Homeಮುಖಪುಟಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

- Advertisement -
- Advertisement -

“ಪಕ್ಷದ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಸಿದ್ಧಾಂತವನ್ನು ಪ್ರತಿ ಬಿಂಬಿಸುತ್ತದೆ ಮತ್ತು ಪ್ರತಿ ಪುಟವು ಭಾರತವನ್ನು ತುಂಡು ತುಂಡಾಗಿಸುವ ಅಂಶವನ್ನು ಹೊಂದಿದೆ” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ರಾಜ್ಯಸಭಾ ಸಂಸದರಾದ ಮುಕುಲ್ ವಾಸ್ನಿಕ್, ಪವನ್ ಖೇರಾ ಮತ್ತು ಗುರುದೀಪ್ ಸಪ್ಪಲ್ ಅವರ ನಿಯೋಗವು ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಬಿಜೆಪಿಯು ಚುನಾವಣಾ ಪ್ರಚಾರದಲ್ಲಿ ಸಶಸ್ತ್ರ ಪಡೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ತನ್ನ ದೂರಿನಲ್ಲಿ ಆರೋಪಿಸಿದೆ.

ಕೇಂದ್ರ ಸಚಿವ ಮತ್ತು ಬಿಜೆಪಿಯ ತಿರುವನಂತಪುರಂ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ‘ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಆರ್ಥಿಕ ಸ್ಥಿತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ್ದಾರೆ’ ಎಂದು ಕಾಂಗ್ರೆಸ್ ಮತ್ತೊಂದು ದೂರು ದಾಖಲಿಸಿದೆ.

‘ವಿಕಸಿತ ಭಾರತ @ 2047: ಯುವ ಜನರ ಧ್ವನಿ ಅಭಿಯಾನ’ ಅಡಿಯಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ವಿವಿಧ ಕಾಲೇಜುಗಳಲ್ಲಿ ಅಳವಡಿಸಲಾದ ಪ್ರಧಾನಿಯವರ ಬೃಹತ್ ಗಾತ್ರದ ಹೋರ್ಡಿಂಗ್‌ಗಳು ಮತ್ತು ಬ್ಯಾನರ್‌ಗಳ ವಿಷಯವನ್ನೂ ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದಿದೆ.

ದೂರ ದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರಕ್ಕೆ ಮುಂದಾಗಿರುವುದರ ವಿರುದ್ದವೂ ಕಾಂಗ್ರೆಸ್ ದೂರು ನೀಡಿದ್ದು, “ಇದು ಧಾರ್ಮಿಕ ಸಮುದಾಯವನ್ನು ನಿಂದಿಸುವ ಮತ್ತು ದೇಶದಲ್ಲಿ ಲವ್ ಜಿಹಾದ್ ಎಂಬ ಕಾಲ್ಪನಿಕ ವಿಷಯವನ್ನು ದೊಡ್ಡದಾಗಿ ಬಿಂಬಿಸುತ್ತದೆ ಎಂದಿದೆ. ಇಂತಹ ಚಲನಚಿತ್ರಗಳನ್ನು ಪ್ರಸಾರ ಮಾಡುವುದರಿಂದ ಮತದಾರರನ್ನು ಧ್ರುವೀಕರಿಸಬಹುದು, ಧಾರ್ಮಿಕ ಗುರುತಿನ ರೀತಿಯಲ್ಲಿ ಕೋಮು ವೈಷಮ್ಯವನ್ನು ಉಂಟು ಮಾಡಬಹುದು. ಇದು ಸಂಪೂರ್ಣವಾಗಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಮನೋಭಾವ ಮತ್ತು ಮಾದರಿ ನೀತಿ ಸಂಹಿತೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ತ್ರಿಪುರಾದ ಪಶ್ಚಿಮ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿರುದ್ಧವೂ ಕಾಂಗ್ರೆಸ್ ದೂರು ದಾಖಲಿಸಿದೆ. ಚುನಾವಣಾಧಿಕಾರಿ ಚುನಾವನಾ ಬ್ಯಾನರ್‌ ಮತ್ತು ಪೋಸ್ಟರ್‌ಗಳನ್ನು ಪ್ರಕಟಿಸುವ ಮಾರಾಟಗಾರರ ನಡುವೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಅಭ್ಯರ್ಥಿಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದೆ.

ಇದನ್ನೂ ಓದಿ : ಮೋದಿ-ಶಾ ಅವರ ಸೈದ್ಧಾಂತಿಕ ಪೂರ್ವಜರು ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷರು, ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು: ಪ್ರಣಾಳಿಕೆ ಕುರಿತ ಟೀಕೆಗೆ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...