Homeಮುಖಪುಟಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

ಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಸೌರ ವಿದ್ಯುತ್ ಸ್ಥಾವರ ಮತ್ತು ನವೀಕರಿಸಬಹುದಾದ ಇಂಧನ ಪಾರ್ಕ್ (Renewable energy park ) ಸ್ಥಾಪಿಸಲು ಅದಾನಿ ಸಮೂಹಕ್ಕೆ ಸಹಾಯವಾಗುವಂತೆ ಭಾರತ-ಪಾಕಿಸ್ತಾನ ಗಡಿ ಭದ್ರತಾ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ದಿ ಗಾರ್ಡಿಯನ್ ಪ್ರಕಟಿಸಿರುವ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಕಾಂಗ್ರೆಸ್, ಸ್ಪಷ್ಟನೆ ನೀಡುವಂತೆ ಬುಧವಾರ (ಫೆ.12) ಆಗ್ರಹಿಸಿದೆ.

ಕೇಂದ್ರ ಸರ್ಕಾರದ ನಡೆಯು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದೆ. ನಮ್ಮ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಏಕೆ ರಾಜಿ ಮಾಡಿಕೊಳ್ಳಲಾಗಿದೆ ಎಂಬುವುದರ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ದಿ ಗಾರ್ಡಿಯನ್ ವರದಿ ಮತ್ತು ಕಾಂಗ್ರೆಸ್ ನಾಯಕರ ಪ್ರಶ್ನೆ, ಟೀಕೆಗಳ ಕುರಿತು ಸರ್ಕಾರವಾಗಲಿ, ಅದಾನಿ ಸಮೂಹವಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭದ್ರತಾ ನಿಯಮಗಳು ಬದಲಾಗಿವೆ

ದಿ ಗಾರ್ಡಿಯನ್‘ ಪ್ರಕಟಿಸಿದ ತನಿಖಾ ವರದಿಯ ಪ್ರಕಾರ, ಅದಾನಿ ಸಮೂಹ ಪಾಕಿಸ್ತಾನದ ಗಡಿಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕಚ್‌ನ ಖಾವ್ಡಾ ಪ್ರದೇಶದಲ್ಲಿ ಸೌರ ವಿದ್ಯುತ್ ಸ್ಥಾವರ ಮತ್ತು ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಪಾರ್ಕ್ ನಿರ್ಮಿಸುತ್ತಿದೆ.

ಈ ಹಿಂದಿನ ಗಡಿ ಭದ್ರತಾ ನಿಯಮಗಳ ಪ್ರಕಾರ ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಕ್ಕೆ ಅವಕಾಶ ಇರಲಿಲ್ಲ. ಆದರೆ ಗುಜರಾತ್ ಸರ್ಕಾರ ಏಪ್ರಿಲ್ 2023ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಪತ್ರವೊಂದನ್ನು ಬರೆದು, ಗಡಿ ಸಮೀಪದ ಜಾಗದಲ್ಲಿ ಮೂಲಸೌಕರ್ಯ ಯೋಜನೆಗಳನ್ನು ನಿರ್ಮಿಸಲು ಅನುಮತಿ ಕೋರಿತ್ತು.

ಈ ವಿಷಯದ ಬಗ್ಗೆ ಚರ್ಚಿಸಲು ಏಪ್ರಿಲ್ 21, 2023ರಂದು ದೆಹಲಿಯಲ್ಲಿ ಗೌಪ್ಯ ಸಭೆ ಕರೆಯಲಾಗಿತ್ತು. ಆ ಸಮಯದಲ್ಲಿ, ಗುಜರಾತ್ ಸರ್ಕಾರ ಗುತ್ತಿಗೆಗೆ ನೀಡಿದ್ದ ಭೂಮಿಯನ್ನು ಭಾರತೀಯ ಸೌರಶಕ್ತಿ ನಿಗಮ (SECI) ತನ್ನ ವಶಕ್ಕೆ ಪಡೆದುಕೊಂಡಿತ್ತು.

ಮೇ 8, 2023ರ ಹೊತ್ತಿಗೆ, ಮೂಲಸೌಕರ್ಯ ಯೋಜನೆಗಳಿಗೆ ಅವಕಾಶ ನೀಡಲು ಕೇಂದ್ರವು ನಿಯಮಗಳನ್ನು ಬದಲಾಯಿಸಿದೆ. ಆಗಸ್ಟ್ ವೇಳೆಗೆ, ಅದಾನಿ ಗ್ರೂಪ್ ಕಚ್‌ ಬಳಿಯ ರನ್‌ ಪ್ರದೇಶದ ಭೂಮಿಯಯನ್ನು ತನ್ನ ವಶಕ್ಕೆ ಪಡೆದಿದೆ ವರದಿ ಹೇಳಿದೆ.

ಅಪಾಯದಲ್ಲಿ ಗಡಿ ಭದ್ರತೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹುಸಿ ರಾಷ್ಟ್ರೀಯತಾವಾದಿ ಮುಖ ಮತ್ತೊಮ್ಮೆ ಬಯಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

“ನರೇಂದ್ರ ಮೋದಿಯವರೇ ಖಾಸಗಿ ಕೋಟ್ಯಾಧಿಪತಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ನೀವು ನಮ್ಮ ಗಡಿಗಳಲ್ಲಿ ರಾಷ್ಟ್ರೀಯ ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸಿದ್ದೀರಿ. ಗಡಿ ಭದ್ರತಾ ನಿಯಮಗಳನ್ನು ಸಡಿಲಿಸುವ ಮೂಲಕ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯ ಬಳಿ ಕೇವಲ 1 ಕಿ.ಮೀ ದೂರದಲ್ಲಿರುವ ಅಮೂಲ್ಯವಾದ ಆಯಕಟ್ಟಿನ ಭೂಮಿಯನ್ನು ನಿಮ್ಮ ‘ಆತ್ಮೀಯ ಸ್ನೇಹಿತ’ನಿಗೆ ಉಡುಗೊರೆಯಾಗಿ ನೀಡಿದ್ದೀರಿ ಎಂಬುವುದು ನಿಜವೇ?” ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

“ನಿಮ್ಮ ಸರ್ಕಾರ ಭಾರತ-ಪಾಕಿಸ್ತಾನ ಗಡಿಯಲ್ಲಿ ಮಾತ್ರವಲ್ಲದೆ ಬಾಂಗ್ಲಾದೇಶ, ಚೀನಾ, ಮ್ಯಾನ್ಮಾರ್ ಮತ್ತು ನೇಪಾಳಕ್ಕೆ ಹೊಂದಿಕೊಂಡಿರುವ ಭೂಮಿಯಲ್ಲಿಯೂ ನಿಯಮಗಳನ್ನು ಸಡಿಲಗೊಳಿಸಿದೆ. ಇದರಿಂದಾಗಿ ನಮ್ಮ ಕಾರ್ಯತಂತ್ರ ಮತ್ತು ಗಡಿ ಭದ್ರತೆಗೆ ಅಪಾಯವಿದೆ ಎಂಬುವುದು ನಿಜವಲ್ಲವೇ?” ಎಂದು ಖರ್ಗೆ ಕೇಳಿದ್ದಾರೆ.

“ನಮ್ಮ ಸಶಸ್ತ್ರ ಪಡೆಗಳ ರಕ್ಷಣಾ ಜವಾಬ್ದಾರಿಗಳನ್ನು ಹೆಚ್ಚಿಸುವ ಮತ್ತು ಅವುಗಳ ಕಾರ್ಯತಂತ್ರದ ಅನುಕೂಲಗಳನ್ನು ಕಡಿಮೆ ಮಾಡುವ ಮೂಲಕ ಭಾರತ-ಪಾಕಿಸ್ತಾನ ಗಡಿಯ ಸುಲಭವಾದ ರೀತಿಯಲ್ಲಿ ಬೃಹತ್ ಖಾಸಗಿ ಯೋಜನೆಗೆ ನೀವು ಅನುಮತಿ ನೀಡಿದ್ದು ಏಕೆ?” ಎಂದಿದ್ದಾರೆ.

ಪ್ರಧಾನಿ ಉತ್ತರಿಸಬೇಕು

ಗಡಿ ನಿಯಮಗಳಲ್ಲಿನ ಬದಲಾವಣೆಯ ಅಗತ್ಯವನ್ನು ವಿವರಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಧಾನಿ ಮತ್ತು ರಕ್ಷಣಾ ಸಚಿವರಿಗೆ ಆಗ್ರಹಿಸಿದ್ದಾರೆ.

“ನಮ್ಮ ಇಂಧನ ವ್ಯವಸ್ಥೆಯನ್ನು ನಮ್ಮ ವಿರೋಧಿಗಳ ವಿರುದ್ಧ ಕುಳಿತುಕೊಳ್ಳುವ ಬಾತುಕೋಳಿಯನ್ನಾಗಿ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆಯೇ? ನಮ್ಮ ರಾಷ್ಟ್ರವನ್ನು ರಕ್ಷಿಸಲು ದಶಕಗಳ ಕಾಲ ಶ್ರಮಿಸಿದ  ಮಿಲಿಟರಿ ತಜ್ಞರು ಕೇವಲ ಕೈಗೊಂಬೆಗಳೇ? ಅವರನ್ನು ಬದಿಗೆ ತಳ್ಳಬಹುದಾ? ಮೋದಿ ಸರ್ಕಾರದ ಸ್ವಜನಪಕ್ಷಪಾತ ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ. ಭಾರತದ ಅತಿದೊಡ್ಡ ಸೌರ ಯೋಜನೆಯನ್ನು ಪಾಕಿಸ್ತಾನ ಗಡಿಯಿಂದ ಕೇವಲ 1 ಕಿ.ಮೀ ದೂರದಲ್ಲಿ ನಿರ್ಮಿಸಲು ಅವಕಾಶ ನೀಡಿರುವುದು ಅತ್ಯಂತ ಅಪಾಯಕಾರಿ ನಡೆ ಮತ್ತು ಎಲ್ಲಾ ಸ್ಥಾಪಿತ ಮಿಲಿಟರಿ ಮಾನದಂಡಗಳಿಗೆ ವಿರುದ್ಧವಾಗಿದೆ” ಎಂದು ವೇಣುಗೋಪಾಲ್ ಎಕ್ಸ್‌ ಪೋಸ್ಟ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ದೇಶದ ಎಲ್ಲಾ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯವರ ‘ಸ್ನೇಹಿತ’ನಿಗೆ ಹಸ್ತಾಂತರಿಸುವ ಪ್ರಕ್ರಿಯೆ ಗಡಿ ಭದ್ರತಾ ನಿಯಮಗಳನ್ನು ಕೂಡ ಬದಲಾಯಿಸುವ ಹಂತಕ್ಕೆ ತಲುಪಿದೆಯೇ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...