Homeಮುಖಪುಟಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ‘ನಿಜವಾದ ಮುತ್ಸದ್ದಿ’ ಎಂದು ಬಣ್ಣಿಸಿದ ಪಕ್ಷದ ಸಂಸದ ಶಶಿ ತರೂರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ.

ಶನಿವಾರ (ನ.8) ಅಡ್ವಾಣಿಯವರ 98ನೇ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟ್ ಹಾಕಿ ಶುಭಾಶಯ ಕೋರಿದ್ದ ತರೂರ್, “ಸಾರ್ವಜನಿಕ ಸೇವೆಗೆ ಅಡ್ವಾಣಿಯವರ ಅಚಲ ಬದ್ಧತೆ, ಅವರ ನಮ್ರತೆ ಮತ್ತು ಸಭ್ಯತೆ ಹಾಗೂ ಆಧುನಿಕ ಭಾರತದ ಪಥವನ್ನು ರೂಪಿಸುವಲ್ಲಿ ಅವರ ಪಾತ್ರ ಶ್ಲಾಘಿಣೀಯ” ಎಂದಿದ್ದರು. “ಅಡ್ವಾಣಿ ನಿಜವಾದ ರಾಜಕಾರಣಿ, ಅವರ ಸೇವಾ ಜೀವನವು ಅನುಕರಣೀಯವಾಗಿದೆ” ಎಂದು ಕೊಂಡಾಡಿದ್ದರು.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ತರೂರ್ ಅವರು ಅಡ್ವಾಣಿ ಅವರನ್ನು ಹೊಗಳಿದ್ದನ್ನು ಪ್ರಶ್ನಿಸಿದ್ದಾರೆ, 1980ರ ದಶಕದ ಉತ್ತರಾರ್ಧದಲ್ಲಿ ಮತ್ತು 1990ರ ದಶಕದ ಆರಂಭದಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಅಡ್ವಾಣಿ ರ‍್ಯಾಲಿ ನಡೆಸಿದ್ದನ್ನು ತರೂರ್‌ಗೆ ನೆನಪಿಸಿದ್ದಾರೆ.

ತರೂರ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದವರಲ್ಲಿ ವಕೀಲ ಸಂಜಯ್ ಹೆಗ್ಡೆ ಕೂಡ ಒಬ್ಬರು. “ಕ್ಷಮಿಸಿ ತರೂರ್, ಈ ದೇಶದಲ್ಲಿ ದ್ವೇಷದ ಬೀಜಗಳನ್ನು ಬಿತ್ತುವುದು ಸಾರ್ವಜನಿಕ ಸೇವೆಯಲ್ಲ” (ಖುಷ್ವಂತ್ ಸಿಂಗ್ ಅವರ ಮಾತುಗಳನ್ನು ಉಲ್ಲೇಖಿಸಿ) ಎಂದು ಭಾನುವಾರ (ನ.9) ಸಂಜಯ್‌ ಹೆಗ್ಡೆ ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ತರೂರ್, “ಅಡ್ವಾಣಿ ಅವರ ದೀರ್ಘ ರಾಜಕೀಯ ವೃತ್ತಿಜೀವನವನ್ನು ಒಂದು ಘಟನೆಗೆ ಮಾತ್ರ ಸೀಮಿತಗೊಳಿಸುವುದು, ಅದು ಎಷ್ಟೇ ಮಹತ್ವದ್ದಾಗಿದ್ದರೂ ಅನ್ಯಾಯ. ನೆಹರೂ ಅವರ ವೃತ್ತಿಜೀವನದ ಸಂಪೂರ್ಣತೆಯನ್ನು ಚೀನಾ ಸೋಲಿನಿಂದ ಮಾತ್ರ, ಅದೇ ರೀತಿ ಇಂದಿರಾ ಗಾಂಧಿಯವರ ಜೀವನವನ್ನು ತುರ್ತುಪರಿಸ್ಥಿತಿಯಿಂದ ಮಾತ್ರ ನಿರ್ಣಯಿಸಲಾಗದು. ನಾವು ಅದೇ ಗೌರವವನ್ನು ಅಡ್ವಾಣಿ ಅವರಿಗೂ ಕೊಡಬೇಕು” ಎಂದು ವಾದಿಸಿದ್ದಾರೆ.

ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಪ್ರತಿಕ್ರಿಯಿಸಿ, “ಯಾವಾಗಲೂ ಹಾಗೆ, ಡಾ. ಶಶಿ ತರೂರ್ ತಮ್ಮ ಪರವಾಗಿ ಮಾತನಾಡುತ್ತಾರೆ. ಅವರ ಇತ್ತೀಚಿನ ಹೇಳಿಕೆಯಿಂದ ಕಾಂಗ್ರೆಸ್ ಸಂಪೂರ್ಣ ಅಂತರ ಕಾಯ್ದುಕೊಂಡಿದೆ. ಕಾಂಗ್ರೆಸ್ ಸಂಸದರಾಗಿ ಮತ್ತು ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದುಕೊಂಡೇ ತರೂರ್ ಇಂತಹ ಹೇಳಿಕೆಗಳನ್ನು ನೀಡುತ್ತಲೇ ಇರುವುದು ಪಕ್ಷದಲ್ಲಿರುವ ‘ಪ್ರಜಾಪ್ರಭುತ್ವ ಮತ್ತು ಉದಾರವಾದಿ ಮನೋಭಾವ’ ವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಅಂದರೆ ಏಪ್ರಿಲ್ ತಿಂಗಳಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ನಿಲುವನ್ನು ತರೂರ್ ಕೊಂಡಾಡಿದ್ದರು. ಅವರ ಪಕ್ಷ ಕಾಂಗ್ರೆಸ್ ನಿಲುವಿಗಿಂತ ತರೂರ್‌ ನಿಲುವು ವ್ಯತಿರಿಕ್ತವಾಗಿತ್ತು. ಆಗಲೂ ಕಾಂಗ್ರೆಸ್ ತರೂರ್ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡಿತ್ತು.

ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...