Homeಮುಖಪುಟಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

ಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಸೌರ ವಿದ್ಯುತ್ ಸ್ಥಾವರ ಮತ್ತು ನವೀಕರಿಸಬಹುದಾದ ಇಂಧನ ಪಾರ್ಕ್ (Renewable energy park ) ಸ್ಥಾಪಿಸಲು ಅದಾನಿ ಸಮೂಹಕ್ಕೆ ಸಹಾಯವಾಗುವಂತೆ ಭಾರತ-ಪಾಕಿಸ್ತಾನ ಗಡಿ ಭದ್ರತಾ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ದಿ ಗಾರ್ಡಿಯನ್ ಪ್ರಕಟಿಸಿರುವ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಕಾಂಗ್ರೆಸ್, ಸ್ಪಷ್ಟನೆ ನೀಡುವಂತೆ ಬುಧವಾರ (ಫೆ.12) ಆಗ್ರಹಿಸಿದೆ.

ಕೇಂದ್ರ ಸರ್ಕಾರದ ನಡೆಯು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದೆ. ನಮ್ಮ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಏಕೆ ರಾಜಿ ಮಾಡಿಕೊಳ್ಳಲಾಗಿದೆ ಎಂಬುವುದರ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ದಿ ಗಾರ್ಡಿಯನ್ ವರದಿ ಮತ್ತು ಕಾಂಗ್ರೆಸ್ ನಾಯಕರ ಪ್ರಶ್ನೆ, ಟೀಕೆಗಳ ಕುರಿತು ಸರ್ಕಾರವಾಗಲಿ, ಅದಾನಿ ಸಮೂಹವಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭದ್ರತಾ ನಿಯಮಗಳು ಬದಲಾಗಿವೆ

ದಿ ಗಾರ್ಡಿಯನ್‘ ಪ್ರಕಟಿಸಿದ ತನಿಖಾ ವರದಿಯ ಪ್ರಕಾರ, ಅದಾನಿ ಸಮೂಹ ಪಾಕಿಸ್ತಾನದ ಗಡಿಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕಚ್‌ನ ಖಾವ್ಡಾ ಪ್ರದೇಶದಲ್ಲಿ ಸೌರ ವಿದ್ಯುತ್ ಸ್ಥಾವರ ಮತ್ತು ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಪಾರ್ಕ್ ನಿರ್ಮಿಸುತ್ತಿದೆ.

ಈ ಹಿಂದಿನ ಗಡಿ ಭದ್ರತಾ ನಿಯಮಗಳ ಪ್ರಕಾರ ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಕ್ಕೆ ಅವಕಾಶ ಇರಲಿಲ್ಲ. ಆದರೆ ಗುಜರಾತ್ ಸರ್ಕಾರ ಏಪ್ರಿಲ್ 2023ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಪತ್ರವೊಂದನ್ನು ಬರೆದು, ಗಡಿ ಸಮೀಪದ ಜಾಗದಲ್ಲಿ ಮೂಲಸೌಕರ್ಯ ಯೋಜನೆಗಳನ್ನು ನಿರ್ಮಿಸಲು ಅನುಮತಿ ಕೋರಿತ್ತು.

ಈ ವಿಷಯದ ಬಗ್ಗೆ ಚರ್ಚಿಸಲು ಏಪ್ರಿಲ್ 21, 2023ರಂದು ದೆಹಲಿಯಲ್ಲಿ ಗೌಪ್ಯ ಸಭೆ ಕರೆಯಲಾಗಿತ್ತು. ಆ ಸಮಯದಲ್ಲಿ, ಗುಜರಾತ್ ಸರ್ಕಾರ ಗುತ್ತಿಗೆಗೆ ನೀಡಿದ್ದ ಭೂಮಿಯನ್ನು ಭಾರತೀಯ ಸೌರಶಕ್ತಿ ನಿಗಮ (SECI) ತನ್ನ ವಶಕ್ಕೆ ಪಡೆದುಕೊಂಡಿತ್ತು.

ಮೇ 8, 2023ರ ಹೊತ್ತಿಗೆ, ಮೂಲಸೌಕರ್ಯ ಯೋಜನೆಗಳಿಗೆ ಅವಕಾಶ ನೀಡಲು ಕೇಂದ್ರವು ನಿಯಮಗಳನ್ನು ಬದಲಾಯಿಸಿದೆ. ಆಗಸ್ಟ್ ವೇಳೆಗೆ, ಅದಾನಿ ಗ್ರೂಪ್ ಕಚ್‌ ಬಳಿಯ ರನ್‌ ಪ್ರದೇಶದ ಭೂಮಿಯಯನ್ನು ತನ್ನ ವಶಕ್ಕೆ ಪಡೆದಿದೆ ವರದಿ ಹೇಳಿದೆ.

ಅಪಾಯದಲ್ಲಿ ಗಡಿ ಭದ್ರತೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹುಸಿ ರಾಷ್ಟ್ರೀಯತಾವಾದಿ ಮುಖ ಮತ್ತೊಮ್ಮೆ ಬಯಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

“ನರೇಂದ್ರ ಮೋದಿಯವರೇ ಖಾಸಗಿ ಕೋಟ್ಯಾಧಿಪತಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ನೀವು ನಮ್ಮ ಗಡಿಗಳಲ್ಲಿ ರಾಷ್ಟ್ರೀಯ ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸಿದ್ದೀರಿ. ಗಡಿ ಭದ್ರತಾ ನಿಯಮಗಳನ್ನು ಸಡಿಲಿಸುವ ಮೂಲಕ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯ ಬಳಿ ಕೇವಲ 1 ಕಿ.ಮೀ ದೂರದಲ್ಲಿರುವ ಅಮೂಲ್ಯವಾದ ಆಯಕಟ್ಟಿನ ಭೂಮಿಯನ್ನು ನಿಮ್ಮ ‘ಆತ್ಮೀಯ ಸ್ನೇಹಿತ’ನಿಗೆ ಉಡುಗೊರೆಯಾಗಿ ನೀಡಿದ್ದೀರಿ ಎಂಬುವುದು ನಿಜವೇ?” ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

“ನಿಮ್ಮ ಸರ್ಕಾರ ಭಾರತ-ಪಾಕಿಸ್ತಾನ ಗಡಿಯಲ್ಲಿ ಮಾತ್ರವಲ್ಲದೆ ಬಾಂಗ್ಲಾದೇಶ, ಚೀನಾ, ಮ್ಯಾನ್ಮಾರ್ ಮತ್ತು ನೇಪಾಳಕ್ಕೆ ಹೊಂದಿಕೊಂಡಿರುವ ಭೂಮಿಯಲ್ಲಿಯೂ ನಿಯಮಗಳನ್ನು ಸಡಿಲಗೊಳಿಸಿದೆ. ಇದರಿಂದಾಗಿ ನಮ್ಮ ಕಾರ್ಯತಂತ್ರ ಮತ್ತು ಗಡಿ ಭದ್ರತೆಗೆ ಅಪಾಯವಿದೆ ಎಂಬುವುದು ನಿಜವಲ್ಲವೇ?” ಎಂದು ಖರ್ಗೆ ಕೇಳಿದ್ದಾರೆ.

“ನಮ್ಮ ಸಶಸ್ತ್ರ ಪಡೆಗಳ ರಕ್ಷಣಾ ಜವಾಬ್ದಾರಿಗಳನ್ನು ಹೆಚ್ಚಿಸುವ ಮತ್ತು ಅವುಗಳ ಕಾರ್ಯತಂತ್ರದ ಅನುಕೂಲಗಳನ್ನು ಕಡಿಮೆ ಮಾಡುವ ಮೂಲಕ ಭಾರತ-ಪಾಕಿಸ್ತಾನ ಗಡಿಯ ಸುಲಭವಾದ ರೀತಿಯಲ್ಲಿ ಬೃಹತ್ ಖಾಸಗಿ ಯೋಜನೆಗೆ ನೀವು ಅನುಮತಿ ನೀಡಿದ್ದು ಏಕೆ?” ಎಂದಿದ್ದಾರೆ.

ಪ್ರಧಾನಿ ಉತ್ತರಿಸಬೇಕು

ಗಡಿ ನಿಯಮಗಳಲ್ಲಿನ ಬದಲಾವಣೆಯ ಅಗತ್ಯವನ್ನು ವಿವರಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಧಾನಿ ಮತ್ತು ರಕ್ಷಣಾ ಸಚಿವರಿಗೆ ಆಗ್ರಹಿಸಿದ್ದಾರೆ.

“ನಮ್ಮ ಇಂಧನ ವ್ಯವಸ್ಥೆಯನ್ನು ನಮ್ಮ ವಿರೋಧಿಗಳ ವಿರುದ್ಧ ಕುಳಿತುಕೊಳ್ಳುವ ಬಾತುಕೋಳಿಯನ್ನಾಗಿ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆಯೇ? ನಮ್ಮ ರಾಷ್ಟ್ರವನ್ನು ರಕ್ಷಿಸಲು ದಶಕಗಳ ಕಾಲ ಶ್ರಮಿಸಿದ  ಮಿಲಿಟರಿ ತಜ್ಞರು ಕೇವಲ ಕೈಗೊಂಬೆಗಳೇ? ಅವರನ್ನು ಬದಿಗೆ ತಳ್ಳಬಹುದಾ? ಮೋದಿ ಸರ್ಕಾರದ ಸ್ವಜನಪಕ್ಷಪಾತ ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ. ಭಾರತದ ಅತಿದೊಡ್ಡ ಸೌರ ಯೋಜನೆಯನ್ನು ಪಾಕಿಸ್ತಾನ ಗಡಿಯಿಂದ ಕೇವಲ 1 ಕಿ.ಮೀ ದೂರದಲ್ಲಿ ನಿರ್ಮಿಸಲು ಅವಕಾಶ ನೀಡಿರುವುದು ಅತ್ಯಂತ ಅಪಾಯಕಾರಿ ನಡೆ ಮತ್ತು ಎಲ್ಲಾ ಸ್ಥಾಪಿತ ಮಿಲಿಟರಿ ಮಾನದಂಡಗಳಿಗೆ ವಿರುದ್ಧವಾಗಿದೆ” ಎಂದು ವೇಣುಗೋಪಾಲ್ ಎಕ್ಸ್‌ ಪೋಸ್ಟ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ದೇಶದ ಎಲ್ಲಾ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯವರ ‘ಸ್ನೇಹಿತ’ನಿಗೆ ಹಸ್ತಾಂತರಿಸುವ ಪ್ರಕ್ರಿಯೆ ಗಡಿ ಭದ್ರತಾ ನಿಯಮಗಳನ್ನು ಕೂಡ ಬದಲಾಯಿಸುವ ಹಂತಕ್ಕೆ ತಲುಪಿದೆಯೇ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...