Homeಮುಖಪುಟಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

ಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ನಡೆಸಿದ ಮಹಾ ನೇಮಕಾತಿ ಚಾಲನೆಯಲ್ಲಿ ಸಂಭವಿಸಿದ ಬಹು ಕೋಟಿ ಹಗರಣದ ಬಗ್ಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಕುರಿತು ತನಿಖೆ ಮಾಡಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಲೋಚಿಸುತ್ತಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು, ದಿ ವೈರ್, 2019 ರಲ್ಲಿ ನಡೆದ ಸರ್ಕರಿ ನೇಮಕಾತಿಯಲ್ಲಿ ಮಹಾ ಅಕ್ರಮ ನಡೆದಿದೆ ಎಂದು ತನಿಖಾ ವರದಿ ಮಾಡಿತ್ತು. 11 ವಿಭಾಗಗಳಲ್ಲಿ ವರ್ಗ ’ಸಿ’ ಮತ್ತು ವರ್ಗ ’ಡಿ’ ಹುದ್ದೆಗಳನ್ನು ಭರ್ತಿ ಮಾಡಬೇಕಾಗುವ ಅಕ್ರಮ ನೇಮಕಾತಿ ಮಾಡಿಕೊಳ್ಳಲಾಗಿತ್ತು.

ನಿನ್ನೆ ಮಾರ್ಚ್ 5 ರಂದು ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ದಿ ವೈರ್‌ನ ವೀಕ್ಷಣೆಯಂತೆಯೇ, ಪಟೋಲೆ ಕೂಡ ಹಗರಣದ ವ್ಯಾಪ್ತಿಯನ್ನು ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯ ಹಗರಣದೊಂದಿಗೆ ಹೋಲಿಸಿದ್ದಾರೆ. ಇದನ್ನು ಸಾಮಾನ್ಯವಾಗಿ ವ್ಯಾಪಮ್ ಹಗರಣ ಎಂದು ಕರೆಯಲಾಗುತ್ತದೆ. ಈ ಮೆಗಾಭರ್ತಿ ಘೋಟಾಲಾ (ಮೆಗಾ ನೇಮಕಾತಿ ಹಗರಣ) ಮಧ್ಯಪ್ರದೇಶದಲ್ಲಿ ಪತ್ತೆಯಾದ ವ್ಯಾಪಂ ಹಗರಣಕ್ಕಿಂತ ದೊಡ್ಡದಾಗಿದೆ. ಮಹಾಪರಿಷ್ಠರ ಹೆಸರಿನಲ್ಲಿ, ಹಿಂದಿನ ಸರ್ಕಾರವು ಹಲವಾರು ಸಾವಿರ ಆಕಾಂಕ್ಷಿಗಳ ಜೀವನ ಮತ್ತು ಕನಸುಗಳನ್ನು ಹಾಳು ಮಾಡಿದೆ ಎಂದು ಪಟೋಲೆ ಸದನದಲ್ಲಿ ಹೇಳಿದರು.

2017 ಮತ್ತು 2019 ರ ನಡುವೆ ರಾಜ್ಯದ 25 ಇಲಾಖೆಗಳಲ್ಲಿ 30,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ 35.5 ಲಕ್ಷ ಆಕಾಂಕ್ಷಿಗಳ ಭವಿಷ್ಯವನ್ನು ಮಹಾಪರೀಕ್ಷಾ ಪೋರ್ಟಲ್ ನಿರ್ಧರಿಸಬೇಕಿತ್ತು. ವ್ಯಾಪಂ ಹಗರಣದಂತೆ, ಮಹಾರಾಷ್ಟ್ರದಲ್ಲೂ ಸಾವಿರಾರು ಅಭ್ಯರ್ಥಿಗಳು ನೇಮಕಾತಿ ಅಕ್ರಮವನ್ನು ಆರೋಪಿಸಿದ್ದರು. ಮಹಾ-ಐಟಿ ಇಲಾಖೆಯು ಖಾಸಗಿ ಕಂಪನಿಗಳಾದ ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಜೊತೆ ಒಪ್ಪಂದ ಮಾಡಿಕೊಂಡು ಅಕ್ರಮ ಎಸಗಿತ್ತು ಎಂದು ಆರೋಪ ಮಾಡಲಾಗಿತ್ತು.

ವೈರ್‌ನ ವರದಿಯು 2019 ರಲ್ಲಿ ವಿವಿಧ ಇಲಾಖೆಗಳಲ್ಲಿ ’ಸಿ’ ಮತ್ತು ಕ್ಲಾಸ್ ’ಡಿ’ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ವ್ಯವಸ್ಥಿತ ಜಾಲವನ್ನು ಬಹಿರಂಗಪಡಿಸಿತ್ತು. ಪರೀಕ್ಷೆಗಳನ್ನು ಮಹಾರಾಷ್ಟ್ರ ಪೋರ್ಟಲ್ ನಿರ್ವಹಿಸಿದ್ದು, ಇದನ್ನು ಮಹಾರಾಷ್ಟ್ರ ಮಾಹಿತಿ ತಂತ್ರಜ್ಞಾನ ನಿಗಮ ನಿರ್ವಹಿಸಿತ್ತು.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ಕಳೆದ ವರ್ಷ ಮೇ ತಿಂಗಳಲ್ಲಿ ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಹುಲ್ ದ್ವಿವೇದಿ ತಮ್ಮ ಜಿಲ್ಲೆಯಲ್ಲಿ ನಡೆಸಿದ ಪರೀಕ್ಷೆಗಳಲ್ಲಿನ ವ್ಯತ್ಯಾಸಗಳನ್ನು ಬಹಿರಂಗಪಡಿಸುವ 12 ಪುಟಗಳ ಭೀಕರ ವರದಿಯನ್ನು ಬರೆದಿದ್ದರು. ಅಹ್ಮದ್‌ನಗರ ಜಿಲ್ಲೆಯಲ್ಲಿ ಕನಿಷ್ಟ 14 ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಸಂಶಯಾಸ್ಪದರು ಎಂದು ಕಂಡುಬಂದಿದೆ. ಹಲವಾರು ನಕಲಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ದ್ವಿವೇದಿ ಕಂಡುಹಿಡಿದಿದ್ದರು.

ಆಳಕ್ಕೆ ಇಳಿದು ನೋಡಿದಾಗ, ದಿ ವೈರ್‌ನ ತನಿಖೆಯು ವಂಚನೆಯನ್ನು ಅಹ್ಮದ್‌ನಗರಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಆದರೆ ಇದು ವ್ಯಾಪಕ ಹಗರಣವಾಗಿದೆ, ಈ ರಾಜ್ಯ ನೇಮಕಾತಿ ಪರೀಕ್ಷೆಗಳನ್ನು ನಡೆಸಿದ ಎಲ್ಲಾ 34 ಜಿಲ್ಲೆಗಳಲ್ಲೂ ಅಕ್ರಮ ನಡೆದಿದೆ. ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ಹಿಡಿದು, ಭಾವಚಿತ್ರಗಳು ಮತ್ತು ಸಹಿಗಳಲ್ಲಿ ಹೊಂದಾಣಿಕೆಯಾಗದ ನೂರಾರು ಪ್ರಕರಣಗಳು ಬಯಲಿಗೆ ಬಂದಿದ್ದವು. ಪರೀಕ್ಷಾ ಹಾಲ್‌ಗೆ ಪ್ರವೇಶಿಸುವಾಗ ನೂರಾರು ಅಭ್ಯರ್ಥಿಗಳು ಪತ್ತೇದಾರಿ ಕ್ಯಾಮೆರಾಗಳು ಮತ್ತು ಮೈಕ್ರೊಫೋನ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ಎಂದು ವೈರ್ ಒತ್ತೆ ಹಚ್ಚಿತ್ತು.

ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಎಂಬ ಎರಡು ಕಂಪನಿಗಳ ಗೋಲ್‌ಮಾಲ್ ಈಗ ಮತ್ತೆ ಸದಸನದಲ್ಲಿ ಚರ್ಚೆಗೆ ಬಂದಿದೆ. ಜೊತೆಗೆ ಮಹಾ-ಐಟಿ ಇಲಾಖೆಯ ಮಾಜಿ ನಾಮಿನಿ ನಿರ್ದೇಶಕ ಕೌಸ್ತುಬ್ ಧಾವ್ಸೆ ಪಾತ್ರ ಕೂಡ ಚರ್ಚೆಗೆ ಬಂದಿದೆ. ಫಡ್ನವೀಸ್ ಅವರ ನಿಕಟವರ್ತಿಯಾಗಿದ್ದ ಧಾವ್ಸೆ ಅವರು ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಆಗಿದ್ದರು ಮತ್ತು ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡ ಕೂಡಲೇ ಕಳೆದ ಡಿಸೆಂಬರ್‌ನಲ್ಲಿ ಮಹಾ-ಐಟಿ ನಿರ್ದೇಶಕರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

ಧಾವ್ಸೆಗೆ ಜಂಟಿ ಕಾರ್ಯದರ್ಶಿ ಸ್ಥಾನಮಾನ ನೀಡಲಾಗಿತ್ತು (ಅವರು ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯದಲ್ಲಿದ್ದ ಅಧಿಕಾರಿಯಾಗಿದ್ದರು ಮತ್ತು ಈಗ ಪ್ರತಿಪಕ್ಷದ ನಾಯಕರಾಗಿರುವ ಫಡ್ನವೀಸ್ ಅವರ ಮುಖ್ಯ ನೀತಿ ಸಲಹೆಗಾರರಾಗಿದ್ದಾರೆ) ಮತ್ತು ಅವರಿಗೆ ಪಕ್ಷದ ವಾರ್‌ ರೂಮ್ ಉಸ್ತುವಾರಿ ವಹಿಸಲಾಗಿತ್ತು.

ದಿ ವೈರ್‌ನ ವರದಿಯನ್ನು ಅನುಸರಿಸಿ, ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ತಮ್ಮ ಕಚೇರಿ ಕುರಿತ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಶಾಸಕ ರೋಹಿತ್ ಪವಾರ್ ಕೂಡ ತಕ್ಷಣ ಕ್ರಮ ಕೈಗೊಳ್ಳಲು ಕೋರಿದ್ದರು. ಆದರೆ ಅಂತಿಮವಾಗಿ ಯಾವುದೇ ಕ್ರಮವನ್ನು ಪ್ರಾರಂಭಿಸಲಿಲ್ಲ.

ಮಾರ್ಚ್ 5 ರಂದು, ಮಾಧ್ಯಮಗಳಲ್ಲಿ ಇದೇ ರೀತಿಯ ವರದಿಗಳನ್ನು ಅನುಸರಿಸಿ, ಈ ವಿಷಯವು ಮತ್ತೆ ಗಮನಕ್ಕೆ ಬಂದಿದೆ. ಈ ಪರೀಕ್ಷೆಗಳು ಸಾಮಾನ್ಯ ಆಡಳಿತ ಸಚಿವಾಲಯ (ಜಿಎಡಿ) ನಿರ್ವಹಿಸುವ ಆಡಳಿತ ಸೇವೆಗಳ ಒಂದು ಭಾಗವಾಗಿದೆ. ಇತರ ಖಾತೆಗಳ ಜೊತೆಗೆ, ಫಡ್ನವೀಸ್ ಜಿಎಡಿಯನ್ನು ನಿಭಾಯಿಸಿದ್ದರು ಮತ್ತು ರಾಜ್ಯದಲ್ಲಿ ಮಹಾಭರ್ತಿ (ಮೆಗಾ ನೇಮಕಾತಿ) ಅಭಿಯಾನವನ್ನು ನೇರವಾಗಿ ಮೇಲ್ವಿಚಾರಣೆ ಮಾಡಿದ್ದರು. ಈಗ ಈ ಬಂಡವಾಳವು ಈಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಇದೆ. ಈಗ ಹಗರಣದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...