Homeಕರ್ನಾಟಕಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

- Advertisement -
- Advertisement -

ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ದನಿ ‘ಅಕ್ಕಯ್‌ ಪದ್ಮಶಾಲಿ’ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್‌ ನಾಯಕರು ನೇಮಿಸಿದ್ದಾರೆ. ಈ ರೀತಿಯ ರಾಜಕೀಯ ಸ್ಥಾನವಮಾನವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿಯೂ ‘ಅಕ್ಕಯ್‌’ ಗುರುತಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಅಕ್ಕಯ್‌ ಪದ್ಮಶಾಲಿ ಅವರನ್ನು ‘ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಸಂಚಾಲಕರನ್ನಾಗಿ ನೇಮಿಸಿದ್ದರು. ಈಗ ಮತ್ತೊಂದು ಗುರುತರ ಜವಾಬ್ದಾರಿಯನ್ನು ಅಕ್ಕಯ್‌ ಅವರಿಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅಕ್ಕಯ್‌ ಅವರು, ತಮ್ಮ ಮುಂದಿನ ಗುರಿ ಹಾಗೂ ಉದ್ದೇಶಗಳನ್ನು ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಲಿಂಗತ್ವ ಅಲ್ಪಸಂಖ್ಯಾತಳು. ಸಾಮಾಜಿಕ, ರಾಜಕೀಯ ಹಕ್ಕುಗಳ ಹೋರಾಟಗಾರ್ತಿಯಾಗಿ ಹಲವು ಸವಾಲುಗಳು ನನ್ನ ಮುಂದಿವೆ. ಇಂದು ಜಾತಿ, ಧರ್ಮ, ವರ್ಗ, ಜನಾಂಗೀಯ ಆಧಾರದಲ್ಲಿ, ತಿನ್ನುವ ಆಹಾರದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕಲಾಗುತ್ತಿದೆ. ಈ ಅಸಹಿಷ್ಣುತೆಯ ಕಾಲದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಸಮಾಜದ ಎಲ್ಲ ಶೋಷಿತರ ಪರ ಹೋರಾಟ ಮುಂದುವರಿಸುತ್ತೇನೆ” ಎಂದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಅಕ್ಕಯ್ ಪದ್ಮಶಾಲಿಯವರು ಮಾತನಾಡುತ್ತಿರುವುದು.

“ಇತರ ಪಕ್ಷಗಳಿಗಿಂತ ಮೊದಲಿಗೆ ಕಾಂಗ್ರೆಸ್, ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಾದಗಳು” ಎಂದ ಅವರು, “ಶೋಷಿತರಲ್ಲೇ ಶೋಷಿತರಾದ ನಮ್ಮನ್ನು ಕಂಡರೆ ಸಮಾಜದಲ್ಲಿ ತಾತ್ಸಾರದ ಮನೋಭಾವ ಇದೆ, ಮಹಿಳಾ ವಿರೋಧಿ ನೀತಿಗಳು ದೇಶದಲ್ಲಿವೆ. ಅದರ ವಿರುದ್ಧ ಹೋರಾಟಬೇಕಿದೆ” ಎಂದು ತಿಳಿಸಿದರು.

“ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಸ್ಥಾನಮಾನ ಅನುಷ್ಠಾನವಾಗಿಲ್ಲ. ಆದರೆ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಡಿ.ಕೆ.ಶಿವಕುಮಾರ್‌ ಅವರು ‘ನಾ ನಾಯಕಿ’ ಕಾರ್ಯಕ್ರಮ ಆರಂಭಿಸಿದರು. ಅವರ ಕನಸು ನನಸು ಮಾಡುವತ್ತ ಗಮನ ಹರಿಸಿದ್ದೇನೆ. ‘ನಾ ನಾಯಕಿ’ ಕಾರ್ಯಕ್ರಮಕ್ಕೆ ರಾಜ್ಯ ಸಂಯೋಜಕಿಯನ್ನಾಗಿ ನೇಮಿಸಲಾಗಿತ್ತು. ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರೂ ಸಮಾನರೆಂಬ ಸಿದ್ಧಾಂತ ಕಾಂಗ್ರೆಸ್‌ನದ್ದು. ಇದಕ್ಕೆ ನಾನು ಆಭಾರಿಯಾಗಿದ್ದೇನೆ” ಎಂದು ಹೇಳಿದರು.

“ದೇಶದಲ್ಲಿ ಅಸಹಿಷ್ಣುತೆ ಇದೆ. ಮಹಿಳೆಯ ಹಿಜಾಬ್‌, ರೈತ ವಿರೋಧಿ ಕಾಯ್ದೆಗಳು, ಹೆಣ್ಣುಮಕ್ಕಳ ಶಿಕ್ಷಣ, ಮದುವೆ, ಮಕ್ಕಳ ಸಾಗಾಣಿಕೆ, ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದನಿ ಎತ್ತಬೇಕಿದೆ. ಪಕ್ಷದ ಮೂಲಕ ಏನೆಲ್ಲ ಬದಲಾವಣೆ ತರಲು ಸಾಧ್ಯವಾಗುತ್ತದೆಯೋ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎನ್ನುತ್ತಾರೆ ಅಕ್ಕಯ್‌.

“ನಮ್ಮಂಥ ಅಲ್ಪಸಂಖ್ಯಾತರಲ್ಲೇ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆಡೆ ಜಾಗವಿಲ್ಲ. ರಾಜಕೀಯಕ್ಕಾಗಿ ಈ ಮಾತು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಸಮುದಾಯಕ್ಕೆ ನೀಡಿದ ಬೆಂಬಲವನ್ನು ಅನುಭವಿಸಿ ಹೇಳುತ್ತಿದ್ದಾರೆ. ನಮ್ಮ ಸಮುದಾಯದ ರಾಜಕೀಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಆದರೆ ನಮಗೂ ರಾಜಕೀಯ ಸ್ಥಾನವಿದೆ ಎಂದು ತೋರಿಸಿಕೊಟ್ಟವರು ಡಿ.ಕೆ.ಶಿವಕುಮಾರ್‌. ಹೀಗಾಗಿ ಯುವಕರು, ಮಹಿಳೆಯರು, ಮಕ್ಕಳು, ದಲಿತರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಲೈಂಗಿಕ ಕಾರ್ಮಿಕರು- ಎಲ್ಲರನ್ನೂ ಒಟ್ಟಿಗೆ ತರುವ ಕೆಲಸ ಮಾಡುತ್ತೇನೆ” ಎಂದು ತಮ್ಮ ಗುರಿಯನ್ನು ಹಂಚಿಕೊಂಡರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಕ್ಕಯ್ ಪದ್ಮಶಾಲಿ ಹಾಗೂ ಇತರ ಕಾಂಗ್ರೆಸ್ ಮುಖಂಡರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷ ಮೊದಲಿನಿಂದಲೂ ನೀಡಿರುವ ಆದ್ಯತೆಯನ್ನು ಸ್ಮರಿಸಿದ ಅವರು, “ಇಂದಿರಾ ಗಾಂಧಿಯಮ್ಮನ ಫೋಟೋವನ್ನು ಸಮುದಾಯದ ಪ್ರತಿ ಮನೆಯಲ್ಲೂ ಕಾಣಬಹುದು” ಎಂದರು.

“ಇಂದಿರಾ ಗಾಂಧಿಯವರು ಮನೆ ಇಲ್ಲದವರಿಗೆ ಮನೆ ಕೊಟ್ಟರು. ಟ್ರೈನ್‌ನಲ್ಲಿ ಉಚಿತವಾಗಿ ಓಡಾಡುವ ಅವಕಾಶ ನೀಡಿದರು. ಇಂದಿರಾ ಗಾಂಧಿಯಮ್ಮನನ್ನು ಲೈಂಗಿಕ ಅಲ್ಪಸಂಖ್ಯಾತರು ಸದಾ ನೆನೆಯುತ್ತಾರೆ” ಎಂದು ತಮ್ಮ ಹೋರಾಟದ ಬದುಕನ್ನು ಮೆಲುಕು ಹಾಕಿದರು.

ಇದನ್ನೂ ಓದಿರಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

“ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 377 ನಮ್ಮನ್ನು ಅಪರಾಧೀಕರಣಗೊಳಿಸಿತ್ತು. ಈ ಸಮುದಾಯದ ಪರವಾಗಿ ನಿಲ್ಲುವ ನಿರ್ಧಾರವನ್ನು 2005ನೇ ಇಸವಿಯಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿತು. 2009ನೇ ಇಸವಿಯಲ್ಲಿ ದೆಹಲಿ ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದಾಗ ಕಾಂಗ್ರೆಸ್ ಪಕ್ಷ ನೇರವಾಗಿ ನಮ್ಮ ಸಮುದಾಯಕ್ಕೆ ಸಹಕಾರ ನೀಡಿತು. ಬೇರೆ ಯಾವುದೇ ಪಕ್ಷ ನಮ್ಮೊಂದಿಗೆ ಬಂದು ನಿಲ್ಲಲಿಲ್ಲ. ಸ್ವಲ್ಪ ಸಮಯದ ನಂತರ ಸಿಪಿಐ, ಸಿಪಿಎಂ ಹಾಗೂ ಜೆಡಿಎಸ್‌ ಬೆಂಬಲ ನೀಡಿದವು. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಸಹಾಯವನ್ನು ನೆನೆಯುತ್ತೇನೆ. ಸದಾ ನಮ್ಮೊಂದಿಗಿದ್ದ ಪಕ್ಷ, ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನು ನೀಡಿರುವುದು ಮಹತ್ತರ ಬೆಳವಣಿಗೆ” ಎಂದು ಅಭಿಪ್ರಾಯಪಡುತ್ತಾರೆ ಅಕ್ಕಯ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...