Homeಕರ್ನಾಟಕಸೋಮಶೇಖರ ರೆಡ್ಡಿ ವಿರುದ್ಧ ದೇಶದ್ರೋಹದ ದೂರು ದಾಖಲಿಸಿ: ಸಿದ್ದರಾಮಯ್ಯ ಒತ್ತಾಯ...

ಸೋಮಶೇಖರ ರೆಡ್ಡಿ ವಿರುದ್ಧ ದೇಶದ್ರೋಹದ ದೂರು ದಾಖಲಿಸಿ: ಸಿದ್ದರಾಮಯ್ಯ ಒತ್ತಾಯ…

ಸಂವಿಧಾನವಿರೋಧಿ ಭಾಷಣ ಮಾಡಿದ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ವಿರುದ್ಧ ಕಾಂಗ್ರೆಸ್‌ನಿಂದ ದೂರು ದಾಖಲು..

- Advertisement -
- Advertisement -

ಪ್ರಚೋದನಾತ್ಮಕ ಹೇಳಿಕೆ ನೀಡಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಿರುವ ಶಾಸಕ ಸೋಮಶೇಖರ ರೆಡ್ಡಿಯವರ ವಿರುದ್ಧ ದೇಶದ್ರೋಹದ ಕ್ರಿಮಿನಲ್ ಕೇಸು ದಾಖಲಿಸುವಂತೆ ಕಾಂಗ್ರೆಸ್ ಮುಖಂಡರ ನಿಯೋಗ ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿದೆ.

ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ರಾಜುರವರು ರಜೆಯಿದ್ದ ಕಾರಣ ಅವರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ದೂರು ಸ್ವೀಕರಿಸಿದ್ದಾರೆ.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ “ಸೋಮಶೇಖರ ರೆಡ್ಡಿಯವರ ಮಾತುಗಳು ಬಿಜೆಪಿಯ ಮನಸ್ಥಿತಿಯನ್ನು ತಿಳಿಸುತ್ತವೆ. ಬಹಳ ಸ್ಪಷ್ಟವಾಗಿ ಒಂದು ಕೋಮನ್ನು ಗುರಿಯಾಗಿಟ್ಟುಕೊಂಡು ಸೋಮಶೇಖರ ರೆಡ್ಡಿ ಮಾತಾಡಿದ್ದಾರೆ. ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶದ ಉದ್ದಗಲಕ್ಕೂ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಧರ್ಮದ ಜನರು ಜಾತ್ಯತೀತವಾಗಿ, ಪಕ್ಷಾತೀತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಿರುವಾಗ ಇವರು ಕೋಮುಗಲಭೆಗೆ ಪ್ರಚೋದನೆ ಮಾಡುತ್ತಿದ್ದಾರೆ. ಇದು ದೇಶದ್ರೋಹದ ಕೆಲಸವಾಗಿದೆ” ಎಂದಿದ್ದಾರೆ.

ಸೋಮಶೇಖರ ರೆಡ್ಡಿ ಭಾಷಣ ಸಂಪೂರ್ಣವಾಗಿ ಸಂವಿಧಾನಕ್ಕೆ ವಿರುದ್ಧವಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವ ಒಬ್ಬ ಶಾಸಕ ಇಂತವರೇ ಸಂವಿಧಾನ ವಿರುದ್ಧವಾಗಿ ಪ್ರಚೋದನಾಕಾರಿಯಾಗಿ ಮಾತಾಡಿದ್ದಾರೆ, ಕೋಮುಗಲಭೆಗೆ ಆಸ್ಪದ ಕೊಡುವ ಮಾತುಗಳನ್ನಾಡಿದ್ದಾರೆ. ಕೂಡಲೇ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿ ಅರೆಸ್ಟ್‌ ಮಾಡಬೇಕಿತ್ತು. ಮಾಡಿಲ್ಲ, ಇಂದು ಪ್ರತಿಭಟನೆ ಮಾಡಿದ ಮೇಲೆ, ನಾವು ದೂರು ಕೊಡಲು ಬಂದಾಗ ಮಾತ್ರ ದೂರು ದಾಖಲಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೂರಿನಲ್ಲಿ ಯಾವು ಸೆಕ್ಷನ್‌ಗಳನ್ನು ಹಾಕಿದ್ದಾರೆ ಗೊತ್ತಿಲ್ಲ. ಇವರನ್ನು ಸುಮ್ಮನೆ ಬಿಟ್ಟರೆ ಸಮಾಜಕ್ಕೆ ಬಹಳ ಅಪಾಯಕಾರಿಯಾಗುತ್ತದೆ. ಆದರೆ ದೇಶದ್ರೋಹದ ಆಧಾರದಲ್ಲಿ ಸೆಕ್ಷನ್‌ಗಳನ್ನು ಹಾಕಿ ಬಂಧಿಸಬೇಕೆಂದು ಒತ್ತಾಯ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಶಾಂತಿ ಕಾಪಾಡಿ

ಈ ಘಟನೆಯಿಂದ ಕೆರಳಿ ಯಾರು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ. ಶಾಂತಿಯಿಂದ ವರ್ತಿಸಿ. ಕಾನೂನು ಇದೆ, ಅದರ ರೀತಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ನಂಬಿದ್ದೇನೆ. ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ ಆಗ ಮುಂದಿನ ನಡೆಯನ್ನು ತೀರ್ಮಾನಿಸೋಣ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಅವರೊಂದಿಗೆ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಈಶ್ವರ ಖಂಡ್ರೆ ದಿನೇಶ್ ಗುಂಡೂರಾವ್‌, ವಿ.ಎಸ್‌ ಉಗ್ರಪ್ಪ, ಜಮೀರ್‌ ಅಹ್ಮದ್‌ ಖಾನ್‌, ಪುಷ್ಪ ಅಮರನಾಥ್, ಹಂಪನಗೌಡ ಬಾದರ್ಲಿ ಮತ್ತಿತರರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...