Homeಕರ್ನಾಟಕಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

- Advertisement -
- Advertisement -

ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ದನಿ ‘ಅಕ್ಕಯ್‌ ಪದ್ಮಶಾಲಿ’ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್‌ ನಾಯಕರು ನೇಮಿಸಿದ್ದಾರೆ. ಈ ರೀತಿಯ ರಾಜಕೀಯ ಸ್ಥಾನವಮಾನವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿಯೂ ‘ಅಕ್ಕಯ್‌’ ಗುರುತಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಅಕ್ಕಯ್‌ ಪದ್ಮಶಾಲಿ ಅವರನ್ನು ‘ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಸಂಚಾಲಕರನ್ನಾಗಿ ನೇಮಿಸಿದ್ದರು. ಈಗ ಮತ್ತೊಂದು ಗುರುತರ ಜವಾಬ್ದಾರಿಯನ್ನು ಅಕ್ಕಯ್‌ ಅವರಿಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅಕ್ಕಯ್‌ ಅವರು, ತಮ್ಮ ಮುಂದಿನ ಗುರಿ ಹಾಗೂ ಉದ್ದೇಶಗಳನ್ನು ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಲಿಂಗತ್ವ ಅಲ್ಪಸಂಖ್ಯಾತಳು. ಸಾಮಾಜಿಕ, ರಾಜಕೀಯ ಹಕ್ಕುಗಳ ಹೋರಾಟಗಾರ್ತಿಯಾಗಿ ಹಲವು ಸವಾಲುಗಳು ನನ್ನ ಮುಂದಿವೆ. ಇಂದು ಜಾತಿ, ಧರ್ಮ, ವರ್ಗ, ಜನಾಂಗೀಯ ಆಧಾರದಲ್ಲಿ, ತಿನ್ನುವ ಆಹಾರದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕಲಾಗುತ್ತಿದೆ. ಈ ಅಸಹಿಷ್ಣುತೆಯ ಕಾಲದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಸಮಾಜದ ಎಲ್ಲ ಶೋಷಿತರ ಪರ ಹೋರಾಟ ಮುಂದುವರಿಸುತ್ತೇನೆ” ಎಂದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಅಕ್ಕಯ್ ಪದ್ಮಶಾಲಿಯವರು ಮಾತನಾಡುತ್ತಿರುವುದು.

“ಇತರ ಪಕ್ಷಗಳಿಗಿಂತ ಮೊದಲಿಗೆ ಕಾಂಗ್ರೆಸ್, ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಾದಗಳು” ಎಂದ ಅವರು, “ಶೋಷಿತರಲ್ಲೇ ಶೋಷಿತರಾದ ನಮ್ಮನ್ನು ಕಂಡರೆ ಸಮಾಜದಲ್ಲಿ ತಾತ್ಸಾರದ ಮನೋಭಾವ ಇದೆ, ಮಹಿಳಾ ವಿರೋಧಿ ನೀತಿಗಳು ದೇಶದಲ್ಲಿವೆ. ಅದರ ವಿರುದ್ಧ ಹೋರಾಟಬೇಕಿದೆ” ಎಂದು ತಿಳಿಸಿದರು.

“ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಸ್ಥಾನಮಾನ ಅನುಷ್ಠಾನವಾಗಿಲ್ಲ. ಆದರೆ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಡಿ.ಕೆ.ಶಿವಕುಮಾರ್‌ ಅವರು ‘ನಾ ನಾಯಕಿ’ ಕಾರ್ಯಕ್ರಮ ಆರಂಭಿಸಿದರು. ಅವರ ಕನಸು ನನಸು ಮಾಡುವತ್ತ ಗಮನ ಹರಿಸಿದ್ದೇನೆ. ‘ನಾ ನಾಯಕಿ’ ಕಾರ್ಯಕ್ರಮಕ್ಕೆ ರಾಜ್ಯ ಸಂಯೋಜಕಿಯನ್ನಾಗಿ ನೇಮಿಸಲಾಗಿತ್ತು. ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರೂ ಸಮಾನರೆಂಬ ಸಿದ್ಧಾಂತ ಕಾಂಗ್ರೆಸ್‌ನದ್ದು. ಇದಕ್ಕೆ ನಾನು ಆಭಾರಿಯಾಗಿದ್ದೇನೆ” ಎಂದು ಹೇಳಿದರು.

“ದೇಶದಲ್ಲಿ ಅಸಹಿಷ್ಣುತೆ ಇದೆ. ಮಹಿಳೆಯ ಹಿಜಾಬ್‌, ರೈತ ವಿರೋಧಿ ಕಾಯ್ದೆಗಳು, ಹೆಣ್ಣುಮಕ್ಕಳ ಶಿಕ್ಷಣ, ಮದುವೆ, ಮಕ್ಕಳ ಸಾಗಾಣಿಕೆ, ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದನಿ ಎತ್ತಬೇಕಿದೆ. ಪಕ್ಷದ ಮೂಲಕ ಏನೆಲ್ಲ ಬದಲಾವಣೆ ತರಲು ಸಾಧ್ಯವಾಗುತ್ತದೆಯೋ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎನ್ನುತ್ತಾರೆ ಅಕ್ಕಯ್‌.

“ನಮ್ಮಂಥ ಅಲ್ಪಸಂಖ್ಯಾತರಲ್ಲೇ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆಡೆ ಜಾಗವಿಲ್ಲ. ರಾಜಕೀಯಕ್ಕಾಗಿ ಈ ಮಾತು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಸಮುದಾಯಕ್ಕೆ ನೀಡಿದ ಬೆಂಬಲವನ್ನು ಅನುಭವಿಸಿ ಹೇಳುತ್ತಿದ್ದಾರೆ. ನಮ್ಮ ಸಮುದಾಯದ ರಾಜಕೀಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಆದರೆ ನಮಗೂ ರಾಜಕೀಯ ಸ್ಥಾನವಿದೆ ಎಂದು ತೋರಿಸಿಕೊಟ್ಟವರು ಡಿ.ಕೆ.ಶಿವಕುಮಾರ್‌. ಹೀಗಾಗಿ ಯುವಕರು, ಮಹಿಳೆಯರು, ಮಕ್ಕಳು, ದಲಿತರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಲೈಂಗಿಕ ಕಾರ್ಮಿಕರು- ಎಲ್ಲರನ್ನೂ ಒಟ್ಟಿಗೆ ತರುವ ಕೆಲಸ ಮಾಡುತ್ತೇನೆ” ಎಂದು ತಮ್ಮ ಗುರಿಯನ್ನು ಹಂಚಿಕೊಂಡರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಕ್ಕಯ್ ಪದ್ಮಶಾಲಿ ಹಾಗೂ ಇತರ ಕಾಂಗ್ರೆಸ್ ಮುಖಂಡರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷ ಮೊದಲಿನಿಂದಲೂ ನೀಡಿರುವ ಆದ್ಯತೆಯನ್ನು ಸ್ಮರಿಸಿದ ಅವರು, “ಇಂದಿರಾ ಗಾಂಧಿಯಮ್ಮನ ಫೋಟೋವನ್ನು ಸಮುದಾಯದ ಪ್ರತಿ ಮನೆಯಲ್ಲೂ ಕಾಣಬಹುದು” ಎಂದರು.

“ಇಂದಿರಾ ಗಾಂಧಿಯವರು ಮನೆ ಇಲ್ಲದವರಿಗೆ ಮನೆ ಕೊಟ್ಟರು. ಟ್ರೈನ್‌ನಲ್ಲಿ ಉಚಿತವಾಗಿ ಓಡಾಡುವ ಅವಕಾಶ ನೀಡಿದರು. ಇಂದಿರಾ ಗಾಂಧಿಯಮ್ಮನನ್ನು ಲೈಂಗಿಕ ಅಲ್ಪಸಂಖ್ಯಾತರು ಸದಾ ನೆನೆಯುತ್ತಾರೆ” ಎಂದು ತಮ್ಮ ಹೋರಾಟದ ಬದುಕನ್ನು ಮೆಲುಕು ಹಾಕಿದರು.

ಇದನ್ನೂ ಓದಿರಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

“ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 377 ನಮ್ಮನ್ನು ಅಪರಾಧೀಕರಣಗೊಳಿಸಿತ್ತು. ಈ ಸಮುದಾಯದ ಪರವಾಗಿ ನಿಲ್ಲುವ ನಿರ್ಧಾರವನ್ನು 2005ನೇ ಇಸವಿಯಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿತು. 2009ನೇ ಇಸವಿಯಲ್ಲಿ ದೆಹಲಿ ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದಾಗ ಕಾಂಗ್ರೆಸ್ ಪಕ್ಷ ನೇರವಾಗಿ ನಮ್ಮ ಸಮುದಾಯಕ್ಕೆ ಸಹಕಾರ ನೀಡಿತು. ಬೇರೆ ಯಾವುದೇ ಪಕ್ಷ ನಮ್ಮೊಂದಿಗೆ ಬಂದು ನಿಲ್ಲಲಿಲ್ಲ. ಸ್ವಲ್ಪ ಸಮಯದ ನಂತರ ಸಿಪಿಐ, ಸಿಪಿಎಂ ಹಾಗೂ ಜೆಡಿಎಸ್‌ ಬೆಂಬಲ ನೀಡಿದವು. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಸಹಾಯವನ್ನು ನೆನೆಯುತ್ತೇನೆ. ಸದಾ ನಮ್ಮೊಂದಿಗಿದ್ದ ಪಕ್ಷ, ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನು ನೀಡಿರುವುದು ಮಹತ್ತರ ಬೆಳವಣಿಗೆ” ಎಂದು ಅಭಿಪ್ರಾಯಪಡುತ್ತಾರೆ ಅಕ್ಕಯ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...