Homeಮುಖಪುಟಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಕೇಳಿಕೊಂಡರು.

- Advertisement -
- Advertisement -

ಕಾಂಗ್ರೆಸ್ ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸಭೆ ಸೇರಿದ್ದು, ಅಧ್ಯಕ್ಷ ಸ್ಥಾನ ಸೇರಿದಂತೆ ಹಲವು ವಿಷಯಗಳಿಗೆ ಭಾರೀ ಚರ್ಚೆ ಆರಂಭವಾಗಿದೆ.

ಪಕ್ಷದ 20 ಕ್ಕೂ ಹೆಚ್ಚು ಉನ್ನತ ನಾಯಕರು ಬರೆದಿರುವ “ಭಿನ್ನಮತೀಯ” ಪತ್ರದ ಬಗೆಗಿನ ಭಾರಿ ವಿವಾದ ಭುಗಿಲೆದ್ದಿದ್ದು ರಾಹುಲ್ ಗಾಂಧಿ ಪತ್ರದ ವಿರುದ್ಧ ಕಿಡಿಕಾರಿದ್ದಾರೆ.

ಪಕ್ಷದ ಅತೀ ಪ್ರಮುಖ ಸಭೆಯ ಪ್ರಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತನ್ನನ್ನು ನಿರಾಳರಾಗುವಂತೆ ಸೋನಿಯಾ ಗಾಂಧಿಯವರ ಪತ್ರವನ್ನು ಓದಲಾಯಿತು. ವೇಣುಗೋಪಾಲ್ ನಂತರ ಮಾತನಾಡಿದ ಸೋನಿಯಾ ಗಾಂಧಿಯವರ ಬದಲಿಗೆ ಹೊಸ ಅಧ್ಯಕ್ಷರನ್ನು ಹುಡುಕುವ ಪ್ರಕ್ರಿಯೆಯನ್ನು ರೂಪಿಸುವ ಚರ್ಚೆಯನ್ನು ಪ್ರಾರಂಭಿಸಲು ಪಕ್ಷವನ್ನು ವಿನಂತಿಸಿದರು.

ಸೋನಿಯಾ ಗಾಂಧಿ ಮಾತನ್ನು ಬೆಂಬಲಿಸಿ ಹಾಗೂ ಭಿನ್ನಮತೀಯ ಪತ್ರ ಬರೆದ ನಾಯಕರ ವಿರುದ್ದ ರಾಹುಲ್  ಬಿಜೆಪಿಯೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪತ್ರವನ್ನು ಬೆಂಬಲಿಸಿದ ಗುಲಾಮ್‌ ನಬಿ ಆಝಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದರು. ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್ ರಾಹುಲ್ ಗಾಂಧಿಯವರ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ, “ನಾವು ಬಿಜೆಪಿಯೊಂದಿಗೆ ಸಹಕರಿಸುತ್ತಿದ್ದೆವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಕಾಂಗ್ರೆಸ್ ಪಕ್ಷವನ್ನು ರಕ್ಷಿಸಲು ರಾಜಸ್ಥಾನ ಹೈಕೋರ್ಟ್‌ನಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಪಕ್ಷವನ್ನು ರಕ್ಷಿಸುತ್ತಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿಯ ಪರವಾಗಿ ಹೇಳಿಕೆ ನೀಡಿಲ್ಲ” ಎಂದು ಅವರು ಬರೆದಿದ್ದಾರೆ.

ನಂತರ ರಾಹುಲ್ ಗಾಂಧಿಯವರು ಸಿಬಲ್ ಅವರೊಂದಿಗೆ ವಯಕ್ತಿಕವಾಗಿ ಮಾತನಾಡಿ ಮಾಧ್ಯಮಗಳ ವರದಿಯನ್ನು ನಂಬಬೇಡಿ ಎಂದು ಮನವಿ ಮಾಡಿದ ನಂತರ ಸಿಬಲ್ ತನ್ನ ಟ್ವೀಟ್‌ ಅನ್ನು ಅಳಿಸಿಹಾಕಿದ್ದಾರೆ.

20ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ, ಪೂರ್ಣ ಸಮಯದ ಪರಿಣಾಮಕಾರಿ ನಾಯಕತ್ವಕ್ಕೆ ಕರೆ ನೀಡಿದ್ದಾರೆ. ಪ್ರಾಮಾಣಿಕ ಆತ್ಮಾವಲೋಕನ ಮಾಡುವಂತೆ ಹಾಗೂ ಸಾಮೂಹಿಕ ನಾಯಕತ್ವಕ್ಕೆ, ಅಧಿಕಾರದ ವಿಕೇಂದ್ರೀಕರಣಕ್ಕೆ, ರಾಜ್ಯ ಘಟಕಗಳ ಸಬಲೀಕರಣ ಮತ್ತು ಪ್ರತಿ ಹಂತದಲ್ಲೂ ಸಾಂಸ್ಥಿಕ ಚುನಾವಣೆಗಳು ನಡೆಸುವ ಬಗ್ಗೆ ಸೇರಿದಂತೆ ಹಲವಾರು ಸುಧಾರಣೆಗಳನ್ನು ಈ ಪತ್ರವು ಸೂಚಿಸಿತ್ತು ಎಂದು ಮೂಲಗಳು ತಿಳಿಸಿದೆ.

ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಕೇಳಿಕೊಂಡರು.

ಈ ಮಧ್ಯೆ ಭಿನ್ನಮತೀಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದೆ ರಮ್ಯ, “ಅವರು ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಲ್ಲದೆ, ಅವರು ಇದೀಗ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯ ನಿಮಿಷದ ನಿಮಿಷದ ಸಂಭಾಷಣೆಗಳನ್ನು ಮಾಧ್ಯಮಗಳಿಗೆ ನೀಡುವುದನ್ನು ಮುಂದುವರೆಸಿದ್ದಾರೆ” ಎಂದು ಬರೆದಿದ್ದಾರೆ.

ಸಭೆಯಲ್ಲಿ ಸೋನಿಯ ಗಾಂಧಿ ತಮ್ಮ ನಿರ್ಧಾರವನ್ನು ಘೋಷಿಸಿದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡಿ ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಉಳಿಯುವಂತೆ ಕೇಳಿದರು. ಅಲ್ಲದೆ 20 ನಾಯಕರು ಬರೆದಿರುವ ಪತ್ರವನ್ನು ದುರದೃಷ್ಟಕರ ಎಂದು ಕರೆದ ಅವರು, ಪಕ್ಷದ ಹೈಕಮಾಂಡ್‌ ಅನ್ನು ದುರ್ಬಲಗೊಳಿಸುವುದು ಕಾಂಗ್ರೆಸನ್ನು ದುರ್ಬಲಗೊಳಿಸುತ್ತದೆ ಎಂದು ಟೀಕಿಸಿದರು

ಮತ್ತೊಬ್ಬ ಹಿರಿಯ ಮುಖಂಡ ಎ.ಕೆ.ಆಂಟನಿ ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡರು.

ಗುಲಾಮ್ ನಬಿ ಆಜಾದ್ ಅವರಲ್ಲದೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಜಿತಿನ್ ಪ್ರಸಾದ ಕೂಡಾ ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದ್ದಾರೆ.


ಓದಿ: ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...