿದೆ ಎಂದು ತನಿಖಾ ವರದಿ ಮಾಡಿತ್ತು. 11 ವಿಭಾಗಗಳಲ್ಲಿ ವರ್ಗ ’ಸಿ’ ಮತ್ತು ವರ್ಗ ’ಡಿ’ ಹುದ್ದೆಗಳನ್ನು ಭರ್ತಿ ಮಾಡಬೇಕಾಗುವ ಅಕ್ರಮ ನೇಮಕಾತಿ ಮಾಡಿಕೊಳ್ಳಲಾಗಿತ್ತು.

ನಿನ್ನೆ ಮಾರ್ಚ್ 5 ರಂದು ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ದಿ ವೈರ್‌ನ ವೀಕ್ಷಣೆಯಂತೆಯೇ, ಪಟೋಲೆ ಕೂಡ ಹಗರಣದ ವ್ಯಾಪ್ತಿಯನ್ನು ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯ ಹಗರಣದೊಂದಿಗೆ ಹೋಲಿಸಿದ್ದಾರೆ. ಇದನ್ನು ಸಾಮಾನ್ಯವಾಗಿ ವ್ಯಾಪಮ್ ಹಗರಣ ಎಂದು ಕರೆಯಲಾಗುತ್ತದೆ. ಈ ಮೆಗಾಭರ್ತಿ ಘೋಟಾಲಾ (ಮೆಗಾ ನೇಮಕಾತಿ ಹಗರಣ) ಮಧ್ಯಪ್ರದೇಶದಲ್ಲಿ ಪತ್ತೆಯಾದ ವ್ಯಾಪಂ ಹಗರಣಕ್ಕಿಂತ ದೊಡ್ಡದಾಗಿದೆ. ಮಹಾಪರಿಷ್ಠರ ಹೆಸರಿನಲ್ಲಿ, ಹಿಂದಿನ ಸರ್ಕಾರವು ಹಲವಾರು ಸಾವಿರ ಆಕಾಂಕ್ಷಿಗಳ ಜೀವನ ಮತ್ತು ಕನಸುಗಳನ್ನು ಹಾಳು ಮಾಡಿದೆ ಎಂದು ಪಟೋಲೆ ಸದನದಲ್ಲಿ ಹೇಳಿದರು.

2017 ಮತ್ತು 2019 ರ ನಡುವೆ ರಾಜ್ಯದ 25 ಇಲಾಖೆಗಳಲ್ಲಿ 30,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ 35.5 ಲಕ್ಷ ಆಕಾಂಕ್ಷಿಗಳ ಭವಿಷ್ಯವನ್ನು ಮಹಾಪರೀಕ್ಷಾ ಪೋರ್ಟಲ್ ನಿರ್ಧರಿಸಬೇಕಿತ್ತು. ವ್ಯಾಪಂ ಹಗರಣದಂತೆ, ಮಹಾರಾಷ್ಟ್ರದಲ್ಲೂ ಸಾವಿರಾರು ಅಭ್ಯರ್ಥಿಗಳು ನೇಮಕಾತಿ ಅಕ್ರಮವನ್ನು ಆರೋಪಿಸಿದ್ದರು. ಮಹಾ-ಐಟಿ ಇಲಾಖೆಯು ಖಾಸಗಿ ಕಂಪನಿಗಳಾದ ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಜೊತೆ ಒಪ್ಪಂದ ಮಾಡಿಕೊಂಡು ಅಕ್ರಮ ಎಸಗಿತ್ತು ಎಂದು ಆರೋಪ ಮಾಡಲಾಗಿತ್ತು.

ವೈರ್‌ನ ವರದಿಯು 2019 ರಲ್ಲಿ ವಿವಿಧ ಇಲಾಖೆಗಳಲ್ಲಿ ’ಸಿ’ ಮತ್ತು ಕ್ಲಾಸ್ ’ಡಿ’ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ವ್ಯವಸ್ಥಿತ ಜಾಲವನ್ನು ಬಹಿರಂಗಪಡಿಸಿತ್ತು. ಪರೀಕ್ಷೆಗಳನ್ನು ಮಹಾರಾಷ್ಟ್ರ ಪೋರ್ಟಲ್ ನಿರ್ವಹಿಸಿದ್ದು, ಇದನ್ನು ಮಹಾರಾಷ್ಟ್ರ ಮಾಹಿತಿ ತಂತ್ರಜ್ಞಾನ ನಿಗಮ ನಿರ್ವಹಿಸಿತ್ತು.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ಕಳೆದ ವರ್ಷ ಮೇ ತಿಂಗಳಲ್ಲಿ ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಹುಲ್ ದ್ವಿವೇದಿ ತಮ್ಮ ಜಿಲ್ಲೆಯಲ್ಲಿ ನಡೆಸಿದ ಪರೀಕ್ಷೆಗಳಲ್ಲಿನ ವ್ಯತ್ಯಾಸಗಳನ್ನು ಬಹಿರಂಗಪಡಿಸುವ 12 ಪುಟಗಳ ಭೀಕರ ವರದಿಯನ್ನು ಬರೆದಿದ್ದರು. ಅಹ್ಮದ್‌ನಗರ ಜಿಲ್ಲೆಯಲ್ಲಿ ಕನಿಷ್ಟ 14 ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಸಂಶಯಾಸ್ಪದರು ಎಂದು ಕಂಡುಬಂದಿದೆ. ಹಲವಾರು ನಕಲಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ದ್ವಿವೇದಿ ಕಂಡುಹಿಡಿದಿದ್ದರು.

ಆಳಕ್ಕೆ ಇಳಿದು ನೋಡಿದಾಗ, ದಿ ವೈರ್‌ನ ತನಿಖೆಯು ವಂಚನೆಯನ್ನು ಅಹ್ಮದ್‌ನಗರಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಆದರೆ ಇದು ವ್ಯಾಪಕ ಹಗರಣವಾಗಿದೆ, ಈ ರಾಜ್ಯ ನೇಮಕಾತಿ ಪರೀಕ್ಷೆಗಳನ್ನು ನಡೆಸಿದ ಎಲ್ಲಾ 34 ಜಿಲ್ಲೆಗಳಲ್ಲೂ ಅಕ್ರಮ ನಡೆದಿದೆ. ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ಹಿಡಿದು, ಭಾವಚಿತ್ರಗಳು ಮತ್ತು ಸಹಿಗಳಲ್ಲಿ ಹೊಂದಾಣಿಕೆಯಾಗದ ನೂರಾರು ಪ್ರಕರಣಗಳು ಬಯಲಿಗೆ ಬಂದಿದ್ದವು. ಪರೀಕ್ಷಾ ಹಾಲ್‌ಗೆ ಪ್ರವೇಶಿಸುವಾಗ ನೂರಾರು ಅಭ್ಯರ್ಥಿಗಳು ಪತ್ತೇದಾರಿ ಕ್ಯಾಮೆರಾಗಳು ಮತ್ತು ಮೈಕ್ರೊಫೋನ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ಎಂದು ವೈರ್ ಒತ್ತೆ ಹಚ್ಚಿತ್ತು.

ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಎಂಬ ಎರಡು ಕಂಪನಿಗಳ ಗೋಲ್‌ಮಾಲ್ ಈಗ ಮತ್ತೆ ಸದಸನದಲ್ಲಿ ಚರ್ಚೆಗೆ ಬಂದಿದೆ. ಜೊತೆಗೆ ಮಹಾ-ಐಟಿ ಇಲಾಖೆಯ ಮಾಜಿ ನಾಮಿನಿ ನಿರ್ದೇಶಕ ಕೌಸ್ತುಬ್ ಧಾವ್ಸೆ ಪಾತ್ರ ಕೂಡ ಚರ್ಚೆಗೆ ಬಂದಿದೆ. ಫಡ್ನವೀಸ್ ಅವರ ನಿಕಟವರ್ತಿಯಾಗಿದ್ದ ಧಾವ್ಸೆ ಅವರು ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಆಗಿದ್ದರು ಮತ್ತು ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡ ಕೂಡಲೇ ಕಳೆದ ಡಿಸೆಂಬರ್‌ನಲ್ಲಿ ಮಹಾ-ಐಟಿ ನಿರ್ದೇಶಕರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

ಧಾವ್ಸೆಗೆ ಜಂಟಿ ಕಾರ್ಯದರ್ಶಿ ಸ್ಥಾನಮಾನ ನೀಡಲಾಗಿತ್ತು (ಅವರು ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯದಲ್ಲಿದ್ದ ಅಧಿಕಾರಿಯಾಗಿದ್ದರು ಮತ್ತು ಈಗ ಪ್ರತಿಪಕ್ಷದ ನಾಯಕರಾಗಿರುವ ಫಡ್ನವೀಸ್ ಅವರ ಮುಖ್ಯ ನೀತಿ ಸಲಹೆಗಾರರಾಗಿದ್ದಾರೆ) ಮತ್ತು ಅವರಿಗೆ ಪಕ್ಷದ ವಾರ್‌ ರೂಮ್ ಉಸ್ತುವಾರಿ ವಹಿಸಲಾಗಿತ್ತು.

ದಿ ವೈರ್‌ನ ವರದಿಯನ್ನು ಅನುಸರಿಸಿ, ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ತಮ್ಮ ಕಚೇರಿ ಕುರಿತ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಶಾಸಕ ರೋಹಿತ್ ಪವಾರ್ ಕೂಡ ತಕ್ಷಣ ಕ್ರಮ ಕೈಗೊಳ್ಳಲು ಕೋರಿದ್ದರು. ಆದರೆ ಅಂತಿಮವಾಗಿ ಯಾವುದೇ ಕ್ರಮವನ್ನು ಪ್ರಾರಂಭಿಸಲಿಲ್ಲ.

ಮಾರ್ಚ್ 5 ರಂದು, ಮಾಧ್ಯಮಗಳಲ್ಲಿ ಇದೇ ರೀತಿಯ ವರದಿಗಳನ್ನು ಅನುಸರಿಸಿ, ಈ ವಿಷಯವು ಮತ್ತೆ ಗಮನಕ್ಕೆ ಬಂದಿದೆ. ಈ ಪರೀಕ್ಷೆಗಳು ಸಾಮಾನ್ಯ ಆಡಳಿತ ಸಚಿವಾಲಯ (ಜಿಎಡಿ) ನಿರ್ವಹಿಸುವ ಆಡಳಿತ ಸೇವೆಗಳ ಒಂದು ಭಾಗವಾಗಿದೆ. ಇತರ ಖಾತೆಗಳ ಜೊತೆಗೆ, ಫಡ್ನವೀಸ್ ಜಿಎಡಿಯನ್ನು ನಿಭಾಯಿಸಿದ್ದರು ಮತ್ತು ರಾಜ್ಯದಲ್ಲಿ ಮಹಾಭರ್ತಿ (ಮೆಗಾ ನೇಮಕಾತಿ) ಅಭಿಯಾನವನ್ನು ನೇರವಾಗಿ ಮೇಲ್ವಿಚಾರಣೆ ಮಾಡಿದ್ದರು. ಈಗ ಈ ಬಂಡವಾಳವು ಈಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಇದೆ. ಈಗ ಹಗರಣದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...