HomeUncategorizedದೇಶಪಾಂಡೆಯ ದ್ರೋಹ ಕೈಗೆ ಅರ್ಥವಾಗುತ್ತಿಲ್ಲ ಯಾಕೆ?

ದೇಶಪಾಂಡೆಯ ದ್ರೋಹ ಕೈಗೆ ಅರ್ಥವಾಗುತ್ತಿಲ್ಲ ಯಾಕೆ?

- Advertisement -
- Advertisement -

ನಹುಷ |

ದೇಶಪಾಂಡೆಗೆ ವಯಸ್ಸಾಗಿದೆ… ದೀರ್ಘಕಾಲ ಅಧಿಕಾರ ಅನುಭವಿಸಿಯೂ ಆಗಿದೆ….. ಅವ್ರು ಶಿವರಾಮ ಹೆಬ್ಬಾರ್‍ಗೆ ಮಂತ್ರಿಗಿರಿ ಬಿಟ್ಟುಕೊಡೋದು ಚಲೋ… ಕಿರಿಯರಿಗೆ ಪ್ರೋತ್ಸಾಹಿಸುಬೇಕವ್ರು….” ಎಂದು ಮೂರ್ನಾಲ್ಕು ತಿಂಗಳ ಹಿಂದೊಂದು ದೇಶಾವರಿ ಹೇಳಿಕೆ ಒಗಾಯಿಸಿದ್ದರು ಆನಂದ ಅಸ್ನೋಟಿಕರ್. ಆಪರೇಷನ್ ಕಮಲದ ಸೆಳೆತಕ್ಕೆ ಸಿಲುಕಿ ಹೆಬ್ಬಾರ್ ತಕಧಿಮಿ ಕುಣಿಯುತ್ತಿದ್ದ ಕಾಲವದು.
ಈ ಪ್ರಹಸನದ ಬೆನ್ನಿಗೇ- ಅಂದರೆ ಲೋಕಸಭೆ ಇಲೆಕ್ಷನ್ ಘೋಷಣೆ ಒಂದೂವರೆ ವಾರವಷ್ಟೇ ಇದ್ದ ಹೊತ್ತಲ್ಲಿ ಬಿಜೆಪಿಯ ಅನಂತ್ಮಾಣಿ, ದೇಶಪಾಂಡೆಯೇ ತನ್ನ ಎದುರಾಳಿ ಆಗಬಹುದೆಂಬ ಆತಂಕದಲ್ಲಿ “ಮಂತ್ರಿ ದೇಶಪಾಂಡೆ ಅಂದ್ರೆ ಪರ್ಸೆಂಟೇಜ್ ಪಾಂಡೆ ಕಣ್ರೀ… ಹಳ್ಳೀಲಿ ಸರ್ಕಾರಿ ಬಾವಿ ತೆಗೆದ್ರೂ ಅದರ ಪರ್ಸೆಂಜೇಜು ದೇಶಪಾಂಡೆಗೆ ಹೋಗ್ತದೆ….!” ಎಂದು ಗಂಭೀರ ಆರೋಪ ಮಾಡಿದ್ದ.
ಈ ಇಬ್ಬರ ಟೀಕೆಯಲ್ಲಿ ದೇಶಪಾಂಡೆಯನ್ನು ಅಪಮಾನಕ್ಕೀಡು ಮಾಡುವಂಥದ್ದು ಯಾವುದು? ಸಾಕ್ಷಾತ್ ದೇಶಪಾಂಡೆ ಸಾಹೇಬರ ಪ್ರಕಾರ ಅಸ್ನೋಟಿಕರ್‍ನದೇ ಅಕ್ಷಮ್ಯ ಅಪರಾಧ. ಮುಗಿದ ಪಾರ್ಲಿಮೆಂಟ್ ಇಲೆಕ್ಷನ್‍ನಲ್ಲಿ ಅಸ್ನೋಟಿಕರ್‍ನ ಈ ಮಾತುಗಳನ್ನೇ ನೆಪಮಾಡಿಕೊಂಡು ಮೈತ್ರಿಕೂಟದ ಸೋಲಿಗೆ ಏನೆಲ್ಲಾ ಮಾಡಬಹುದೋ ಅದೆಲ್ಲಾ ದೇಶಪಾಂಡೆ ಮಾಡಿದ್ದಾರೆ. ಅಲ್ಲಿಗೆ ಸಮಯ ಸಾಧಕತನವನ್ನೇ ಸಿದ್ಧಾಂತ ಮಾಡಿಕೊಂಡಿರುವ ದೇಶಪಾಂಡೆಯ ದ್ರೋಹ-ದೋಖಾ ಬುದ್ಧಿ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ದಾಖಲಾಗಿ ಹೋಗಿದೆ!!
ಈ ಬಾರಿ ಕೈ ಸಿಂಬಾಲ್‍ನಲ್ಲಿ ಹರಿಪ್ರಸಾದ್, ಮ್ಯಾಗಿ, ಕೆ.ಎಚ್.ಗೌಡ, ಭೀಮಣ್ಣನಾಯ್ಕ… ಹೀಗೆ ಯಾರೇ ನಿಂತರೂ ಗೆಲ್ಲುವ ಅವಕಾಶ ಹೆಚ್ಚಿತ್ತು. ದೇಶಪಾಂಡೆ ಮತ್ತವನ ಮಗನ ಬಿಟ್ಟು ಕಾಂಗ್ರೆಸ್‍ನ ಎರಡನೇ ಸಾಲಿನ ಲೀಡರ್ ಯಾರಿಗಾದರೂ ಅಭ್ಯರ್ಥಿ ಮಾಡಿ, ದೇಶಪಾಂಡೆಯನ್ನು ಕಿತಾಪತಿ ಮಾಡದಂತೆ ಮೂಗುದಾರ ಹಾಕಿ ಕೂಡ್ರಿಸಿದ್ದರೆ ಅನಂತ್ಮಾಣಿಯನ್ನ ಸುಲಭವಾಗಿ ಮಾಜಿ ಮಾಡಬಹುದಿತ್ತು. ಅಷ್ಟೂ ದೊಡ್ಡಮಟ್ಟದಲ್ಲಿ ಮಾಣಿ ಬಗ್ಗೆ ಬೇಸರ-ಹೇಸಿಗೆ ಕ್ಷೇತ್ರದಲ್ಲಿ ಹೆಪ್ಪುಗಟ್ಟಿತ್ತು! ಆದರೆ ಹಾವು ಮುಂಗುಸಿಯಂತೆ ಕಿತ್ತಾಡುವ ಮ್ಯಾಗಿ-ದೇಶಪಾಂಡೆ ಒಂದಾಗಿ ನೆಲೆ-ಬೆಲೆಯೇ ಜಿಲ್ಲೆಯಲ್ಲಿ ಇಲ್ಲದ ಜೆಡಿಎಸ್‍ಗೆ ಕ್ಷೇತ್ರವನ್ನು ತಟ್ಟೆಯಲ್ಲಿಟ್ಟು ಕೊಟ್ಟಿದ್ದರು.
ಮ್ಯಾಗಿ ಮೈತ್ರಿಕೂಟದ ಪ್ರಚಾರಕ್ಕೆಂದು ಜಿಲ್ಲೆಗೆ ಒಂದು ಸಲವೂ ಬರಲಿಲ್ಲ. ದೇಶಪಾಂಡೆ ಮತದಾನಕ್ಕೆ ವಾರವಿರುವಾಗ ಕಾಟಾಚಾರಕ್ಕೆ ಬಂದವರು, ನಾಲ್ಕುದಿನ ಮೊದಲೇ ನಾಪತ್ತೆಯಾಗಿ ಹೋದರು. ಹೋದಲ್ಲೆಲ್ಲ ತನ್ನ ಶಿಷ್ಯರನ್ನು ರಹಸ್ಯವಾಗಿ ಕರೆದು ಅಸ್ನೋಟಿಕರ್ ಸೋಲಿಸಲು ‘ಆದೇಶ’ ಕೊಟ್ಟರು.
ಏಐಸಿಸಿ ಮಟ್ಟದಲ್ಲಿ ಪ್ರಭಾವವಿರುವ ಬಿ.ಕೆ.ಹರಿಪ್ರಸಾದ್, ಮಾರ್ಗರೆಟ್ ಆಳ್ವ, ಸಿದ್ದರಾಮಯ್ಯನಂಥವರೇ ಅದ್ಯಾಕೋ ದೇಶಪಾಂಡೆಯ ಈ ಸ್ವಭಾವ ಕಂಡೂ ಕಾಣದಂತಿದ್ದಾರೆ. ಬಸವರಾಜ ಹೊರಟ್ಟಿ ಹತ್ತಿರವೇ “ನಂಗೆ ರಾಜಕೀಯ ಸಾಕಾಗಿದೆ… ಪಕ್ಷ, ಸರ್ಕಾರ ನನ್ನ ಮೇಲೆ ಕ್ರಮ ಕೈಗೊಂಡರೂ ಬೇಜಾರಿಲ್ಲ… ನಾನು ರೀಟೈರ್ ಆಗ್ತೀನೋ ಹೊರತು ಆ ಅಧಿಕ ಪ್ರಸಂಗಿ ಅಸ್ನೋಟಿಕರ್ ಪರ ಕೆಲಸ ಮಾಡೋದಿಲ್ಲ…” ಎಂದು ಖಡಾಖಂಡಿತವಾಗೇ ಹೇಳಿದ್ದರು ಎನ್ನಲಾಗುತ್ತಿದೆ.
ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಾಮಾಣಿಕವಾಗಿ ಪ್ರಬಲವಾಗಿ ಆಸ್ನೋಟಿಕರ್ ಪರ ಕೆಲಸ ಮಾಡುತ್ತಿದ್ದರು. ಇದನ್ನು ಕಂಡು ಸಿಡಿಮಿಡಿಗೊಂಡ ದೇಶಪಾಂಡೆ ಆಕೆಯನ್ನು ಕರೆದು “ನೋಡಮ್ಮಾ… ನೀನು ಈಗ ಜೆಡಿಎಸ್ ಪರ ಹೀಗೆಲ್ಲ ಕೆಲ್ಸ ಮಾಡಿದ್ರೆ ಮುಂದಿನ ಅಸೆಂಬ್ಲಿ ಇಲೆಕ್ಷನ್‍ದಾಗೆ ತೊಂದ್ರೆ ಅಕ್ಕೇತಿ… ನಿಂಗ ಕಳ್ದಬಾರಿ ಠಕ್ಕರ್ ಕೊಟ್ಟಿದ್ದ ಜೆಡಿಎಸ್‍ನ ನಾಸೀರ್ ಭಾಗವನ್‍ಗೆ ಹೆಲ್ಪ್ ಆಕ್ಕೇತಿ… ನೋಡ್ ಸ್ವಲ್ಪ ವಿಚಾರ ಮಾಡ್…” ಎಂದು ಹೆದರಿಸಿ ಆಕೆಯ ವೇಗಕ್ಕೆ ಕಡಿವಾಣ ಹಾಕಿದ್ದಾರೆ.
ಅಸ್ನೋಟಿಕರ್ ಮಾಣಿ ಮೇಲೆ ದಾಳಿ ಮಾಡುತ್ತಿದ್ದ ಪರಿ ನೋಡಿದರೆ ಬಿಜೆಪಿಗೆ ಡ್ಯಾಮೇಜು ಆಗುತ್ತದೆ, ಮೈತ್ರಿ ಕೂಟ ಬಲಗೊಳಿಸುತ್ತದೆಂದು ದೇಶಪಾಂಡೆ ಜೆಡಿಎಸ್‍ನ ಬಸವರಾಜ ಹೊರಟ್ಟಿಯನ್ನು ಬಳಸಿಕೊಂಡರು. ಅಸ್ನೋಟಿಕರ್‍ಗೆ ಆಕ್ರಮಣಶೀಲತೆ ಕಮ್ಮಿ ಮಾಡುವಂತೆ ಹೊರಟ್ಟಿಯಿಂದ “ಬುದ್ಧಿ” ಹೇಳಿಸಿದರು. ಹೊರಟ್ಟಿ ಸಂಚು ಅರಿಯದ ಅಸ್ನೋಟಿಕರ್ ಕೊನೆಕೊನೆಯಲ್ಲಿ ಜೋಶ್ ಕಳಕೊಂಡರು. ಇದು ಆತನಿಗೆ ದೊಡ್ಡ ಹೊಡೆತವನ್ನೇ ಕೊಟ್ಟಿದೆ!!
ಇಷ್ಟೆಲ್ಲಾ ಎಡರುತೊಡರು ಎದುರಾದರೂ ಅಸ್ನೋಟಿಕರ್ ತೀರಾ ದುರ್ಬಲವಾಗಿಲ್ಲ. ದೇಶಪಾಂಡೆ ತಲೆಕಂಡರಾಗದ ಕಾಂಗ್ರೆಸ್‍ನ ಹಳಿಯಾಳದ ಎಮ್ಮೆಲ್ಸಿ ಘೋಟನೇಕರ್, ಶಾಸಕ ಹೆಬ್ಬಾರ್, ಮಾಜಿ ಶಾಸಕರಾದ ಸತೀಶ್ ಸೈಲ್, ಮಂಕಾಳ ವೈದ್ಯ, ಆರ್.ಎನ್.ನಾಯ್ಕ, ಜೆ.ಡಿ.ನಾಯ್ಕ ಒಂದು ಹಂತದವರೆಗೆ ಮೈತ್ರಿಕೂಟದ ಗೆಲುವಿಗೆ ಪ್ರಯತ್ನ ಪಟ್ಟಿದ್ದಾರೆ. ಕಿತ್ತೂರು, ಖಾನಾಪುರದಲ್ಲಿ ಮಾಣಿಗೆ ಹಿನ್ನಡೆಯಾಗಿದೆ. ಕರಾವಳಿಯಲ್ಲಿ ಮೈತ್ರಿಕೂಟ ಏದುಸಿರುಬಿಡುತ್ತಿದೆ. ಘಟ್ಟದ ಮೇಲೆ ಸಮಬಲ ಇರುವಂತಿದೆ. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ಹಾಕಿದರೂ ಎದುರು ಹಿಂದುತ್ವ, ಬ್ರಾಹ್ಮಣಿಕೆ ಮಸಲತ್ತುಗಳು ಮೇಲುಗೈ ಸಾಧಿಸಿರುವುದು ಕಾಣಿಸುತ್ತದೆ.
ಕೇಸರಿ-ಭಜರಂಗಿ ಪಡೆಯ ಲೆಕ್ಕಾಚಾರದಂತೆ ಮಾಣಿ ಎರಡು ಲಕ್ಷ ಅಂತರದಲ್ಲಿ ಗೆಲ್ಲುತ್ತಾನೆ. ಅಷ್ಟು ಸರಳ ಸಮೀಕರಣ ಕ್ಷೇತ್ರದಲ್ಲಿಲ್ಲ. ಮಾಣಿ ವಿರುದ್ಧ ಅಂಡರ್ ಕರಂಟ್ ಕ್ಷೇತ್ರಾದಾದ್ಯಂತ ಹರಿದಾಡಿರುವುದಂತೂ ಖರೆ. ಹೀಗಾಗಿ ಅಸ್ನೋಟಿಕರ್ ಹೋರಾಟ ಕೊಟ್ಟಿದ್ದಾನೆ. ಹೀಗಾಗಿ ಅಸ್ನೋಟಿಕರ್ ಸೋತರೂ ಸಣ್ಣ ಅಂತರದಲ್ಲಷ್ಟೇ ಎಂಬ ವಿಶ್ಲೇಷಣೆಯೂ ನಡೆದಿದೆ.
ಅನಂತ್ಮಾಣಿ ಗೆದ್ದರೂ ಅದು ಅಪಮಾನದ ಗೆಲುವು; ದೇಶಪಾಂಡೆಯ ಪಕ್ಷ ದ್ರೋಹದ ಫಲ. ಕಾಂಗ್ರೆಸ್ ಹೈಕಮಾಂಡ್ ದೇಶಪಾಂಡೆ ವಿರುದ್ಧ ಕ್ರಮಕ್ಕೆ ಯೋಚಿಸಬೇಕಾದ ಕಾಲವಿದು. ಆತನನ್ನು ಪಕ್ಷದಿಂದ ಹೊರಹಾಕಿದರೆ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ದಲಿತರು ಒಂದಾಗಿ ಕಾಂಗ್ರೆಸ್ ಬೆಂಬಲಿಸುವುದು ನಿಸ್ಸಂಶಯ. ಅಂದಹಾಗೆ, ಆಪರೇಷನ್ ಕಮಲದ ಹುಮ್ಮಸ್ಸಿನಲ್ಲಿರುವ ಬಿಜೆಪಿಯ ಟಾರ್ಗೆಟ್ ಪಟ್ಟಿಯಲ್ಲೂ ದೇಶಪಾಂಡೆಯ ಹೆಸರಿಲ್ಲ. ಯಾಕೆಂದರೆ ಆತ ಬಿಜೆಪಿ ಸೇರಿದರೆ ಆ ಪಾರ್ಟಿಗೆ ಲಾಭಕ್ಕಿಂತ ಲುಕ್ಸಾನೇ ಜಾಸ್ತಿ ಎಂಬುದು ಅವರಿಗೂ ಗೊತ್ತು. ಆತ ಕಾಂಗ್ರೆಸಲ್ಲೇ ಇದ್ದರೆ ಬಿಜೆಪಿಗೆ ಲಾಭ ಜಾಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...