“ಪಕ್ಷದ ಪ್ರಣಾಳಿಕೆಯು ಮುಸ್ಲಿಂ ಲೀಗ್ನ ಸಿದ್ಧಾಂತವನ್ನು ಪ್ರತಿ ಬಿಂಬಿಸುತ್ತದೆ ಮತ್ತು ಪ್ರತಿ ಪುಟವು ಭಾರತವನ್ನು ತುಂಡು ತುಂಡಾಗಿಸುವ ಅಂಶವನ್ನು ಹೊಂದಿದೆ” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ರಾಜ್ಯಸಭಾ ಸಂಸದರಾದ ಮುಕುಲ್ ವಾಸ್ನಿಕ್, ಪವನ್ ಖೇರಾ ಮತ್ತು ಗುರುದೀಪ್ ಸಪ್ಪಲ್ ಅವರ ನಿಯೋಗವು ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ.
नरेंद्र मोदी जी ने अपने भाषणों में कांग्रेस के घोषणा पत्र को झूठ का पुलिंदा कहा है, यह काफी दुखद है।
आप किसी भी पार्टी से मतभेद रख सकते हैं, लेकिन एक राष्ट्रीय स्तर की पार्टी के घोषणा पत्र के बारे में ऐसा कहना दुखी करने वाली बात है।
PM मोदी ने यह भी कहा कि यह उन पार्टियों का… pic.twitter.com/upcALZrUbx
— Congress (@INCIndia) April 8, 2024
ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಬಿಜೆಪಿಯು ಚುನಾವಣಾ ಪ್ರಚಾರದಲ್ಲಿ ಸಶಸ್ತ್ರ ಪಡೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ತನ್ನ ದೂರಿನಲ್ಲಿ ಆರೋಪಿಸಿದೆ.
ಕೇಂದ್ರ ಸಚಿವ ಮತ್ತು ಬಿಜೆಪಿಯ ತಿರುವನಂತಪುರಂ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ‘ಚುನಾವಣಾ ಅಫಿಡವಿಟ್ನಲ್ಲಿ ತಮ್ಮ ಆರ್ಥಿಕ ಸ್ಥಿತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ್ದಾರೆ’ ಎಂದು ಕಾಂಗ್ರೆಸ್ ಮತ್ತೊಂದು ದೂರು ದಾಖಲಿಸಿದೆ.
‘ವಿಕಸಿತ ಭಾರತ @ 2047: ಯುವ ಜನರ ಧ್ವನಿ ಅಭಿಯಾನ’ ಅಡಿಯಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ವಿವಿಧ ಕಾಲೇಜುಗಳಲ್ಲಿ ಅಳವಡಿಸಲಾದ ಪ್ರಧಾನಿಯವರ ಬೃಹತ್ ಗಾತ್ರದ ಹೋರ್ಡಿಂಗ್ಗಳು ಮತ್ತು ಬ್ಯಾನರ್ಗಳ ವಿಷಯವನ್ನೂ ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದಿದೆ.
ದೂರ ದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರಕ್ಕೆ ಮುಂದಾಗಿರುವುದರ ವಿರುದ್ದವೂ ಕಾಂಗ್ರೆಸ್ ದೂರು ನೀಡಿದ್ದು, “ಇದು ಧಾರ್ಮಿಕ ಸಮುದಾಯವನ್ನು ನಿಂದಿಸುವ ಮತ್ತು ದೇಶದಲ್ಲಿ ಲವ್ ಜಿಹಾದ್ ಎಂಬ ಕಾಲ್ಪನಿಕ ವಿಷಯವನ್ನು ದೊಡ್ಡದಾಗಿ ಬಿಂಬಿಸುತ್ತದೆ ಎಂದಿದೆ. ಇಂತಹ ಚಲನಚಿತ್ರಗಳನ್ನು ಪ್ರಸಾರ ಮಾಡುವುದರಿಂದ ಮತದಾರರನ್ನು ಧ್ರುವೀಕರಿಸಬಹುದು, ಧಾರ್ಮಿಕ ಗುರುತಿನ ರೀತಿಯಲ್ಲಿ ಕೋಮು ವೈಷಮ್ಯವನ್ನು ಉಂಟು ಮಾಡಬಹುದು. ಇದು ಸಂಪೂರ್ಣವಾಗಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಮನೋಭಾವ ಮತ್ತು ಮಾದರಿ ನೀತಿ ಸಂಹಿತೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ತ್ರಿಪುರಾದ ಪಶ್ಚಿಮ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿರುದ್ಧವೂ ಕಾಂಗ್ರೆಸ್ ದೂರು ದಾಖಲಿಸಿದೆ. ಚುನಾವಣಾಧಿಕಾರಿ ಚುನಾವನಾ ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಪ್ರಕಟಿಸುವ ಮಾರಾಟಗಾರರ ನಡುವೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಅಭ್ಯರ್ಥಿಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದೆ.