Homeಮುಖಪುಟಎಎಪಿ ಭವಿಷ್ಯ ಹಾಳುಮಾಡಲು ಕಾಂಗ್ರೆಸ್ ಬಿಜೆಪಿಯೊಂದಿಗೆ ಕೈಜೋಡಿಸಿದೆ: ಸಂಜಯ್ ಸಿಂಗ್ ಆರೋಪ

ಎಎಪಿ ಭವಿಷ್ಯ ಹಾಳುಮಾಡಲು ಕಾಂಗ್ರೆಸ್ ಬಿಜೆಪಿಯೊಂದಿಗೆ ಕೈಜೋಡಿಸಿದೆ: ಸಂಜಯ್ ಸಿಂಗ್ ಆರೋಪ

- Advertisement -
- Advertisement -

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಭವಿಷ್ಯವನ್ನು ಹಾಳುಮಾಡಲು ಕಾಂಗ್ರೆಸ್ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಎಎಪಿ ಗುರುವಾರ ತೀವ್ರ ವಾಗ್ದಾಳಿ ನಡೆಸಿದೆ.

ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ಪ ತ್ರಿಕಾಗೋಷ್ಠಿ ನಡೆಸಿ, “ಕಾಂಗ್ರೆಸ್ ನ ಕ್ರಮಗಳು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (I.N.D.I.A.) ಏಕತೆಗೆ ಹಾನಿ ಮಾಡುತ್ತಿವೆ” ಎಂದು ಆರೋಪಿಸಿದರು.

“ಹರಿಯಾಣ ಚುನಾವಣೆಯ ಸಂದರ್ಭದಲ್ಲಿ ನಾವು ಕಾಂಗ್ರೆಸ್ ವಿರುದ್ಧ ಒಂದೇ ಒಂದು ಮಾತನ್ನೂ ಹೇಳಿರಲಿಲ್ಲ. ಆದರೂ ಕಾಂಗ್ರೆಸ್ ಬಿಜೆಪಿಯ ಸ್ಕ್ರಿಪ್ಟ್ ಅನ್ನು ಓದುತ್ತಿದೆ ಎಂದು ತೋರುತ್ತದೆ. ಅದರ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕಚೇರಿಯಲ್ಲಿ ಅಂತಿಮಗೊಳಿಸಲಾಗಿದೆ” ಎಂದು ಸಂಜಯ್ ಸಿಂಗ್ ಹೇಳಿದರು.

ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್ ಮತ್ತು ಸಂದೀಪ್ ದೀಕ್ಷಿತ್ ಅವರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಕೇಂದ್ರೀಕರಿಸುವ ಬದಲು ಎಎಪಿಯನ್ನು ಗುರಿಯಾಗಿಸಿದ್ದಾರೆ ಎಂದು ಆರೋಪಿಸಿದರು.

“ಅಜಯ್ ಮಾಕನ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ದೇಶವಿರೋಧಿ ಎಂದು ಕರೆಯುವ ಮೂಲಕ ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದರೂ ಕೇಜ್ರಿವಾಲ್ ಈಗ ಎಫ್‌ಐಆರ್ ಎದುರಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಯಾವುದೇ ಬಿಜೆಪಿ ನಾಯಕರ ವಿರುದ್ಧ ಒಂದೇ ಒಂದು ಎಫ್‌ಐಆರ್ ದಾಖಲಿಸಿಲ್ಲ” ಎಂದು ಸಿಂಗ್ ಹೇಳಿದರು.

ಅತಿಶಿ ಇದೇ ರೀತಿಯ ಭಾವನೆಗಳನ್ನು ಪ್ರತಿಧ್ವನಿಸಿದರು, ಕಾಂಗ್ರೆಸ್ ಸಕ್ರಿಯವಾಗಿ ಎಎಪಿಯನ್ನು ದುರ್ಬಲಗೊಳಿಸುತ್ತಿದೆ ಎಂದು ಪ್ರತಿಪಾದಿಸಿದರು.

“ಕಾಂಗ್ರೆಸ್ ಅಭ್ಯರ್ಥಿಗಳಾದ ಸಂದೀಪ್ ದೀಕ್ಷಿತ್ ಮತ್ತು ಫರ್ಹಾದ್ ಸೂರಿ ಬಿಜೆಪಿಯಿಂದ ಬೆಂಬಲ ಪಡೆಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಒಪ್ಪಂದವು ಇಂಡಿಯಾ ಮೈತ್ರಿಗೆ ಕಾಂಗ್ರೆಸ್‌ನ ಬದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಅವರು ಹೇಳಿದರು.

ಮಾಕೆನ್ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ 24 ಗಂಟೆಗಳ ಒಳಗೆ ಶಿಸ್ತು ಕ್ರಮಕ್ಕೆ ಒತ್ತಾಯಿಸಿತು. ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಇಂಡಿಯಾ ಬಣದಿಂದ ಹಳೆಯ ಪಕ್ಷವನ್ನು ಹೊರಹಾಕಲು ಒತ್ತಾಯಿಸುವುದಾಗಿ ಹೇಳಿದೆ.

“ಕಾಂಗ್ರೆಸ್ ಅನ್ನು ತೊಡೆದುಹಾಕಲು ನಾವು ಮೈತ್ರಿಯಲ್ಲಿರುವ ಇತರ ಪಕ್ಷಗಳನ್ನು ಕೇಳುತ್ತೇವೆ” ಎಂದು ಸಿಂಗ್ ಹೇಳಿದರು.

ಇದನ್ನೂ ಓದಿ; ‘ಕೇಜ್ರಿವಾಲ್ ಸರ್ಕಾರಕ್ಕೆ ಬೆಂಬಲ ನೀಡಿದ್ದೇ ಪಕ್ಷ ದುರ್ಬಲಗೊಳ್ಳಲು ಕಾರಣ..’; ಕಾಂಗ್ರೆಸ್ ನಾಯಕ ಅಜಯ್ ಮಾಕೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...