Homeಕರ್ನಾಟಕಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

ಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

- Advertisement -
- Advertisement -

ವಿಪಕ್ಷದಲ್ಲಿದ್ದಾಗ ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ಕಾಯ್ದೆ, ಭೂ ಸುದಾರಣೆ ಕಾಯ್ದೆ, ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12ಕ್ಕೆ ಏರಿಸುವುದರ ವಿರುದ್ಧ ಮಾತಾನಾಡಿದ್ದ ಕಾಂಗ್ರೆಸ್, ಅಧಿಕಾರ ಹಿಡಿದು ಅದನ್ನೇ ಮುಂದುವರಿಸಿದೆ ಎಂದು ‘ಎದ್ದೇಳು ಕರ್ನಾಟಕ’ದ ಕೇಂದ್ರ ಸಮಿತಿ ಸದಸ್ಯ, ರೈತ ಮುಖಂಡ ವೀರ ಸಂಗಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು. ಎದ್ದೇಳು ಕರ್ನಾಟಕ ಸಂಘಟನೆಯು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಅಧಿಕಾರ ಹಿಡಿದು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರ ಸಂಗಯ್ಯ ಅವರು, “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಅದಕ್ಕಿಂತಲೂ ಮುಂಚೆ ಬಿಜೆಪಿಯಿಂದ ರೋಸಿ ಹೋಗಿದ್ದ ರೈತ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನರು ಹೋರಾಟ ನಡೆಸಿ ಬಿಜೆಪಿಯನ್ನು ಸೋಲಿಸಿದರು. ಅದಾಗ್ಯೂ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಕೋಮುಗಲಭೆ ನಡೆದಿದೆ. ಅದರ ಬಗ್ಗೆ ಅವರು ಸರಿಯಾದ ನಿಲುವು ತೆಗೆದುಕೊಂಡಿಲ್ಲ. ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಬೀದಿಯಲ್ಲಿ ಚಳವಳಿಗಳ ಮೂಲಕ ಎದುರಿಸಲಿದ್ದೇವೆ” ಎಂದು ಹೇಳಿದರು.

ಹೋರಾಟಗಾರ ಕೆ.ಎಲ್. ಅಶೋಕ್ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾಗ ಅದನ್ನು ಅವಲೋಕನ ಸಮಾವೇಶ ಮಾಡಿ ಎಂದಿದ್ದೆವು. ಇದೇ ರೀತಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ನೀವು ಮನೆಗೆ ಹೋಗುತ್ತೀರಿ” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಎರಡು ವರ್ಷಗಳಾದರೂ ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ನೀತಿಗಳನ್ನು ಯಾಕೆ ವಾಪಾಸು ತೆಗೆದುಕೊಂಡಿಲ್ಲ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ವಿರುದ್ಧವಾಗಿ ಬಂದ ನೀವು ಕೂಡಾ ಭ್ರಷ್ಟಾಚಾರ ಮುಂದುವರೆಸಿದ್ದೀರಿ. ಹಾಗಾಗದರೆ ಅವರಿಗೂ, ನಿಮಗೂ ವ್ಯಾತ್ಯಾಸ ಏನಿದೆ. ಬಿಜೆಪಿಯದೆ ನೀತಿಯನ್ನು ನೀವು ಅನುಸರಿಸುತ್ತಿದ್ದೀರಿ. ಜನ ವಿರೋಧಿ ಕಾಯ್ದೆಯನ್ನು ಬಡವರ ಸಮಾಧಿ ಮೇಲೆ ಜಾರಿಗೆ ತರುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರದ ವಿರುದ್ಧ ನಾವು ಈ ಹಿಂದೆ ಕೂಡಾ ಮಾಡಿದ್ದೇವೆ.‌ಕರ್ನಾಟಕದ ಅರ್ಧ ಜನರು ಭೂಮಿ ಮತ್ತು ವಸತಿ ಹೀನರಾಗಿದ್ದಾರೆ. ಸರ್ಕಾರದ ಕಣ್ಣು ಕುರುಡಾಗಿದ್ದು ಕಿವಿ ಕೇಳಿಸುತ್ತಿಲ್ಲ. ನೀವು ಇದೇ ರೀತಿ ಮುಂದುವರೆದರೆ ಘನಘೋರ ಪರಿಸ್ಥಿತಿಗೆ ತಲುಪಲಿದ್ದೀರಿ. ಎರಡ ವರ್ಷ ಕಾದರೂ ಏನೂ ಆಗದ ಕಾರಣಕ್ಕೆ ಸರ್ಕಾರದ ವಿರುದ್ಧ ಸಂಗ್ರಾಮಕ್ಕೆ ಮುಂದಾಗಿದ್ದೇವೆ. ಇದಕ್ಕೂ ಕೇಳಿಲ್ಲ ಎಂದರೆ ಜನ ಚಳವಳಿಗಳು ಮತ್ತಷ್ಟು ಜಾಸ್ತಿಯಾಗುತ್ತದೆ” ಎಂದು ಅಶೋಕ್ ಹೇಳಿದರು.

ಮಾಜಿ ಸಚಿವರಾದ ಬಿಟಿ ಲಲಿತಾ ನಾಯಕ್ ಮಾತನಾಡಿ, “ರಾಜ್ಯದಲ್ಲಿ ಶ್ರೀಮಂತರನ್ನು ಬಿಟ್ಟು ಎಲ್ಲರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪರದಾಡುವಂತಾಗಿದೆ. ಗ್ಯಾರೆಂಟಿ ಯೋಜನೆ ರೀತಿಯ ಐದಾರು ಅಂಶಗಳನ್ನು ತಂದ ಮಾತ್ರಕ್ಕೆ, ಅದನ್ನೆ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಬೇಕೆ? ಬೆಂಗಳೂರಿನಲ್ಲಿ ಮಳೆ ಬಂದು ಜನರು ಸಂಕಷ್ಟದಲ್ಲಿದ್ದಾಗ ಈ ಹಿಂದೆಯೂ ನೀರು ತುಂಬಿಕೊಳ್ಳುತ್ತಿತ್ತು, ಗುಂಡಿ ಇತ್ತು ಎಂದು ಹೇಳುವುದಾದರೆ ನೀವು ಯಾಕೆ ಅಧಿಕಾರಕ್ಕೆ ಬರಬೇಕಿತ್ತು? ಬಿಜೆಪಿ ಇದ್ದರೆ ಸಾಕಿತ್ತಲ್ಲವೆ” ಎಂದು ಪ್ರಶ್ನಿಸಿದರು.

“ಈ ರೀತಿಯಾಗಿ ಮಾತನಾಡಲು ನೀವು ಯಾಕೆ ಬೇಕು? ಬಿಜೆಪಿ ಕೂಡಾ ಅದನ್ನೇ ಮಾಡಿಕೊಂಡು ಬಂದಿದೆ. ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಾಗಿದೆ. ಕೋಮುಗಲಭೆ ಹೆಚ್ಚಾಗಿದೆ. ನಿಮ್ಮ ಪರವಾಗಿ ಕೆಲಸ ಮಾಡಿದ ಸಂಘಟನೆಗಳಿಗೆ ನಿಮ್ಮನ್ನು ಸರಿ ಮಾಡಬೇಕಾದ ತುರ್ತಿದೆ. ಯಾವ ವಂಚನೆ ಇಲ್ಲದೆ ಜನರ ಪರವಾಗಿ ಕೆಲಸ ಮಾಡಿ ಎಂದು ಹೇಳುತ್ತಿದ್ದೇವೆ” ಎಂದು ಹೇಳಿದರು.

ದಲಿತ ಹಕ್ಕುಗಳ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, “ಬಿಜೆಪಿ ಸೋಲಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆ ಅಡಿಯಲ್ಲಿ ಚುನಾವಣೆ ವೇಳೆ ದಸಂಸ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ನಿರಾಸೆ ಕಾಂಗ್ರೆಸ್ ಮೂಡಿಸಿದೆ. ಮಂಗಳೂರಿನಲ್ಲಿ ಇಡೀ ಸಮುದಾಯಯವನ್ನೆ ಕೋಮುವಾದಿಕರಣ ಮಾಡಲಾಗುತ್ತಿದೆ. ಕೋಮು ಘಟನೆಗಳು ನಡೆಯುವಲ್ಲಿ ದಕ್ಷ ಅಧಿಕಾರಿಗಳನ್ನು ನೇಮಿಸಬೇಕಿದೆ.” ಎಂದು ಹೇಳಿದರು.

“ಭ್ರಷ್ಟಾಚಾರ ಬಗ್ಗೆ ಸಂಬಂಧಪಟ್ಟ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಏನೂ ಮಾತನಾಡುತ್ತಿರಲಿಲ್ಲ. ಅವರು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಸಂಶಯ ಕಾಡುತ್ತಿದೆ. ಕೇಂದ್ರ ಸರ್ಕಾರ ಎನ್ಇಪಿ ತಂದು ಶಿಕ್ಷಣವನ್ನು ಕೋಮುವಾದಿಕರಣ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು. ಇಲ್ಲವೆಂದರೆ ದಸಂಸ ಇತರ ಪ್ರಗತಿಪರ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಬೇಕಾಗುತ್ತದೆ” ಎಂದು ವೆಂಕಟೇಶ್ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಅಧಿಕಾರ ಹಿಡಿದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...