Homeಕರ್ನಾಟಕಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

ಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

- Advertisement -
- Advertisement -

“ಕಾಂಗ್ರೆಸ್ ಪಕ್ಷ ಎಂದಿಗೂ ಅತ್ಯಾಚಾರಿಗಳನ್ನು ಬೆಂಬಲಿಸುವುವುದಿಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ” ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಆರೋಪಿಸಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

“ಇಂದು ನಮ್ಮ ದೇಶದ ನ್ಯಾಯಾಂಗ ಸತ್ತು ಹೋಗಿದೆಯಾ ಎಂಬ ಭಾವನೆ ಮೂಡಿದೆ. ಬಿಜೆಪಿ ಇಂದು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಬಿಲ್ಕಿಸ್ ಬಾನೋ ಪ್ರಕರಣದ ಬೆಳವಣಿಗೆಯನ್ನು ನೋಡಿದರೆ ಕೇಂದ್ರದಲ್ಲಿರುವ ಬಿಜೆಪಿಯನ್ನು ಪ್ರಶ್ನಿಸಬೇಕಾಗುತ್ತದೆ. ಹಾಗೆಯೇ ರಾಜ್ಯದಲ್ಲಿ ದಲಿತ ವಿದ್ಯಾರ್ಥಿನಿಯರ ಮೇಲೆ ಆಗಿರುವ ದೌರ್ಜನ್ಯವನ್ನು ಇಲ್ಲಿನ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಬೇಕಾಗುತ್ತದೆ” ಎಂದರು.

“ಇಂದು ನ್ಯಾಯಾಂಗ ತನಿಖೆಗಳು ಇಷ್ಟೊಂದು ಬೇಜವಾಬ್ದಾರಿಯಿಂದ ನಡೆಯುತ್ತಿರುವುದಕ್ಕೆ ಸಂವಿಧಾನ ವಿರೋಧಿ ಬಿಜೆಪಿ ಸರ್ಕಾರ ಹಾಗೂ ಅದರ ನಾಯಕರೇ ಕಾರಣ. ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ” ಎಂದು ಅವರು ದೂರಿದರು.

“ಯಾವುದೇ ಜಾತಿ, ಯಾವುದೇ ಜನಾಂಗ, ಯಾವುದೇ ಧರ್ಮ, ಯಾವುದೇ ಪಕ್ಷದಲ್ಲಿರುವ ಹೆಣ್ಣುಮಗಳಿಗೆ ಅನ್ಯಾಯವಾದಾಗ ಎಲ್ಲ ಮಹಿಳೆಯರು ಒಟ್ಟಾಗಿ ಅದರ ವಿರುದ್ಧ ದನಿ ಎತ್ತಬೇಕು. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಆಗಸ್ಟ್‌ 15ರಂದು ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಮೂಲಕ ಶಾಕಿಂಗ್ ಸುದ್ದಿಯನ್ನು ಗುಜರಾತ್ ಸರ್ಕಾರ ನೀಡಿದೆ. ಹಾಗೆಯೇ ರಾಜ್ಯದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ನ್ಯಾಯ ಸಿಗಬೇಕು. ತಕ್ಷಣ ಕ್ರಮ ಜರುಗಿಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕ್ರಮ ತೆಗೆದುಕೊಂಡು ಶಿಕ್ಷೆ ನೀಡಬೇಕು ಎಂದು ಒಬ್ಬ ಮಹಿಳೆಯಾಗಿ ಆಗ್ರಹಿಸುತ್ತೇನೆ ಎಂದು ಹೇಳಿದರು.

ಮುರುಘಾ ಮಠದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈವರೆಗೆ ಮೌನ ತಾಳಿದ್ದರ ಕುರಿತು ಪ್ರತಿಕ್ರಿಯಿಸಿದ ಅವರು, “ಮಠ ಇರಬಹುದು, ರಾಜಕಾರಣಿಗಳು ಇರಬಹುದು, ಶ್ರೀಮಂತರಿರಬಹುದು, ಯಾವತ್ತೂ ಕೂಡ ಅತ್ಯಾಚಾರಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ನಮ್ಮ ಕಾಂಗ್ರೆಸ್ ಪಕ್ಷದ ನಾಯಕರು  ಮಾಡುವುದಿಲ್ಲ. ನಿರ್ಭಯಾ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಯುಪಿಎ ಅವಧಿಯಲ್ಲಿ ಪೋಕ್ಸೋ ಕಾಯ್ದೆ ಜಾರಿಯಾಯಿತು. ಇದು ಕಾಂಗ್ರೆಸ್‌ ಪಕ್ಷದ ಕೊಡುಗೆ. ಅತ್ಯಾಚಾರಗಳನ್ನು ರಕ್ಷಣೆ ಮಾಡುವ ಎಂಬ ಕೆಲಸವನ್ನು ನಾವು ಯಾವತ್ತೂ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಸತ್ಯ ಮತ್ತು ಪ್ರಜಾಪ್ರಭುತ್ವದ ತಿಥಿ ಮಾಡುತ್ತಿದ್ದೇವೆ: ಡಾ.ವಸುಂಧರಾ ಭೂಪತಿ

ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಮಾತನಾಡಿ, “ಮಕ್ಕಳು ದೂರು ನೀಡಿದ ನಂತರ ಆಗುತ್ತಿರುವ ಬೆಳವಣಿಗೆಯನ್ನು ನೋಡಿದರೆ ಮಠಾಧೀಶರ ಪರವಾಗಿ ಈ ವ್ಯವಸ್ಥೆ ಇದೆ ಅನಿಸತೊಡಗಿದೆ. ಪೋಕ್ಸೋ ಕಾಯ್ದೆ ಪ್ರಕಾರ ತಕ್ಷಣವೇ ಆರೋಪಿಯನ್ನು ಬಂಧಿಸಬೇಕು. ಆರೋಪಿಗಳು ಜನಸಾಮಾನ್ಯರಾಗಿದ್ದರೆ ತಕ್ಷಣ ಅರೆಸ್ಟ್‌ ಆಗುತ್ತಿದ್ದರು. ಪ್ರಭಾವಿಗಳ ಕೇಸ್‌ ಆಗಿದ್ದರಿಂದ ಹೀಗೆ ವಿಳಂಬ ಮಾಡಲಾಗಿದೆ. ಆರೋಪಿ ಮಠದಲ್ಲಿರುವಾಗಲೇ ಸ್ಥಳ ಮಹಜರು ಮಾಡಲಾಗಿದೆ. ಇಡೀ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಅನಿಸುತ್ತಿದೆ. ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು. ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಪ್ರಕರಣ ನಡೆಯಬೇಕು” ಎಂದು ಆಗ್ರಹಿಸಿದರು.

ಡಾ.ವಸುಂಧರಾ ಭೂಪತಿ

“ದೈಹಿಕ, ಮಾನಸಿಕ ಆಘಾತದ ನಡುವೆಯೇ ಬಂದು ಸಂತ್ರಸ್ತ ಮಕ್ಕಳು ದೂರು ಕೊಟ್ಟಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆಗಳು. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಇದು ಅತ್ಯಾಚಾರವಲ್ಲ; ವೀರ್ಯದಾನ ಎಂದು ಅಪರಾಧಿಗಳ ಪರ ಕಿಡಿಗೇಡಿಗಳು ಹೇಳಿರುವುದು ಭಾರತೀಯರೇ ತಲೆತಗ್ಗಿಸಬೇಕಾದ ಸಂಗತಿ. ಬೇರೆಯವರು ಮಾಡಿದರೆ ಅತ್ಯಾಚಾರ, ಇವರು ಮಾಡಿದರೆ ವೀರ್ಯದಾನ ಎಂದು ಹೇಳಿ, ಹಾರ ಹಾಕಿ ಸನ್ಮಾನ ಮಾಡಿ ಮನೆಯೊಳಗೆ ಕರೆದುಕೊಳ್ಳಲಾಗಿದೆ. ಭಾರತ ಎತ್ತ ಸಾಗುತ್ತಿದೆ ಎಂಬುದರ ಸೂಚನೆ ಇದು. ಸತ್ಯ ಮತ್ತು ಪ್ರಜಾಪ್ರಭುತ್ವವನ್ನು ತಿಥಿ ಮಾಡಿ, ಬಾಳೆಎಲೆ ಹಾಕಿಕೊಂಡು ಊಟ ಮಾಡುತ್ತಿದ್ದೇವೆ ಅನಿಸುತ್ತಿದೆ” ಎಂದು ವಿಷಾದಿಸಿದರು.

ಇಲ್ಲಿ ಸಂವಿಧಾನವಿದೆಯೋ ಸರ್ವಾಧಿಕಾರವಿದೆಯೋ: ಮಲ್ಲು ಕುಂಬಾರ್‌

ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರರಾದ ಮಲ್ಲು ಕುಂಬಾರ್‌ ಮಾತನಾಡಿ, “ಮುರುಘಾ ಶರಣರ ವಿಚಾರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ನಾಚಿಕೆಯಾಗುತ್ತಿದೆ. ಇದು ಸಂವಿಧಾನವಿರುವ ರಾಜ್ಯವಾ ಅಥವಾ ಸರ್ವಾಧಿಕಾರಿ ರಾಜ್ಯವಾ ಎಂಬ ಅನುಮಾನ ಬರುತ್ತದೆ. ಈ ಸರ್ಕಾರಕ್ಕೆ ಮಕ್ಕಳು ಮತ್ತು ಮಹಿಳೆಯರ ಮೇಲೆ ಯಾವುದೇ ಕಾಳಜಿ ಇಲ್ಲ ಅನಿಸುತ್ತದೆ. ರಾಜಕಾರಣಿಗಳೇ ಕುದ್ದಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಇದು ಗೂಂಡಾರಾಜ್ಯವ ಅಥವಾ ಸಂವಿಧಾನದ ರಾಜ್ಯವಾ ಎಂಬ ಅನುಮಾನ ಮೂಡುತ್ತಿದೆ” ಎಂದರು.

Mallu Kumbar
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...