Homeಮುಖಪುಟಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ:...

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

- Advertisement -
- Advertisement -

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ‘ಶೂನ್ಯ ದೂರುಗಳು’ ಬಂದಿವೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ವಿರುದ್ಧವಾಗಿ, 89 ಲಕ್ಷ ದೂರುಗಳನ್ನು ಸಲ್ಲಿಸಿದ್ದೇವೆ. ಅದಕ್ಕೆ ಪುರಾವೆಯಾಗಿ ಸೀಲ್ ಹಾಕಿರುವ ರಶೀದಿಗಳು ನಮ್ಮ ಬಳಿ ಇವೆ ಎಂದು ಕಾಂಗ್ರೆಸ್ ಭಾನುವಾರ (ಆ.31) ಹೇಳಿದೆ.

ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಎಲ್ಲಾ ಹೆಸರುಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಪಕ್ಷದ ಬಿಹಾರ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ಮತ್ತು ಅಖಿಲೇಶ್ ಪ್ರಸಾದ್, ಶಕೀಲ್ ಅಹ್ಮದ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

“ಯಾವುದೇ ರಾಜಕೀಯ ಪಕ್ಷಗಳಿಂದ ಯಾವುದೇ ದೂರುಗಳು ಬರುತ್ತಿಲ್ಲ ಎಂಬ ಸುದ್ದಿಯನ್ನು ಚುನಾವಣಾ ಆಯೋಗ ತನ್ನ ಮೂಲಗಳ ಮೂಲಕ ಹರಡುತ್ತಲೇ ಇದೆ. ಸತ್ಯ ಏನೆಂದರೆ, ಕಾಂಗ್ರೆಸ್ ಎಸ್‌ಐಆರ್‌ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 89 ಲಕ್ಷ ದೂರುಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ” ಎಂದು ಖೇರಾ ಹೇಳಿದ್ದಾರೆ.

ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ ಮತದಾರರನ್ನು ಕಾಂಗ್ರೆಸ್ ಬಯಸುವುದಿಲ್ಲ. ಆದರೆ, ಯಾವುದೇ  ಹಕ್ಕುದಾರ ಮತದಾರರನ್ನು ಪಟ್ಟಿಯಿಂದ ಕೈಬಿಡಲೂ ಅನುಮತಿಸುವುದಿಲ್ಲ. ಉದ್ದೇಶಪೂರ್ವಕವಾಗಿಯೂ ಆಗಿರಬಹುದು ಅಥವಾ ಅಜಾಗರೂಕತೆಯಿಂದಲೂ ಆಗಿರಬಹುದು ಎಂದು ಪವನ್ ಖೇರಾ ಗುಡುಗಿದ್ದಾರೆ.

“ದೂರುಗಳಿಗೆ ಚುನಾವಣಾ ಆಯೋಗದ ಸ್ಪಷ್ಟ ಪ್ರತಿರೋಧದ ಹೊರತಾಗಿಯೂ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಸಹಿ ಮತ್ತು ಸೀಲ್ ಇರುವ ರಶೀದಿಗಳನ್ನು ಪಡೆದುಕೊಂಡಿದ್ದಾರೆ. ಬೂತ್ ಮಟ್ಟದ ಏಜೆಂಟ್‌ಗಳಿಂದ ದೂರುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಚುನಾವಣಾ ಆಯೋಗ ನಿರಾಕರಿಸಿದೆ. ದೂರುಗಳು ವೈಯಕ್ತಿಕ ದೂರುದಾರರಿಂದ ಆಗಿರಬೇಕು ಮತ್ತು ರಾಜಕೀಯ ಪಕ್ಷಗಳಿಂದ ಅಲ್ಲ ಎಂದು ಹೇಳಿದೆ” ಎಂದು ಖೇರಾ ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಚುನಾವಣಾ ಆಯೋಗವು ನಾಲ್ಕು ಕಾರಣಗಳನ್ನು ಉಲ್ಲೇಖಿಸಿದೆ. ವಲಸೆಯ ನೆಪದಲ್ಲಿ 25 ಲಕ್ಷ, ಸಾವನಪ್ಪಿದ್ದಾರೆ ಎಂದು 22 ಲಕ್ಷ ಮತ್ತು ವಿಳಾಸಗಳಲ್ಲಿ ಕಂಡುಬಂದಿಲ್ಲ ಎಂದು 9.7 ಲಕ್ಷ ಮತದಾರ ಹೆಸರುಗಳನ್ನು ಕೈ ಬಿಡಲಾಗಿದೆ.  ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಲಾಗಿದೆ ಎಂದು ಏಳು ಲಕ್ಷ ಹೆಸರುಗಳನ್ನು ಕೈ ಬಿಟ್ಟಿದ್ದಾರೆ ಎಂದು ಖೇರಾ ವಿವರಿಸಿದ್ದಾರೆ.

ಒಬ್ಬರು ಮತದಾರರಿಗೆ ಎರಡು ಎಪಿಕ್ (ಮತದಾರರ ಫೋಟೋ ಗುರುತಿನ ಚೀಟಿ) ಸಂಖ್ಯೆಗಳನ್ನು ನೀಡಲಾದ ಪ್ರಕರಣಗಳು ಸಾಕಷ್ಟಿವೆ ಎಂದು ಖೇರಾ ಆರೋಪಿಸಿದ್ದಾರೆ.

ಎಸ್‌ಐಆರ್‌ನಲ್ಲಿ ಕೆಲವು ಕುತೂಹಲಕಾರಿ ಮಾದರಿಗಳನ್ನು ಗಮನಿಸಲಾಗಿದೆ. 20,638 ಬೂತ್‌ಗಳಲ್ಲಿ 100ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 1,988 ಬೂತ್‌ಗಳಲ್ಲಿ 200ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 7,613 ಬೂತ್‌ಗಳಲ್ಲಿ, ಅಳಿಸಲಾದ ಹೆಸರುಗಳಲ್ಲಿ 70% ಮಹಿಳಾ ಮತದಾರರಾಗಿದ್ದು, 635 ಬೂತ್‌ಗಳಲ್ಲಿ, ವಲಸೆ ವರ್ಗದ ಅಡಿಯಲ್ಲಿ ಅಳಿಸಲಾದ ಮತದಾರರಲ್ಲಿ 75% ಕ್ಕಿಂತ ಹೆಚ್ಚು ಮಹಿಳೆಯರು ಎಂದು ಖೇರಾ ಹೇಳಿದ್ದಾರೆ.

ಸಾಮಾನ್ಯವಾಗಿ ಪುರುಷರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದರಿಂದ ಇದು ವಿಚಿತ್ರವಾಗಿ ಕಾಣಿಸಿದೆ. ಮಹಿಳೆಯರ ಹೆಸರನ್ನು ನಿರ್ದಿಷ್ಟವಾಗಿ ಕೈಬಿಡಲಾಗಿದೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ.

7,931 ಬೂತ್‌ಗಳಲ್ಲಿ, ಶೇ. 75 ರಷ್ಟು ಮತದಾರರನ್ನು ಕೈಬಿಡಲಾಗಿದೆ. ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎಸ್‌ಐಆರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟ ಅನೇಕ ಮತದಾರರು ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಆದ್ದರಿಂದ ಈ ವರ್ಗದಲ್ಲಿ ಗಂಭೀರ ವ್ಯತ್ಯಾಸಗಳಿವೆ ಎಂದು ಖೇರಾ ಹೇಳಿದ್ದಾರೆ.

ಈ ವ್ಯತ್ಯಾಸಗಳನ್ನು ಗಮನದಲ್ಲಿಟ್ಟುಕೊಂಡು, ಕೈಬಿಡಲಾದ ಎಲ್ಲಾ ಹೆಸರುಗಳನ್ನು ಚುನಾವಣಾ ಆಯೋಗವು ಮತ್ತೊಮ್ಮೆ ಪರಿಶೀಲಿಸಬೇಕು. ಆಯೋಗವು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಮೂಲಕ ಅಂತಹ ಪ್ರತಿಯೊಬ್ಬ ಮತದಾರರ ಸ್ಥಿತಿಯನ್ನು ದೃಢೀಕರಿಸಬೇಕು ಎಂದು ಖೇರಾ ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....