Homeಕರ್ನಾಟಕಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

ಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

- Advertisement -
- Advertisement -

“ಕಾಂಗ್ರೆಸ್ ಪಕ್ಷ ಎಂದಿಗೂ ಅತ್ಯಾಚಾರಿಗಳನ್ನು ಬೆಂಬಲಿಸುವುವುದಿಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ” ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಆರೋಪಿಸಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

“ಇಂದು ನಮ್ಮ ದೇಶದ ನ್ಯಾಯಾಂಗ ಸತ್ತು ಹೋಗಿದೆಯಾ ಎಂಬ ಭಾವನೆ ಮೂಡಿದೆ. ಬಿಜೆಪಿ ಇಂದು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಬಿಲ್ಕಿಸ್ ಬಾನೋ ಪ್ರಕರಣದ ಬೆಳವಣಿಗೆಯನ್ನು ನೋಡಿದರೆ ಕೇಂದ್ರದಲ್ಲಿರುವ ಬಿಜೆಪಿಯನ್ನು ಪ್ರಶ್ನಿಸಬೇಕಾಗುತ್ತದೆ. ಹಾಗೆಯೇ ರಾಜ್ಯದಲ್ಲಿ ದಲಿತ ವಿದ್ಯಾರ್ಥಿನಿಯರ ಮೇಲೆ ಆಗಿರುವ ದೌರ್ಜನ್ಯವನ್ನು ಇಲ್ಲಿನ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಬೇಕಾಗುತ್ತದೆ” ಎಂದರು.

“ಇಂದು ನ್ಯಾಯಾಂಗ ತನಿಖೆಗಳು ಇಷ್ಟೊಂದು ಬೇಜವಾಬ್ದಾರಿಯಿಂದ ನಡೆಯುತ್ತಿರುವುದಕ್ಕೆ ಸಂವಿಧಾನ ವಿರೋಧಿ ಬಿಜೆಪಿ ಸರ್ಕಾರ ಹಾಗೂ ಅದರ ನಾಯಕರೇ ಕಾರಣ. ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ” ಎಂದು ಅವರು ದೂರಿದರು.

“ಯಾವುದೇ ಜಾತಿ, ಯಾವುದೇ ಜನಾಂಗ, ಯಾವುದೇ ಧರ್ಮ, ಯಾವುದೇ ಪಕ್ಷದಲ್ಲಿರುವ ಹೆಣ್ಣುಮಗಳಿಗೆ ಅನ್ಯಾಯವಾದಾಗ ಎಲ್ಲ ಮಹಿಳೆಯರು ಒಟ್ಟಾಗಿ ಅದರ ವಿರುದ್ಧ ದನಿ ಎತ್ತಬೇಕು. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಆಗಸ್ಟ್‌ 15ರಂದು ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಮೂಲಕ ಶಾಕಿಂಗ್ ಸುದ್ದಿಯನ್ನು ಗುಜರಾತ್ ಸರ್ಕಾರ ನೀಡಿದೆ. ಹಾಗೆಯೇ ರಾಜ್ಯದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ನ್ಯಾಯ ಸಿಗಬೇಕು. ತಕ್ಷಣ ಕ್ರಮ ಜರುಗಿಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕ್ರಮ ತೆಗೆದುಕೊಂಡು ಶಿಕ್ಷೆ ನೀಡಬೇಕು ಎಂದು ಒಬ್ಬ ಮಹಿಳೆಯಾಗಿ ಆಗ್ರಹಿಸುತ್ತೇನೆ ಎಂದು ಹೇಳಿದರು.

ಮುರುಘಾ ಮಠದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈವರೆಗೆ ಮೌನ ತಾಳಿದ್ದರ ಕುರಿತು ಪ್ರತಿಕ್ರಿಯಿಸಿದ ಅವರು, “ಮಠ ಇರಬಹುದು, ರಾಜಕಾರಣಿಗಳು ಇರಬಹುದು, ಶ್ರೀಮಂತರಿರಬಹುದು, ಯಾವತ್ತೂ ಕೂಡ ಅತ್ಯಾಚಾರಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ನಮ್ಮ ಕಾಂಗ್ರೆಸ್ ಪಕ್ಷದ ನಾಯಕರು  ಮಾಡುವುದಿಲ್ಲ. ನಿರ್ಭಯಾ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಯುಪಿಎ ಅವಧಿಯಲ್ಲಿ ಪೋಕ್ಸೋ ಕಾಯ್ದೆ ಜಾರಿಯಾಯಿತು. ಇದು ಕಾಂಗ್ರೆಸ್‌ ಪಕ್ಷದ ಕೊಡುಗೆ. ಅತ್ಯಾಚಾರಗಳನ್ನು ರಕ್ಷಣೆ ಮಾಡುವ ಎಂಬ ಕೆಲಸವನ್ನು ನಾವು ಯಾವತ್ತೂ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಸತ್ಯ ಮತ್ತು ಪ್ರಜಾಪ್ರಭುತ್ವದ ತಿಥಿ ಮಾಡುತ್ತಿದ್ದೇವೆ: ಡಾ.ವಸುಂಧರಾ ಭೂಪತಿ

ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಮಾತನಾಡಿ, “ಮಕ್ಕಳು ದೂರು ನೀಡಿದ ನಂತರ ಆಗುತ್ತಿರುವ ಬೆಳವಣಿಗೆಯನ್ನು ನೋಡಿದರೆ ಮಠಾಧೀಶರ ಪರವಾಗಿ ಈ ವ್ಯವಸ್ಥೆ ಇದೆ ಅನಿಸತೊಡಗಿದೆ. ಪೋಕ್ಸೋ ಕಾಯ್ದೆ ಪ್ರಕಾರ ತಕ್ಷಣವೇ ಆರೋಪಿಯನ್ನು ಬಂಧಿಸಬೇಕು. ಆರೋಪಿಗಳು ಜನಸಾಮಾನ್ಯರಾಗಿದ್ದರೆ ತಕ್ಷಣ ಅರೆಸ್ಟ್‌ ಆಗುತ್ತಿದ್ದರು. ಪ್ರಭಾವಿಗಳ ಕೇಸ್‌ ಆಗಿದ್ದರಿಂದ ಹೀಗೆ ವಿಳಂಬ ಮಾಡಲಾಗಿದೆ. ಆರೋಪಿ ಮಠದಲ್ಲಿರುವಾಗಲೇ ಸ್ಥಳ ಮಹಜರು ಮಾಡಲಾಗಿದೆ. ಇಡೀ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಅನಿಸುತ್ತಿದೆ. ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು. ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಪ್ರಕರಣ ನಡೆಯಬೇಕು” ಎಂದು ಆಗ್ರಹಿಸಿದರು.

ಡಾ.ವಸುಂಧರಾ ಭೂಪತಿ

“ದೈಹಿಕ, ಮಾನಸಿಕ ಆಘಾತದ ನಡುವೆಯೇ ಬಂದು ಸಂತ್ರಸ್ತ ಮಕ್ಕಳು ದೂರು ಕೊಟ್ಟಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆಗಳು. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಇದು ಅತ್ಯಾಚಾರವಲ್ಲ; ವೀರ್ಯದಾನ ಎಂದು ಅಪರಾಧಿಗಳ ಪರ ಕಿಡಿಗೇಡಿಗಳು ಹೇಳಿರುವುದು ಭಾರತೀಯರೇ ತಲೆತಗ್ಗಿಸಬೇಕಾದ ಸಂಗತಿ. ಬೇರೆಯವರು ಮಾಡಿದರೆ ಅತ್ಯಾಚಾರ, ಇವರು ಮಾಡಿದರೆ ವೀರ್ಯದಾನ ಎಂದು ಹೇಳಿ, ಹಾರ ಹಾಕಿ ಸನ್ಮಾನ ಮಾಡಿ ಮನೆಯೊಳಗೆ ಕರೆದುಕೊಳ್ಳಲಾಗಿದೆ. ಭಾರತ ಎತ್ತ ಸಾಗುತ್ತಿದೆ ಎಂಬುದರ ಸೂಚನೆ ಇದು. ಸತ್ಯ ಮತ್ತು ಪ್ರಜಾಪ್ರಭುತ್ವವನ್ನು ತಿಥಿ ಮಾಡಿ, ಬಾಳೆಎಲೆ ಹಾಕಿಕೊಂಡು ಊಟ ಮಾಡುತ್ತಿದ್ದೇವೆ ಅನಿಸುತ್ತಿದೆ” ಎಂದು ವಿಷಾದಿಸಿದರು.

ಇಲ್ಲಿ ಸಂವಿಧಾನವಿದೆಯೋ ಸರ್ವಾಧಿಕಾರವಿದೆಯೋ: ಮಲ್ಲು ಕುಂಬಾರ್‌

ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರರಾದ ಮಲ್ಲು ಕುಂಬಾರ್‌ ಮಾತನಾಡಿ, “ಮುರುಘಾ ಶರಣರ ವಿಚಾರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ನಾಚಿಕೆಯಾಗುತ್ತಿದೆ. ಇದು ಸಂವಿಧಾನವಿರುವ ರಾಜ್ಯವಾ ಅಥವಾ ಸರ್ವಾಧಿಕಾರಿ ರಾಜ್ಯವಾ ಎಂಬ ಅನುಮಾನ ಬರುತ್ತದೆ. ಈ ಸರ್ಕಾರಕ್ಕೆ ಮಕ್ಕಳು ಮತ್ತು ಮಹಿಳೆಯರ ಮೇಲೆ ಯಾವುದೇ ಕಾಳಜಿ ಇಲ್ಲ ಅನಿಸುತ್ತದೆ. ರಾಜಕಾರಣಿಗಳೇ ಕುದ್ದಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಇದು ಗೂಂಡಾರಾಜ್ಯವ ಅಥವಾ ಸಂವಿಧಾನದ ರಾಜ್ಯವಾ ಎಂಬ ಅನುಮಾನ ಮೂಡುತ್ತಿದೆ” ಎಂದರು.

Mallu Kumbar
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...