Homeಮುಖಪುಟಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್,...

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

- Advertisement -
- Advertisement -

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅರ್ನಬ್ ಗೋಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಯುವ ಕಾಂಗ್ರೆಸ್ ಘಟಕ ಕ್ರಿಮಿನಲ್ ಮೊಕದ್ದಮೆ ಹೂಡಿದೆ.

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವುದು) ಅಡಿಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಆರ್ನಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಟಿವಿಯಲ್ಲಿ ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಕಾಂಗ್ರೆಸ್‌ ಸೆಂಟರ್‌ ಅನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಚೇರಿ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಅದನ್ನು ಅಮಿತ್ ಮಾಳವೀಯ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಕೆಣಕುವ, ಅಶಾಂತಿಯನ್ನು ಪ್ರಚೋದಿಸುವ ಮತ್ತು ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸುವ ಈ ದುರುದ್ದೇಶಪೂರಿತ ಪ್ರಯತ್ನವು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ನಾವು ಮೌನವಾಗಿರುವುದಿಲ್ಲ, ನಮ್ಮ ಪಕ್ಷ ಅಥವಾ ಅದರ ನಾಯಕತ್ವದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುವ ಯಾವುದೇ ಪ್ರಯತ್ನಕ್ಕೆ ನಾವು ಶಕ್ತವಾದ ಕಾನೂನು ಮತ್ತು ರಾಜಕೀಯ ಪ್ರತಿಕ್ರಿಯೆಯನ್ನು ನೀಡುತ್ತೇವೆ. ಇದು ನಮ್ಮ ಸ್ಪಷ್ಟ ಸಂದೇಶ” ಎಂದು ಭಾರತೀಯ ಯುವ ಕಾಂಗ್ರೆಸ್‌ ಲೀಗಲ್ ಸೆಲ್ ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ.

ಮೇ 15ರಂದು ರಿಪಬ್ಲಿಕ್ ಟಿವಿಯಲ್ಲಿ ನಡೆದ ‘ಡಿಬೇಟ್ ವಿತ್ ಅರ್ನಬ್’ ಕಾರ್ಯಕ್ರಮದಲ್ಲಿ ಅರ್ನಬ್ ಗೋಸ್ವಾಮಿ ಅವರು ಇಸ್ತಾಂಬುಲ್ ಕಾಂಗ್ರೆಸ್ ಸೆಂಟರ್ ಕಟ್ಟಡದ ದೃಶ್ಯಗಳನ್ನು ತೋರಿಸಿದ್ದರು. ಆ ಕಟ್ಟಡ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದೆ ಎಂದು ಹೇಳಿದ್ದರು. ಕಾಂಗ್ರೆಸ್ ಭಾರತದ ಶತ್ರು ರಾಷ್ಟ್ರದಲ್ಲಿ ಕಚೇರಿ ತೆರೆಯುವ ಅಗತ್ಯ ಏನಿತ್ತು? ಎಂದು ಪ್ರಶ್ನಿಸಿದ್ದರು.

ತಮ್ಮ ಚರ್ಚೆಯಲ್ಲಿ, ಅರ್ನಬ್ ಕಾಂಗ್ರೆಸ್ ಪಕ್ಷವು ‘ಶತ್ರು ರಾಷ್ಟ್ರ ಟರ್ಕಿಯ ಪರವಾಗಿ ನಿಂತಿದೆ’ ಎಂದು ಆರೋಪಿಸಿದ್ದರು.

“ನಿಮ್ಮ ಪಕ್ಷ ಟರ್ಕಿಯಲ್ಲಿ ಯಾವ ರೀತಿಯ ವ್ಯವಹಾರವನ್ನು ಹೊಂದಿದೆ?” ಎಂದು ಕಾಂಗ್ರೆಸ್ ಅನ್ನು ಪ್ರಶ್ನಿಸಿದ್ದ ಅರ್ನಬ್, “ವೀಕ್ಷಕರೇ, ಕಾಂಗ್ರೆಸ್ ಪಕ್ಷವು ಟರ್ಕಿಯಲ್ಲಿ ನೋಂದಾಯಿತ ಕಚೇರಿಯನ್ನು ಹೊಂದಿದೆ ಎಂಬುವುದು ನಿಮಗೆ ಗೊತ್ತಿದೆಯಾ? 2019 ರಲ್ಲಿ ರಾಹುಲ್ ಗಾಂಧಿ ಅವರು ‘ಟರ್ಕಿಯಲ್ಲಿ ನಮಗೆ ದೊಡ್ಡ ಕಚೇರಿ ಇರಬೇಕು’ ಎಂದು ಹೇಳಿದ್ದರು” ಎಂದಿದ್ದರು.

ಟರ್ಕಿಯ ಇಸ್ತಾಂಬುಲ್‌ನಲ್ಲಿ ಕಾಂಗ್ರೆಸ್ ಪಕ್ಷದ ‘ಕಾರ್ಯಾಚರಣೆಗಳನ್ನು ಮುನ್ನಡೆಸಲು’ ಮೊಹಮ್ಮದ್ ಯೂಸುಫ್ ಖಾನ್ ಎಂಬ ವ್ಯಕ್ತಿಯನ್ನು ನೇಮಿಸಲಾಗಿದೆ ಎಂದು ಅವರು ಹೇಳಿದ್ದರು.

ವರದಿಗಳ ಪ್ರಕಾರ, ರಿಪಬ್ಲಿಕ್ ಟಿವಿಯ ಯೂಟ್ಯೂಬ್‌ನಲ್ಲಿ ಅಪ್ಲೋಡ್‌ ಮಾಡಿರುವ ವಿಡಿಯೋದಿಂದ ಆರ್ನಬ್ ಕಾಂಗ್ರೆಸ್ ಕಚೇರಿಯ ಕುರಿತು ಸುಳ್ಳು ಮಾಹಿತಿ ನೀಡಿದ ತುಣುಕನ್ನು ಪ್ರಸ್ತುತ ತೆಗೆದು ಹಾಕಲಾಗಿದೆ.

ಆರ್ನಬ್ ಚರ್ಚೆಯ ವಿಡಿಯೋ ತುಣುಕನ್ನು ಅಮಿತ್ ಮಾಳವೀಯ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವು ಟರ್ಕಿಯಲ್ಲಿ ನೋಂದಾಯಿತ ಕಚೇರಿಯನ್ನು ಹೊಂದಿದೆ ಎಂಬುವುದು ನಿಮಗೆ ಗೊತ್ತಿದೆಯಾ? ಇದರ ಅಗತ್ಯ ಏನೆಂದು ರಾಹುಲ್ ಗಾಂಧಿ ವಿವರಿಸಬಹುದೇ? ಇದು ವಿಲಕ್ಷಣ ಮತ್ತು ಬಹು ಹಂತಗಳಲ್ಲಿ ವಿವರಿಸಲಾಗದಂತಿದೆ. ಭಾರತವು ತಿಳಿದುಕೊಳ್ಳಲು ಅರ್ಹವಾಗಿದೆ. ನೆನಪಿಡಿ: ಶತ್ರುವಿನ ಮಿತ್ರ ಶತ್ರು ಎಂದು ಬರೆದುಕೊಂಡಿದ್ದರು.

ಮೇ 19 ರಂದು ನಡೆದ ಟಿವಿ ಚರ್ಚೆಯಲ್ಲೂ ಅರ್ನಬ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದರು. ಕಾಂಗ್ರೆಸ್ ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿಯನ್ನು ಹೊಂದಿದೆ ಎಂದು ಅವರು ಪುನರುಚ್ಚರಿಸಿದ್ದರು.

‘ಆಪರೇಶನ್‌ ಸಿಂಧೂರ’ ಕುರಿತು ಪೋಸ್ಟ್:‌ ಅಶೋಕ ವಿವಿ ಪ್ರಾಧ್ಯಾಪಕಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...