Homeಮುಖಪುಟಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್: ಸಿಎಂ ಸಿದ್ದರಾಮಯ್ಯಗೆ ಸ್ಥಾನ

ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್: ಸಿಎಂ ಸಿದ್ದರಾಮಯ್ಯಗೆ ಸ್ಥಾನ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಇದರ ಭಾಗವಾಗಿ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ.

ಅಧ್ಯಕ್ಷ, ಸಂಚಾಲಕ ಸೇರಿದಂತೆ ಒಟ್ಟು 16 ಜನರ ಸಮಿತಿಯನ್ನು ರಚಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆದೇಶಿಸಿದ್ದಾರೆ.

ರಾಜ್ಯಸಭಾ ಸಂಸದ ಪಿ ಚಿದಂಬರಂ ಅವರನ್ನು ಸಮಿತಿಯ ಅಧ್ಯಕ್ಷರಾಗಿ ನೇಮಿಸಲಾಗಿದೆ. ಸಮಿತಿಯ ಸಂಚಾಲಕ ಸ್ಥಾನವನ್ನು ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರಿಗೆ ನೀಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ 16 ಸದಸ್ಯರು ಸಮಿತಿಯಲ್ಲಿದ್ದಾರೆ.

ಸಮಿತಿ ಸದಸ್ಯರ ವಿವರ ಹೀಗಿದೆ..

ಪಿ. ಚಿದಂಬರಂ (ಅಧ್ಯಕ್ಷ), ಟಿಎಸ್ ಸಿಂಗ್ ದೇವ್ (ಸಂಚಾಲಕ) ಸದಸ್ಯರು– ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ವಾದ್ರಾ, ಆನಂದ್ ಶರ್ಮಾ, ಜೈರಾಮ್ ರಮೇಶ್, ಶಶಿ ತರೂರ್, ಗೈಕಂಗಂ, ಗೌರವ್ ಗೊಗೋಯ್, ಪ್ರವೀಣ್ ಚಕ್ರವರ್ತಿ, ಇಮ್ರಾನ್ ಪ್ರತಾಪ್‌ಗಿರಿ, ಕೆ. ರಾಜು, ಓಂಕಾರ್ ಸಿಂಗ್ ಮರ್ಕಂ, ರಂಜೀತ್ ರಂಜನ್, ಜಿಗ್ನೇಶ್ ಮೆವಾನಿ, ಗುರುದೀಪ್ ಸಪ್ಪಲ್.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಲೋಕಸಭಾ ಚುನಾವಣಾ ಕಾರ್ಯತಂತ್ರವನ್ನು ಚರ್ಚಿಸಲು ಮತ್ತು ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಭೆ ನಡೆಸಿದ ಬೆನ್ನಲ್ಲೇ ಪ್ರಣಾಳಿಕೆ ಸಮಿತಿ ರಚಿಸಲಾಗಿದೆ.

ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ ಕಾಂಗ್ರೆಸ್ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಇಂಡಿಯಾ ಒಕ್ಕೂಟದ ನೇತೃತ್ವದ ವಹಿಸಿರುವ ಕಾಂಗ್ರೆಸ್, ಈಗಾಗಲೇ ಒಕ್ಕೂಟದ ಸದಸ್ಯ ಪಕ್ಷಗಳ ಜೊತೆ ಮೂರ ಸುತ್ತಿನ ಸಭೆ ನಡೆಸಿದೆ. ಮಮತಾ ಬ್ಯಾನರ್ಜಿ ಸೇರಿದಂತೆ ಒಕ್ಕೂಟದ ಕೆಲ ಪ್ರಮುಖ ನಾಯಕರು ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡುವುದಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ಹೇಳಿವೆ. ಇದಕ್ಕೆ ಪುಷ್ಠಿ ನೀಡುವಂತೆ ನಿನ್ನೆ(ಡಿ.22) ರಾಹುಲ್ ಗಾಂಧಿ ನಿತೀಶ್ ಕುಮಾರ್ ಮತ್ತು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ.

ಮತ್ತೊಂದೆಡೆ ಉತ್ತರ ಪ್ರದೇಶದಲ್ಲಿ ‘ಯುಪಿ ಜೋಡೋ’ ಪಾದಯಾತ್ರೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಉತ್ತರ ಪ್ರದೇಶದ ಕೈ ನಾಯಕರು ಈ ಯಾತ್ರೆಯನ್ನು ಮುನ್ನಡೆಸಲಿದ್ದಾರೆ.

ಇದನ್ನೂ ಓದಿ : ಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...