Homeಕರ್ನಾಟಕಯುಪಿ ಮುಖ್ಯಮಂತ್ರಿಯನ್ನು ‘ತಗಡು ಯೋಗಿ’ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

ಯುಪಿ ಮುಖ್ಯಮಂತ್ರಿಯನ್ನು ‘ತಗಡು ಯೋಗಿ’ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರನ್ನು  ಕರ್ನಾಟಕ ಕಾಂಗ್ರೆಸ್‌ “ತಗಡು ಯೋಗಿ” ಎಂದು ಮಂಗಳವಾರ ಕರೆದಿದೆ. “ಆದಿತ್ಯನಾಥ್ ಅವರು‌‌ ಕರ್ನಾಟಕದ ಬಿಜೆಪಿ ನಾಯಕರಿಗೆ ಮಾಡೆಲ್‌ ಆಗಿರುವುದರಲ್ಲಿ ಯಾವ ಅತಿಶಯೋಕ್ತಿ ಇಲ್ಲ, ಏಕೆಂದರೆ ಇವರೂ ಅಂತಹ ಅಯೋಗ್ಯರೆ” ಎಂದು ರಾಜ್ಯದ ವಿರೋಧ ಪಕ್ಷವು ಬಿಜೆಪಿ ವಿರುದ್ದ ತೀವ್ರವಾಗಿ ವಾಗ್ದಾಳಿ ನಡೆಸಿದೆ.

ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿರುವ ಆದಿತ್ಯನಾಥ್‌ಗೆ ಹೈಕೋರ್ಟ್ ಛೀಮಾರಿ ಹಾಕಿರುವ ವರದಿಯ ಚಿತ್ರವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, “ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಕೊರೊನಾ ನಿರ್ವಹಣೆಯ ವೈಫಲ್ಯಕ್ಕೆ ಹೈಕೋರ್ಟ್ ಛಿಮಾರಿ ಹಾಕಿದೆ. ಸುಡುಗಾಡಿನಲ್ಲೂ ಜಾಗವಿಲ್ಲದ ಸ್ಥಿತಿ ನಿರ್ಮಿಸಿ, ತನ್ನ ವೈಫಲ್ಯ ಮುಚ್ಚಿಕೊಳ್ಳಲು ಸ್ಮಶಾನಕ್ಕೆ ತಗಡು ಮುಚ್ಚಿದ, ತಗಡು ಯೋಗಿ ಇಲ್ಲಿನ ಬಿಜೆಪಿ ನಾಯಕರಿಗೆ ‘ಮಾಡೆಲ್’ ಆಗಿರುವುದರಲ್ಲಿ ಯಾವ ಅತಿಶಯೋಕ್ತಿ ಇಲ್ಲ. ಏಕೆಂದರೆ ಇವರೂ ಅಂತಹ ಅಯೋಗ್ಯರೆ” ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಇದನ್ನೂ ಓದಿ: ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

ಜೊತೆಗೆ ಮಂಗಳವಾರ ರಾಜ್ಯ ಹಾಗೂ ದೇಶದ ಕೊರೊನಾ ಪರಿಸ್ಥಿತಿ ಕುರಿತು ಹಲವು ಹೇಳಿಕೆಗಳನ್ನು ಕಾಂಗ್ರೆಸ್ ನೀಡಿದೆ. ಅದು ಬೆಳಿಗ್ಗೆ ಮಾಡಿದ ಟ್ವೀಟ್‌ನಲ್ಲಿ, “ಆಕ್ಸಿಜನ್ ಬೇಡಿಕೆ ಹೆಚ್ಚಿದೆ, ಪೂರೈಕೆ ಕಡಿಮೆ ಇದೆ, ಇದ್ದಿದ್ದೂ ಕಾಳ ಸಂತೆಯ ಪಾಲಾಗುತ್ತಿದೆ. ಹೀಗಿರುವಾಗ ರಾಜ್ಯ ಬಿಜೆಪಿ ಸರ್ಕಾರ ಕಾಳ ಸಂತೆಯನ್ನು ನಿಯಂತ್ರಿಸಿ, ಉತ್ಪಾದನೆ ಹೆಚ್ಚಿಸಿ ಹಾಗೂ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವುದನ್ನ ಬಿಟ್ಟು ವಾರ್ ರೂಮ್ ಎನ್ನುವ ಕಣ್ಣೊರೆಸುವ ಕೆಲಸದಿಂದ ನಯಾಪೈಸೆ ಉಪಯೋಗವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕೊರೊನಾ ಹಿನ್ನಲೆಯಲ್ಲಿ ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, “ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಮರ್ಥ್ಯವೇ ಅಥವಾ ‘ಯಡಿಯೂರಪ್ಪ ಮುಕ್ತ ಬಿಜೆಪಿ’ ಅಭಿಯಾನದ ಬಾಗವೇ? ಸರ್ಕಾರಕ್ಕೆ ವಿಪಕ್ಷಗಳನ್ನು ಎದುರಿಸುವ ಮುಖವಿಲ್ಲವೇ? ಅಥವಾ ಪರಿಸ್ಥಿತಿ ಎದುರಿಸಲಾಗದೆ ಕೈ ಚೆಲ್ಲಿದೆಯೇ? ಇಂತಹ ಮುಖಹೇಡಿ ಸರ್ಕಾರದಿಂದ ಜನರ ಜೀವ ಉಳಿಸುವುದು ಸಾಧ್ಯವಿಲ್ಲ” ಎಂದು ಹೇಳಿದೆ.

“ಯಾವ ಕೊರತೆಯೂ ಇಲ್ಲ ಎಲ್ಲವೂ ಸುಳ್ಳು ವದಂತಿಗಳು ಎಂದು ವಾಸ್ತವನ್ನು ಮುಚ್ಚಿಡಲು, ಸತ್ಯವನ್ನೇ ಸುಳ್ಳು ಮಾಡುತ್ತಿದ್ದ ಬಿಜೆಪಿ ಜನರ ಮುಂದೆ ಬೆತ್ತಲಾಗಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲವೇ ಇಲ್ಲ, ವಿಪಕ್ಷಗಳ ಸುಳ್ಳು ಹಬ್ಬಿಸುತ್ತಿವೆ ಎಂದಿದ್ದ ರಾಜ್ಯ ಬಿಜೆಪಿಗರೇ ಉತ್ತರಿಸಿ, ಕೊರತೆ ಇಲ್ಲ ಎಂದ ಮೇಲೆ ಸಿಎಂ ಕೇಂದ್ರಕ್ಕೆ ಪತ್ರ ಬರೆದಿದ್ದೇಕೆ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಯುಪಿಯ 5 ನಗರಗಳಲ್ಲಿ ಲಾಕ್‌ಡೌನ್‌ ಇಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...