Homeಮುಖಪುಟಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

ಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ನಡೆಸಿದ ಮಹಾ ನೇಮಕಾತಿ ಚಾಲನೆಯಲ್ಲಿ ಸಂಭವಿಸಿದ ಬಹು ಕೋಟಿ ಹಗರಣದ ಬಗ್ಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಕುರಿತು ತನಿಖೆ ಮಾಡಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಲೋಚಿಸುತ್ತಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು, ದಿ ವೈರ್, 2019 ರಲ್ಲಿ ನಡೆದ ಸರ್ಕರಿ ನೇಮಕಾತಿಯಲ್ಲಿ ಮಹಾ ಅಕ್ರಮ ನಡೆದಿದೆ ಎಂದು ತನಿಖಾ ವರದಿ ಮಾಡಿತ್ತು. 11 ವಿಭಾಗಗಳಲ್ಲಿ ವರ್ಗ ’ಸಿ’ ಮತ್ತು ವರ್ಗ ’ಡಿ’ ಹುದ್ದೆಗಳನ್ನು ಭರ್ತಿ ಮಾಡಬೇಕಾಗುವ ಅಕ್ರಮ ನೇಮಕಾತಿ ಮಾಡಿಕೊಳ್ಳಲಾಗಿತ್ತು.

ನಿನ್ನೆ ಮಾರ್ಚ್ 5 ರಂದು ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ದಿ ವೈರ್‌ನ ವೀಕ್ಷಣೆಯಂತೆಯೇ, ಪಟೋಲೆ ಕೂಡ ಹಗರಣದ ವ್ಯಾಪ್ತಿಯನ್ನು ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯ ಹಗರಣದೊಂದಿಗೆ ಹೋಲಿಸಿದ್ದಾರೆ. ಇದನ್ನು ಸಾಮಾನ್ಯವಾಗಿ ವ್ಯಾಪಮ್ ಹಗರಣ ಎಂದು ಕರೆಯಲಾಗುತ್ತದೆ. ಈ ಮೆಗಾಭರ್ತಿ ಘೋಟಾಲಾ (ಮೆಗಾ ನೇಮಕಾತಿ ಹಗರಣ) ಮಧ್ಯಪ್ರದೇಶದಲ್ಲಿ ಪತ್ತೆಯಾದ ವ್ಯಾಪಂ ಹಗರಣಕ್ಕಿಂತ ದೊಡ್ಡದಾಗಿದೆ. ಮಹಾಪರಿಷ್ಠರ ಹೆಸರಿನಲ್ಲಿ, ಹಿಂದಿನ ಸರ್ಕಾರವು ಹಲವಾರು ಸಾವಿರ ಆಕಾಂಕ್ಷಿಗಳ ಜೀವನ ಮತ್ತು ಕನಸುಗಳನ್ನು ಹಾಳು ಮಾಡಿದೆ ಎಂದು ಪಟೋಲೆ ಸದನದಲ್ಲಿ ಹೇಳಿದರು.

2017 ಮತ್ತು 2019 ರ ನಡುವೆ ರಾಜ್ಯದ 25 ಇಲಾಖೆಗಳಲ್ಲಿ 30,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ 35.5 ಲಕ್ಷ ಆಕಾಂಕ್ಷಿಗಳ ಭವಿಷ್ಯವನ್ನು ಮಹಾಪರೀಕ್ಷಾ ಪೋರ್ಟಲ್ ನಿರ್ಧರಿಸಬೇಕಿತ್ತು. ವ್ಯಾಪಂ ಹಗರಣದಂತೆ, ಮಹಾರಾಷ್ಟ್ರದಲ್ಲೂ ಸಾವಿರಾರು ಅಭ್ಯರ್ಥಿಗಳು ನೇಮಕಾತಿ ಅಕ್ರಮವನ್ನು ಆರೋಪಿಸಿದ್ದರು. ಮಹಾ-ಐಟಿ ಇಲಾಖೆಯು ಖಾಸಗಿ ಕಂಪನಿಗಳಾದ ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಜೊತೆ ಒಪ್ಪಂದ ಮಾಡಿಕೊಂಡು ಅಕ್ರಮ ಎಸಗಿತ್ತು ಎಂದು ಆರೋಪ ಮಾಡಲಾಗಿತ್ತು.

ವೈರ್‌ನ ವರದಿಯು 2019 ರಲ್ಲಿ ವಿವಿಧ ಇಲಾಖೆಗಳಲ್ಲಿ ’ಸಿ’ ಮತ್ತು ಕ್ಲಾಸ್ ’ಡಿ’ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ವ್ಯವಸ್ಥಿತ ಜಾಲವನ್ನು ಬಹಿರಂಗಪಡಿಸಿತ್ತು. ಪರೀಕ್ಷೆಗಳನ್ನು ಮಹಾರಾಷ್ಟ್ರ ಪೋರ್ಟಲ್ ನಿರ್ವಹಿಸಿದ್ದು, ಇದನ್ನು ಮಹಾರಾಷ್ಟ್ರ ಮಾಹಿತಿ ತಂತ್ರಜ್ಞಾನ ನಿಗಮ ನಿರ್ವಹಿಸಿತ್ತು.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ಕಳೆದ ವರ್ಷ ಮೇ ತಿಂಗಳಲ್ಲಿ ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಹುಲ್ ದ್ವಿವೇದಿ ತಮ್ಮ ಜಿಲ್ಲೆಯಲ್ಲಿ ನಡೆಸಿದ ಪರೀಕ್ಷೆಗಳಲ್ಲಿನ ವ್ಯತ್ಯಾಸಗಳನ್ನು ಬಹಿರಂಗಪಡಿಸುವ 12 ಪುಟಗಳ ಭೀಕರ ವರದಿಯನ್ನು ಬರೆದಿದ್ದರು. ಅಹ್ಮದ್‌ನಗರ ಜಿಲ್ಲೆಯಲ್ಲಿ ಕನಿಷ್ಟ 14 ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಸಂಶಯಾಸ್ಪದರು ಎಂದು ಕಂಡುಬಂದಿದೆ. ಹಲವಾರು ನಕಲಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ದ್ವಿವೇದಿ ಕಂಡುಹಿಡಿದಿದ್ದರು.

ಆಳಕ್ಕೆ ಇಳಿದು ನೋಡಿದಾಗ, ದಿ ವೈರ್‌ನ ತನಿಖೆಯು ವಂಚನೆಯನ್ನು ಅಹ್ಮದ್‌ನಗರಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಆದರೆ ಇದು ವ್ಯಾಪಕ ಹಗರಣವಾಗಿದೆ, ಈ ರಾಜ್ಯ ನೇಮಕಾತಿ ಪರೀಕ್ಷೆಗಳನ್ನು ನಡೆಸಿದ ಎಲ್ಲಾ 34 ಜಿಲ್ಲೆಗಳಲ್ಲೂ ಅಕ್ರಮ ನಡೆದಿದೆ. ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ಹಿಡಿದು, ಭಾವಚಿತ್ರಗಳು ಮತ್ತು ಸಹಿಗಳಲ್ಲಿ ಹೊಂದಾಣಿಕೆಯಾಗದ ನೂರಾರು ಪ್ರಕರಣಗಳು ಬಯಲಿಗೆ ಬಂದಿದ್ದವು. ಪರೀಕ್ಷಾ ಹಾಲ್‌ಗೆ ಪ್ರವೇಶಿಸುವಾಗ ನೂರಾರು ಅಭ್ಯರ್ಥಿಗಳು ಪತ್ತೇದಾರಿ ಕ್ಯಾಮೆರಾಗಳು ಮತ್ತು ಮೈಕ್ರೊಫೋನ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ಎಂದು ವೈರ್ ಒತ್ತೆ ಹಚ್ಚಿತ್ತು.

ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಎಂಬ ಎರಡು ಕಂಪನಿಗಳ ಗೋಲ್‌ಮಾಲ್ ಈಗ ಮತ್ತೆ ಸದಸನದಲ್ಲಿ ಚರ್ಚೆಗೆ ಬಂದಿದೆ. ಜೊತೆಗೆ ಮಹಾ-ಐಟಿ ಇಲಾಖೆಯ ಮಾಜಿ ನಾಮಿನಿ ನಿರ್ದೇಶಕ ಕೌಸ್ತುಬ್ ಧಾವ್ಸೆ ಪಾತ್ರ ಕೂಡ ಚರ್ಚೆಗೆ ಬಂದಿದೆ. ಫಡ್ನವೀಸ್ ಅವರ ನಿಕಟವರ್ತಿಯಾಗಿದ್ದ ಧಾವ್ಸೆ ಅವರು ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಆಗಿದ್ದರು ಮತ್ತು ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡ ಕೂಡಲೇ ಕಳೆದ ಡಿಸೆಂಬರ್‌ನಲ್ಲಿ ಮಹಾ-ಐಟಿ ನಿರ್ದೇಶಕರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

ಧಾವ್ಸೆಗೆ ಜಂಟಿ ಕಾರ್ಯದರ್ಶಿ ಸ್ಥಾನಮಾನ ನೀಡಲಾಗಿತ್ತು (ಅವರು ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯದಲ್ಲಿದ್ದ ಅಧಿಕಾರಿಯಾಗಿದ್ದರು ಮತ್ತು ಈಗ ಪ್ರತಿಪಕ್ಷದ ನಾಯಕರಾಗಿರುವ ಫಡ್ನವೀಸ್ ಅವರ ಮುಖ್ಯ ನೀತಿ ಸಲಹೆಗಾರರಾಗಿದ್ದಾರೆ) ಮತ್ತು ಅವರಿಗೆ ಪಕ್ಷದ ವಾರ್‌ ರೂಮ್ ಉಸ್ತುವಾರಿ ವಹಿಸಲಾಗಿತ್ತು.

ದಿ ವೈರ್‌ನ ವರದಿಯನ್ನು ಅನುಸರಿಸಿ, ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ತಮ್ಮ ಕಚೇರಿ ಕುರಿತ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಶಾಸಕ ರೋಹಿತ್ ಪವಾರ್ ಕೂಡ ತಕ್ಷಣ ಕ್ರಮ ಕೈಗೊಳ್ಳಲು ಕೋರಿದ್ದರು. ಆದರೆ ಅಂತಿಮವಾಗಿ ಯಾವುದೇ ಕ್ರಮವನ್ನು ಪ್ರಾರಂಭಿಸಲಿಲ್ಲ.

ಮಾರ್ಚ್ 5 ರಂದು, ಮಾಧ್ಯಮಗಳಲ್ಲಿ ಇದೇ ರೀತಿಯ ವರದಿಗಳನ್ನು ಅನುಸರಿಸಿ, ಈ ವಿಷಯವು ಮತ್ತೆ ಗಮನಕ್ಕೆ ಬಂದಿದೆ. ಈ ಪರೀಕ್ಷೆಗಳು ಸಾಮಾನ್ಯ ಆಡಳಿತ ಸಚಿವಾಲಯ (ಜಿಎಡಿ) ನಿರ್ವಹಿಸುವ ಆಡಳಿತ ಸೇವೆಗಳ ಒಂದು ಭಾಗವಾಗಿದೆ. ಇತರ ಖಾತೆಗಳ ಜೊತೆಗೆ, ಫಡ್ನವೀಸ್ ಜಿಎಡಿಯನ್ನು ನಿಭಾಯಿಸಿದ್ದರು ಮತ್ತು ರಾಜ್ಯದಲ್ಲಿ ಮಹಾಭರ್ತಿ (ಮೆಗಾ ನೇಮಕಾತಿ) ಅಭಿಯಾನವನ್ನು ನೇರವಾಗಿ ಮೇಲ್ವಿಚಾರಣೆ ಮಾಡಿದ್ದರು. ಈಗ ಈ ಬಂಡವಾಳವು ಈಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಇದೆ. ಈಗ ಹಗರಣದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...