Homeಕರ್ನಾಟಕಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

ಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

- Advertisement -
- Advertisement -

ವಿಪಕ್ಷದಲ್ಲಿದ್ದಾಗ ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ಕಾಯ್ದೆ, ಭೂ ಸುದಾರಣೆ ಕಾಯ್ದೆ, ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12ಕ್ಕೆ ಏರಿಸುವುದರ ವಿರುದ್ಧ ಮಾತಾನಾಡಿದ್ದ ಕಾಂಗ್ರೆಸ್, ಅಧಿಕಾರ ಹಿಡಿದು ಅದನ್ನೇ ಮುಂದುವರಿಸಿದೆ ಎಂದು ‘ಎದ್ದೇಳು ಕರ್ನಾಟಕ’ದ ಕೇಂದ್ರ ಸಮಿತಿ ಸದಸ್ಯ, ರೈತ ಮುಖಂಡ ವೀರ ಸಂಗಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು. ಎದ್ದೇಳು ಕರ್ನಾಟಕ ಸಂಘಟನೆಯು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಅಧಿಕಾರ ಹಿಡಿದು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರ ಸಂಗಯ್ಯ ಅವರು, “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಅದಕ್ಕಿಂತಲೂ ಮುಂಚೆ ಬಿಜೆಪಿಯಿಂದ ರೋಸಿ ಹೋಗಿದ್ದ ರೈತ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನರು ಹೋರಾಟ ನಡೆಸಿ ಬಿಜೆಪಿಯನ್ನು ಸೋಲಿಸಿದರು. ಅದಾಗ್ಯೂ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಕೋಮುಗಲಭೆ ನಡೆದಿದೆ. ಅದರ ಬಗ್ಗೆ ಅವರು ಸರಿಯಾದ ನಿಲುವು ತೆಗೆದುಕೊಂಡಿಲ್ಲ. ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಬೀದಿಯಲ್ಲಿ ಚಳವಳಿಗಳ ಮೂಲಕ ಎದುರಿಸಲಿದ್ದೇವೆ” ಎಂದು ಹೇಳಿದರು.

ಹೋರಾಟಗಾರ ಕೆ.ಎಲ್. ಅಶೋಕ್ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾಗ ಅದನ್ನು ಅವಲೋಕನ ಸಮಾವೇಶ ಮಾಡಿ ಎಂದಿದ್ದೆವು. ಇದೇ ರೀತಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ನೀವು ಮನೆಗೆ ಹೋಗುತ್ತೀರಿ” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಎರಡು ವರ್ಷಗಳಾದರೂ ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ನೀತಿಗಳನ್ನು ಯಾಕೆ ವಾಪಾಸು ತೆಗೆದುಕೊಂಡಿಲ್ಲ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ವಿರುದ್ಧವಾಗಿ ಬಂದ ನೀವು ಕೂಡಾ ಭ್ರಷ್ಟಾಚಾರ ಮುಂದುವರೆಸಿದ್ದೀರಿ. ಹಾಗಾಗದರೆ ಅವರಿಗೂ, ನಿಮಗೂ ವ್ಯಾತ್ಯಾಸ ಏನಿದೆ. ಬಿಜೆಪಿಯದೆ ನೀತಿಯನ್ನು ನೀವು ಅನುಸರಿಸುತ್ತಿದ್ದೀರಿ. ಜನ ವಿರೋಧಿ ಕಾಯ್ದೆಯನ್ನು ಬಡವರ ಸಮಾಧಿ ಮೇಲೆ ಜಾರಿಗೆ ತರುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರದ ವಿರುದ್ಧ ನಾವು ಈ ಹಿಂದೆ ಕೂಡಾ ಮಾಡಿದ್ದೇವೆ.‌ಕರ್ನಾಟಕದ ಅರ್ಧ ಜನರು ಭೂಮಿ ಮತ್ತು ವಸತಿ ಹೀನರಾಗಿದ್ದಾರೆ. ಸರ್ಕಾರದ ಕಣ್ಣು ಕುರುಡಾಗಿದ್ದು ಕಿವಿ ಕೇಳಿಸುತ್ತಿಲ್ಲ. ನೀವು ಇದೇ ರೀತಿ ಮುಂದುವರೆದರೆ ಘನಘೋರ ಪರಿಸ್ಥಿತಿಗೆ ತಲುಪಲಿದ್ದೀರಿ. ಎರಡ ವರ್ಷ ಕಾದರೂ ಏನೂ ಆಗದ ಕಾರಣಕ್ಕೆ ಸರ್ಕಾರದ ವಿರುದ್ಧ ಸಂಗ್ರಾಮಕ್ಕೆ ಮುಂದಾಗಿದ್ದೇವೆ. ಇದಕ್ಕೂ ಕೇಳಿಲ್ಲ ಎಂದರೆ ಜನ ಚಳವಳಿಗಳು ಮತ್ತಷ್ಟು ಜಾಸ್ತಿಯಾಗುತ್ತದೆ” ಎಂದು ಅಶೋಕ್ ಹೇಳಿದರು.

ಮಾಜಿ ಸಚಿವರಾದ ಬಿಟಿ ಲಲಿತಾ ನಾಯಕ್ ಮಾತನಾಡಿ, “ರಾಜ್ಯದಲ್ಲಿ ಶ್ರೀಮಂತರನ್ನು ಬಿಟ್ಟು ಎಲ್ಲರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪರದಾಡುವಂತಾಗಿದೆ. ಗ್ಯಾರೆಂಟಿ ಯೋಜನೆ ರೀತಿಯ ಐದಾರು ಅಂಶಗಳನ್ನು ತಂದ ಮಾತ್ರಕ್ಕೆ, ಅದನ್ನೆ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಬೇಕೆ? ಬೆಂಗಳೂರಿನಲ್ಲಿ ಮಳೆ ಬಂದು ಜನರು ಸಂಕಷ್ಟದಲ್ಲಿದ್ದಾಗ ಈ ಹಿಂದೆಯೂ ನೀರು ತುಂಬಿಕೊಳ್ಳುತ್ತಿತ್ತು, ಗುಂಡಿ ಇತ್ತು ಎಂದು ಹೇಳುವುದಾದರೆ ನೀವು ಯಾಕೆ ಅಧಿಕಾರಕ್ಕೆ ಬರಬೇಕಿತ್ತು? ಬಿಜೆಪಿ ಇದ್ದರೆ ಸಾಕಿತ್ತಲ್ಲವೆ” ಎಂದು ಪ್ರಶ್ನಿಸಿದರು.

“ಈ ರೀತಿಯಾಗಿ ಮಾತನಾಡಲು ನೀವು ಯಾಕೆ ಬೇಕು? ಬಿಜೆಪಿ ಕೂಡಾ ಅದನ್ನೇ ಮಾಡಿಕೊಂಡು ಬಂದಿದೆ. ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಾಗಿದೆ. ಕೋಮುಗಲಭೆ ಹೆಚ್ಚಾಗಿದೆ. ನಿಮ್ಮ ಪರವಾಗಿ ಕೆಲಸ ಮಾಡಿದ ಸಂಘಟನೆಗಳಿಗೆ ನಿಮ್ಮನ್ನು ಸರಿ ಮಾಡಬೇಕಾದ ತುರ್ತಿದೆ. ಯಾವ ವಂಚನೆ ಇಲ್ಲದೆ ಜನರ ಪರವಾಗಿ ಕೆಲಸ ಮಾಡಿ ಎಂದು ಹೇಳುತ್ತಿದ್ದೇವೆ” ಎಂದು ಹೇಳಿದರು.

ದಲಿತ ಹಕ್ಕುಗಳ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, “ಬಿಜೆಪಿ ಸೋಲಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆ ಅಡಿಯಲ್ಲಿ ಚುನಾವಣೆ ವೇಳೆ ದಸಂಸ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ನಿರಾಸೆ ಕಾಂಗ್ರೆಸ್ ಮೂಡಿಸಿದೆ. ಮಂಗಳೂರಿನಲ್ಲಿ ಇಡೀ ಸಮುದಾಯಯವನ್ನೆ ಕೋಮುವಾದಿಕರಣ ಮಾಡಲಾಗುತ್ತಿದೆ. ಕೋಮು ಘಟನೆಗಳು ನಡೆಯುವಲ್ಲಿ ದಕ್ಷ ಅಧಿಕಾರಿಗಳನ್ನು ನೇಮಿಸಬೇಕಿದೆ.” ಎಂದು ಹೇಳಿದರು.

“ಭ್ರಷ್ಟಾಚಾರ ಬಗ್ಗೆ ಸಂಬಂಧಪಟ್ಟ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಏನೂ ಮಾತನಾಡುತ್ತಿರಲಿಲ್ಲ. ಅವರು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಸಂಶಯ ಕಾಡುತ್ತಿದೆ. ಕೇಂದ್ರ ಸರ್ಕಾರ ಎನ್ಇಪಿ ತಂದು ಶಿಕ್ಷಣವನ್ನು ಕೋಮುವಾದಿಕರಣ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು. ಇಲ್ಲವೆಂದರೆ ದಸಂಸ ಇತರ ಪ್ರಗತಿಪರ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಬೇಕಾಗುತ್ತದೆ” ಎಂದು ವೆಂಕಟೇಶ್ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಅಧಿಕಾರ ಹಿಡಿದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...