Homeಕರ್ನಾಟಕಯುಪಿ ಮುಖ್ಯಮಂತ್ರಿಯನ್ನು ‘ತಗಡು ಯೋಗಿ’ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

ಯುಪಿ ಮುಖ್ಯಮಂತ್ರಿಯನ್ನು ‘ತಗಡು ಯೋಗಿ’ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರನ್ನು  ಕರ್ನಾಟಕ ಕಾಂಗ್ರೆಸ್‌ “ತಗಡು ಯೋಗಿ” ಎಂದು ಮಂಗಳವಾರ ಕರೆದಿದೆ. “ಆದಿತ್ಯನಾಥ್ ಅವರು‌‌ ಕರ್ನಾಟಕದ ಬಿಜೆಪಿ ನಾಯಕರಿಗೆ ಮಾಡೆಲ್‌ ಆಗಿರುವುದರಲ್ಲಿ ಯಾವ ಅತಿಶಯೋಕ್ತಿ ಇಲ್ಲ, ಏಕೆಂದರೆ ಇವರೂ ಅಂತಹ ಅಯೋಗ್ಯರೆ” ಎಂದು ರಾಜ್ಯದ ವಿರೋಧ ಪಕ್ಷವು ಬಿಜೆಪಿ ವಿರುದ್ದ ತೀವ್ರವಾಗಿ ವಾಗ್ದಾಳಿ ನಡೆಸಿದೆ.

ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿರುವ ಆದಿತ್ಯನಾಥ್‌ಗೆ ಹೈಕೋರ್ಟ್ ಛೀಮಾರಿ ಹಾಕಿರುವ ವರದಿಯ ಚಿತ್ರವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, “ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಕೊರೊನಾ ನಿರ್ವಹಣೆಯ ವೈಫಲ್ಯಕ್ಕೆ ಹೈಕೋರ್ಟ್ ಛಿಮಾರಿ ಹಾಕಿದೆ. ಸುಡುಗಾಡಿನಲ್ಲೂ ಜಾಗವಿಲ್ಲದ ಸ್ಥಿತಿ ನಿರ್ಮಿಸಿ, ತನ್ನ ವೈಫಲ್ಯ ಮುಚ್ಚಿಕೊಳ್ಳಲು ಸ್ಮಶಾನಕ್ಕೆ ತಗಡು ಮುಚ್ಚಿದ, ತಗಡು ಯೋಗಿ ಇಲ್ಲಿನ ಬಿಜೆಪಿ ನಾಯಕರಿಗೆ ‘ಮಾಡೆಲ್’ ಆಗಿರುವುದರಲ್ಲಿ ಯಾವ ಅತಿಶಯೋಕ್ತಿ ಇಲ್ಲ. ಏಕೆಂದರೆ ಇವರೂ ಅಂತಹ ಅಯೋಗ್ಯರೆ” ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಇದನ್ನೂ ಓದಿ: ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

ಜೊತೆಗೆ ಮಂಗಳವಾರ ರಾಜ್ಯ ಹಾಗೂ ದೇಶದ ಕೊರೊನಾ ಪರಿಸ್ಥಿತಿ ಕುರಿತು ಹಲವು ಹೇಳಿಕೆಗಳನ್ನು ಕಾಂಗ್ರೆಸ್ ನೀಡಿದೆ. ಅದು ಬೆಳಿಗ್ಗೆ ಮಾಡಿದ ಟ್ವೀಟ್‌ನಲ್ಲಿ, “ಆಕ್ಸಿಜನ್ ಬೇಡಿಕೆ ಹೆಚ್ಚಿದೆ, ಪೂರೈಕೆ ಕಡಿಮೆ ಇದೆ, ಇದ್ದಿದ್ದೂ ಕಾಳ ಸಂತೆಯ ಪಾಲಾಗುತ್ತಿದೆ. ಹೀಗಿರುವಾಗ ರಾಜ್ಯ ಬಿಜೆಪಿ ಸರ್ಕಾರ ಕಾಳ ಸಂತೆಯನ್ನು ನಿಯಂತ್ರಿಸಿ, ಉತ್ಪಾದನೆ ಹೆಚ್ಚಿಸಿ ಹಾಗೂ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವುದನ್ನ ಬಿಟ್ಟು ವಾರ್ ರೂಮ್ ಎನ್ನುವ ಕಣ್ಣೊರೆಸುವ ಕೆಲಸದಿಂದ ನಯಾಪೈಸೆ ಉಪಯೋಗವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕೊರೊನಾ ಹಿನ್ನಲೆಯಲ್ಲಿ ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, “ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಮರ್ಥ್ಯವೇ ಅಥವಾ ‘ಯಡಿಯೂರಪ್ಪ ಮುಕ್ತ ಬಿಜೆಪಿ’ ಅಭಿಯಾನದ ಬಾಗವೇ? ಸರ್ಕಾರಕ್ಕೆ ವಿಪಕ್ಷಗಳನ್ನು ಎದುರಿಸುವ ಮುಖವಿಲ್ಲವೇ? ಅಥವಾ ಪರಿಸ್ಥಿತಿ ಎದುರಿಸಲಾಗದೆ ಕೈ ಚೆಲ್ಲಿದೆಯೇ? ಇಂತಹ ಮುಖಹೇಡಿ ಸರ್ಕಾರದಿಂದ ಜನರ ಜೀವ ಉಳಿಸುವುದು ಸಾಧ್ಯವಿಲ್ಲ” ಎಂದು ಹೇಳಿದೆ.

“ಯಾವ ಕೊರತೆಯೂ ಇಲ್ಲ ಎಲ್ಲವೂ ಸುಳ್ಳು ವದಂತಿಗಳು ಎಂದು ವಾಸ್ತವನ್ನು ಮುಚ್ಚಿಡಲು, ಸತ್ಯವನ್ನೇ ಸುಳ್ಳು ಮಾಡುತ್ತಿದ್ದ ಬಿಜೆಪಿ ಜನರ ಮುಂದೆ ಬೆತ್ತಲಾಗಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲವೇ ಇಲ್ಲ, ವಿಪಕ್ಷಗಳ ಸುಳ್ಳು ಹಬ್ಬಿಸುತ್ತಿವೆ ಎಂದಿದ್ದ ರಾಜ್ಯ ಬಿಜೆಪಿಗರೇ ಉತ್ತರಿಸಿ, ಕೊರತೆ ಇಲ್ಲ ಎಂದ ಮೇಲೆ ಸಿಎಂ ಕೇಂದ್ರಕ್ಕೆ ಪತ್ರ ಬರೆದಿದ್ದೇಕೆ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಯುಪಿಯ 5 ನಗರಗಳಲ್ಲಿ ಲಾಕ್‌ಡೌನ್‌ ಇಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...