Homeಕರ್ನಾಟಕಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

ಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

- Advertisement -
- Advertisement -

“ಕಾಂಗ್ರೆಸ್ ಪಕ್ಷ ಎಂದಿಗೂ ಅತ್ಯಾಚಾರಿಗಳನ್ನು ಬೆಂಬಲಿಸುವುವುದಿಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ” ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಆರೋಪಿಸಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

“ಇಂದು ನಮ್ಮ ದೇಶದ ನ್ಯಾಯಾಂಗ ಸತ್ತು ಹೋಗಿದೆಯಾ ಎಂಬ ಭಾವನೆ ಮೂಡಿದೆ. ಬಿಜೆಪಿ ಇಂದು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಬಿಲ್ಕಿಸ್ ಬಾನೋ ಪ್ರಕರಣದ ಬೆಳವಣಿಗೆಯನ್ನು ನೋಡಿದರೆ ಕೇಂದ್ರದಲ್ಲಿರುವ ಬಿಜೆಪಿಯನ್ನು ಪ್ರಶ್ನಿಸಬೇಕಾಗುತ್ತದೆ. ಹಾಗೆಯೇ ರಾಜ್ಯದಲ್ಲಿ ದಲಿತ ವಿದ್ಯಾರ್ಥಿನಿಯರ ಮೇಲೆ ಆಗಿರುವ ದೌರ್ಜನ್ಯವನ್ನು ಇಲ್ಲಿನ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಬೇಕಾಗುತ್ತದೆ” ಎಂದರು.

“ಇಂದು ನ್ಯಾಯಾಂಗ ತನಿಖೆಗಳು ಇಷ್ಟೊಂದು ಬೇಜವಾಬ್ದಾರಿಯಿಂದ ನಡೆಯುತ್ತಿರುವುದಕ್ಕೆ ಸಂವಿಧಾನ ವಿರೋಧಿ ಬಿಜೆಪಿ ಸರ್ಕಾರ ಹಾಗೂ ಅದರ ನಾಯಕರೇ ಕಾರಣ. ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ” ಎಂದು ಅವರು ದೂರಿದರು.

“ಯಾವುದೇ ಜಾತಿ, ಯಾವುದೇ ಜನಾಂಗ, ಯಾವುದೇ ಧರ್ಮ, ಯಾವುದೇ ಪಕ್ಷದಲ್ಲಿರುವ ಹೆಣ್ಣುಮಗಳಿಗೆ ಅನ್ಯಾಯವಾದಾಗ ಎಲ್ಲ ಮಹಿಳೆಯರು ಒಟ್ಟಾಗಿ ಅದರ ವಿರುದ್ಧ ದನಿ ಎತ್ತಬೇಕು. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಆಗಸ್ಟ್‌ 15ರಂದು ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಮೂಲಕ ಶಾಕಿಂಗ್ ಸುದ್ದಿಯನ್ನು ಗುಜರಾತ್ ಸರ್ಕಾರ ನೀಡಿದೆ. ಹಾಗೆಯೇ ರಾಜ್ಯದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ನ್ಯಾಯ ಸಿಗಬೇಕು. ತಕ್ಷಣ ಕ್ರಮ ಜರುಗಿಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕ್ರಮ ತೆಗೆದುಕೊಂಡು ಶಿಕ್ಷೆ ನೀಡಬೇಕು ಎಂದು ಒಬ್ಬ ಮಹಿಳೆಯಾಗಿ ಆಗ್ರಹಿಸುತ್ತೇನೆ ಎಂದು ಹೇಳಿದರು.

ಮುರುಘಾ ಮಠದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈವರೆಗೆ ಮೌನ ತಾಳಿದ್ದರ ಕುರಿತು ಪ್ರತಿಕ್ರಿಯಿಸಿದ ಅವರು, “ಮಠ ಇರಬಹುದು, ರಾಜಕಾರಣಿಗಳು ಇರಬಹುದು, ಶ್ರೀಮಂತರಿರಬಹುದು, ಯಾವತ್ತೂ ಕೂಡ ಅತ್ಯಾಚಾರಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ನಮ್ಮ ಕಾಂಗ್ರೆಸ್ ಪಕ್ಷದ ನಾಯಕರು  ಮಾಡುವುದಿಲ್ಲ. ನಿರ್ಭಯಾ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಯುಪಿಎ ಅವಧಿಯಲ್ಲಿ ಪೋಕ್ಸೋ ಕಾಯ್ದೆ ಜಾರಿಯಾಯಿತು. ಇದು ಕಾಂಗ್ರೆಸ್‌ ಪಕ್ಷದ ಕೊಡುಗೆ. ಅತ್ಯಾಚಾರಗಳನ್ನು ರಕ್ಷಣೆ ಮಾಡುವ ಎಂಬ ಕೆಲಸವನ್ನು ನಾವು ಯಾವತ್ತೂ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಸತ್ಯ ಮತ್ತು ಪ್ರಜಾಪ್ರಭುತ್ವದ ತಿಥಿ ಮಾಡುತ್ತಿದ್ದೇವೆ: ಡಾ.ವಸುಂಧರಾ ಭೂಪತಿ

ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಮಾತನಾಡಿ, “ಮಕ್ಕಳು ದೂರು ನೀಡಿದ ನಂತರ ಆಗುತ್ತಿರುವ ಬೆಳವಣಿಗೆಯನ್ನು ನೋಡಿದರೆ ಮಠಾಧೀಶರ ಪರವಾಗಿ ಈ ವ್ಯವಸ್ಥೆ ಇದೆ ಅನಿಸತೊಡಗಿದೆ. ಪೋಕ್ಸೋ ಕಾಯ್ದೆ ಪ್ರಕಾರ ತಕ್ಷಣವೇ ಆರೋಪಿಯನ್ನು ಬಂಧಿಸಬೇಕು. ಆರೋಪಿಗಳು ಜನಸಾಮಾನ್ಯರಾಗಿದ್ದರೆ ತಕ್ಷಣ ಅರೆಸ್ಟ್‌ ಆಗುತ್ತಿದ್ದರು. ಪ್ರಭಾವಿಗಳ ಕೇಸ್‌ ಆಗಿದ್ದರಿಂದ ಹೀಗೆ ವಿಳಂಬ ಮಾಡಲಾಗಿದೆ. ಆರೋಪಿ ಮಠದಲ್ಲಿರುವಾಗಲೇ ಸ್ಥಳ ಮಹಜರು ಮಾಡಲಾಗಿದೆ. ಇಡೀ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಅನಿಸುತ್ತಿದೆ. ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು. ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಪ್ರಕರಣ ನಡೆಯಬೇಕು” ಎಂದು ಆಗ್ರಹಿಸಿದರು.

ಡಾ.ವಸುಂಧರಾ ಭೂಪತಿ

“ದೈಹಿಕ, ಮಾನಸಿಕ ಆಘಾತದ ನಡುವೆಯೇ ಬಂದು ಸಂತ್ರಸ್ತ ಮಕ್ಕಳು ದೂರು ಕೊಟ್ಟಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆಗಳು. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಇದು ಅತ್ಯಾಚಾರವಲ್ಲ; ವೀರ್ಯದಾನ ಎಂದು ಅಪರಾಧಿಗಳ ಪರ ಕಿಡಿಗೇಡಿಗಳು ಹೇಳಿರುವುದು ಭಾರತೀಯರೇ ತಲೆತಗ್ಗಿಸಬೇಕಾದ ಸಂಗತಿ. ಬೇರೆಯವರು ಮಾಡಿದರೆ ಅತ್ಯಾಚಾರ, ಇವರು ಮಾಡಿದರೆ ವೀರ್ಯದಾನ ಎಂದು ಹೇಳಿ, ಹಾರ ಹಾಕಿ ಸನ್ಮಾನ ಮಾಡಿ ಮನೆಯೊಳಗೆ ಕರೆದುಕೊಳ್ಳಲಾಗಿದೆ. ಭಾರತ ಎತ್ತ ಸಾಗುತ್ತಿದೆ ಎಂಬುದರ ಸೂಚನೆ ಇದು. ಸತ್ಯ ಮತ್ತು ಪ್ರಜಾಪ್ರಭುತ್ವವನ್ನು ತಿಥಿ ಮಾಡಿ, ಬಾಳೆಎಲೆ ಹಾಕಿಕೊಂಡು ಊಟ ಮಾಡುತ್ತಿದ್ದೇವೆ ಅನಿಸುತ್ತಿದೆ” ಎಂದು ವಿಷಾದಿಸಿದರು.

ಇಲ್ಲಿ ಸಂವಿಧಾನವಿದೆಯೋ ಸರ್ವಾಧಿಕಾರವಿದೆಯೋ: ಮಲ್ಲು ಕುಂಬಾರ್‌

ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರರಾದ ಮಲ್ಲು ಕುಂಬಾರ್‌ ಮಾತನಾಡಿ, “ಮುರುಘಾ ಶರಣರ ವಿಚಾರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ನಾಚಿಕೆಯಾಗುತ್ತಿದೆ. ಇದು ಸಂವಿಧಾನವಿರುವ ರಾಜ್ಯವಾ ಅಥವಾ ಸರ್ವಾಧಿಕಾರಿ ರಾಜ್ಯವಾ ಎಂಬ ಅನುಮಾನ ಬರುತ್ತದೆ. ಈ ಸರ್ಕಾರಕ್ಕೆ ಮಕ್ಕಳು ಮತ್ತು ಮಹಿಳೆಯರ ಮೇಲೆ ಯಾವುದೇ ಕಾಳಜಿ ಇಲ್ಲ ಅನಿಸುತ್ತದೆ. ರಾಜಕಾರಣಿಗಳೇ ಕುದ್ದಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಇದು ಗೂಂಡಾರಾಜ್ಯವ ಅಥವಾ ಸಂವಿಧಾನದ ರಾಜ್ಯವಾ ಎಂಬ ಅನುಮಾನ ಮೂಡುತ್ತಿದೆ” ಎಂದರು.

Mallu Kumbar
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...