Homeಕರ್ನಾಟಕಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

ಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

- Advertisement -
- Advertisement -

ವಿಪಕ್ಷದಲ್ಲಿದ್ದಾಗ ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ಕಾಯ್ದೆ, ಭೂ ಸುದಾರಣೆ ಕಾಯ್ದೆ, ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12ಕ್ಕೆ ಏರಿಸುವುದರ ವಿರುದ್ಧ ಮಾತಾನಾಡಿದ್ದ ಕಾಂಗ್ರೆಸ್, ಅಧಿಕಾರ ಹಿಡಿದು ಅದನ್ನೇ ಮುಂದುವರಿಸಿದೆ ಎಂದು ‘ಎದ್ದೇಳು ಕರ್ನಾಟಕ’ದ ಕೇಂದ್ರ ಸಮಿತಿ ಸದಸ್ಯ, ರೈತ ಮುಖಂಡ ವೀರ ಸಂಗಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು. ಎದ್ದೇಳು ಕರ್ನಾಟಕ ಸಂಘಟನೆಯು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಅಧಿಕಾರ ಹಿಡಿದು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರ ಸಂಗಯ್ಯ ಅವರು, “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಅದಕ್ಕಿಂತಲೂ ಮುಂಚೆ ಬಿಜೆಪಿಯಿಂದ ರೋಸಿ ಹೋಗಿದ್ದ ರೈತ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನರು ಹೋರಾಟ ನಡೆಸಿ ಬಿಜೆಪಿಯನ್ನು ಸೋಲಿಸಿದರು. ಅದಾಗ್ಯೂ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಕೋಮುಗಲಭೆ ನಡೆದಿದೆ. ಅದರ ಬಗ್ಗೆ ಅವರು ಸರಿಯಾದ ನಿಲುವು ತೆಗೆದುಕೊಂಡಿಲ್ಲ. ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಬೀದಿಯಲ್ಲಿ ಚಳವಳಿಗಳ ಮೂಲಕ ಎದುರಿಸಲಿದ್ದೇವೆ” ಎಂದು ಹೇಳಿದರು.

ಹೋರಾಟಗಾರ ಕೆ.ಎಲ್. ಅಶೋಕ್ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾಗ ಅದನ್ನು ಅವಲೋಕನ ಸಮಾವೇಶ ಮಾಡಿ ಎಂದಿದ್ದೆವು. ಇದೇ ರೀತಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ನೀವು ಮನೆಗೆ ಹೋಗುತ್ತೀರಿ” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಎರಡು ವರ್ಷಗಳಾದರೂ ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ನೀತಿಗಳನ್ನು ಯಾಕೆ ವಾಪಾಸು ತೆಗೆದುಕೊಂಡಿಲ್ಲ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ವಿರುದ್ಧವಾಗಿ ಬಂದ ನೀವು ಕೂಡಾ ಭ್ರಷ್ಟಾಚಾರ ಮುಂದುವರೆಸಿದ್ದೀರಿ. ಹಾಗಾಗದರೆ ಅವರಿಗೂ, ನಿಮಗೂ ವ್ಯಾತ್ಯಾಸ ಏನಿದೆ. ಬಿಜೆಪಿಯದೆ ನೀತಿಯನ್ನು ನೀವು ಅನುಸರಿಸುತ್ತಿದ್ದೀರಿ. ಜನ ವಿರೋಧಿ ಕಾಯ್ದೆಯನ್ನು ಬಡವರ ಸಮಾಧಿ ಮೇಲೆ ಜಾರಿಗೆ ತರುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರದ ವಿರುದ್ಧ ನಾವು ಈ ಹಿಂದೆ ಕೂಡಾ ಮಾಡಿದ್ದೇವೆ.‌ಕರ್ನಾಟಕದ ಅರ್ಧ ಜನರು ಭೂಮಿ ಮತ್ತು ವಸತಿ ಹೀನರಾಗಿದ್ದಾರೆ. ಸರ್ಕಾರದ ಕಣ್ಣು ಕುರುಡಾಗಿದ್ದು ಕಿವಿ ಕೇಳಿಸುತ್ತಿಲ್ಲ. ನೀವು ಇದೇ ರೀತಿ ಮುಂದುವರೆದರೆ ಘನಘೋರ ಪರಿಸ್ಥಿತಿಗೆ ತಲುಪಲಿದ್ದೀರಿ. ಎರಡ ವರ್ಷ ಕಾದರೂ ಏನೂ ಆಗದ ಕಾರಣಕ್ಕೆ ಸರ್ಕಾರದ ವಿರುದ್ಧ ಸಂಗ್ರಾಮಕ್ಕೆ ಮುಂದಾಗಿದ್ದೇವೆ. ಇದಕ್ಕೂ ಕೇಳಿಲ್ಲ ಎಂದರೆ ಜನ ಚಳವಳಿಗಳು ಮತ್ತಷ್ಟು ಜಾಸ್ತಿಯಾಗುತ್ತದೆ” ಎಂದು ಅಶೋಕ್ ಹೇಳಿದರು.

ಮಾಜಿ ಸಚಿವರಾದ ಬಿಟಿ ಲಲಿತಾ ನಾಯಕ್ ಮಾತನಾಡಿ, “ರಾಜ್ಯದಲ್ಲಿ ಶ್ರೀಮಂತರನ್ನು ಬಿಟ್ಟು ಎಲ್ಲರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪರದಾಡುವಂತಾಗಿದೆ. ಗ್ಯಾರೆಂಟಿ ಯೋಜನೆ ರೀತಿಯ ಐದಾರು ಅಂಶಗಳನ್ನು ತಂದ ಮಾತ್ರಕ್ಕೆ, ಅದನ್ನೆ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಬೇಕೆ? ಬೆಂಗಳೂರಿನಲ್ಲಿ ಮಳೆ ಬಂದು ಜನರು ಸಂಕಷ್ಟದಲ್ಲಿದ್ದಾಗ ಈ ಹಿಂದೆಯೂ ನೀರು ತುಂಬಿಕೊಳ್ಳುತ್ತಿತ್ತು, ಗುಂಡಿ ಇತ್ತು ಎಂದು ಹೇಳುವುದಾದರೆ ನೀವು ಯಾಕೆ ಅಧಿಕಾರಕ್ಕೆ ಬರಬೇಕಿತ್ತು? ಬಿಜೆಪಿ ಇದ್ದರೆ ಸಾಕಿತ್ತಲ್ಲವೆ” ಎಂದು ಪ್ರಶ್ನಿಸಿದರು.

“ಈ ರೀತಿಯಾಗಿ ಮಾತನಾಡಲು ನೀವು ಯಾಕೆ ಬೇಕು? ಬಿಜೆಪಿ ಕೂಡಾ ಅದನ್ನೇ ಮಾಡಿಕೊಂಡು ಬಂದಿದೆ. ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಾಗಿದೆ. ಕೋಮುಗಲಭೆ ಹೆಚ್ಚಾಗಿದೆ. ನಿಮ್ಮ ಪರವಾಗಿ ಕೆಲಸ ಮಾಡಿದ ಸಂಘಟನೆಗಳಿಗೆ ನಿಮ್ಮನ್ನು ಸರಿ ಮಾಡಬೇಕಾದ ತುರ್ತಿದೆ. ಯಾವ ವಂಚನೆ ಇಲ್ಲದೆ ಜನರ ಪರವಾಗಿ ಕೆಲಸ ಮಾಡಿ ಎಂದು ಹೇಳುತ್ತಿದ್ದೇವೆ” ಎಂದು ಹೇಳಿದರು.

ದಲಿತ ಹಕ್ಕುಗಳ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, “ಬಿಜೆಪಿ ಸೋಲಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆ ಅಡಿಯಲ್ಲಿ ಚುನಾವಣೆ ವೇಳೆ ದಸಂಸ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ನಿರಾಸೆ ಕಾಂಗ್ರೆಸ್ ಮೂಡಿಸಿದೆ. ಮಂಗಳೂರಿನಲ್ಲಿ ಇಡೀ ಸಮುದಾಯಯವನ್ನೆ ಕೋಮುವಾದಿಕರಣ ಮಾಡಲಾಗುತ್ತಿದೆ. ಕೋಮು ಘಟನೆಗಳು ನಡೆಯುವಲ್ಲಿ ದಕ್ಷ ಅಧಿಕಾರಿಗಳನ್ನು ನೇಮಿಸಬೇಕಿದೆ.” ಎಂದು ಹೇಳಿದರು.

“ಭ್ರಷ್ಟಾಚಾರ ಬಗ್ಗೆ ಸಂಬಂಧಪಟ್ಟ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಏನೂ ಮಾತನಾಡುತ್ತಿರಲಿಲ್ಲ. ಅವರು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಸಂಶಯ ಕಾಡುತ್ತಿದೆ. ಕೇಂದ್ರ ಸರ್ಕಾರ ಎನ್ಇಪಿ ತಂದು ಶಿಕ್ಷಣವನ್ನು ಕೋಮುವಾದಿಕರಣ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು. ಇಲ್ಲವೆಂದರೆ ದಸಂಸ ಇತರ ಪ್ರಗತಿಪರ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಬೇಕಾಗುತ್ತದೆ” ಎಂದು ವೆಂಕಟೇಶ್ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಅಧಿಕಾರ ಹಿಡಿದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...