HomeUncategorizedದೇಶಪಾಂಡೆಯ ದ್ರೋಹ ಕೈಗೆ ಅರ್ಥವಾಗುತ್ತಿಲ್ಲ ಯಾಕೆ?

ದೇಶಪಾಂಡೆಯ ದ್ರೋಹ ಕೈಗೆ ಅರ್ಥವಾಗುತ್ತಿಲ್ಲ ಯಾಕೆ?

- Advertisement -
- Advertisement -

ನಹುಷ |

ದೇಶಪಾಂಡೆಗೆ ವಯಸ್ಸಾಗಿದೆ… ದೀರ್ಘಕಾಲ ಅಧಿಕಾರ ಅನುಭವಿಸಿಯೂ ಆಗಿದೆ….. ಅವ್ರು ಶಿವರಾಮ ಹೆಬ್ಬಾರ್‍ಗೆ ಮಂತ್ರಿಗಿರಿ ಬಿಟ್ಟುಕೊಡೋದು ಚಲೋ… ಕಿರಿಯರಿಗೆ ಪ್ರೋತ್ಸಾಹಿಸುಬೇಕವ್ರು….” ಎಂದು ಮೂರ್ನಾಲ್ಕು ತಿಂಗಳ ಹಿಂದೊಂದು ದೇಶಾವರಿ ಹೇಳಿಕೆ ಒಗಾಯಿಸಿದ್ದರು ಆನಂದ ಅಸ್ನೋಟಿಕರ್. ಆಪರೇಷನ್ ಕಮಲದ ಸೆಳೆತಕ್ಕೆ ಸಿಲುಕಿ ಹೆಬ್ಬಾರ್ ತಕಧಿಮಿ ಕುಣಿಯುತ್ತಿದ್ದ ಕಾಲವದು.
ಈ ಪ್ರಹಸನದ ಬೆನ್ನಿಗೇ- ಅಂದರೆ ಲೋಕಸಭೆ ಇಲೆಕ್ಷನ್ ಘೋಷಣೆ ಒಂದೂವರೆ ವಾರವಷ್ಟೇ ಇದ್ದ ಹೊತ್ತಲ್ಲಿ ಬಿಜೆಪಿಯ ಅನಂತ್ಮಾಣಿ, ದೇಶಪಾಂಡೆಯೇ ತನ್ನ ಎದುರಾಳಿ ಆಗಬಹುದೆಂಬ ಆತಂಕದಲ್ಲಿ “ಮಂತ್ರಿ ದೇಶಪಾಂಡೆ ಅಂದ್ರೆ ಪರ್ಸೆಂಟೇಜ್ ಪಾಂಡೆ ಕಣ್ರೀ… ಹಳ್ಳೀಲಿ ಸರ್ಕಾರಿ ಬಾವಿ ತೆಗೆದ್ರೂ ಅದರ ಪರ್ಸೆಂಜೇಜು ದೇಶಪಾಂಡೆಗೆ ಹೋಗ್ತದೆ….!” ಎಂದು ಗಂಭೀರ ಆರೋಪ ಮಾಡಿದ್ದ.
ಈ ಇಬ್ಬರ ಟೀಕೆಯಲ್ಲಿ ದೇಶಪಾಂಡೆಯನ್ನು ಅಪಮಾನಕ್ಕೀಡು ಮಾಡುವಂಥದ್ದು ಯಾವುದು? ಸಾಕ್ಷಾತ್ ದೇಶಪಾಂಡೆ ಸಾಹೇಬರ ಪ್ರಕಾರ ಅಸ್ನೋಟಿಕರ್‍ನದೇ ಅಕ್ಷಮ್ಯ ಅಪರಾಧ. ಮುಗಿದ ಪಾರ್ಲಿಮೆಂಟ್ ಇಲೆಕ್ಷನ್‍ನಲ್ಲಿ ಅಸ್ನೋಟಿಕರ್‍ನ ಈ ಮಾತುಗಳನ್ನೇ ನೆಪಮಾಡಿಕೊಂಡು ಮೈತ್ರಿಕೂಟದ ಸೋಲಿಗೆ ಏನೆಲ್ಲಾ ಮಾಡಬಹುದೋ ಅದೆಲ್ಲಾ ದೇಶಪಾಂಡೆ ಮಾಡಿದ್ದಾರೆ. ಅಲ್ಲಿಗೆ ಸಮಯ ಸಾಧಕತನವನ್ನೇ ಸಿದ್ಧಾಂತ ಮಾಡಿಕೊಂಡಿರುವ ದೇಶಪಾಂಡೆಯ ದ್ರೋಹ-ದೋಖಾ ಬುದ್ಧಿ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ದಾಖಲಾಗಿ ಹೋಗಿದೆ!!
ಈ ಬಾರಿ ಕೈ ಸಿಂಬಾಲ್‍ನಲ್ಲಿ ಹರಿಪ್ರಸಾದ್, ಮ್ಯಾಗಿ, ಕೆ.ಎಚ್.ಗೌಡ, ಭೀಮಣ್ಣನಾಯ್ಕ… ಹೀಗೆ ಯಾರೇ ನಿಂತರೂ ಗೆಲ್ಲುವ ಅವಕಾಶ ಹೆಚ್ಚಿತ್ತು. ದೇಶಪಾಂಡೆ ಮತ್ತವನ ಮಗನ ಬಿಟ್ಟು ಕಾಂಗ್ರೆಸ್‍ನ ಎರಡನೇ ಸಾಲಿನ ಲೀಡರ್ ಯಾರಿಗಾದರೂ ಅಭ್ಯರ್ಥಿ ಮಾಡಿ, ದೇಶಪಾಂಡೆಯನ್ನು ಕಿತಾಪತಿ ಮಾಡದಂತೆ ಮೂಗುದಾರ ಹಾಕಿ ಕೂಡ್ರಿಸಿದ್ದರೆ ಅನಂತ್ಮಾಣಿಯನ್ನ ಸುಲಭವಾಗಿ ಮಾಜಿ ಮಾಡಬಹುದಿತ್ತು. ಅಷ್ಟೂ ದೊಡ್ಡಮಟ್ಟದಲ್ಲಿ ಮಾಣಿ ಬಗ್ಗೆ ಬೇಸರ-ಹೇಸಿಗೆ ಕ್ಷೇತ್ರದಲ್ಲಿ ಹೆಪ್ಪುಗಟ್ಟಿತ್ತು! ಆದರೆ ಹಾವು ಮುಂಗುಸಿಯಂತೆ ಕಿತ್ತಾಡುವ ಮ್ಯಾಗಿ-ದೇಶಪಾಂಡೆ ಒಂದಾಗಿ ನೆಲೆ-ಬೆಲೆಯೇ ಜಿಲ್ಲೆಯಲ್ಲಿ ಇಲ್ಲದ ಜೆಡಿಎಸ್‍ಗೆ ಕ್ಷೇತ್ರವನ್ನು ತಟ್ಟೆಯಲ್ಲಿಟ್ಟು ಕೊಟ್ಟಿದ್ದರು.
ಮ್ಯಾಗಿ ಮೈತ್ರಿಕೂಟದ ಪ್ರಚಾರಕ್ಕೆಂದು ಜಿಲ್ಲೆಗೆ ಒಂದು ಸಲವೂ ಬರಲಿಲ್ಲ. ದೇಶಪಾಂಡೆ ಮತದಾನಕ್ಕೆ ವಾರವಿರುವಾಗ ಕಾಟಾಚಾರಕ್ಕೆ ಬಂದವರು, ನಾಲ್ಕುದಿನ ಮೊದಲೇ ನಾಪತ್ತೆಯಾಗಿ ಹೋದರು. ಹೋದಲ್ಲೆಲ್ಲ ತನ್ನ ಶಿಷ್ಯರನ್ನು ರಹಸ್ಯವಾಗಿ ಕರೆದು ಅಸ್ನೋಟಿಕರ್ ಸೋಲಿಸಲು ‘ಆದೇಶ’ ಕೊಟ್ಟರು.
ಏಐಸಿಸಿ ಮಟ್ಟದಲ್ಲಿ ಪ್ರಭಾವವಿರುವ ಬಿ.ಕೆ.ಹರಿಪ್ರಸಾದ್, ಮಾರ್ಗರೆಟ್ ಆಳ್ವ, ಸಿದ್ದರಾಮಯ್ಯನಂಥವರೇ ಅದ್ಯಾಕೋ ದೇಶಪಾಂಡೆಯ ಈ ಸ್ವಭಾವ ಕಂಡೂ ಕಾಣದಂತಿದ್ದಾರೆ. ಬಸವರಾಜ ಹೊರಟ್ಟಿ ಹತ್ತಿರವೇ “ನಂಗೆ ರಾಜಕೀಯ ಸಾಕಾಗಿದೆ… ಪಕ್ಷ, ಸರ್ಕಾರ ನನ್ನ ಮೇಲೆ ಕ್ರಮ ಕೈಗೊಂಡರೂ ಬೇಜಾರಿಲ್ಲ… ನಾನು ರೀಟೈರ್ ಆಗ್ತೀನೋ ಹೊರತು ಆ ಅಧಿಕ ಪ್ರಸಂಗಿ ಅಸ್ನೋಟಿಕರ್ ಪರ ಕೆಲಸ ಮಾಡೋದಿಲ್ಲ…” ಎಂದು ಖಡಾಖಂಡಿತವಾಗೇ ಹೇಳಿದ್ದರು ಎನ್ನಲಾಗುತ್ತಿದೆ.
ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಾಮಾಣಿಕವಾಗಿ ಪ್ರಬಲವಾಗಿ ಆಸ್ನೋಟಿಕರ್ ಪರ ಕೆಲಸ ಮಾಡುತ್ತಿದ್ದರು. ಇದನ್ನು ಕಂಡು ಸಿಡಿಮಿಡಿಗೊಂಡ ದೇಶಪಾಂಡೆ ಆಕೆಯನ್ನು ಕರೆದು “ನೋಡಮ್ಮಾ… ನೀನು ಈಗ ಜೆಡಿಎಸ್ ಪರ ಹೀಗೆಲ್ಲ ಕೆಲ್ಸ ಮಾಡಿದ್ರೆ ಮುಂದಿನ ಅಸೆಂಬ್ಲಿ ಇಲೆಕ್ಷನ್‍ದಾಗೆ ತೊಂದ್ರೆ ಅಕ್ಕೇತಿ… ನಿಂಗ ಕಳ್ದಬಾರಿ ಠಕ್ಕರ್ ಕೊಟ್ಟಿದ್ದ ಜೆಡಿಎಸ್‍ನ ನಾಸೀರ್ ಭಾಗವನ್‍ಗೆ ಹೆಲ್ಪ್ ಆಕ್ಕೇತಿ… ನೋಡ್ ಸ್ವಲ್ಪ ವಿಚಾರ ಮಾಡ್…” ಎಂದು ಹೆದರಿಸಿ ಆಕೆಯ ವೇಗಕ್ಕೆ ಕಡಿವಾಣ ಹಾಕಿದ್ದಾರೆ.
ಅಸ್ನೋಟಿಕರ್ ಮಾಣಿ ಮೇಲೆ ದಾಳಿ ಮಾಡುತ್ತಿದ್ದ ಪರಿ ನೋಡಿದರೆ ಬಿಜೆಪಿಗೆ ಡ್ಯಾಮೇಜು ಆಗುತ್ತದೆ, ಮೈತ್ರಿ ಕೂಟ ಬಲಗೊಳಿಸುತ್ತದೆಂದು ದೇಶಪಾಂಡೆ ಜೆಡಿಎಸ್‍ನ ಬಸವರಾಜ ಹೊರಟ್ಟಿಯನ್ನು ಬಳಸಿಕೊಂಡರು. ಅಸ್ನೋಟಿಕರ್‍ಗೆ ಆಕ್ರಮಣಶೀಲತೆ ಕಮ್ಮಿ ಮಾಡುವಂತೆ ಹೊರಟ್ಟಿಯಿಂದ “ಬುದ್ಧಿ” ಹೇಳಿಸಿದರು. ಹೊರಟ್ಟಿ ಸಂಚು ಅರಿಯದ ಅಸ್ನೋಟಿಕರ್ ಕೊನೆಕೊನೆಯಲ್ಲಿ ಜೋಶ್ ಕಳಕೊಂಡರು. ಇದು ಆತನಿಗೆ ದೊಡ್ಡ ಹೊಡೆತವನ್ನೇ ಕೊಟ್ಟಿದೆ!!
ಇಷ್ಟೆಲ್ಲಾ ಎಡರುತೊಡರು ಎದುರಾದರೂ ಅಸ್ನೋಟಿಕರ್ ತೀರಾ ದುರ್ಬಲವಾಗಿಲ್ಲ. ದೇಶಪಾಂಡೆ ತಲೆಕಂಡರಾಗದ ಕಾಂಗ್ರೆಸ್‍ನ ಹಳಿಯಾಳದ ಎಮ್ಮೆಲ್ಸಿ ಘೋಟನೇಕರ್, ಶಾಸಕ ಹೆಬ್ಬಾರ್, ಮಾಜಿ ಶಾಸಕರಾದ ಸತೀಶ್ ಸೈಲ್, ಮಂಕಾಳ ವೈದ್ಯ, ಆರ್.ಎನ್.ನಾಯ್ಕ, ಜೆ.ಡಿ.ನಾಯ್ಕ ಒಂದು ಹಂತದವರೆಗೆ ಮೈತ್ರಿಕೂಟದ ಗೆಲುವಿಗೆ ಪ್ರಯತ್ನ ಪಟ್ಟಿದ್ದಾರೆ. ಕಿತ್ತೂರು, ಖಾನಾಪುರದಲ್ಲಿ ಮಾಣಿಗೆ ಹಿನ್ನಡೆಯಾಗಿದೆ. ಕರಾವಳಿಯಲ್ಲಿ ಮೈತ್ರಿಕೂಟ ಏದುಸಿರುಬಿಡುತ್ತಿದೆ. ಘಟ್ಟದ ಮೇಲೆ ಸಮಬಲ ಇರುವಂತಿದೆ. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ಹಾಕಿದರೂ ಎದುರು ಹಿಂದುತ್ವ, ಬ್ರಾಹ್ಮಣಿಕೆ ಮಸಲತ್ತುಗಳು ಮೇಲುಗೈ ಸಾಧಿಸಿರುವುದು ಕಾಣಿಸುತ್ತದೆ.
ಕೇಸರಿ-ಭಜರಂಗಿ ಪಡೆಯ ಲೆಕ್ಕಾಚಾರದಂತೆ ಮಾಣಿ ಎರಡು ಲಕ್ಷ ಅಂತರದಲ್ಲಿ ಗೆಲ್ಲುತ್ತಾನೆ. ಅಷ್ಟು ಸರಳ ಸಮೀಕರಣ ಕ್ಷೇತ್ರದಲ್ಲಿಲ್ಲ. ಮಾಣಿ ವಿರುದ್ಧ ಅಂಡರ್ ಕರಂಟ್ ಕ್ಷೇತ್ರಾದಾದ್ಯಂತ ಹರಿದಾಡಿರುವುದಂತೂ ಖರೆ. ಹೀಗಾಗಿ ಅಸ್ನೋಟಿಕರ್ ಹೋರಾಟ ಕೊಟ್ಟಿದ್ದಾನೆ. ಹೀಗಾಗಿ ಅಸ್ನೋಟಿಕರ್ ಸೋತರೂ ಸಣ್ಣ ಅಂತರದಲ್ಲಷ್ಟೇ ಎಂಬ ವಿಶ್ಲೇಷಣೆಯೂ ನಡೆದಿದೆ.
ಅನಂತ್ಮಾಣಿ ಗೆದ್ದರೂ ಅದು ಅಪಮಾನದ ಗೆಲುವು; ದೇಶಪಾಂಡೆಯ ಪಕ್ಷ ದ್ರೋಹದ ಫಲ. ಕಾಂಗ್ರೆಸ್ ಹೈಕಮಾಂಡ್ ದೇಶಪಾಂಡೆ ವಿರುದ್ಧ ಕ್ರಮಕ್ಕೆ ಯೋಚಿಸಬೇಕಾದ ಕಾಲವಿದು. ಆತನನ್ನು ಪಕ್ಷದಿಂದ ಹೊರಹಾಕಿದರೆ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ದಲಿತರು ಒಂದಾಗಿ ಕಾಂಗ್ರೆಸ್ ಬೆಂಬಲಿಸುವುದು ನಿಸ್ಸಂಶಯ. ಅಂದಹಾಗೆ, ಆಪರೇಷನ್ ಕಮಲದ ಹುಮ್ಮಸ್ಸಿನಲ್ಲಿರುವ ಬಿಜೆಪಿಯ ಟಾರ್ಗೆಟ್ ಪಟ್ಟಿಯಲ್ಲೂ ದೇಶಪಾಂಡೆಯ ಹೆಸರಿಲ್ಲ. ಯಾಕೆಂದರೆ ಆತ ಬಿಜೆಪಿ ಸೇರಿದರೆ ಆ ಪಾರ್ಟಿಗೆ ಲಾಭಕ್ಕಿಂತ ಲುಕ್ಸಾನೇ ಜಾಸ್ತಿ ಎಂಬುದು ಅವರಿಗೂ ಗೊತ್ತು. ಆತ ಕಾಂಗ್ರೆಸಲ್ಲೇ ಇದ್ದರೆ ಬಿಜೆಪಿಗೆ ಲಾಭ ಜಾಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...