Homeಕರ್ನಾಟಕಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

ಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

- Advertisement -
- Advertisement -

“ಕಾಂಗ್ರೆಸ್ ಪಕ್ಷ ಎಂದಿಗೂ ಅತ್ಯಾಚಾರಿಗಳನ್ನು ಬೆಂಬಲಿಸುವುವುದಿಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ” ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಆರೋಪಿಸಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

“ಇಂದು ನಮ್ಮ ದೇಶದ ನ್ಯಾಯಾಂಗ ಸತ್ತು ಹೋಗಿದೆಯಾ ಎಂಬ ಭಾವನೆ ಮೂಡಿದೆ. ಬಿಜೆಪಿ ಇಂದು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಬಿಲ್ಕಿಸ್ ಬಾನೋ ಪ್ರಕರಣದ ಬೆಳವಣಿಗೆಯನ್ನು ನೋಡಿದರೆ ಕೇಂದ್ರದಲ್ಲಿರುವ ಬಿಜೆಪಿಯನ್ನು ಪ್ರಶ್ನಿಸಬೇಕಾಗುತ್ತದೆ. ಹಾಗೆಯೇ ರಾಜ್ಯದಲ್ಲಿ ದಲಿತ ವಿದ್ಯಾರ್ಥಿನಿಯರ ಮೇಲೆ ಆಗಿರುವ ದೌರ್ಜನ್ಯವನ್ನು ಇಲ್ಲಿನ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಬೇಕಾಗುತ್ತದೆ” ಎಂದರು.

“ಇಂದು ನ್ಯಾಯಾಂಗ ತನಿಖೆಗಳು ಇಷ್ಟೊಂದು ಬೇಜವಾಬ್ದಾರಿಯಿಂದ ನಡೆಯುತ್ತಿರುವುದಕ್ಕೆ ಸಂವಿಧಾನ ವಿರೋಧಿ ಬಿಜೆಪಿ ಸರ್ಕಾರ ಹಾಗೂ ಅದರ ನಾಯಕರೇ ಕಾರಣ. ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ” ಎಂದು ಅವರು ದೂರಿದರು.

“ಯಾವುದೇ ಜಾತಿ, ಯಾವುದೇ ಜನಾಂಗ, ಯಾವುದೇ ಧರ್ಮ, ಯಾವುದೇ ಪಕ್ಷದಲ್ಲಿರುವ ಹೆಣ್ಣುಮಗಳಿಗೆ ಅನ್ಯಾಯವಾದಾಗ ಎಲ್ಲ ಮಹಿಳೆಯರು ಒಟ್ಟಾಗಿ ಅದರ ವಿರುದ್ಧ ದನಿ ಎತ್ತಬೇಕು. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಆಗಸ್ಟ್‌ 15ರಂದು ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಮೂಲಕ ಶಾಕಿಂಗ್ ಸುದ್ದಿಯನ್ನು ಗುಜರಾತ್ ಸರ್ಕಾರ ನೀಡಿದೆ. ಹಾಗೆಯೇ ರಾಜ್ಯದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ನ್ಯಾಯ ಸಿಗಬೇಕು. ತಕ್ಷಣ ಕ್ರಮ ಜರುಗಿಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕ್ರಮ ತೆಗೆದುಕೊಂಡು ಶಿಕ್ಷೆ ನೀಡಬೇಕು ಎಂದು ಒಬ್ಬ ಮಹಿಳೆಯಾಗಿ ಆಗ್ರಹಿಸುತ್ತೇನೆ ಎಂದು ಹೇಳಿದರು.

ಮುರುಘಾ ಮಠದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈವರೆಗೆ ಮೌನ ತಾಳಿದ್ದರ ಕುರಿತು ಪ್ರತಿಕ್ರಿಯಿಸಿದ ಅವರು, “ಮಠ ಇರಬಹುದು, ರಾಜಕಾರಣಿಗಳು ಇರಬಹುದು, ಶ್ರೀಮಂತರಿರಬಹುದು, ಯಾವತ್ತೂ ಕೂಡ ಅತ್ಯಾಚಾರಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ನಮ್ಮ ಕಾಂಗ್ರೆಸ್ ಪಕ್ಷದ ನಾಯಕರು  ಮಾಡುವುದಿಲ್ಲ. ನಿರ್ಭಯಾ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಯುಪಿಎ ಅವಧಿಯಲ್ಲಿ ಪೋಕ್ಸೋ ಕಾಯ್ದೆ ಜಾರಿಯಾಯಿತು. ಇದು ಕಾಂಗ್ರೆಸ್‌ ಪಕ್ಷದ ಕೊಡುಗೆ. ಅತ್ಯಾಚಾರಗಳನ್ನು ರಕ್ಷಣೆ ಮಾಡುವ ಎಂಬ ಕೆಲಸವನ್ನು ನಾವು ಯಾವತ್ತೂ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಸತ್ಯ ಮತ್ತು ಪ್ರಜಾಪ್ರಭುತ್ವದ ತಿಥಿ ಮಾಡುತ್ತಿದ್ದೇವೆ: ಡಾ.ವಸುಂಧರಾ ಭೂಪತಿ

ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಮಾತನಾಡಿ, “ಮಕ್ಕಳು ದೂರು ನೀಡಿದ ನಂತರ ಆಗುತ್ತಿರುವ ಬೆಳವಣಿಗೆಯನ್ನು ನೋಡಿದರೆ ಮಠಾಧೀಶರ ಪರವಾಗಿ ಈ ವ್ಯವಸ್ಥೆ ಇದೆ ಅನಿಸತೊಡಗಿದೆ. ಪೋಕ್ಸೋ ಕಾಯ್ದೆ ಪ್ರಕಾರ ತಕ್ಷಣವೇ ಆರೋಪಿಯನ್ನು ಬಂಧಿಸಬೇಕು. ಆರೋಪಿಗಳು ಜನಸಾಮಾನ್ಯರಾಗಿದ್ದರೆ ತಕ್ಷಣ ಅರೆಸ್ಟ್‌ ಆಗುತ್ತಿದ್ದರು. ಪ್ರಭಾವಿಗಳ ಕೇಸ್‌ ಆಗಿದ್ದರಿಂದ ಹೀಗೆ ವಿಳಂಬ ಮಾಡಲಾಗಿದೆ. ಆರೋಪಿ ಮಠದಲ್ಲಿರುವಾಗಲೇ ಸ್ಥಳ ಮಹಜರು ಮಾಡಲಾಗಿದೆ. ಇಡೀ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಅನಿಸುತ್ತಿದೆ. ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು. ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಪ್ರಕರಣ ನಡೆಯಬೇಕು” ಎಂದು ಆಗ್ರಹಿಸಿದರು.

ಡಾ.ವಸುಂಧರಾ ಭೂಪತಿ

“ದೈಹಿಕ, ಮಾನಸಿಕ ಆಘಾತದ ನಡುವೆಯೇ ಬಂದು ಸಂತ್ರಸ್ತ ಮಕ್ಕಳು ದೂರು ಕೊಟ್ಟಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆಗಳು. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಇದು ಅತ್ಯಾಚಾರವಲ್ಲ; ವೀರ್ಯದಾನ ಎಂದು ಅಪರಾಧಿಗಳ ಪರ ಕಿಡಿಗೇಡಿಗಳು ಹೇಳಿರುವುದು ಭಾರತೀಯರೇ ತಲೆತಗ್ಗಿಸಬೇಕಾದ ಸಂಗತಿ. ಬೇರೆಯವರು ಮಾಡಿದರೆ ಅತ್ಯಾಚಾರ, ಇವರು ಮಾಡಿದರೆ ವೀರ್ಯದಾನ ಎಂದು ಹೇಳಿ, ಹಾರ ಹಾಕಿ ಸನ್ಮಾನ ಮಾಡಿ ಮನೆಯೊಳಗೆ ಕರೆದುಕೊಳ್ಳಲಾಗಿದೆ. ಭಾರತ ಎತ್ತ ಸಾಗುತ್ತಿದೆ ಎಂಬುದರ ಸೂಚನೆ ಇದು. ಸತ್ಯ ಮತ್ತು ಪ್ರಜಾಪ್ರಭುತ್ವವನ್ನು ತಿಥಿ ಮಾಡಿ, ಬಾಳೆಎಲೆ ಹಾಕಿಕೊಂಡು ಊಟ ಮಾಡುತ್ತಿದ್ದೇವೆ ಅನಿಸುತ್ತಿದೆ” ಎಂದು ವಿಷಾದಿಸಿದರು.

ಇಲ್ಲಿ ಸಂವಿಧಾನವಿದೆಯೋ ಸರ್ವಾಧಿಕಾರವಿದೆಯೋ: ಮಲ್ಲು ಕುಂಬಾರ್‌

ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರರಾದ ಮಲ್ಲು ಕುಂಬಾರ್‌ ಮಾತನಾಡಿ, “ಮುರುಘಾ ಶರಣರ ವಿಚಾರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ನಾಚಿಕೆಯಾಗುತ್ತಿದೆ. ಇದು ಸಂವಿಧಾನವಿರುವ ರಾಜ್ಯವಾ ಅಥವಾ ಸರ್ವಾಧಿಕಾರಿ ರಾಜ್ಯವಾ ಎಂಬ ಅನುಮಾನ ಬರುತ್ತದೆ. ಈ ಸರ್ಕಾರಕ್ಕೆ ಮಕ್ಕಳು ಮತ್ತು ಮಹಿಳೆಯರ ಮೇಲೆ ಯಾವುದೇ ಕಾಳಜಿ ಇಲ್ಲ ಅನಿಸುತ್ತದೆ. ರಾಜಕಾರಣಿಗಳೇ ಕುದ್ದಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಇದು ಗೂಂಡಾರಾಜ್ಯವ ಅಥವಾ ಸಂವಿಧಾನದ ರಾಜ್ಯವಾ ಎಂಬ ಅನುಮಾನ ಮೂಡುತ್ತಿದೆ” ಎಂದರು.

Mallu Kumbar
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...