Homeಮುಖಪುಟಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಕೇಳಿಕೊಂಡರು.

- Advertisement -
- Advertisement -

ಕಾಂಗ್ರೆಸ್ ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸಭೆ ಸೇರಿದ್ದು, ಅಧ್ಯಕ್ಷ ಸ್ಥಾನ ಸೇರಿದಂತೆ ಹಲವು ವಿಷಯಗಳಿಗೆ ಭಾರೀ ಚರ್ಚೆ ಆರಂಭವಾಗಿದೆ.

ಪಕ್ಷದ 20 ಕ್ಕೂ ಹೆಚ್ಚು ಉನ್ನತ ನಾಯಕರು ಬರೆದಿರುವ “ಭಿನ್ನಮತೀಯ” ಪತ್ರದ ಬಗೆಗಿನ ಭಾರಿ ವಿವಾದ ಭುಗಿಲೆದ್ದಿದ್ದು ರಾಹುಲ್ ಗಾಂಧಿ ಪತ್ರದ ವಿರುದ್ಧ ಕಿಡಿಕಾರಿದ್ದಾರೆ.

ಪಕ್ಷದ ಅತೀ ಪ್ರಮುಖ ಸಭೆಯ ಪ್ರಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತನ್ನನ್ನು ನಿರಾಳರಾಗುವಂತೆ ಸೋನಿಯಾ ಗಾಂಧಿಯವರ ಪತ್ರವನ್ನು ಓದಲಾಯಿತು. ವೇಣುಗೋಪಾಲ್ ನಂತರ ಮಾತನಾಡಿದ ಸೋನಿಯಾ ಗಾಂಧಿಯವರ ಬದಲಿಗೆ ಹೊಸ ಅಧ್ಯಕ್ಷರನ್ನು ಹುಡುಕುವ ಪ್ರಕ್ರಿಯೆಯನ್ನು ರೂಪಿಸುವ ಚರ್ಚೆಯನ್ನು ಪ್ರಾರಂಭಿಸಲು ಪಕ್ಷವನ್ನು ವಿನಂತಿಸಿದರು.

ಸೋನಿಯಾ ಗಾಂಧಿ ಮಾತನ್ನು ಬೆಂಬಲಿಸಿ ಹಾಗೂ ಭಿನ್ನಮತೀಯ ಪತ್ರ ಬರೆದ ನಾಯಕರ ವಿರುದ್ದ ರಾಹುಲ್  ಬಿಜೆಪಿಯೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪತ್ರವನ್ನು ಬೆಂಬಲಿಸಿದ ಗುಲಾಮ್‌ ನಬಿ ಆಝಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದರು. ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್ ರಾಹುಲ್ ಗಾಂಧಿಯವರ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ, “ನಾವು ಬಿಜೆಪಿಯೊಂದಿಗೆ ಸಹಕರಿಸುತ್ತಿದ್ದೆವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಕಾಂಗ್ರೆಸ್ ಪಕ್ಷವನ್ನು ರಕ್ಷಿಸಲು ರಾಜಸ್ಥಾನ ಹೈಕೋರ್ಟ್‌ನಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಪಕ್ಷವನ್ನು ರಕ್ಷಿಸುತ್ತಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿಯ ಪರವಾಗಿ ಹೇಳಿಕೆ ನೀಡಿಲ್ಲ” ಎಂದು ಅವರು ಬರೆದಿದ್ದಾರೆ.

ನಂತರ ರಾಹುಲ್ ಗಾಂಧಿಯವರು ಸಿಬಲ್ ಅವರೊಂದಿಗೆ ವಯಕ್ತಿಕವಾಗಿ ಮಾತನಾಡಿ ಮಾಧ್ಯಮಗಳ ವರದಿಯನ್ನು ನಂಬಬೇಡಿ ಎಂದು ಮನವಿ ಮಾಡಿದ ನಂತರ ಸಿಬಲ್ ತನ್ನ ಟ್ವೀಟ್‌ ಅನ್ನು ಅಳಿಸಿಹಾಕಿದ್ದಾರೆ.

20ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ, ಪೂರ್ಣ ಸಮಯದ ಪರಿಣಾಮಕಾರಿ ನಾಯಕತ್ವಕ್ಕೆ ಕರೆ ನೀಡಿದ್ದಾರೆ. ಪ್ರಾಮಾಣಿಕ ಆತ್ಮಾವಲೋಕನ ಮಾಡುವಂತೆ ಹಾಗೂ ಸಾಮೂಹಿಕ ನಾಯಕತ್ವಕ್ಕೆ, ಅಧಿಕಾರದ ವಿಕೇಂದ್ರೀಕರಣಕ್ಕೆ, ರಾಜ್ಯ ಘಟಕಗಳ ಸಬಲೀಕರಣ ಮತ್ತು ಪ್ರತಿ ಹಂತದಲ್ಲೂ ಸಾಂಸ್ಥಿಕ ಚುನಾವಣೆಗಳು ನಡೆಸುವ ಬಗ್ಗೆ ಸೇರಿದಂತೆ ಹಲವಾರು ಸುಧಾರಣೆಗಳನ್ನು ಈ ಪತ್ರವು ಸೂಚಿಸಿತ್ತು ಎಂದು ಮೂಲಗಳು ತಿಳಿಸಿದೆ.

ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಕೇಳಿಕೊಂಡರು.

ಈ ಮಧ್ಯೆ ಭಿನ್ನಮತೀಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದೆ ರಮ್ಯ, “ಅವರು ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಲ್ಲದೆ, ಅವರು ಇದೀಗ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯ ನಿಮಿಷದ ನಿಮಿಷದ ಸಂಭಾಷಣೆಗಳನ್ನು ಮಾಧ್ಯಮಗಳಿಗೆ ನೀಡುವುದನ್ನು ಮುಂದುವರೆಸಿದ್ದಾರೆ” ಎಂದು ಬರೆದಿದ್ದಾರೆ.

ಸಭೆಯಲ್ಲಿ ಸೋನಿಯ ಗಾಂಧಿ ತಮ್ಮ ನಿರ್ಧಾರವನ್ನು ಘೋಷಿಸಿದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡಿ ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಉಳಿಯುವಂತೆ ಕೇಳಿದರು. ಅಲ್ಲದೆ 20 ನಾಯಕರು ಬರೆದಿರುವ ಪತ್ರವನ್ನು ದುರದೃಷ್ಟಕರ ಎಂದು ಕರೆದ ಅವರು, ಪಕ್ಷದ ಹೈಕಮಾಂಡ್‌ ಅನ್ನು ದುರ್ಬಲಗೊಳಿಸುವುದು ಕಾಂಗ್ರೆಸನ್ನು ದುರ್ಬಲಗೊಳಿಸುತ್ತದೆ ಎಂದು ಟೀಕಿಸಿದರು

ಮತ್ತೊಬ್ಬ ಹಿರಿಯ ಮುಖಂಡ ಎ.ಕೆ.ಆಂಟನಿ ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡರು.

ಗುಲಾಮ್ ನಬಿ ಆಜಾದ್ ಅವರಲ್ಲದೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಜಿತಿನ್ ಪ್ರಸಾದ ಕೂಡಾ ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದ್ದಾರೆ.


ಓದಿ: ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...