Homeಮುಖಪುಟಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ:...

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

- Advertisement -
- Advertisement -

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ‘ಶೂನ್ಯ ದೂರುಗಳು’ ಬಂದಿವೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ವಿರುದ್ಧವಾಗಿ, 89 ಲಕ್ಷ ದೂರುಗಳನ್ನು ಸಲ್ಲಿಸಿದ್ದೇವೆ. ಅದಕ್ಕೆ ಪುರಾವೆಯಾಗಿ ಸೀಲ್ ಹಾಕಿರುವ ರಶೀದಿಗಳು ನಮ್ಮ ಬಳಿ ಇವೆ ಎಂದು ಕಾಂಗ್ರೆಸ್ ಭಾನುವಾರ (ಆ.31) ಹೇಳಿದೆ.

ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಎಲ್ಲಾ ಹೆಸರುಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಪಕ್ಷದ ಬಿಹಾರ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ಮತ್ತು ಅಖಿಲೇಶ್ ಪ್ರಸಾದ್, ಶಕೀಲ್ ಅಹ್ಮದ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

“ಯಾವುದೇ ರಾಜಕೀಯ ಪಕ್ಷಗಳಿಂದ ಯಾವುದೇ ದೂರುಗಳು ಬರುತ್ತಿಲ್ಲ ಎಂಬ ಸುದ್ದಿಯನ್ನು ಚುನಾವಣಾ ಆಯೋಗ ತನ್ನ ಮೂಲಗಳ ಮೂಲಕ ಹರಡುತ್ತಲೇ ಇದೆ. ಸತ್ಯ ಏನೆಂದರೆ, ಕಾಂಗ್ರೆಸ್ ಎಸ್‌ಐಆರ್‌ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 89 ಲಕ್ಷ ದೂರುಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ” ಎಂದು ಖೇರಾ ಹೇಳಿದ್ದಾರೆ.

ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ ಮತದಾರರನ್ನು ಕಾಂಗ್ರೆಸ್ ಬಯಸುವುದಿಲ್ಲ. ಆದರೆ, ಯಾವುದೇ  ಹಕ್ಕುದಾರ ಮತದಾರರನ್ನು ಪಟ್ಟಿಯಿಂದ ಕೈಬಿಡಲೂ ಅನುಮತಿಸುವುದಿಲ್ಲ. ಉದ್ದೇಶಪೂರ್ವಕವಾಗಿಯೂ ಆಗಿರಬಹುದು ಅಥವಾ ಅಜಾಗರೂಕತೆಯಿಂದಲೂ ಆಗಿರಬಹುದು ಎಂದು ಪವನ್ ಖೇರಾ ಗುಡುಗಿದ್ದಾರೆ.

“ದೂರುಗಳಿಗೆ ಚುನಾವಣಾ ಆಯೋಗದ ಸ್ಪಷ್ಟ ಪ್ರತಿರೋಧದ ಹೊರತಾಗಿಯೂ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಸಹಿ ಮತ್ತು ಸೀಲ್ ಇರುವ ರಶೀದಿಗಳನ್ನು ಪಡೆದುಕೊಂಡಿದ್ದಾರೆ. ಬೂತ್ ಮಟ್ಟದ ಏಜೆಂಟ್‌ಗಳಿಂದ ದೂರುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಚುನಾವಣಾ ಆಯೋಗ ನಿರಾಕರಿಸಿದೆ. ದೂರುಗಳು ವೈಯಕ್ತಿಕ ದೂರುದಾರರಿಂದ ಆಗಿರಬೇಕು ಮತ್ತು ರಾಜಕೀಯ ಪಕ್ಷಗಳಿಂದ ಅಲ್ಲ ಎಂದು ಹೇಳಿದೆ” ಎಂದು ಖೇರಾ ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಚುನಾವಣಾ ಆಯೋಗವು ನಾಲ್ಕು ಕಾರಣಗಳನ್ನು ಉಲ್ಲೇಖಿಸಿದೆ. ವಲಸೆಯ ನೆಪದಲ್ಲಿ 25 ಲಕ್ಷ, ಸಾವನಪ್ಪಿದ್ದಾರೆ ಎಂದು 22 ಲಕ್ಷ ಮತ್ತು ವಿಳಾಸಗಳಲ್ಲಿ ಕಂಡುಬಂದಿಲ್ಲ ಎಂದು 9.7 ಲಕ್ಷ ಮತದಾರ ಹೆಸರುಗಳನ್ನು ಕೈ ಬಿಡಲಾಗಿದೆ.  ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಲಾಗಿದೆ ಎಂದು ಏಳು ಲಕ್ಷ ಹೆಸರುಗಳನ್ನು ಕೈ ಬಿಟ್ಟಿದ್ದಾರೆ ಎಂದು ಖೇರಾ ವಿವರಿಸಿದ್ದಾರೆ.

ಒಬ್ಬರು ಮತದಾರರಿಗೆ ಎರಡು ಎಪಿಕ್ (ಮತದಾರರ ಫೋಟೋ ಗುರುತಿನ ಚೀಟಿ) ಸಂಖ್ಯೆಗಳನ್ನು ನೀಡಲಾದ ಪ್ರಕರಣಗಳು ಸಾಕಷ್ಟಿವೆ ಎಂದು ಖೇರಾ ಆರೋಪಿಸಿದ್ದಾರೆ.

ಎಸ್‌ಐಆರ್‌ನಲ್ಲಿ ಕೆಲವು ಕುತೂಹಲಕಾರಿ ಮಾದರಿಗಳನ್ನು ಗಮನಿಸಲಾಗಿದೆ. 20,638 ಬೂತ್‌ಗಳಲ್ಲಿ 100ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 1,988 ಬೂತ್‌ಗಳಲ್ಲಿ 200ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 7,613 ಬೂತ್‌ಗಳಲ್ಲಿ, ಅಳಿಸಲಾದ ಹೆಸರುಗಳಲ್ಲಿ 70% ಮಹಿಳಾ ಮತದಾರರಾಗಿದ್ದು, 635 ಬೂತ್‌ಗಳಲ್ಲಿ, ವಲಸೆ ವರ್ಗದ ಅಡಿಯಲ್ಲಿ ಅಳಿಸಲಾದ ಮತದಾರರಲ್ಲಿ 75% ಕ್ಕಿಂತ ಹೆಚ್ಚು ಮಹಿಳೆಯರು ಎಂದು ಖೇರಾ ಹೇಳಿದ್ದಾರೆ.

ಸಾಮಾನ್ಯವಾಗಿ ಪುರುಷರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದರಿಂದ ಇದು ವಿಚಿತ್ರವಾಗಿ ಕಾಣಿಸಿದೆ. ಮಹಿಳೆಯರ ಹೆಸರನ್ನು ನಿರ್ದಿಷ್ಟವಾಗಿ ಕೈಬಿಡಲಾಗಿದೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ.

7,931 ಬೂತ್‌ಗಳಲ್ಲಿ, ಶೇ. 75 ರಷ್ಟು ಮತದಾರರನ್ನು ಕೈಬಿಡಲಾಗಿದೆ. ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎಸ್‌ಐಆರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟ ಅನೇಕ ಮತದಾರರು ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಆದ್ದರಿಂದ ಈ ವರ್ಗದಲ್ಲಿ ಗಂಭೀರ ವ್ಯತ್ಯಾಸಗಳಿವೆ ಎಂದು ಖೇರಾ ಹೇಳಿದ್ದಾರೆ.

ಈ ವ್ಯತ್ಯಾಸಗಳನ್ನು ಗಮನದಲ್ಲಿಟ್ಟುಕೊಂಡು, ಕೈಬಿಡಲಾದ ಎಲ್ಲಾ ಹೆಸರುಗಳನ್ನು ಚುನಾವಣಾ ಆಯೋಗವು ಮತ್ತೊಮ್ಮೆ ಪರಿಶೀಲಿಸಬೇಕು. ಆಯೋಗವು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಮೂಲಕ ಅಂತಹ ಪ್ರತಿಯೊಬ್ಬ ಮತದಾರರ ಸ್ಥಿತಿಯನ್ನು ದೃಢೀಕರಿಸಬೇಕು ಎಂದು ಖೇರಾ ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...