Homeಮುಖಪುಟಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಕೇಳಿಕೊಂಡರು.

- Advertisement -
- Advertisement -

ಕಾಂಗ್ರೆಸ್ ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸಭೆ ಸೇರಿದ್ದು, ಅಧ್ಯಕ್ಷ ಸ್ಥಾನ ಸೇರಿದಂತೆ ಹಲವು ವಿಷಯಗಳಿಗೆ ಭಾರೀ ಚರ್ಚೆ ಆರಂಭವಾಗಿದೆ.

ಪಕ್ಷದ 20 ಕ್ಕೂ ಹೆಚ್ಚು ಉನ್ನತ ನಾಯಕರು ಬರೆದಿರುವ “ಭಿನ್ನಮತೀಯ” ಪತ್ರದ ಬಗೆಗಿನ ಭಾರಿ ವಿವಾದ ಭುಗಿಲೆದ್ದಿದ್ದು ರಾಹುಲ್ ಗಾಂಧಿ ಪತ್ರದ ವಿರುದ್ಧ ಕಿಡಿಕಾರಿದ್ದಾರೆ.

ಪಕ್ಷದ ಅತೀ ಪ್ರಮುಖ ಸಭೆಯ ಪ್ರಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತನ್ನನ್ನು ನಿರಾಳರಾಗುವಂತೆ ಸೋನಿಯಾ ಗಾಂಧಿಯವರ ಪತ್ರವನ್ನು ಓದಲಾಯಿತು. ವೇಣುಗೋಪಾಲ್ ನಂತರ ಮಾತನಾಡಿದ ಸೋನಿಯಾ ಗಾಂಧಿಯವರ ಬದಲಿಗೆ ಹೊಸ ಅಧ್ಯಕ್ಷರನ್ನು ಹುಡುಕುವ ಪ್ರಕ್ರಿಯೆಯನ್ನು ರೂಪಿಸುವ ಚರ್ಚೆಯನ್ನು ಪ್ರಾರಂಭಿಸಲು ಪಕ್ಷವನ್ನು ವಿನಂತಿಸಿದರು.

ಸೋನಿಯಾ ಗಾಂಧಿ ಮಾತನ್ನು ಬೆಂಬಲಿಸಿ ಹಾಗೂ ಭಿನ್ನಮತೀಯ ಪತ್ರ ಬರೆದ ನಾಯಕರ ವಿರುದ್ದ ರಾಹುಲ್  ಬಿಜೆಪಿಯೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪತ್ರವನ್ನು ಬೆಂಬಲಿಸಿದ ಗುಲಾಮ್‌ ನಬಿ ಆಝಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದರು. ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್ ರಾಹುಲ್ ಗಾಂಧಿಯವರ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ, “ನಾವು ಬಿಜೆಪಿಯೊಂದಿಗೆ ಸಹಕರಿಸುತ್ತಿದ್ದೆವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಕಾಂಗ್ರೆಸ್ ಪಕ್ಷವನ್ನು ರಕ್ಷಿಸಲು ರಾಜಸ್ಥಾನ ಹೈಕೋರ್ಟ್‌ನಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಪಕ್ಷವನ್ನು ರಕ್ಷಿಸುತ್ತಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿಯ ಪರವಾಗಿ ಹೇಳಿಕೆ ನೀಡಿಲ್ಲ” ಎಂದು ಅವರು ಬರೆದಿದ್ದಾರೆ.

ನಂತರ ರಾಹುಲ್ ಗಾಂಧಿಯವರು ಸಿಬಲ್ ಅವರೊಂದಿಗೆ ವಯಕ್ತಿಕವಾಗಿ ಮಾತನಾಡಿ ಮಾಧ್ಯಮಗಳ ವರದಿಯನ್ನು ನಂಬಬೇಡಿ ಎಂದು ಮನವಿ ಮಾಡಿದ ನಂತರ ಸಿಬಲ್ ತನ್ನ ಟ್ವೀಟ್‌ ಅನ್ನು ಅಳಿಸಿಹಾಕಿದ್ದಾರೆ.

20ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ, ಪೂರ್ಣ ಸಮಯದ ಪರಿಣಾಮಕಾರಿ ನಾಯಕತ್ವಕ್ಕೆ ಕರೆ ನೀಡಿದ್ದಾರೆ. ಪ್ರಾಮಾಣಿಕ ಆತ್ಮಾವಲೋಕನ ಮಾಡುವಂತೆ ಹಾಗೂ ಸಾಮೂಹಿಕ ನಾಯಕತ್ವಕ್ಕೆ, ಅಧಿಕಾರದ ವಿಕೇಂದ್ರೀಕರಣಕ್ಕೆ, ರಾಜ್ಯ ಘಟಕಗಳ ಸಬಲೀಕರಣ ಮತ್ತು ಪ್ರತಿ ಹಂತದಲ್ಲೂ ಸಾಂಸ್ಥಿಕ ಚುನಾವಣೆಗಳು ನಡೆಸುವ ಬಗ್ಗೆ ಸೇರಿದಂತೆ ಹಲವಾರು ಸುಧಾರಣೆಗಳನ್ನು ಈ ಪತ್ರವು ಸೂಚಿಸಿತ್ತು ಎಂದು ಮೂಲಗಳು ತಿಳಿಸಿದೆ.

ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಕೇಳಿಕೊಂಡರು.

ಈ ಮಧ್ಯೆ ಭಿನ್ನಮತೀಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದೆ ರಮ್ಯ, “ಅವರು ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಲ್ಲದೆ, ಅವರು ಇದೀಗ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯ ನಿಮಿಷದ ನಿಮಿಷದ ಸಂಭಾಷಣೆಗಳನ್ನು ಮಾಧ್ಯಮಗಳಿಗೆ ನೀಡುವುದನ್ನು ಮುಂದುವರೆಸಿದ್ದಾರೆ” ಎಂದು ಬರೆದಿದ್ದಾರೆ.

ಸಭೆಯಲ್ಲಿ ಸೋನಿಯ ಗಾಂಧಿ ತಮ್ಮ ನಿರ್ಧಾರವನ್ನು ಘೋಷಿಸಿದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡಿ ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಉಳಿಯುವಂತೆ ಕೇಳಿದರು. ಅಲ್ಲದೆ 20 ನಾಯಕರು ಬರೆದಿರುವ ಪತ್ರವನ್ನು ದುರದೃಷ್ಟಕರ ಎಂದು ಕರೆದ ಅವರು, ಪಕ್ಷದ ಹೈಕಮಾಂಡ್‌ ಅನ್ನು ದುರ್ಬಲಗೊಳಿಸುವುದು ಕಾಂಗ್ರೆಸನ್ನು ದುರ್ಬಲಗೊಳಿಸುತ್ತದೆ ಎಂದು ಟೀಕಿಸಿದರು

ಮತ್ತೊಬ್ಬ ಹಿರಿಯ ಮುಖಂಡ ಎ.ಕೆ.ಆಂಟನಿ ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡರು.

ಗುಲಾಮ್ ನಬಿ ಆಜಾದ್ ಅವರಲ್ಲದೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಜಿತಿನ್ ಪ್ರಸಾದ ಕೂಡಾ ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದ್ದಾರೆ.


ಓದಿ: ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...