Homeಮುಖಪುಟಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿದೆ.

ಇಂದು (ಡಿ.18) ಸಂಸತ್ತಿನ ಬಳಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದರು, ಅಮಿತ್ ಶಾ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ರಾಜೀನಾಮೆಗೆ ನಾವು ಒತ್ತಾಯಿಸುತ್ತಿದ್ದೇವೆ. ಅವರು ದೇಶದ ಕ್ಷಮೆ ಕೇಳಬೇಕು” ಎಂದು ಹೇಳಿದರು.

ಕಾಂಗ್ರೆಸ್ ಸಂಸದ ನೀರಜ್ ಡಾಂಗಿ ಮಾತನಾಡಿ, “ತನ್ನ ಹೇಳಿಕೆಗೆ ಸಂಬಂಧಿಸಿದಂತೆ ಅಮಿತ್ ಶಾ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದರು. ಅಂಬೇಡ್ಕರ್ ಹೆಸರು ಬಳಸುವುದು ಫ್ಯಾಷನ್ ಆಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಬಾಬಾ ಸಾಹೇಬರು ಮತ್ತು ದೇಶದ ದಲಿತರಿಗೆ ಅವಮಾನ ಮಾಡಿದ್ದಾರೆ. ವಂಚಿತ ಮತ್ತು ಶೋಷಿತ ವರ್ಗದವರನ್ನು ಅವಮಾನಿಸಿದ್ದಾರೆ. ಇದೇ ವರ್ಗ ಅವರನ್ನು 240ರಿಂದ 40ಕ್ಕೆ ಇಳಿಸಲಿದೆ. ಅಮಿತ್ ಶಾ ತನ್ನ ಹೇಳಿಕೆ ಮೂಲಕ ಬಿಜೆಪಿ ನಾಯಕರಿಗೆ ಯಾವ ರೀತಿಯ ಚಿಂತನೆ ಇದೆ ಎಂದು ಇಡೀ ದೇಶಕ್ಕೆ ತಿಳಿಸಿದ್ದಾರೆ ಎಂದರು.

“ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದರು. ಅಂಬೇಡ್ಕರ್ ಅವರ ಬಗ್ಗೆ ಹೇಳಿಕೆ ನೀಡುವ ಮೂಲಕ ಸಾಂವಿಧಾನಿಕ ಹುದ್ದೆ ಹೊಂದುವ ಅರ್ಹತೆಯನ್ನು ಅಮಿತ್ ಶಾ ಕಳೆದುಕೊಂಡಿದ್ದಾರೆ. ಅವರು ಗೃಹ ಸಚಿವರ ಹುದ್ದೆಗೆ ರಾಜೀನಾಮೆ ನೀಡಲೇಬೇಕು” ಎಂದು ಆಗ್ರಹಿಸಿದರು.

ಸಂವಿಧಾನದ ಮೇಲಿನ ಚರ್ಚೆಯ ವೇಳೆ ರಾಜ್ಯಸಭೆಯಲ್ಲಿ ಅಮಿತ್ ನೀಡಿರುವ ಹೇಳಿಕೆಯು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಗೆ ಅಂಬೇಡ್ಕರ್ ಮೇಲೆ ‘ಅಸಾಧಾರಣ ದ್ವೇಷ’ ಇದೆ ಎಂಬುವುದನ್ನು ತೋರಿಸಿದೆ. ಅಮಿತ್ ಶಾ ಕ್ಷಮೆಯಾಚಿಸಲೇಬೇಕು ಎಂದು ಕಾಂಗ್ರೆಸ್‌ನ ಇತರ ನಾಯಕರೂ ಹೇಳಿದ್ದಾರೆ.

“ಮನುಸ್ಮೃತಿಯಲ್ಲಿ ನಂಬಿಕೆ ಇರುವವರು ಅಂಬೇಡ್ಕರ್‌ ಅವರ ಜೊತೆ ಭಿನ್ನಾಭಿಪ್ರಾಯ ಹೊಂದಿರುವುದು ನಿಜ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಅಮಿತ್ ಶಾ ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ” ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲೆ ಭಾರೀ ದ್ವೇಷವಿದೆ ಎಂಬುವುದನ್ನು ಇದು ತೋರಿಸುತ್ತದೆ” ಎಂದಿದ್ದಾರೆ.

“ಬಾಬಾ ಸಾಹೇಬರ ಹೆಸರು ಕೇಳಿದರೆ ಕೆರಳುವಷ್ಟು ದ್ವೇಷ ಬಿಜೆಪಿ ನಾಯಕರಿಗಿದೆ. ಇವರ ಪೂರ್ವಜರು ಬಾಬಾ ಸಾಹೇಬರ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಬಾಬಾ ಸಾಹೇಬರು ನೀಡಿದ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತಾನಾಡುತ್ತಿದ್ದರು. ಯಾವಾಗ ಜನರು ಇವರಿಗೆ ತಕ್ಕ ಪಾಠ ಕಲಿಸಿದರೋ, ಈಗ ಬಾಬಾ ಸಾಹೇಬರ ಹೆಸರು ಹೇಳುವವರ ವಿರುದ್ದ ದ್ವೇಷ ಕಾರುತ್ತಿದ್ದಾರೆ. ಇದು ನಾಚಿಕೆಗೇಡು, ಅಮಿತ್ ಶಾ ದೇಶದ ಕ್ಷಮೆ ಯಾಚಿಸಬೇಕು” ಎಂದು ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣದ ಕುರಿತ ಎರಡು ದಿನಗಳ ಚರ್ಚೆಯನ್ನು ಮುಕ್ತಾಯಗೊಳಿಸಿ ಮಂಗಳವಾರ (ಡಿ.17) ಸಂಸತ್ತಿನಲ್ಲಿ ಮಾತನಾಡಿದ ಅಮಿತ್‌ ಶಾ, “ಕಾಂಗ್ರೆಸ್ ತುಷ್ಠೀಕರಣ ರಾಜಕಾರಣವನ್ನು ಮುಂದುವರೆಸಿಕೊಂಡು ಬಂದಿದೆ. ಈಗ ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಮೀಸಲಾತಿ ಮಿತಿ ಶೇ.50 ಅನ್ನು ತೆಗೆಯಲು ಬಯಸಿದೆ” ಎಂದಿದ್ದಾರೆ.

ಕಾಂಗ್ರೆಸ್ ಮುಸ್ಲಿಂ ವೈಯಕ್ತಿಕ ಕಾನೂನನ್ನು ಬೆಂಬಲಿಸುತ್ತದೆಯೇ? ಎಂದು ಪ್ರಶ್ನಿಸಿದ ಅಮಿತ್ ಶಾ, ಪಕ್ಷವು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಯಾವತ್ತೂ ಕೆಲಸ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ಈಗಾಗಲೇ ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆ (ಏಕರೂಪ ನಾಗರಿಕ ಸಂಹಿತೆ) ಜಾರಿಗೆ ತಂದಿದ್ದು, ಎಲ್ಲಾ ರಾಜ್ಯಗಳಲ್ಲಿ ಅದನ್ನು ಜಾರಿಗೊಳಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದೇ ವೇಳೆ, “ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಸಿಗುತಿತ್ತು” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...