Homeಮುಖಪುಟಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿದೆ.

ಇಂದು (ಡಿ.18) ಸಂಸತ್ತಿನ ಬಳಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದರು, ಅಮಿತ್ ಶಾ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ರಾಜೀನಾಮೆಗೆ ನಾವು ಒತ್ತಾಯಿಸುತ್ತಿದ್ದೇವೆ. ಅವರು ದೇಶದ ಕ್ಷಮೆ ಕೇಳಬೇಕು” ಎಂದು ಹೇಳಿದರು.

ಕಾಂಗ್ರೆಸ್ ಸಂಸದ ನೀರಜ್ ಡಾಂಗಿ ಮಾತನಾಡಿ, “ತನ್ನ ಹೇಳಿಕೆಗೆ ಸಂಬಂಧಿಸಿದಂತೆ ಅಮಿತ್ ಶಾ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದರು. ಅಂಬೇಡ್ಕರ್ ಹೆಸರು ಬಳಸುವುದು ಫ್ಯಾಷನ್ ಆಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಬಾಬಾ ಸಾಹೇಬರು ಮತ್ತು ದೇಶದ ದಲಿತರಿಗೆ ಅವಮಾನ ಮಾಡಿದ್ದಾರೆ. ವಂಚಿತ ಮತ್ತು ಶೋಷಿತ ವರ್ಗದವರನ್ನು ಅವಮಾನಿಸಿದ್ದಾರೆ. ಇದೇ ವರ್ಗ ಅವರನ್ನು 240ರಿಂದ 40ಕ್ಕೆ ಇಳಿಸಲಿದೆ. ಅಮಿತ್ ಶಾ ತನ್ನ ಹೇಳಿಕೆ ಮೂಲಕ ಬಿಜೆಪಿ ನಾಯಕರಿಗೆ ಯಾವ ರೀತಿಯ ಚಿಂತನೆ ಇದೆ ಎಂದು ಇಡೀ ದೇಶಕ್ಕೆ ತಿಳಿಸಿದ್ದಾರೆ ಎಂದರು.

“ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದರು. ಅಂಬೇಡ್ಕರ್ ಅವರ ಬಗ್ಗೆ ಹೇಳಿಕೆ ನೀಡುವ ಮೂಲಕ ಸಾಂವಿಧಾನಿಕ ಹುದ್ದೆ ಹೊಂದುವ ಅರ್ಹತೆಯನ್ನು ಅಮಿತ್ ಶಾ ಕಳೆದುಕೊಂಡಿದ್ದಾರೆ. ಅವರು ಗೃಹ ಸಚಿವರ ಹುದ್ದೆಗೆ ರಾಜೀನಾಮೆ ನೀಡಲೇಬೇಕು” ಎಂದು ಆಗ್ರಹಿಸಿದರು.

ಸಂವಿಧಾನದ ಮೇಲಿನ ಚರ್ಚೆಯ ವೇಳೆ ರಾಜ್ಯಸಭೆಯಲ್ಲಿ ಅಮಿತ್ ನೀಡಿರುವ ಹೇಳಿಕೆಯು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಗೆ ಅಂಬೇಡ್ಕರ್ ಮೇಲೆ ‘ಅಸಾಧಾರಣ ದ್ವೇಷ’ ಇದೆ ಎಂಬುವುದನ್ನು ತೋರಿಸಿದೆ. ಅಮಿತ್ ಶಾ ಕ್ಷಮೆಯಾಚಿಸಲೇಬೇಕು ಎಂದು ಕಾಂಗ್ರೆಸ್‌ನ ಇತರ ನಾಯಕರೂ ಹೇಳಿದ್ದಾರೆ.

“ಮನುಸ್ಮೃತಿಯಲ್ಲಿ ನಂಬಿಕೆ ಇರುವವರು ಅಂಬೇಡ್ಕರ್‌ ಅವರ ಜೊತೆ ಭಿನ್ನಾಭಿಪ್ರಾಯ ಹೊಂದಿರುವುದು ನಿಜ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಅಮಿತ್ ಶಾ ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ” ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲೆ ಭಾರೀ ದ್ವೇಷವಿದೆ ಎಂಬುವುದನ್ನು ಇದು ತೋರಿಸುತ್ತದೆ” ಎಂದಿದ್ದಾರೆ.

“ಬಾಬಾ ಸಾಹೇಬರ ಹೆಸರು ಕೇಳಿದರೆ ಕೆರಳುವಷ್ಟು ದ್ವೇಷ ಬಿಜೆಪಿ ನಾಯಕರಿಗಿದೆ. ಇವರ ಪೂರ್ವಜರು ಬಾಬಾ ಸಾಹೇಬರ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಬಾಬಾ ಸಾಹೇಬರು ನೀಡಿದ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತಾನಾಡುತ್ತಿದ್ದರು. ಯಾವಾಗ ಜನರು ಇವರಿಗೆ ತಕ್ಕ ಪಾಠ ಕಲಿಸಿದರೋ, ಈಗ ಬಾಬಾ ಸಾಹೇಬರ ಹೆಸರು ಹೇಳುವವರ ವಿರುದ್ದ ದ್ವೇಷ ಕಾರುತ್ತಿದ್ದಾರೆ. ಇದು ನಾಚಿಕೆಗೇಡು, ಅಮಿತ್ ಶಾ ದೇಶದ ಕ್ಷಮೆ ಯಾಚಿಸಬೇಕು” ಎಂದು ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣದ ಕುರಿತ ಎರಡು ದಿನಗಳ ಚರ್ಚೆಯನ್ನು ಮುಕ್ತಾಯಗೊಳಿಸಿ ಮಂಗಳವಾರ (ಡಿ.17) ಸಂಸತ್ತಿನಲ್ಲಿ ಮಾತನಾಡಿದ ಅಮಿತ್‌ ಶಾ, “ಕಾಂಗ್ರೆಸ್ ತುಷ್ಠೀಕರಣ ರಾಜಕಾರಣವನ್ನು ಮುಂದುವರೆಸಿಕೊಂಡು ಬಂದಿದೆ. ಈಗ ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಮೀಸಲಾತಿ ಮಿತಿ ಶೇ.50 ಅನ್ನು ತೆಗೆಯಲು ಬಯಸಿದೆ” ಎಂದಿದ್ದಾರೆ.

ಕಾಂಗ್ರೆಸ್ ಮುಸ್ಲಿಂ ವೈಯಕ್ತಿಕ ಕಾನೂನನ್ನು ಬೆಂಬಲಿಸುತ್ತದೆಯೇ? ಎಂದು ಪ್ರಶ್ನಿಸಿದ ಅಮಿತ್ ಶಾ, ಪಕ್ಷವು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಯಾವತ್ತೂ ಕೆಲಸ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ಈಗಾಗಲೇ ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆ (ಏಕರೂಪ ನಾಗರಿಕ ಸಂಹಿತೆ) ಜಾರಿಗೆ ತಂದಿದ್ದು, ಎಲ್ಲಾ ರಾಜ್ಯಗಳಲ್ಲಿ ಅದನ್ನು ಜಾರಿಗೊಳಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದೇ ವೇಳೆ, “ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಸಿಗುತಿತ್ತು” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...