Homeಮುಖಪುಟಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ:...

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

- Advertisement -
- Advertisement -

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ‘ಶೂನ್ಯ ದೂರುಗಳು’ ಬಂದಿವೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ವಿರುದ್ಧವಾಗಿ, 89 ಲಕ್ಷ ದೂರುಗಳನ್ನು ಸಲ್ಲಿಸಿದ್ದೇವೆ. ಅದಕ್ಕೆ ಪುರಾವೆಯಾಗಿ ಸೀಲ್ ಹಾಕಿರುವ ರಶೀದಿಗಳು ನಮ್ಮ ಬಳಿ ಇವೆ ಎಂದು ಕಾಂಗ್ರೆಸ್ ಭಾನುವಾರ (ಆ.31) ಹೇಳಿದೆ.

ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಎಲ್ಲಾ ಹೆಸರುಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಪಕ್ಷದ ಬಿಹಾರ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ಮತ್ತು ಅಖಿಲೇಶ್ ಪ್ರಸಾದ್, ಶಕೀಲ್ ಅಹ್ಮದ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

“ಯಾವುದೇ ರಾಜಕೀಯ ಪಕ್ಷಗಳಿಂದ ಯಾವುದೇ ದೂರುಗಳು ಬರುತ್ತಿಲ್ಲ ಎಂಬ ಸುದ್ದಿಯನ್ನು ಚುನಾವಣಾ ಆಯೋಗ ತನ್ನ ಮೂಲಗಳ ಮೂಲಕ ಹರಡುತ್ತಲೇ ಇದೆ. ಸತ್ಯ ಏನೆಂದರೆ, ಕಾಂಗ್ರೆಸ್ ಎಸ್‌ಐಆರ್‌ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 89 ಲಕ್ಷ ದೂರುಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ” ಎಂದು ಖೇರಾ ಹೇಳಿದ್ದಾರೆ.

ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ ಮತದಾರರನ್ನು ಕಾಂಗ್ರೆಸ್ ಬಯಸುವುದಿಲ್ಲ. ಆದರೆ, ಯಾವುದೇ  ಹಕ್ಕುದಾರ ಮತದಾರರನ್ನು ಪಟ್ಟಿಯಿಂದ ಕೈಬಿಡಲೂ ಅನುಮತಿಸುವುದಿಲ್ಲ. ಉದ್ದೇಶಪೂರ್ವಕವಾಗಿಯೂ ಆಗಿರಬಹುದು ಅಥವಾ ಅಜಾಗರೂಕತೆಯಿಂದಲೂ ಆಗಿರಬಹುದು ಎಂದು ಪವನ್ ಖೇರಾ ಗುಡುಗಿದ್ದಾರೆ.

“ದೂರುಗಳಿಗೆ ಚುನಾವಣಾ ಆಯೋಗದ ಸ್ಪಷ್ಟ ಪ್ರತಿರೋಧದ ಹೊರತಾಗಿಯೂ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಸಹಿ ಮತ್ತು ಸೀಲ್ ಇರುವ ರಶೀದಿಗಳನ್ನು ಪಡೆದುಕೊಂಡಿದ್ದಾರೆ. ಬೂತ್ ಮಟ್ಟದ ಏಜೆಂಟ್‌ಗಳಿಂದ ದೂರುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಚುನಾವಣಾ ಆಯೋಗ ನಿರಾಕರಿಸಿದೆ. ದೂರುಗಳು ವೈಯಕ್ತಿಕ ದೂರುದಾರರಿಂದ ಆಗಿರಬೇಕು ಮತ್ತು ರಾಜಕೀಯ ಪಕ್ಷಗಳಿಂದ ಅಲ್ಲ ಎಂದು ಹೇಳಿದೆ” ಎಂದು ಖೇರಾ ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಚುನಾವಣಾ ಆಯೋಗವು ನಾಲ್ಕು ಕಾರಣಗಳನ್ನು ಉಲ್ಲೇಖಿಸಿದೆ. ವಲಸೆಯ ನೆಪದಲ್ಲಿ 25 ಲಕ್ಷ, ಸಾವನಪ್ಪಿದ್ದಾರೆ ಎಂದು 22 ಲಕ್ಷ ಮತ್ತು ವಿಳಾಸಗಳಲ್ಲಿ ಕಂಡುಬಂದಿಲ್ಲ ಎಂದು 9.7 ಲಕ್ಷ ಮತದಾರ ಹೆಸರುಗಳನ್ನು ಕೈ ಬಿಡಲಾಗಿದೆ.  ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಲಾಗಿದೆ ಎಂದು ಏಳು ಲಕ್ಷ ಹೆಸರುಗಳನ್ನು ಕೈ ಬಿಟ್ಟಿದ್ದಾರೆ ಎಂದು ಖೇರಾ ವಿವರಿಸಿದ್ದಾರೆ.

ಒಬ್ಬರು ಮತದಾರರಿಗೆ ಎರಡು ಎಪಿಕ್ (ಮತದಾರರ ಫೋಟೋ ಗುರುತಿನ ಚೀಟಿ) ಸಂಖ್ಯೆಗಳನ್ನು ನೀಡಲಾದ ಪ್ರಕರಣಗಳು ಸಾಕಷ್ಟಿವೆ ಎಂದು ಖೇರಾ ಆರೋಪಿಸಿದ್ದಾರೆ.

ಎಸ್‌ಐಆರ್‌ನಲ್ಲಿ ಕೆಲವು ಕುತೂಹಲಕಾರಿ ಮಾದರಿಗಳನ್ನು ಗಮನಿಸಲಾಗಿದೆ. 20,638 ಬೂತ್‌ಗಳಲ್ಲಿ 100ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 1,988 ಬೂತ್‌ಗಳಲ್ಲಿ 200ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 7,613 ಬೂತ್‌ಗಳಲ್ಲಿ, ಅಳಿಸಲಾದ ಹೆಸರುಗಳಲ್ಲಿ 70% ಮಹಿಳಾ ಮತದಾರರಾಗಿದ್ದು, 635 ಬೂತ್‌ಗಳಲ್ಲಿ, ವಲಸೆ ವರ್ಗದ ಅಡಿಯಲ್ಲಿ ಅಳಿಸಲಾದ ಮತದಾರರಲ್ಲಿ 75% ಕ್ಕಿಂತ ಹೆಚ್ಚು ಮಹಿಳೆಯರು ಎಂದು ಖೇರಾ ಹೇಳಿದ್ದಾರೆ.

ಸಾಮಾನ್ಯವಾಗಿ ಪುರುಷರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದರಿಂದ ಇದು ವಿಚಿತ್ರವಾಗಿ ಕಾಣಿಸಿದೆ. ಮಹಿಳೆಯರ ಹೆಸರನ್ನು ನಿರ್ದಿಷ್ಟವಾಗಿ ಕೈಬಿಡಲಾಗಿದೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ.

7,931 ಬೂತ್‌ಗಳಲ್ಲಿ, ಶೇ. 75 ರಷ್ಟು ಮತದಾರರನ್ನು ಕೈಬಿಡಲಾಗಿದೆ. ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎಸ್‌ಐಆರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟ ಅನೇಕ ಮತದಾರರು ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಆದ್ದರಿಂದ ಈ ವರ್ಗದಲ್ಲಿ ಗಂಭೀರ ವ್ಯತ್ಯಾಸಗಳಿವೆ ಎಂದು ಖೇರಾ ಹೇಳಿದ್ದಾರೆ.

ಈ ವ್ಯತ್ಯಾಸಗಳನ್ನು ಗಮನದಲ್ಲಿಟ್ಟುಕೊಂಡು, ಕೈಬಿಡಲಾದ ಎಲ್ಲಾ ಹೆಸರುಗಳನ್ನು ಚುನಾವಣಾ ಆಯೋಗವು ಮತ್ತೊಮ್ಮೆ ಪರಿಶೀಲಿಸಬೇಕು. ಆಯೋಗವು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಮೂಲಕ ಅಂತಹ ಪ್ರತಿಯೊಬ್ಬ ಮತದಾರರ ಸ್ಥಿತಿಯನ್ನು ದೃಢೀಕರಿಸಬೇಕು ಎಂದು ಖೇರಾ ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...