Homeಕರ್ನಾಟಕಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

ಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

- Advertisement -
- Advertisement -

ವಿಪಕ್ಷದಲ್ಲಿದ್ದಾಗ ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ಕಾಯ್ದೆ, ಭೂ ಸುದಾರಣೆ ಕಾಯ್ದೆ, ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12ಕ್ಕೆ ಏರಿಸುವುದರ ವಿರುದ್ಧ ಮಾತಾನಾಡಿದ್ದ ಕಾಂಗ್ರೆಸ್, ಅಧಿಕಾರ ಹಿಡಿದು ಅದನ್ನೇ ಮುಂದುವರಿಸಿದೆ ಎಂದು ‘ಎದ್ದೇಳು ಕರ್ನಾಟಕ’ದ ಕೇಂದ್ರ ಸಮಿತಿ ಸದಸ್ಯ, ರೈತ ಮುಖಂಡ ವೀರ ಸಂಗಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು. ಎದ್ದೇಳು ಕರ್ನಾಟಕ ಸಂಘಟನೆಯು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಅಧಿಕಾರ ಹಿಡಿದು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರ ಸಂಗಯ್ಯ ಅವರು, “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಅದಕ್ಕಿಂತಲೂ ಮುಂಚೆ ಬಿಜೆಪಿಯಿಂದ ರೋಸಿ ಹೋಗಿದ್ದ ರೈತ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನರು ಹೋರಾಟ ನಡೆಸಿ ಬಿಜೆಪಿಯನ್ನು ಸೋಲಿಸಿದರು. ಅದಾಗ್ಯೂ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಕೋಮುಗಲಭೆ ನಡೆದಿದೆ. ಅದರ ಬಗ್ಗೆ ಅವರು ಸರಿಯಾದ ನಿಲುವು ತೆಗೆದುಕೊಂಡಿಲ್ಲ. ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಬೀದಿಯಲ್ಲಿ ಚಳವಳಿಗಳ ಮೂಲಕ ಎದುರಿಸಲಿದ್ದೇವೆ” ಎಂದು ಹೇಳಿದರು.

ಹೋರಾಟಗಾರ ಕೆ.ಎಲ್. ಅಶೋಕ್ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾಗ ಅದನ್ನು ಅವಲೋಕನ ಸಮಾವೇಶ ಮಾಡಿ ಎಂದಿದ್ದೆವು. ಇದೇ ರೀತಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ನೀವು ಮನೆಗೆ ಹೋಗುತ್ತೀರಿ” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಎರಡು ವರ್ಷಗಳಾದರೂ ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ನೀತಿಗಳನ್ನು ಯಾಕೆ ವಾಪಾಸು ತೆಗೆದುಕೊಂಡಿಲ್ಲ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ವಿರುದ್ಧವಾಗಿ ಬಂದ ನೀವು ಕೂಡಾ ಭ್ರಷ್ಟಾಚಾರ ಮುಂದುವರೆಸಿದ್ದೀರಿ. ಹಾಗಾಗದರೆ ಅವರಿಗೂ, ನಿಮಗೂ ವ್ಯಾತ್ಯಾಸ ಏನಿದೆ. ಬಿಜೆಪಿಯದೆ ನೀತಿಯನ್ನು ನೀವು ಅನುಸರಿಸುತ್ತಿದ್ದೀರಿ. ಜನ ವಿರೋಧಿ ಕಾಯ್ದೆಯನ್ನು ಬಡವರ ಸಮಾಧಿ ಮೇಲೆ ಜಾರಿಗೆ ತರುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರದ ವಿರುದ್ಧ ನಾವು ಈ ಹಿಂದೆ ಕೂಡಾ ಮಾಡಿದ್ದೇವೆ.‌ಕರ್ನಾಟಕದ ಅರ್ಧ ಜನರು ಭೂಮಿ ಮತ್ತು ವಸತಿ ಹೀನರಾಗಿದ್ದಾರೆ. ಸರ್ಕಾರದ ಕಣ್ಣು ಕುರುಡಾಗಿದ್ದು ಕಿವಿ ಕೇಳಿಸುತ್ತಿಲ್ಲ. ನೀವು ಇದೇ ರೀತಿ ಮುಂದುವರೆದರೆ ಘನಘೋರ ಪರಿಸ್ಥಿತಿಗೆ ತಲುಪಲಿದ್ದೀರಿ. ಎರಡ ವರ್ಷ ಕಾದರೂ ಏನೂ ಆಗದ ಕಾರಣಕ್ಕೆ ಸರ್ಕಾರದ ವಿರುದ್ಧ ಸಂಗ್ರಾಮಕ್ಕೆ ಮುಂದಾಗಿದ್ದೇವೆ. ಇದಕ್ಕೂ ಕೇಳಿಲ್ಲ ಎಂದರೆ ಜನ ಚಳವಳಿಗಳು ಮತ್ತಷ್ಟು ಜಾಸ್ತಿಯಾಗುತ್ತದೆ” ಎಂದು ಅಶೋಕ್ ಹೇಳಿದರು.

ಮಾಜಿ ಸಚಿವರಾದ ಬಿಟಿ ಲಲಿತಾ ನಾಯಕ್ ಮಾತನಾಡಿ, “ರಾಜ್ಯದಲ್ಲಿ ಶ್ರೀಮಂತರನ್ನು ಬಿಟ್ಟು ಎಲ್ಲರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪರದಾಡುವಂತಾಗಿದೆ. ಗ್ಯಾರೆಂಟಿ ಯೋಜನೆ ರೀತಿಯ ಐದಾರು ಅಂಶಗಳನ್ನು ತಂದ ಮಾತ್ರಕ್ಕೆ, ಅದನ್ನೆ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಬೇಕೆ? ಬೆಂಗಳೂರಿನಲ್ಲಿ ಮಳೆ ಬಂದು ಜನರು ಸಂಕಷ್ಟದಲ್ಲಿದ್ದಾಗ ಈ ಹಿಂದೆಯೂ ನೀರು ತುಂಬಿಕೊಳ್ಳುತ್ತಿತ್ತು, ಗುಂಡಿ ಇತ್ತು ಎಂದು ಹೇಳುವುದಾದರೆ ನೀವು ಯಾಕೆ ಅಧಿಕಾರಕ್ಕೆ ಬರಬೇಕಿತ್ತು? ಬಿಜೆಪಿ ಇದ್ದರೆ ಸಾಕಿತ್ತಲ್ಲವೆ” ಎಂದು ಪ್ರಶ್ನಿಸಿದರು.

“ಈ ರೀತಿಯಾಗಿ ಮಾತನಾಡಲು ನೀವು ಯಾಕೆ ಬೇಕು? ಬಿಜೆಪಿ ಕೂಡಾ ಅದನ್ನೇ ಮಾಡಿಕೊಂಡು ಬಂದಿದೆ. ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಾಗಿದೆ. ಕೋಮುಗಲಭೆ ಹೆಚ್ಚಾಗಿದೆ. ನಿಮ್ಮ ಪರವಾಗಿ ಕೆಲಸ ಮಾಡಿದ ಸಂಘಟನೆಗಳಿಗೆ ನಿಮ್ಮನ್ನು ಸರಿ ಮಾಡಬೇಕಾದ ತುರ್ತಿದೆ. ಯಾವ ವಂಚನೆ ಇಲ್ಲದೆ ಜನರ ಪರವಾಗಿ ಕೆಲಸ ಮಾಡಿ ಎಂದು ಹೇಳುತ್ತಿದ್ದೇವೆ” ಎಂದು ಹೇಳಿದರು.

ದಲಿತ ಹಕ್ಕುಗಳ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, “ಬಿಜೆಪಿ ಸೋಲಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆ ಅಡಿಯಲ್ಲಿ ಚುನಾವಣೆ ವೇಳೆ ದಸಂಸ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ನಿರಾಸೆ ಕಾಂಗ್ರೆಸ್ ಮೂಡಿಸಿದೆ. ಮಂಗಳೂರಿನಲ್ಲಿ ಇಡೀ ಸಮುದಾಯಯವನ್ನೆ ಕೋಮುವಾದಿಕರಣ ಮಾಡಲಾಗುತ್ತಿದೆ. ಕೋಮು ಘಟನೆಗಳು ನಡೆಯುವಲ್ಲಿ ದಕ್ಷ ಅಧಿಕಾರಿಗಳನ್ನು ನೇಮಿಸಬೇಕಿದೆ.” ಎಂದು ಹೇಳಿದರು.

“ಭ್ರಷ್ಟಾಚಾರ ಬಗ್ಗೆ ಸಂಬಂಧಪಟ್ಟ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಏನೂ ಮಾತನಾಡುತ್ತಿರಲಿಲ್ಲ. ಅವರು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಸಂಶಯ ಕಾಡುತ್ತಿದೆ. ಕೇಂದ್ರ ಸರ್ಕಾರ ಎನ್ಇಪಿ ತಂದು ಶಿಕ್ಷಣವನ್ನು ಕೋಮುವಾದಿಕರಣ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು. ಇಲ್ಲವೆಂದರೆ ದಸಂಸ ಇತರ ಪ್ರಗತಿಪರ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಬೇಕಾಗುತ್ತದೆ” ಎಂದು ವೆಂಕಟೇಶ್ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಅಧಿಕಾರ ಹಿಡಿದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...