ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಹಿಂದುತ್ವ ಸಂಘಟನೆ ಬಜರಂಗದಳವನ್ನು ನಿಷೇಧಿಸುವ ಯಾವುದೇ ಯೋಜನೆ ಕಾಂಗ್ರೆಸ್ ಹೊಂದಿಲ್ಲ; ಯಾವುದೇ ಸಂಘಟನೆಯನ್ನು ನಿಷೇಧಿಸುವ ಅಧಿಕಾರಕ್ಕೆ ಕೇಂದ್ರ ಸರ್ಕಾರಕ್ಕೆ ಇರುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಬುಧವಾರ ಹೇಳಿರುವಾಗಿ `ಇಂಡಿಯಾ ಟುಡೇ’ ವರದಿ ಮಾಡಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಸಂವಿಧಾನ ವಿರೋಧಿ ಕೃತ್ಯಗಳನ್ನು ಎಸಗುವ ಸಂಘಟನೆಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದೆ.
ಬಜರಂಗದಳ ಮತ್ತು ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ನಿಷೇಧ ಹೇರುವುದಾಗಿ ಭರವಸೆ ನೀಡಿದ ಎರಡು ದಿನಗಳ ನಂತರ ಮೊಯ್ಲಿ ಅವರ ಹೇಳಿಕೆ ಹೊರಬಿದ್ದಿದೆ. ಸಮುದಾಯಗಳ ನಡುವೆ ದ್ವೇಷ ಉಂಟು ಮಾಡುವ ಸಂಘಟನೆಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ತಿಳಿಸಿದೆ.
ಕಾಂಗ್ರೆಸ್ನ ಈ ಭರವಸೆಯು ಭಾರತೀಯ ಜನತಾ ಪಕ್ಷದಿಂದ ತೀವ್ರ ಟೀಕೆಗೆ ಒಳಗಾಗಿತ್ತು, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಕ್ರಿಯಿಸಿ, `ಹಿಂದೂ ದೇವತೆ ಹನುಮಂತನನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಮೊಯ್ಲಿ, ಸಂಘಟನೆಗಳನ್ನು ನಿಷೇಧಿಸುವುದು ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆಯೇ ಹೊರತು ರಾಜ್ಯ ಸರ್ಕಾರದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ವೀರಪ್ಪಮೊಯ್ಲಿಯವರು ಉಲ್ಲೇಖಿಸಿರುವುದಾಗಿ `ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದ್ದಾರೆ.
ದ್ವೇಷದ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಪ್ರಸ್ತಾಪವನ್ನು ಮಾಡಿದೆ ಎಂದು ಮೊಯ್ಲಿ ತಿಳಿಸಿದ್ದಾರೆ.
“ಸಮಾಜದಲ್ಲಿನ ಶಾಂತಿಯುತ ವಾತಾವರಣವನ್ನು ಹಾಳುಮಾಡುವ ಯಾವುದೇ ಸಂಘಟನೆಗಳಾದರೂ- ಅದು ಪಿ.ಎಫ್.ಐ ಇರಲಿ, ಬಜರಂಗದಳ ಇರಲಿ- ಅಂಥವುಗಳನ್ನು ನಿಷೇಧಿಸಬೇಕಾಗುತ್ತದೆ ಎಂದು ನಾವು ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ್ದೇವೆ’’ ಎಂದಿದ್ದಾರೆ.
ಇದರ ನಡುವೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, “ಮೋದಿಯವರು ಹನುಮಂತನನ್ನು ಬಜರಂಗದಳಕ್ಕೆ ಸಮೀಕರಿಸಿದ್ದಾರೆ. ಇದಕ್ಕಾಗಿ ಕ್ಷಮೆಯಾಚಿಸಬೇಕು’’ ಎಂದು ಆಗ್ರಹಿಸಿದ್ದಾರೆ.
ಹನುಮಂತನನ್ನು ಪೂಜಿಸುವವರನ್ನು ಬಂಧಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಪ್ರತಿಭಟಿಸಿರುವ, ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, “ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಮುಹಮ್ಮದ್ ಅಲಿ ಜಿನ್ನಾ ಅವರು ಸ್ಥಾಪಿಸಿದ ಮುಸ್ಲಿಂ ಲೀಗ್ಗೆ ಹೋಲಿಕೆಯಾಗುತ್ತದೆ’’ ಎಂದು ಟೀಕಿಸಿದ್ದಾರೆ.
ಭಜರಂಗದಳವನ್ನು ನಿಷೇಧಿಸುವ ಬಗ್ಗೆ ಮಾತನಾಡಲು ಅವರಿಗೆ (ಕಾಂಗ್ರೆಸ್) ಎಷ್ಟು ಧೈರ್ಯವಿದೆ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.
These politicians have no job except creating controversies.