Homeಮುಖಪುಟಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್,...

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

- Advertisement -
- Advertisement -

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅರ್ನಬ್ ಗೋಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಯುವ ಕಾಂಗ್ರೆಸ್ ಘಟಕ ಕ್ರಿಮಿನಲ್ ಮೊಕದ್ದಮೆ ಹೂಡಿದೆ.

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವುದು) ಅಡಿಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಆರ್ನಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಟಿವಿಯಲ್ಲಿ ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಕಾಂಗ್ರೆಸ್‌ ಸೆಂಟರ್‌ ಅನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಚೇರಿ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಅದನ್ನು ಅಮಿತ್ ಮಾಳವೀಯ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಕೆಣಕುವ, ಅಶಾಂತಿಯನ್ನು ಪ್ರಚೋದಿಸುವ ಮತ್ತು ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸುವ ಈ ದುರುದ್ದೇಶಪೂರಿತ ಪ್ರಯತ್ನವು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ನಾವು ಮೌನವಾಗಿರುವುದಿಲ್ಲ, ನಮ್ಮ ಪಕ್ಷ ಅಥವಾ ಅದರ ನಾಯಕತ್ವದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುವ ಯಾವುದೇ ಪ್ರಯತ್ನಕ್ಕೆ ನಾವು ಶಕ್ತವಾದ ಕಾನೂನು ಮತ್ತು ರಾಜಕೀಯ ಪ್ರತಿಕ್ರಿಯೆಯನ್ನು ನೀಡುತ್ತೇವೆ. ಇದು ನಮ್ಮ ಸ್ಪಷ್ಟ ಸಂದೇಶ” ಎಂದು ಭಾರತೀಯ ಯುವ ಕಾಂಗ್ರೆಸ್‌ ಲೀಗಲ್ ಸೆಲ್ ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ.

ಮೇ 15ರಂದು ರಿಪಬ್ಲಿಕ್ ಟಿವಿಯಲ್ಲಿ ನಡೆದ ‘ಡಿಬೇಟ್ ವಿತ್ ಅರ್ನಬ್’ ಕಾರ್ಯಕ್ರಮದಲ್ಲಿ ಅರ್ನಬ್ ಗೋಸ್ವಾಮಿ ಅವರು ಇಸ್ತಾಂಬುಲ್ ಕಾಂಗ್ರೆಸ್ ಸೆಂಟರ್ ಕಟ್ಟಡದ ದೃಶ್ಯಗಳನ್ನು ತೋರಿಸಿದ್ದರು. ಆ ಕಟ್ಟಡ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದೆ ಎಂದು ಹೇಳಿದ್ದರು. ಕಾಂಗ್ರೆಸ್ ಭಾರತದ ಶತ್ರು ರಾಷ್ಟ್ರದಲ್ಲಿ ಕಚೇರಿ ತೆರೆಯುವ ಅಗತ್ಯ ಏನಿತ್ತು? ಎಂದು ಪ್ರಶ್ನಿಸಿದ್ದರು.

ತಮ್ಮ ಚರ್ಚೆಯಲ್ಲಿ, ಅರ್ನಬ್ ಕಾಂಗ್ರೆಸ್ ಪಕ್ಷವು ‘ಶತ್ರು ರಾಷ್ಟ್ರ ಟರ್ಕಿಯ ಪರವಾಗಿ ನಿಂತಿದೆ’ ಎಂದು ಆರೋಪಿಸಿದ್ದರು.

“ನಿಮ್ಮ ಪಕ್ಷ ಟರ್ಕಿಯಲ್ಲಿ ಯಾವ ರೀತಿಯ ವ್ಯವಹಾರವನ್ನು ಹೊಂದಿದೆ?” ಎಂದು ಕಾಂಗ್ರೆಸ್ ಅನ್ನು ಪ್ರಶ್ನಿಸಿದ್ದ ಅರ್ನಬ್, “ವೀಕ್ಷಕರೇ, ಕಾಂಗ್ರೆಸ್ ಪಕ್ಷವು ಟರ್ಕಿಯಲ್ಲಿ ನೋಂದಾಯಿತ ಕಚೇರಿಯನ್ನು ಹೊಂದಿದೆ ಎಂಬುವುದು ನಿಮಗೆ ಗೊತ್ತಿದೆಯಾ? 2019 ರಲ್ಲಿ ರಾಹುಲ್ ಗಾಂಧಿ ಅವರು ‘ಟರ್ಕಿಯಲ್ಲಿ ನಮಗೆ ದೊಡ್ಡ ಕಚೇರಿ ಇರಬೇಕು’ ಎಂದು ಹೇಳಿದ್ದರು” ಎಂದಿದ್ದರು.

ಟರ್ಕಿಯ ಇಸ್ತಾಂಬುಲ್‌ನಲ್ಲಿ ಕಾಂಗ್ರೆಸ್ ಪಕ್ಷದ ‘ಕಾರ್ಯಾಚರಣೆಗಳನ್ನು ಮುನ್ನಡೆಸಲು’ ಮೊಹಮ್ಮದ್ ಯೂಸುಫ್ ಖಾನ್ ಎಂಬ ವ್ಯಕ್ತಿಯನ್ನು ನೇಮಿಸಲಾಗಿದೆ ಎಂದು ಅವರು ಹೇಳಿದ್ದರು.

ವರದಿಗಳ ಪ್ರಕಾರ, ರಿಪಬ್ಲಿಕ್ ಟಿವಿಯ ಯೂಟ್ಯೂಬ್‌ನಲ್ಲಿ ಅಪ್ಲೋಡ್‌ ಮಾಡಿರುವ ವಿಡಿಯೋದಿಂದ ಆರ್ನಬ್ ಕಾಂಗ್ರೆಸ್ ಕಚೇರಿಯ ಕುರಿತು ಸುಳ್ಳು ಮಾಹಿತಿ ನೀಡಿದ ತುಣುಕನ್ನು ಪ್ರಸ್ತುತ ತೆಗೆದು ಹಾಕಲಾಗಿದೆ.

ಆರ್ನಬ್ ಚರ್ಚೆಯ ವಿಡಿಯೋ ತುಣುಕನ್ನು ಅಮಿತ್ ಮಾಳವೀಯ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವು ಟರ್ಕಿಯಲ್ಲಿ ನೋಂದಾಯಿತ ಕಚೇರಿಯನ್ನು ಹೊಂದಿದೆ ಎಂಬುವುದು ನಿಮಗೆ ಗೊತ್ತಿದೆಯಾ? ಇದರ ಅಗತ್ಯ ಏನೆಂದು ರಾಹುಲ್ ಗಾಂಧಿ ವಿವರಿಸಬಹುದೇ? ಇದು ವಿಲಕ್ಷಣ ಮತ್ತು ಬಹು ಹಂತಗಳಲ್ಲಿ ವಿವರಿಸಲಾಗದಂತಿದೆ. ಭಾರತವು ತಿಳಿದುಕೊಳ್ಳಲು ಅರ್ಹವಾಗಿದೆ. ನೆನಪಿಡಿ: ಶತ್ರುವಿನ ಮಿತ್ರ ಶತ್ರು ಎಂದು ಬರೆದುಕೊಂಡಿದ್ದರು.

ಮೇ 19 ರಂದು ನಡೆದ ಟಿವಿ ಚರ್ಚೆಯಲ್ಲೂ ಅರ್ನಬ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದರು. ಕಾಂಗ್ರೆಸ್ ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿಯನ್ನು ಹೊಂದಿದೆ ಎಂದು ಅವರು ಪುನರುಚ್ಚರಿಸಿದ್ದರು.

‘ಆಪರೇಶನ್‌ ಸಿಂಧೂರ’ ಕುರಿತು ಪೋಸ್ಟ್:‌ ಅಶೋಕ ವಿವಿ ಪ್ರಾಧ್ಯಾಪಕಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...