Homeಮುಖಪುಟಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ:...

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

- Advertisement -
- Advertisement -

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ‘ಶೂನ್ಯ ದೂರುಗಳು’ ಬಂದಿವೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ವಿರುದ್ಧವಾಗಿ, 89 ಲಕ್ಷ ದೂರುಗಳನ್ನು ಸಲ್ಲಿಸಿದ್ದೇವೆ. ಅದಕ್ಕೆ ಪುರಾವೆಯಾಗಿ ಸೀಲ್ ಹಾಕಿರುವ ರಶೀದಿಗಳು ನಮ್ಮ ಬಳಿ ಇವೆ ಎಂದು ಕಾಂಗ್ರೆಸ್ ಭಾನುವಾರ (ಆ.31) ಹೇಳಿದೆ.

ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಎಲ್ಲಾ ಹೆಸರುಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಪಕ್ಷದ ಬಿಹಾರ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ಮತ್ತು ಅಖಿಲೇಶ್ ಪ್ರಸಾದ್, ಶಕೀಲ್ ಅಹ್ಮದ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

“ಯಾವುದೇ ರಾಜಕೀಯ ಪಕ್ಷಗಳಿಂದ ಯಾವುದೇ ದೂರುಗಳು ಬರುತ್ತಿಲ್ಲ ಎಂಬ ಸುದ್ದಿಯನ್ನು ಚುನಾವಣಾ ಆಯೋಗ ತನ್ನ ಮೂಲಗಳ ಮೂಲಕ ಹರಡುತ್ತಲೇ ಇದೆ. ಸತ್ಯ ಏನೆಂದರೆ, ಕಾಂಗ್ರೆಸ್ ಎಸ್‌ಐಆರ್‌ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 89 ಲಕ್ಷ ದೂರುಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ” ಎಂದು ಖೇರಾ ಹೇಳಿದ್ದಾರೆ.

ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ ಮತದಾರರನ್ನು ಕಾಂಗ್ರೆಸ್ ಬಯಸುವುದಿಲ್ಲ. ಆದರೆ, ಯಾವುದೇ  ಹಕ್ಕುದಾರ ಮತದಾರರನ್ನು ಪಟ್ಟಿಯಿಂದ ಕೈಬಿಡಲೂ ಅನುಮತಿಸುವುದಿಲ್ಲ. ಉದ್ದೇಶಪೂರ್ವಕವಾಗಿಯೂ ಆಗಿರಬಹುದು ಅಥವಾ ಅಜಾಗರೂಕತೆಯಿಂದಲೂ ಆಗಿರಬಹುದು ಎಂದು ಪವನ್ ಖೇರಾ ಗುಡುಗಿದ್ದಾರೆ.

“ದೂರುಗಳಿಗೆ ಚುನಾವಣಾ ಆಯೋಗದ ಸ್ಪಷ್ಟ ಪ್ರತಿರೋಧದ ಹೊರತಾಗಿಯೂ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಸಹಿ ಮತ್ತು ಸೀಲ್ ಇರುವ ರಶೀದಿಗಳನ್ನು ಪಡೆದುಕೊಂಡಿದ್ದಾರೆ. ಬೂತ್ ಮಟ್ಟದ ಏಜೆಂಟ್‌ಗಳಿಂದ ದೂರುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಚುನಾವಣಾ ಆಯೋಗ ನಿರಾಕರಿಸಿದೆ. ದೂರುಗಳು ವೈಯಕ್ತಿಕ ದೂರುದಾರರಿಂದ ಆಗಿರಬೇಕು ಮತ್ತು ರಾಜಕೀಯ ಪಕ್ಷಗಳಿಂದ ಅಲ್ಲ ಎಂದು ಹೇಳಿದೆ” ಎಂದು ಖೇರಾ ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಚುನಾವಣಾ ಆಯೋಗವು ನಾಲ್ಕು ಕಾರಣಗಳನ್ನು ಉಲ್ಲೇಖಿಸಿದೆ. ವಲಸೆಯ ನೆಪದಲ್ಲಿ 25 ಲಕ್ಷ, ಸಾವನಪ್ಪಿದ್ದಾರೆ ಎಂದು 22 ಲಕ್ಷ ಮತ್ತು ವಿಳಾಸಗಳಲ್ಲಿ ಕಂಡುಬಂದಿಲ್ಲ ಎಂದು 9.7 ಲಕ್ಷ ಮತದಾರ ಹೆಸರುಗಳನ್ನು ಕೈ ಬಿಡಲಾಗಿದೆ.  ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಲಾಗಿದೆ ಎಂದು ಏಳು ಲಕ್ಷ ಹೆಸರುಗಳನ್ನು ಕೈ ಬಿಟ್ಟಿದ್ದಾರೆ ಎಂದು ಖೇರಾ ವಿವರಿಸಿದ್ದಾರೆ.

ಒಬ್ಬರು ಮತದಾರರಿಗೆ ಎರಡು ಎಪಿಕ್ (ಮತದಾರರ ಫೋಟೋ ಗುರುತಿನ ಚೀಟಿ) ಸಂಖ್ಯೆಗಳನ್ನು ನೀಡಲಾದ ಪ್ರಕರಣಗಳು ಸಾಕಷ್ಟಿವೆ ಎಂದು ಖೇರಾ ಆರೋಪಿಸಿದ್ದಾರೆ.

ಎಸ್‌ಐಆರ್‌ನಲ್ಲಿ ಕೆಲವು ಕುತೂಹಲಕಾರಿ ಮಾದರಿಗಳನ್ನು ಗಮನಿಸಲಾಗಿದೆ. 20,638 ಬೂತ್‌ಗಳಲ್ಲಿ 100ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 1,988 ಬೂತ್‌ಗಳಲ್ಲಿ 200ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 7,613 ಬೂತ್‌ಗಳಲ್ಲಿ, ಅಳಿಸಲಾದ ಹೆಸರುಗಳಲ್ಲಿ 70% ಮಹಿಳಾ ಮತದಾರರಾಗಿದ್ದು, 635 ಬೂತ್‌ಗಳಲ್ಲಿ, ವಲಸೆ ವರ್ಗದ ಅಡಿಯಲ್ಲಿ ಅಳಿಸಲಾದ ಮತದಾರರಲ್ಲಿ 75% ಕ್ಕಿಂತ ಹೆಚ್ಚು ಮಹಿಳೆಯರು ಎಂದು ಖೇರಾ ಹೇಳಿದ್ದಾರೆ.

ಸಾಮಾನ್ಯವಾಗಿ ಪುರುಷರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದರಿಂದ ಇದು ವಿಚಿತ್ರವಾಗಿ ಕಾಣಿಸಿದೆ. ಮಹಿಳೆಯರ ಹೆಸರನ್ನು ನಿರ್ದಿಷ್ಟವಾಗಿ ಕೈಬಿಡಲಾಗಿದೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ.

7,931 ಬೂತ್‌ಗಳಲ್ಲಿ, ಶೇ. 75 ರಷ್ಟು ಮತದಾರರನ್ನು ಕೈಬಿಡಲಾಗಿದೆ. ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎಸ್‌ಐಆರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟ ಅನೇಕ ಮತದಾರರು ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಆದ್ದರಿಂದ ಈ ವರ್ಗದಲ್ಲಿ ಗಂಭೀರ ವ್ಯತ್ಯಾಸಗಳಿವೆ ಎಂದು ಖೇರಾ ಹೇಳಿದ್ದಾರೆ.

ಈ ವ್ಯತ್ಯಾಸಗಳನ್ನು ಗಮನದಲ್ಲಿಟ್ಟುಕೊಂಡು, ಕೈಬಿಡಲಾದ ಎಲ್ಲಾ ಹೆಸರುಗಳನ್ನು ಚುನಾವಣಾ ಆಯೋಗವು ಮತ್ತೊಮ್ಮೆ ಪರಿಶೀಲಿಸಬೇಕು. ಆಯೋಗವು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಮೂಲಕ ಅಂತಹ ಪ್ರತಿಯೊಬ್ಬ ಮತದಾರರ ಸ್ಥಿತಿಯನ್ನು ದೃಢೀಕರಿಸಬೇಕು ಎಂದು ಖೇರಾ ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....