Homeಮುಖಪುಟಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

ಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಸೌರ ವಿದ್ಯುತ್ ಸ್ಥಾವರ ಮತ್ತು ನವೀಕರಿಸಬಹುದಾದ ಇಂಧನ ಪಾರ್ಕ್ (Renewable energy park ) ಸ್ಥಾಪಿಸಲು ಅದಾನಿ ಸಮೂಹಕ್ಕೆ ಸಹಾಯವಾಗುವಂತೆ ಭಾರತ-ಪಾಕಿಸ್ತಾನ ಗಡಿ ಭದ್ರತಾ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ದಿ ಗಾರ್ಡಿಯನ್ ಪ್ರಕಟಿಸಿರುವ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಕಾಂಗ್ರೆಸ್, ಸ್ಪಷ್ಟನೆ ನೀಡುವಂತೆ ಬುಧವಾರ (ಫೆ.12) ಆಗ್ರಹಿಸಿದೆ.

ಕೇಂದ್ರ ಸರ್ಕಾರದ ನಡೆಯು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದೆ. ನಮ್ಮ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಏಕೆ ರಾಜಿ ಮಾಡಿಕೊಳ್ಳಲಾಗಿದೆ ಎಂಬುವುದರ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ದಿ ಗಾರ್ಡಿಯನ್ ವರದಿ ಮತ್ತು ಕಾಂಗ್ರೆಸ್ ನಾಯಕರ ಪ್ರಶ್ನೆ, ಟೀಕೆಗಳ ಕುರಿತು ಸರ್ಕಾರವಾಗಲಿ, ಅದಾನಿ ಸಮೂಹವಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭದ್ರತಾ ನಿಯಮಗಳು ಬದಲಾಗಿವೆ

ದಿ ಗಾರ್ಡಿಯನ್‘ ಪ್ರಕಟಿಸಿದ ತನಿಖಾ ವರದಿಯ ಪ್ರಕಾರ, ಅದಾನಿ ಸಮೂಹ ಪಾಕಿಸ್ತಾನದ ಗಡಿಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕಚ್‌ನ ಖಾವ್ಡಾ ಪ್ರದೇಶದಲ್ಲಿ ಸೌರ ವಿದ್ಯುತ್ ಸ್ಥಾವರ ಮತ್ತು ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಪಾರ್ಕ್ ನಿರ್ಮಿಸುತ್ತಿದೆ.

ಈ ಹಿಂದಿನ ಗಡಿ ಭದ್ರತಾ ನಿಯಮಗಳ ಪ್ರಕಾರ ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಕ್ಕೆ ಅವಕಾಶ ಇರಲಿಲ್ಲ. ಆದರೆ ಗುಜರಾತ್ ಸರ್ಕಾರ ಏಪ್ರಿಲ್ 2023ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಪತ್ರವೊಂದನ್ನು ಬರೆದು, ಗಡಿ ಸಮೀಪದ ಜಾಗದಲ್ಲಿ ಮೂಲಸೌಕರ್ಯ ಯೋಜನೆಗಳನ್ನು ನಿರ್ಮಿಸಲು ಅನುಮತಿ ಕೋರಿತ್ತು.

ಈ ವಿಷಯದ ಬಗ್ಗೆ ಚರ್ಚಿಸಲು ಏಪ್ರಿಲ್ 21, 2023ರಂದು ದೆಹಲಿಯಲ್ಲಿ ಗೌಪ್ಯ ಸಭೆ ಕರೆಯಲಾಗಿತ್ತು. ಆ ಸಮಯದಲ್ಲಿ, ಗುಜರಾತ್ ಸರ್ಕಾರ ಗುತ್ತಿಗೆಗೆ ನೀಡಿದ್ದ ಭೂಮಿಯನ್ನು ಭಾರತೀಯ ಸೌರಶಕ್ತಿ ನಿಗಮ (SECI) ತನ್ನ ವಶಕ್ಕೆ ಪಡೆದುಕೊಂಡಿತ್ತು.

ಮೇ 8, 2023ರ ಹೊತ್ತಿಗೆ, ಮೂಲಸೌಕರ್ಯ ಯೋಜನೆಗಳಿಗೆ ಅವಕಾಶ ನೀಡಲು ಕೇಂದ್ರವು ನಿಯಮಗಳನ್ನು ಬದಲಾಯಿಸಿದೆ. ಆಗಸ್ಟ್ ವೇಳೆಗೆ, ಅದಾನಿ ಗ್ರೂಪ್ ಕಚ್‌ ಬಳಿಯ ರನ್‌ ಪ್ರದೇಶದ ಭೂಮಿಯಯನ್ನು ತನ್ನ ವಶಕ್ಕೆ ಪಡೆದಿದೆ ವರದಿ ಹೇಳಿದೆ.

ಅಪಾಯದಲ್ಲಿ ಗಡಿ ಭದ್ರತೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹುಸಿ ರಾಷ್ಟ್ರೀಯತಾವಾದಿ ಮುಖ ಮತ್ತೊಮ್ಮೆ ಬಯಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

“ನರೇಂದ್ರ ಮೋದಿಯವರೇ ಖಾಸಗಿ ಕೋಟ್ಯಾಧಿಪತಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ನೀವು ನಮ್ಮ ಗಡಿಗಳಲ್ಲಿ ರಾಷ್ಟ್ರೀಯ ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸಿದ್ದೀರಿ. ಗಡಿ ಭದ್ರತಾ ನಿಯಮಗಳನ್ನು ಸಡಿಲಿಸುವ ಮೂಲಕ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯ ಬಳಿ ಕೇವಲ 1 ಕಿ.ಮೀ ದೂರದಲ್ಲಿರುವ ಅಮೂಲ್ಯವಾದ ಆಯಕಟ್ಟಿನ ಭೂಮಿಯನ್ನು ನಿಮ್ಮ ‘ಆತ್ಮೀಯ ಸ್ನೇಹಿತ’ನಿಗೆ ಉಡುಗೊರೆಯಾಗಿ ನೀಡಿದ್ದೀರಿ ಎಂಬುವುದು ನಿಜವೇ?” ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

“ನಿಮ್ಮ ಸರ್ಕಾರ ಭಾರತ-ಪಾಕಿಸ್ತಾನ ಗಡಿಯಲ್ಲಿ ಮಾತ್ರವಲ್ಲದೆ ಬಾಂಗ್ಲಾದೇಶ, ಚೀನಾ, ಮ್ಯಾನ್ಮಾರ್ ಮತ್ತು ನೇಪಾಳಕ್ಕೆ ಹೊಂದಿಕೊಂಡಿರುವ ಭೂಮಿಯಲ್ಲಿಯೂ ನಿಯಮಗಳನ್ನು ಸಡಿಲಗೊಳಿಸಿದೆ. ಇದರಿಂದಾಗಿ ನಮ್ಮ ಕಾರ್ಯತಂತ್ರ ಮತ್ತು ಗಡಿ ಭದ್ರತೆಗೆ ಅಪಾಯವಿದೆ ಎಂಬುವುದು ನಿಜವಲ್ಲವೇ?” ಎಂದು ಖರ್ಗೆ ಕೇಳಿದ್ದಾರೆ.

“ನಮ್ಮ ಸಶಸ್ತ್ರ ಪಡೆಗಳ ರಕ್ಷಣಾ ಜವಾಬ್ದಾರಿಗಳನ್ನು ಹೆಚ್ಚಿಸುವ ಮತ್ತು ಅವುಗಳ ಕಾರ್ಯತಂತ್ರದ ಅನುಕೂಲಗಳನ್ನು ಕಡಿಮೆ ಮಾಡುವ ಮೂಲಕ ಭಾರತ-ಪಾಕಿಸ್ತಾನ ಗಡಿಯ ಸುಲಭವಾದ ರೀತಿಯಲ್ಲಿ ಬೃಹತ್ ಖಾಸಗಿ ಯೋಜನೆಗೆ ನೀವು ಅನುಮತಿ ನೀಡಿದ್ದು ಏಕೆ?” ಎಂದಿದ್ದಾರೆ.

ಪ್ರಧಾನಿ ಉತ್ತರಿಸಬೇಕು

ಗಡಿ ನಿಯಮಗಳಲ್ಲಿನ ಬದಲಾವಣೆಯ ಅಗತ್ಯವನ್ನು ವಿವರಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಧಾನಿ ಮತ್ತು ರಕ್ಷಣಾ ಸಚಿವರಿಗೆ ಆಗ್ರಹಿಸಿದ್ದಾರೆ.

“ನಮ್ಮ ಇಂಧನ ವ್ಯವಸ್ಥೆಯನ್ನು ನಮ್ಮ ವಿರೋಧಿಗಳ ವಿರುದ್ಧ ಕುಳಿತುಕೊಳ್ಳುವ ಬಾತುಕೋಳಿಯನ್ನಾಗಿ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆಯೇ? ನಮ್ಮ ರಾಷ್ಟ್ರವನ್ನು ರಕ್ಷಿಸಲು ದಶಕಗಳ ಕಾಲ ಶ್ರಮಿಸಿದ  ಮಿಲಿಟರಿ ತಜ್ಞರು ಕೇವಲ ಕೈಗೊಂಬೆಗಳೇ? ಅವರನ್ನು ಬದಿಗೆ ತಳ್ಳಬಹುದಾ? ಮೋದಿ ಸರ್ಕಾರದ ಸ್ವಜನಪಕ್ಷಪಾತ ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ. ಭಾರತದ ಅತಿದೊಡ್ಡ ಸೌರ ಯೋಜನೆಯನ್ನು ಪಾಕಿಸ್ತಾನ ಗಡಿಯಿಂದ ಕೇವಲ 1 ಕಿ.ಮೀ ದೂರದಲ್ಲಿ ನಿರ್ಮಿಸಲು ಅವಕಾಶ ನೀಡಿರುವುದು ಅತ್ಯಂತ ಅಪಾಯಕಾರಿ ನಡೆ ಮತ್ತು ಎಲ್ಲಾ ಸ್ಥಾಪಿತ ಮಿಲಿಟರಿ ಮಾನದಂಡಗಳಿಗೆ ವಿರುದ್ಧವಾಗಿದೆ” ಎಂದು ವೇಣುಗೋಪಾಲ್ ಎಕ್ಸ್‌ ಪೋಸ್ಟ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ದೇಶದ ಎಲ್ಲಾ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯವರ ‘ಸ್ನೇಹಿತ’ನಿಗೆ ಹಸ್ತಾಂತರಿಸುವ ಪ್ರಕ್ರಿಯೆ ಗಡಿ ಭದ್ರತಾ ನಿಯಮಗಳನ್ನು ಕೂಡ ಬದಲಾಯಿಸುವ ಹಂತಕ್ಕೆ ತಲುಪಿದೆಯೇ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...