Homeಕರ್ನಾಟಕಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

- Advertisement -
- Advertisement -

ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ದನಿ ‘ಅಕ್ಕಯ್‌ ಪದ್ಮಶಾಲಿ’ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್‌ ನಾಯಕರು ನೇಮಿಸಿದ್ದಾರೆ. ಈ ರೀತಿಯ ರಾಜಕೀಯ ಸ್ಥಾನವಮಾನವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿಯೂ ‘ಅಕ್ಕಯ್‌’ ಗುರುತಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಅಕ್ಕಯ್‌ ಪದ್ಮಶಾಲಿ ಅವರನ್ನು ‘ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಸಂಚಾಲಕರನ್ನಾಗಿ ನೇಮಿಸಿದ್ದರು. ಈಗ ಮತ್ತೊಂದು ಗುರುತರ ಜವಾಬ್ದಾರಿಯನ್ನು ಅಕ್ಕಯ್‌ ಅವರಿಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅಕ್ಕಯ್‌ ಅವರು, ತಮ್ಮ ಮುಂದಿನ ಗುರಿ ಹಾಗೂ ಉದ್ದೇಶಗಳನ್ನು ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಲಿಂಗತ್ವ ಅಲ್ಪಸಂಖ್ಯಾತಳು. ಸಾಮಾಜಿಕ, ರಾಜಕೀಯ ಹಕ್ಕುಗಳ ಹೋರಾಟಗಾರ್ತಿಯಾಗಿ ಹಲವು ಸವಾಲುಗಳು ನನ್ನ ಮುಂದಿವೆ. ಇಂದು ಜಾತಿ, ಧರ್ಮ, ವರ್ಗ, ಜನಾಂಗೀಯ ಆಧಾರದಲ್ಲಿ, ತಿನ್ನುವ ಆಹಾರದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕಲಾಗುತ್ತಿದೆ. ಈ ಅಸಹಿಷ್ಣುತೆಯ ಕಾಲದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಸಮಾಜದ ಎಲ್ಲ ಶೋಷಿತರ ಪರ ಹೋರಾಟ ಮುಂದುವರಿಸುತ್ತೇನೆ” ಎಂದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಅಕ್ಕಯ್ ಪದ್ಮಶಾಲಿಯವರು ಮಾತನಾಡುತ್ತಿರುವುದು.

“ಇತರ ಪಕ್ಷಗಳಿಗಿಂತ ಮೊದಲಿಗೆ ಕಾಂಗ್ರೆಸ್, ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಾದಗಳು” ಎಂದ ಅವರು, “ಶೋಷಿತರಲ್ಲೇ ಶೋಷಿತರಾದ ನಮ್ಮನ್ನು ಕಂಡರೆ ಸಮಾಜದಲ್ಲಿ ತಾತ್ಸಾರದ ಮನೋಭಾವ ಇದೆ, ಮಹಿಳಾ ವಿರೋಧಿ ನೀತಿಗಳು ದೇಶದಲ್ಲಿವೆ. ಅದರ ವಿರುದ್ಧ ಹೋರಾಟಬೇಕಿದೆ” ಎಂದು ತಿಳಿಸಿದರು.

“ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಸ್ಥಾನಮಾನ ಅನುಷ್ಠಾನವಾಗಿಲ್ಲ. ಆದರೆ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಡಿ.ಕೆ.ಶಿವಕುಮಾರ್‌ ಅವರು ‘ನಾ ನಾಯಕಿ’ ಕಾರ್ಯಕ್ರಮ ಆರಂಭಿಸಿದರು. ಅವರ ಕನಸು ನನಸು ಮಾಡುವತ್ತ ಗಮನ ಹರಿಸಿದ್ದೇನೆ. ‘ನಾ ನಾಯಕಿ’ ಕಾರ್ಯಕ್ರಮಕ್ಕೆ ರಾಜ್ಯ ಸಂಯೋಜಕಿಯನ್ನಾಗಿ ನೇಮಿಸಲಾಗಿತ್ತು. ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರೂ ಸಮಾನರೆಂಬ ಸಿದ್ಧಾಂತ ಕಾಂಗ್ರೆಸ್‌ನದ್ದು. ಇದಕ್ಕೆ ನಾನು ಆಭಾರಿಯಾಗಿದ್ದೇನೆ” ಎಂದು ಹೇಳಿದರು.

“ದೇಶದಲ್ಲಿ ಅಸಹಿಷ್ಣುತೆ ಇದೆ. ಮಹಿಳೆಯ ಹಿಜಾಬ್‌, ರೈತ ವಿರೋಧಿ ಕಾಯ್ದೆಗಳು, ಹೆಣ್ಣುಮಕ್ಕಳ ಶಿಕ್ಷಣ, ಮದುವೆ, ಮಕ್ಕಳ ಸಾಗಾಣಿಕೆ, ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದನಿ ಎತ್ತಬೇಕಿದೆ. ಪಕ್ಷದ ಮೂಲಕ ಏನೆಲ್ಲ ಬದಲಾವಣೆ ತರಲು ಸಾಧ್ಯವಾಗುತ್ತದೆಯೋ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎನ್ನುತ್ತಾರೆ ಅಕ್ಕಯ್‌.

“ನಮ್ಮಂಥ ಅಲ್ಪಸಂಖ್ಯಾತರಲ್ಲೇ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆಡೆ ಜಾಗವಿಲ್ಲ. ರಾಜಕೀಯಕ್ಕಾಗಿ ಈ ಮಾತು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಸಮುದಾಯಕ್ಕೆ ನೀಡಿದ ಬೆಂಬಲವನ್ನು ಅನುಭವಿಸಿ ಹೇಳುತ್ತಿದ್ದಾರೆ. ನಮ್ಮ ಸಮುದಾಯದ ರಾಜಕೀಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಆದರೆ ನಮಗೂ ರಾಜಕೀಯ ಸ್ಥಾನವಿದೆ ಎಂದು ತೋರಿಸಿಕೊಟ್ಟವರು ಡಿ.ಕೆ.ಶಿವಕುಮಾರ್‌. ಹೀಗಾಗಿ ಯುವಕರು, ಮಹಿಳೆಯರು, ಮಕ್ಕಳು, ದಲಿತರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಲೈಂಗಿಕ ಕಾರ್ಮಿಕರು- ಎಲ್ಲರನ್ನೂ ಒಟ್ಟಿಗೆ ತರುವ ಕೆಲಸ ಮಾಡುತ್ತೇನೆ” ಎಂದು ತಮ್ಮ ಗುರಿಯನ್ನು ಹಂಚಿಕೊಂಡರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಕ್ಕಯ್ ಪದ್ಮಶಾಲಿ ಹಾಗೂ ಇತರ ಕಾಂಗ್ರೆಸ್ ಮುಖಂಡರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷ ಮೊದಲಿನಿಂದಲೂ ನೀಡಿರುವ ಆದ್ಯತೆಯನ್ನು ಸ್ಮರಿಸಿದ ಅವರು, “ಇಂದಿರಾ ಗಾಂಧಿಯಮ್ಮನ ಫೋಟೋವನ್ನು ಸಮುದಾಯದ ಪ್ರತಿ ಮನೆಯಲ್ಲೂ ಕಾಣಬಹುದು” ಎಂದರು.

“ಇಂದಿರಾ ಗಾಂಧಿಯವರು ಮನೆ ಇಲ್ಲದವರಿಗೆ ಮನೆ ಕೊಟ್ಟರು. ಟ್ರೈನ್‌ನಲ್ಲಿ ಉಚಿತವಾಗಿ ಓಡಾಡುವ ಅವಕಾಶ ನೀಡಿದರು. ಇಂದಿರಾ ಗಾಂಧಿಯಮ್ಮನನ್ನು ಲೈಂಗಿಕ ಅಲ್ಪಸಂಖ್ಯಾತರು ಸದಾ ನೆನೆಯುತ್ತಾರೆ” ಎಂದು ತಮ್ಮ ಹೋರಾಟದ ಬದುಕನ್ನು ಮೆಲುಕು ಹಾಕಿದರು.

ಇದನ್ನೂ ಓದಿರಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

“ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 377 ನಮ್ಮನ್ನು ಅಪರಾಧೀಕರಣಗೊಳಿಸಿತ್ತು. ಈ ಸಮುದಾಯದ ಪರವಾಗಿ ನಿಲ್ಲುವ ನಿರ್ಧಾರವನ್ನು 2005ನೇ ಇಸವಿಯಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿತು. 2009ನೇ ಇಸವಿಯಲ್ಲಿ ದೆಹಲಿ ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದಾಗ ಕಾಂಗ್ರೆಸ್ ಪಕ್ಷ ನೇರವಾಗಿ ನಮ್ಮ ಸಮುದಾಯಕ್ಕೆ ಸಹಕಾರ ನೀಡಿತು. ಬೇರೆ ಯಾವುದೇ ಪಕ್ಷ ನಮ್ಮೊಂದಿಗೆ ಬಂದು ನಿಲ್ಲಲಿಲ್ಲ. ಸ್ವಲ್ಪ ಸಮಯದ ನಂತರ ಸಿಪಿಐ, ಸಿಪಿಎಂ ಹಾಗೂ ಜೆಡಿಎಸ್‌ ಬೆಂಬಲ ನೀಡಿದವು. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಸಹಾಯವನ್ನು ನೆನೆಯುತ್ತೇನೆ. ಸದಾ ನಮ್ಮೊಂದಿಗಿದ್ದ ಪಕ್ಷ, ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನು ನೀಡಿರುವುದು ಮಹತ್ತರ ಬೆಳವಣಿಗೆ” ಎಂದು ಅಭಿಪ್ರಾಯಪಡುತ್ತಾರೆ ಅಕ್ಕಯ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...