Homeಕರ್ನಾಟಕಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

ಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

- Advertisement -
- Advertisement -

“ಕಾಂಗ್ರೆಸ್ ಪಕ್ಷ ಎಂದಿಗೂ ಅತ್ಯಾಚಾರಿಗಳನ್ನು ಬೆಂಬಲಿಸುವುವುದಿಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ” ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಆರೋಪಿಸಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

“ಇಂದು ನಮ್ಮ ದೇಶದ ನ್ಯಾಯಾಂಗ ಸತ್ತು ಹೋಗಿದೆಯಾ ಎಂಬ ಭಾವನೆ ಮೂಡಿದೆ. ಬಿಜೆಪಿ ಇಂದು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಬಿಲ್ಕಿಸ್ ಬಾನೋ ಪ್ರಕರಣದ ಬೆಳವಣಿಗೆಯನ್ನು ನೋಡಿದರೆ ಕೇಂದ್ರದಲ್ಲಿರುವ ಬಿಜೆಪಿಯನ್ನು ಪ್ರಶ್ನಿಸಬೇಕಾಗುತ್ತದೆ. ಹಾಗೆಯೇ ರಾಜ್ಯದಲ್ಲಿ ದಲಿತ ವಿದ್ಯಾರ್ಥಿನಿಯರ ಮೇಲೆ ಆಗಿರುವ ದೌರ್ಜನ್ಯವನ್ನು ಇಲ್ಲಿನ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಬೇಕಾಗುತ್ತದೆ” ಎಂದರು.

“ಇಂದು ನ್ಯಾಯಾಂಗ ತನಿಖೆಗಳು ಇಷ್ಟೊಂದು ಬೇಜವಾಬ್ದಾರಿಯಿಂದ ನಡೆಯುತ್ತಿರುವುದಕ್ಕೆ ಸಂವಿಧಾನ ವಿರೋಧಿ ಬಿಜೆಪಿ ಸರ್ಕಾರ ಹಾಗೂ ಅದರ ನಾಯಕರೇ ಕಾರಣ. ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ” ಎಂದು ಅವರು ದೂರಿದರು.

“ಯಾವುದೇ ಜಾತಿ, ಯಾವುದೇ ಜನಾಂಗ, ಯಾವುದೇ ಧರ್ಮ, ಯಾವುದೇ ಪಕ್ಷದಲ್ಲಿರುವ ಹೆಣ್ಣುಮಗಳಿಗೆ ಅನ್ಯಾಯವಾದಾಗ ಎಲ್ಲ ಮಹಿಳೆಯರು ಒಟ್ಟಾಗಿ ಅದರ ವಿರುದ್ಧ ದನಿ ಎತ್ತಬೇಕು. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಆಗಸ್ಟ್‌ 15ರಂದು ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಮೂಲಕ ಶಾಕಿಂಗ್ ಸುದ್ದಿಯನ್ನು ಗುಜರಾತ್ ಸರ್ಕಾರ ನೀಡಿದೆ. ಹಾಗೆಯೇ ರಾಜ್ಯದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ನ್ಯಾಯ ಸಿಗಬೇಕು. ತಕ್ಷಣ ಕ್ರಮ ಜರುಗಿಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕ್ರಮ ತೆಗೆದುಕೊಂಡು ಶಿಕ್ಷೆ ನೀಡಬೇಕು ಎಂದು ಒಬ್ಬ ಮಹಿಳೆಯಾಗಿ ಆಗ್ರಹಿಸುತ್ತೇನೆ ಎಂದು ಹೇಳಿದರು.

ಮುರುಘಾ ಮಠದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈವರೆಗೆ ಮೌನ ತಾಳಿದ್ದರ ಕುರಿತು ಪ್ರತಿಕ್ರಿಯಿಸಿದ ಅವರು, “ಮಠ ಇರಬಹುದು, ರಾಜಕಾರಣಿಗಳು ಇರಬಹುದು, ಶ್ರೀಮಂತರಿರಬಹುದು, ಯಾವತ್ತೂ ಕೂಡ ಅತ್ಯಾಚಾರಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ನಮ್ಮ ಕಾಂಗ್ರೆಸ್ ಪಕ್ಷದ ನಾಯಕರು  ಮಾಡುವುದಿಲ್ಲ. ನಿರ್ಭಯಾ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಯುಪಿಎ ಅವಧಿಯಲ್ಲಿ ಪೋಕ್ಸೋ ಕಾಯ್ದೆ ಜಾರಿಯಾಯಿತು. ಇದು ಕಾಂಗ್ರೆಸ್‌ ಪಕ್ಷದ ಕೊಡುಗೆ. ಅತ್ಯಾಚಾರಗಳನ್ನು ರಕ್ಷಣೆ ಮಾಡುವ ಎಂಬ ಕೆಲಸವನ್ನು ನಾವು ಯಾವತ್ತೂ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಸತ್ಯ ಮತ್ತು ಪ್ರಜಾಪ್ರಭುತ್ವದ ತಿಥಿ ಮಾಡುತ್ತಿದ್ದೇವೆ: ಡಾ.ವಸುಂಧರಾ ಭೂಪತಿ

ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಮಾತನಾಡಿ, “ಮಕ್ಕಳು ದೂರು ನೀಡಿದ ನಂತರ ಆಗುತ್ತಿರುವ ಬೆಳವಣಿಗೆಯನ್ನು ನೋಡಿದರೆ ಮಠಾಧೀಶರ ಪರವಾಗಿ ಈ ವ್ಯವಸ್ಥೆ ಇದೆ ಅನಿಸತೊಡಗಿದೆ. ಪೋಕ್ಸೋ ಕಾಯ್ದೆ ಪ್ರಕಾರ ತಕ್ಷಣವೇ ಆರೋಪಿಯನ್ನು ಬಂಧಿಸಬೇಕು. ಆರೋಪಿಗಳು ಜನಸಾಮಾನ್ಯರಾಗಿದ್ದರೆ ತಕ್ಷಣ ಅರೆಸ್ಟ್‌ ಆಗುತ್ತಿದ್ದರು. ಪ್ರಭಾವಿಗಳ ಕೇಸ್‌ ಆಗಿದ್ದರಿಂದ ಹೀಗೆ ವಿಳಂಬ ಮಾಡಲಾಗಿದೆ. ಆರೋಪಿ ಮಠದಲ್ಲಿರುವಾಗಲೇ ಸ್ಥಳ ಮಹಜರು ಮಾಡಲಾಗಿದೆ. ಇಡೀ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಅನಿಸುತ್ತಿದೆ. ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು. ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಪ್ರಕರಣ ನಡೆಯಬೇಕು” ಎಂದು ಆಗ್ರಹಿಸಿದರು.

ಡಾ.ವಸುಂಧರಾ ಭೂಪತಿ

“ದೈಹಿಕ, ಮಾನಸಿಕ ಆಘಾತದ ನಡುವೆಯೇ ಬಂದು ಸಂತ್ರಸ್ತ ಮಕ್ಕಳು ದೂರು ಕೊಟ್ಟಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆಗಳು. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಇದು ಅತ್ಯಾಚಾರವಲ್ಲ; ವೀರ್ಯದಾನ ಎಂದು ಅಪರಾಧಿಗಳ ಪರ ಕಿಡಿಗೇಡಿಗಳು ಹೇಳಿರುವುದು ಭಾರತೀಯರೇ ತಲೆತಗ್ಗಿಸಬೇಕಾದ ಸಂಗತಿ. ಬೇರೆಯವರು ಮಾಡಿದರೆ ಅತ್ಯಾಚಾರ, ಇವರು ಮಾಡಿದರೆ ವೀರ್ಯದಾನ ಎಂದು ಹೇಳಿ, ಹಾರ ಹಾಕಿ ಸನ್ಮಾನ ಮಾಡಿ ಮನೆಯೊಳಗೆ ಕರೆದುಕೊಳ್ಳಲಾಗಿದೆ. ಭಾರತ ಎತ್ತ ಸಾಗುತ್ತಿದೆ ಎಂಬುದರ ಸೂಚನೆ ಇದು. ಸತ್ಯ ಮತ್ತು ಪ್ರಜಾಪ್ರಭುತ್ವವನ್ನು ತಿಥಿ ಮಾಡಿ, ಬಾಳೆಎಲೆ ಹಾಕಿಕೊಂಡು ಊಟ ಮಾಡುತ್ತಿದ್ದೇವೆ ಅನಿಸುತ್ತಿದೆ” ಎಂದು ವಿಷಾದಿಸಿದರು.

ಇಲ್ಲಿ ಸಂವಿಧಾನವಿದೆಯೋ ಸರ್ವಾಧಿಕಾರವಿದೆಯೋ: ಮಲ್ಲು ಕುಂಬಾರ್‌

ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರರಾದ ಮಲ್ಲು ಕುಂಬಾರ್‌ ಮಾತನಾಡಿ, “ಮುರುಘಾ ಶರಣರ ವಿಚಾರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ನಾಚಿಕೆಯಾಗುತ್ತಿದೆ. ಇದು ಸಂವಿಧಾನವಿರುವ ರಾಜ್ಯವಾ ಅಥವಾ ಸರ್ವಾಧಿಕಾರಿ ರಾಜ್ಯವಾ ಎಂಬ ಅನುಮಾನ ಬರುತ್ತದೆ. ಈ ಸರ್ಕಾರಕ್ಕೆ ಮಕ್ಕಳು ಮತ್ತು ಮಹಿಳೆಯರ ಮೇಲೆ ಯಾವುದೇ ಕಾಳಜಿ ಇಲ್ಲ ಅನಿಸುತ್ತದೆ. ರಾಜಕಾರಣಿಗಳೇ ಕುದ್ದಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಇದು ಗೂಂಡಾರಾಜ್ಯವ ಅಥವಾ ಸಂವಿಧಾನದ ರಾಜ್ಯವಾ ಎಂಬ ಅನುಮಾನ ಮೂಡುತ್ತಿದೆ” ಎಂದರು.

Mallu Kumbar
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...