Homeಕರ್ನಾಟಕಸೋಮಶೇಖರ ರೆಡ್ಡಿ ವಿರುದ್ಧ ದೇಶದ್ರೋಹದ ದೂರು ದಾಖಲಿಸಿ: ಸಿದ್ದರಾಮಯ್ಯ ಒತ್ತಾಯ...

ಸೋಮಶೇಖರ ರೆಡ್ಡಿ ವಿರುದ್ಧ ದೇಶದ್ರೋಹದ ದೂರು ದಾಖಲಿಸಿ: ಸಿದ್ದರಾಮಯ್ಯ ಒತ್ತಾಯ…

ಸಂವಿಧಾನವಿರೋಧಿ ಭಾಷಣ ಮಾಡಿದ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ವಿರುದ್ಧ ಕಾಂಗ್ರೆಸ್‌ನಿಂದ ದೂರು ದಾಖಲು..

- Advertisement -
- Advertisement -

ಪ್ರಚೋದನಾತ್ಮಕ ಹೇಳಿಕೆ ನೀಡಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಿರುವ ಶಾಸಕ ಸೋಮಶೇಖರ ರೆಡ್ಡಿಯವರ ವಿರುದ್ಧ ದೇಶದ್ರೋಹದ ಕ್ರಿಮಿನಲ್ ಕೇಸು ದಾಖಲಿಸುವಂತೆ ಕಾಂಗ್ರೆಸ್ ಮುಖಂಡರ ನಿಯೋಗ ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿದೆ.

ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ರಾಜುರವರು ರಜೆಯಿದ್ದ ಕಾರಣ ಅವರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ದೂರು ಸ್ವೀಕರಿಸಿದ್ದಾರೆ.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ “ಸೋಮಶೇಖರ ರೆಡ್ಡಿಯವರ ಮಾತುಗಳು ಬಿಜೆಪಿಯ ಮನಸ್ಥಿತಿಯನ್ನು ತಿಳಿಸುತ್ತವೆ. ಬಹಳ ಸ್ಪಷ್ಟವಾಗಿ ಒಂದು ಕೋಮನ್ನು ಗುರಿಯಾಗಿಟ್ಟುಕೊಂಡು ಸೋಮಶೇಖರ ರೆಡ್ಡಿ ಮಾತಾಡಿದ್ದಾರೆ. ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶದ ಉದ್ದಗಲಕ್ಕೂ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಧರ್ಮದ ಜನರು ಜಾತ್ಯತೀತವಾಗಿ, ಪಕ್ಷಾತೀತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಿರುವಾಗ ಇವರು ಕೋಮುಗಲಭೆಗೆ ಪ್ರಚೋದನೆ ಮಾಡುತ್ತಿದ್ದಾರೆ. ಇದು ದೇಶದ್ರೋಹದ ಕೆಲಸವಾಗಿದೆ” ಎಂದಿದ್ದಾರೆ.

ಸೋಮಶೇಖರ ರೆಡ್ಡಿ ಭಾಷಣ ಸಂಪೂರ್ಣವಾಗಿ ಸಂವಿಧಾನಕ್ಕೆ ವಿರುದ್ಧವಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವ ಒಬ್ಬ ಶಾಸಕ ಇಂತವರೇ ಸಂವಿಧಾನ ವಿರುದ್ಧವಾಗಿ ಪ್ರಚೋದನಾಕಾರಿಯಾಗಿ ಮಾತಾಡಿದ್ದಾರೆ, ಕೋಮುಗಲಭೆಗೆ ಆಸ್ಪದ ಕೊಡುವ ಮಾತುಗಳನ್ನಾಡಿದ್ದಾರೆ. ಕೂಡಲೇ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿ ಅರೆಸ್ಟ್‌ ಮಾಡಬೇಕಿತ್ತು. ಮಾಡಿಲ್ಲ, ಇಂದು ಪ್ರತಿಭಟನೆ ಮಾಡಿದ ಮೇಲೆ, ನಾವು ದೂರು ಕೊಡಲು ಬಂದಾಗ ಮಾತ್ರ ದೂರು ದಾಖಲಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೂರಿನಲ್ಲಿ ಯಾವು ಸೆಕ್ಷನ್‌ಗಳನ್ನು ಹಾಕಿದ್ದಾರೆ ಗೊತ್ತಿಲ್ಲ. ಇವರನ್ನು ಸುಮ್ಮನೆ ಬಿಟ್ಟರೆ ಸಮಾಜಕ್ಕೆ ಬಹಳ ಅಪಾಯಕಾರಿಯಾಗುತ್ತದೆ. ಆದರೆ ದೇಶದ್ರೋಹದ ಆಧಾರದಲ್ಲಿ ಸೆಕ್ಷನ್‌ಗಳನ್ನು ಹಾಕಿ ಬಂಧಿಸಬೇಕೆಂದು ಒತ್ತಾಯ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಶಾಂತಿ ಕಾಪಾಡಿ

ಈ ಘಟನೆಯಿಂದ ಕೆರಳಿ ಯಾರು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ. ಶಾಂತಿಯಿಂದ ವರ್ತಿಸಿ. ಕಾನೂನು ಇದೆ, ಅದರ ರೀತಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ನಂಬಿದ್ದೇನೆ. ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ ಆಗ ಮುಂದಿನ ನಡೆಯನ್ನು ತೀರ್ಮಾನಿಸೋಣ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಅವರೊಂದಿಗೆ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಈಶ್ವರ ಖಂಡ್ರೆ ದಿನೇಶ್ ಗುಂಡೂರಾವ್‌, ವಿ.ಎಸ್‌ ಉಗ್ರಪ್ಪ, ಜಮೀರ್‌ ಅಹ್ಮದ್‌ ಖಾನ್‌, ಪುಷ್ಪ ಅಮರನಾಥ್, ಹಂಪನಗೌಡ ಬಾದರ್ಲಿ ಮತ್ತಿತರರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...