Homeಮುಖಪುಟಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

ಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಸೌರ ವಿದ್ಯುತ್ ಸ್ಥಾವರ ಮತ್ತು ನವೀಕರಿಸಬಹುದಾದ ಇಂಧನ ಪಾರ್ಕ್ (Renewable energy park ) ಸ್ಥಾಪಿಸಲು ಅದಾನಿ ಸಮೂಹಕ್ಕೆ ಸಹಾಯವಾಗುವಂತೆ ಭಾರತ-ಪಾಕಿಸ್ತಾನ ಗಡಿ ಭದ್ರತಾ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ದಿ ಗಾರ್ಡಿಯನ್ ಪ್ರಕಟಿಸಿರುವ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಕಾಂಗ್ರೆಸ್, ಸ್ಪಷ್ಟನೆ ನೀಡುವಂತೆ ಬುಧವಾರ (ಫೆ.12) ಆಗ್ರಹಿಸಿದೆ.

ಕೇಂದ್ರ ಸರ್ಕಾರದ ನಡೆಯು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದೆ. ನಮ್ಮ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಏಕೆ ರಾಜಿ ಮಾಡಿಕೊಳ್ಳಲಾಗಿದೆ ಎಂಬುವುದರ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ದಿ ಗಾರ್ಡಿಯನ್ ವರದಿ ಮತ್ತು ಕಾಂಗ್ರೆಸ್ ನಾಯಕರ ಪ್ರಶ್ನೆ, ಟೀಕೆಗಳ ಕುರಿತು ಸರ್ಕಾರವಾಗಲಿ, ಅದಾನಿ ಸಮೂಹವಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭದ್ರತಾ ನಿಯಮಗಳು ಬದಲಾಗಿವೆ

ದಿ ಗಾರ್ಡಿಯನ್‘ ಪ್ರಕಟಿಸಿದ ತನಿಖಾ ವರದಿಯ ಪ್ರಕಾರ, ಅದಾನಿ ಸಮೂಹ ಪಾಕಿಸ್ತಾನದ ಗಡಿಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕಚ್‌ನ ಖಾವ್ಡಾ ಪ್ರದೇಶದಲ್ಲಿ ಸೌರ ವಿದ್ಯುತ್ ಸ್ಥಾವರ ಮತ್ತು ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಪಾರ್ಕ್ ನಿರ್ಮಿಸುತ್ತಿದೆ.

ಈ ಹಿಂದಿನ ಗಡಿ ಭದ್ರತಾ ನಿಯಮಗಳ ಪ್ರಕಾರ ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಕ್ಕೆ ಅವಕಾಶ ಇರಲಿಲ್ಲ. ಆದರೆ ಗುಜರಾತ್ ಸರ್ಕಾರ ಏಪ್ರಿಲ್ 2023ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಪತ್ರವೊಂದನ್ನು ಬರೆದು, ಗಡಿ ಸಮೀಪದ ಜಾಗದಲ್ಲಿ ಮೂಲಸೌಕರ್ಯ ಯೋಜನೆಗಳನ್ನು ನಿರ್ಮಿಸಲು ಅನುಮತಿ ಕೋರಿತ್ತು.

ಈ ವಿಷಯದ ಬಗ್ಗೆ ಚರ್ಚಿಸಲು ಏಪ್ರಿಲ್ 21, 2023ರಂದು ದೆಹಲಿಯಲ್ಲಿ ಗೌಪ್ಯ ಸಭೆ ಕರೆಯಲಾಗಿತ್ತು. ಆ ಸಮಯದಲ್ಲಿ, ಗುಜರಾತ್ ಸರ್ಕಾರ ಗುತ್ತಿಗೆಗೆ ನೀಡಿದ್ದ ಭೂಮಿಯನ್ನು ಭಾರತೀಯ ಸೌರಶಕ್ತಿ ನಿಗಮ (SECI) ತನ್ನ ವಶಕ್ಕೆ ಪಡೆದುಕೊಂಡಿತ್ತು.

ಮೇ 8, 2023ರ ಹೊತ್ತಿಗೆ, ಮೂಲಸೌಕರ್ಯ ಯೋಜನೆಗಳಿಗೆ ಅವಕಾಶ ನೀಡಲು ಕೇಂದ್ರವು ನಿಯಮಗಳನ್ನು ಬದಲಾಯಿಸಿದೆ. ಆಗಸ್ಟ್ ವೇಳೆಗೆ, ಅದಾನಿ ಗ್ರೂಪ್ ಕಚ್‌ ಬಳಿಯ ರನ್‌ ಪ್ರದೇಶದ ಭೂಮಿಯಯನ್ನು ತನ್ನ ವಶಕ್ಕೆ ಪಡೆದಿದೆ ವರದಿ ಹೇಳಿದೆ.

ಅಪಾಯದಲ್ಲಿ ಗಡಿ ಭದ್ರತೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹುಸಿ ರಾಷ್ಟ್ರೀಯತಾವಾದಿ ಮುಖ ಮತ್ತೊಮ್ಮೆ ಬಯಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

“ನರೇಂದ್ರ ಮೋದಿಯವರೇ ಖಾಸಗಿ ಕೋಟ್ಯಾಧಿಪತಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ನೀವು ನಮ್ಮ ಗಡಿಗಳಲ್ಲಿ ರಾಷ್ಟ್ರೀಯ ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸಿದ್ದೀರಿ. ಗಡಿ ಭದ್ರತಾ ನಿಯಮಗಳನ್ನು ಸಡಿಲಿಸುವ ಮೂಲಕ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯ ಬಳಿ ಕೇವಲ 1 ಕಿ.ಮೀ ದೂರದಲ್ಲಿರುವ ಅಮೂಲ್ಯವಾದ ಆಯಕಟ್ಟಿನ ಭೂಮಿಯನ್ನು ನಿಮ್ಮ ‘ಆತ್ಮೀಯ ಸ್ನೇಹಿತ’ನಿಗೆ ಉಡುಗೊರೆಯಾಗಿ ನೀಡಿದ್ದೀರಿ ಎಂಬುವುದು ನಿಜವೇ?” ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

“ನಿಮ್ಮ ಸರ್ಕಾರ ಭಾರತ-ಪಾಕಿಸ್ತಾನ ಗಡಿಯಲ್ಲಿ ಮಾತ್ರವಲ್ಲದೆ ಬಾಂಗ್ಲಾದೇಶ, ಚೀನಾ, ಮ್ಯಾನ್ಮಾರ್ ಮತ್ತು ನೇಪಾಳಕ್ಕೆ ಹೊಂದಿಕೊಂಡಿರುವ ಭೂಮಿಯಲ್ಲಿಯೂ ನಿಯಮಗಳನ್ನು ಸಡಿಲಗೊಳಿಸಿದೆ. ಇದರಿಂದಾಗಿ ನಮ್ಮ ಕಾರ್ಯತಂತ್ರ ಮತ್ತು ಗಡಿ ಭದ್ರತೆಗೆ ಅಪಾಯವಿದೆ ಎಂಬುವುದು ನಿಜವಲ್ಲವೇ?” ಎಂದು ಖರ್ಗೆ ಕೇಳಿದ್ದಾರೆ.

“ನಮ್ಮ ಸಶಸ್ತ್ರ ಪಡೆಗಳ ರಕ್ಷಣಾ ಜವಾಬ್ದಾರಿಗಳನ್ನು ಹೆಚ್ಚಿಸುವ ಮತ್ತು ಅವುಗಳ ಕಾರ್ಯತಂತ್ರದ ಅನುಕೂಲಗಳನ್ನು ಕಡಿಮೆ ಮಾಡುವ ಮೂಲಕ ಭಾರತ-ಪಾಕಿಸ್ತಾನ ಗಡಿಯ ಸುಲಭವಾದ ರೀತಿಯಲ್ಲಿ ಬೃಹತ್ ಖಾಸಗಿ ಯೋಜನೆಗೆ ನೀವು ಅನುಮತಿ ನೀಡಿದ್ದು ಏಕೆ?” ಎಂದಿದ್ದಾರೆ.

ಪ್ರಧಾನಿ ಉತ್ತರಿಸಬೇಕು

ಗಡಿ ನಿಯಮಗಳಲ್ಲಿನ ಬದಲಾವಣೆಯ ಅಗತ್ಯವನ್ನು ವಿವರಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಧಾನಿ ಮತ್ತು ರಕ್ಷಣಾ ಸಚಿವರಿಗೆ ಆಗ್ರಹಿಸಿದ್ದಾರೆ.

“ನಮ್ಮ ಇಂಧನ ವ್ಯವಸ್ಥೆಯನ್ನು ನಮ್ಮ ವಿರೋಧಿಗಳ ವಿರುದ್ಧ ಕುಳಿತುಕೊಳ್ಳುವ ಬಾತುಕೋಳಿಯನ್ನಾಗಿ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆಯೇ? ನಮ್ಮ ರಾಷ್ಟ್ರವನ್ನು ರಕ್ಷಿಸಲು ದಶಕಗಳ ಕಾಲ ಶ್ರಮಿಸಿದ  ಮಿಲಿಟರಿ ತಜ್ಞರು ಕೇವಲ ಕೈಗೊಂಬೆಗಳೇ? ಅವರನ್ನು ಬದಿಗೆ ತಳ್ಳಬಹುದಾ? ಮೋದಿ ಸರ್ಕಾರದ ಸ್ವಜನಪಕ್ಷಪಾತ ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ. ಭಾರತದ ಅತಿದೊಡ್ಡ ಸೌರ ಯೋಜನೆಯನ್ನು ಪಾಕಿಸ್ತಾನ ಗಡಿಯಿಂದ ಕೇವಲ 1 ಕಿ.ಮೀ ದೂರದಲ್ಲಿ ನಿರ್ಮಿಸಲು ಅವಕಾಶ ನೀಡಿರುವುದು ಅತ್ಯಂತ ಅಪಾಯಕಾರಿ ನಡೆ ಮತ್ತು ಎಲ್ಲಾ ಸ್ಥಾಪಿತ ಮಿಲಿಟರಿ ಮಾನದಂಡಗಳಿಗೆ ವಿರುದ್ಧವಾಗಿದೆ” ಎಂದು ವೇಣುಗೋಪಾಲ್ ಎಕ್ಸ್‌ ಪೋಸ್ಟ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ದೇಶದ ಎಲ್ಲಾ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯವರ ‘ಸ್ನೇಹಿತ’ನಿಗೆ ಹಸ್ತಾಂತರಿಸುವ ಪ್ರಕ್ರಿಯೆ ಗಡಿ ಭದ್ರತಾ ನಿಯಮಗಳನ್ನು ಕೂಡ ಬದಲಾಯಿಸುವ ಹಂತಕ್ಕೆ ತಲುಪಿದೆಯೇ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...