Homeಕರ್ನಾಟಕಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

ಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

- Advertisement -
- Advertisement -

ವಿಪಕ್ಷದಲ್ಲಿದ್ದಾಗ ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ಕಾಯ್ದೆ, ಭೂ ಸುದಾರಣೆ ಕಾಯ್ದೆ, ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12ಕ್ಕೆ ಏರಿಸುವುದರ ವಿರುದ್ಧ ಮಾತಾನಾಡಿದ್ದ ಕಾಂಗ್ರೆಸ್, ಅಧಿಕಾರ ಹಿಡಿದು ಅದನ್ನೇ ಮುಂದುವರಿಸಿದೆ ಎಂದು ‘ಎದ್ದೇಳು ಕರ್ನಾಟಕ’ದ ಕೇಂದ್ರ ಸಮಿತಿ ಸದಸ್ಯ, ರೈತ ಮುಖಂಡ ವೀರ ಸಂಗಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು. ಎದ್ದೇಳು ಕರ್ನಾಟಕ ಸಂಘಟನೆಯು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಅಧಿಕಾರ ಹಿಡಿದು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರ ಸಂಗಯ್ಯ ಅವರು, “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಅದಕ್ಕಿಂತಲೂ ಮುಂಚೆ ಬಿಜೆಪಿಯಿಂದ ರೋಸಿ ಹೋಗಿದ್ದ ರೈತ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನರು ಹೋರಾಟ ನಡೆಸಿ ಬಿಜೆಪಿಯನ್ನು ಸೋಲಿಸಿದರು. ಅದಾಗ್ಯೂ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಕೋಮುಗಲಭೆ ನಡೆದಿದೆ. ಅದರ ಬಗ್ಗೆ ಅವರು ಸರಿಯಾದ ನಿಲುವು ತೆಗೆದುಕೊಂಡಿಲ್ಲ. ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಬೀದಿಯಲ್ಲಿ ಚಳವಳಿಗಳ ಮೂಲಕ ಎದುರಿಸಲಿದ್ದೇವೆ” ಎಂದು ಹೇಳಿದರು.

ಹೋರಾಟಗಾರ ಕೆ.ಎಲ್. ಅಶೋಕ್ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾಗ ಅದನ್ನು ಅವಲೋಕನ ಸಮಾವೇಶ ಮಾಡಿ ಎಂದಿದ್ದೆವು. ಇದೇ ರೀತಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ನೀವು ಮನೆಗೆ ಹೋಗುತ್ತೀರಿ” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಎರಡು ವರ್ಷಗಳಾದರೂ ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ನೀತಿಗಳನ್ನು ಯಾಕೆ ವಾಪಾಸು ತೆಗೆದುಕೊಂಡಿಲ್ಲ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ವಿರುದ್ಧವಾಗಿ ಬಂದ ನೀವು ಕೂಡಾ ಭ್ರಷ್ಟಾಚಾರ ಮುಂದುವರೆಸಿದ್ದೀರಿ. ಹಾಗಾಗದರೆ ಅವರಿಗೂ, ನಿಮಗೂ ವ್ಯಾತ್ಯಾಸ ಏನಿದೆ. ಬಿಜೆಪಿಯದೆ ನೀತಿಯನ್ನು ನೀವು ಅನುಸರಿಸುತ್ತಿದ್ದೀರಿ. ಜನ ವಿರೋಧಿ ಕಾಯ್ದೆಯನ್ನು ಬಡವರ ಸಮಾಧಿ ಮೇಲೆ ಜಾರಿಗೆ ತರುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರದ ವಿರುದ್ಧ ನಾವು ಈ ಹಿಂದೆ ಕೂಡಾ ಮಾಡಿದ್ದೇವೆ.‌ಕರ್ನಾಟಕದ ಅರ್ಧ ಜನರು ಭೂಮಿ ಮತ್ತು ವಸತಿ ಹೀನರಾಗಿದ್ದಾರೆ. ಸರ್ಕಾರದ ಕಣ್ಣು ಕುರುಡಾಗಿದ್ದು ಕಿವಿ ಕೇಳಿಸುತ್ತಿಲ್ಲ. ನೀವು ಇದೇ ರೀತಿ ಮುಂದುವರೆದರೆ ಘನಘೋರ ಪರಿಸ್ಥಿತಿಗೆ ತಲುಪಲಿದ್ದೀರಿ. ಎರಡ ವರ್ಷ ಕಾದರೂ ಏನೂ ಆಗದ ಕಾರಣಕ್ಕೆ ಸರ್ಕಾರದ ವಿರುದ್ಧ ಸಂಗ್ರಾಮಕ್ಕೆ ಮುಂದಾಗಿದ್ದೇವೆ. ಇದಕ್ಕೂ ಕೇಳಿಲ್ಲ ಎಂದರೆ ಜನ ಚಳವಳಿಗಳು ಮತ್ತಷ್ಟು ಜಾಸ್ತಿಯಾಗುತ್ತದೆ” ಎಂದು ಅಶೋಕ್ ಹೇಳಿದರು.

ಮಾಜಿ ಸಚಿವರಾದ ಬಿಟಿ ಲಲಿತಾ ನಾಯಕ್ ಮಾತನಾಡಿ, “ರಾಜ್ಯದಲ್ಲಿ ಶ್ರೀಮಂತರನ್ನು ಬಿಟ್ಟು ಎಲ್ಲರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪರದಾಡುವಂತಾಗಿದೆ. ಗ್ಯಾರೆಂಟಿ ಯೋಜನೆ ರೀತಿಯ ಐದಾರು ಅಂಶಗಳನ್ನು ತಂದ ಮಾತ್ರಕ್ಕೆ, ಅದನ್ನೆ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಬೇಕೆ? ಬೆಂಗಳೂರಿನಲ್ಲಿ ಮಳೆ ಬಂದು ಜನರು ಸಂಕಷ್ಟದಲ್ಲಿದ್ದಾಗ ಈ ಹಿಂದೆಯೂ ನೀರು ತುಂಬಿಕೊಳ್ಳುತ್ತಿತ್ತು, ಗುಂಡಿ ಇತ್ತು ಎಂದು ಹೇಳುವುದಾದರೆ ನೀವು ಯಾಕೆ ಅಧಿಕಾರಕ್ಕೆ ಬರಬೇಕಿತ್ತು? ಬಿಜೆಪಿ ಇದ್ದರೆ ಸಾಕಿತ್ತಲ್ಲವೆ” ಎಂದು ಪ್ರಶ್ನಿಸಿದರು.

“ಈ ರೀತಿಯಾಗಿ ಮಾತನಾಡಲು ನೀವು ಯಾಕೆ ಬೇಕು? ಬಿಜೆಪಿ ಕೂಡಾ ಅದನ್ನೇ ಮಾಡಿಕೊಂಡು ಬಂದಿದೆ. ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಾಗಿದೆ. ಕೋಮುಗಲಭೆ ಹೆಚ್ಚಾಗಿದೆ. ನಿಮ್ಮ ಪರವಾಗಿ ಕೆಲಸ ಮಾಡಿದ ಸಂಘಟನೆಗಳಿಗೆ ನಿಮ್ಮನ್ನು ಸರಿ ಮಾಡಬೇಕಾದ ತುರ್ತಿದೆ. ಯಾವ ವಂಚನೆ ಇಲ್ಲದೆ ಜನರ ಪರವಾಗಿ ಕೆಲಸ ಮಾಡಿ ಎಂದು ಹೇಳುತ್ತಿದ್ದೇವೆ” ಎಂದು ಹೇಳಿದರು.

ದಲಿತ ಹಕ್ಕುಗಳ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, “ಬಿಜೆಪಿ ಸೋಲಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆ ಅಡಿಯಲ್ಲಿ ಚುನಾವಣೆ ವೇಳೆ ದಸಂಸ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ನಿರಾಸೆ ಕಾಂಗ್ರೆಸ್ ಮೂಡಿಸಿದೆ. ಮಂಗಳೂರಿನಲ್ಲಿ ಇಡೀ ಸಮುದಾಯಯವನ್ನೆ ಕೋಮುವಾದಿಕರಣ ಮಾಡಲಾಗುತ್ತಿದೆ. ಕೋಮು ಘಟನೆಗಳು ನಡೆಯುವಲ್ಲಿ ದಕ್ಷ ಅಧಿಕಾರಿಗಳನ್ನು ನೇಮಿಸಬೇಕಿದೆ.” ಎಂದು ಹೇಳಿದರು.

“ಭ್ರಷ್ಟಾಚಾರ ಬಗ್ಗೆ ಸಂಬಂಧಪಟ್ಟ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಏನೂ ಮಾತನಾಡುತ್ತಿರಲಿಲ್ಲ. ಅವರು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಸಂಶಯ ಕಾಡುತ್ತಿದೆ. ಕೇಂದ್ರ ಸರ್ಕಾರ ಎನ್ಇಪಿ ತಂದು ಶಿಕ್ಷಣವನ್ನು ಕೋಮುವಾದಿಕರಣ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು. ಇಲ್ಲವೆಂದರೆ ದಸಂಸ ಇತರ ಪ್ರಗತಿಪರ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಬೇಕಾಗುತ್ತದೆ” ಎಂದು ವೆಂಕಟೇಶ್ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಅಧಿಕಾರ ಹಿಡಿದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...