Homeಮುಖಪುಟಕಾಂಗ್ರೆಸ್ ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ

ಕಾಂಗ್ರೆಸ್ ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ

- Advertisement -
- Advertisement -

ಕಾಂಗ್ರೆಸ್ ಅನ್ನು ಬೇಜವಾಬ್ದಾರಿ ಪಕ್ಷ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಬಯಸುತ್ತಿರುವ “ದ್ವೇಷವನ್ನು ಹರಡುವ” ಕಾರ್ಖಾನೆ ಎಂದು ಬುಧವಾರ ಹೇಳಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಯನ್ನು ಆನ್‌ಲೈನ್ ಮೂಲಕ ಉದ್ಘಾಟಿಸುವ ವೇಳಿ ಈ ಹೇಳಿಕೆ ನೀಡಿರುವ ಅವರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರಿ ಕಾರ್ಯಕ್ರಮದಲ್ಲಿ ”ರಾಜಕೀಯ ಭಾಷಣ” ಮಾಡಿದ್ದಾರೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೋದಿ ಈ ಹೇಳಿಕೆಗಳ ವಿರುದ್ಧ ತಿರುಗೇಟು ನೀಡಿರುವ ಕಾಂಗ್ರೆಸ್, ತೆರಿಗೆದಾರರ ಹಣವನ್ನು “ರಾಜಕೀಯ ಭಾಷಣ” ದಲ್ಲಿ ತೊಡಗಿಸಿಕೊಳ್ಳಬಾರದು ಎಂದು ಹೇಳಿದೆ. ರಾಜಕೀಯ ಭಾಷಣ ಮಾಡಲು ಮತ್ತು ಪ್ರತಿಪಕ್ಷಗಳ ಮೇಲೆ ದಾಳಿ ಮಾಡಲು ಪ್ರಧಾನಿ ಮೋದಿ ಸರ್ಕಾರಿ ವೇದಿಕೆ ಮತ್ತು ಸರ್ಕಾರಿ ಕಾರ್ಯಕ್ರಮವನ್ನು ಏಕೆ ಬಳಸಬೇಕು? ಎಂದು ಕೇಳಿದೆ.

ಇದನ್ನೂಓದಿ: ರಾಹುಲ್ ಗಾಂಧಿ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯಾವಕಾಶ ನೀಡಿದ ದೆಹಲಿ ಹೈಕೋರ್ಟ್

ಬುಧವಾರ ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ದೇಶದ ಮನಸ್ಥಿತಿಯನ್ನು ತೋರಿಸುತ್ತದೆ. “ಮಹಾರಾಷ್ಟ್ರದಲ್ಲಿ ಕೂಡಾ ನಾವು ದೊಡ್ಡ ಗೆಲುವು ಪಡೆಯಬೇಕು” ಎಂದು ಅವರು ಹೇಳಿದ್ದಾರೆ. ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರ ಪಡೆಯಲು ಮಹಾರಾಷ್ಟ್ರವನ್ನು ದುರ್ಬಲಗೊಳಿಸಲು ಬಯಸಿದೆ, ಆದರೆ ಆಡಳಿತಾರೂಢ ಮಹಾಯುತಿಯು ರಾಜ್ಯವನ್ನು ಬಲಪಡಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಯೋಜನೆಗಳ ಈ ರೀತಿಯ ತ್ವರಿತ ಅಭಿವೃದ್ಧಿಯನ್ನು ಮಹಾರಾಷ್ಟ್ರ ಹಿಂದೆಂದೂ ಕಂಡಿರಲಿಲ್ಲ ಎಂದು ಪ್ರತಿಪಾದಿಸಿದ ಮೋದಿ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರದ ವಿಷಯದಲ್ಲಿ ಅದೇ ವೇಗ ಇತ್ತು ಎಂದು ಹೇಳಿದ್ದಾರೆ. “ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷವಾಗಿದ್ದು, ಅದು ದ್ವೇಷವನ್ನು ಹರಡುವ ಕಾರ್ಖಾನೆಯಾಗಿದೆ. ಕಾಂಗ್ರೆಸ್‌ಗೆ ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಕಾಳಜಿಯಿಲ್ಲ, ಆದರೆ ನಾವು ಎರಡಕ್ಕೂ ಗಮನ ಹರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಡವರು, ರೈತರು, ಯುವಕರು ಮತ್ತು ಮಹಿಳೆಯರ ಅಭಿವೃದ್ಧಿಯೊಂದಿಗೆ ವಿಕ್ಷಿತ್ ಭಾರತ್ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುತ್ತದೆ ಮತ್ತು ಅವರನ್ನು ತನ್ನ ಮತಬ್ಯಾಂಕ್ ಆಗಿ ಪರಿವರ್ತಿಸುತ್ತದೆ. ಅದು ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಬಯಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಎಎಪಿ

ಪ್ರಧಾನಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು “ರಾಜಕೀಯ ಭಾಷಣ ಮಾಡಲು ಮತ್ತು ಪ್ರತಿಪಕ್ಷಗಳ ಮೇಲೆ ದಾಳಿ ಮಾಡಲು ಪ್ರಧಾನಿ ಕಚೇರಿಯು ಸರ್ಕಾರಿ ವೇದಿಕೆ ಮತ್ತು ಸರ್ಕಾರಿ ಕಾರ್ಯಕ್ರಮವನ್ನು ಏಕೆ ಬಳಸಬೇಕು?” ಎಂದು ಕೇಳಿದ್ದಾರೆ.

“ತೆರಿಗೆದಾರರ ಹಣವನ್ನು ರಾಜಕೀಯ ಭಾಷಣದಲ್ಲಿ ತೊಡಗಿಸಿಕೊಳ್ಳಲು ಬಳಸಬಾರದು. ಅದಕ್ಕಾಗಿ ಅವರು ಬಿಜೆಪಿಯ ವೇದಿಕೆಯನ್ನು ಬಳಸಬೇಕು” ಎಂದು ಪವನ್‌ ಖೇರಾ ಹೇಳಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ.ಗಿಂತ ಹೆಚ್ಚಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಆನ್‌ಲೈನ್ ಮೂಲಕ ಶಂಕುಸ್ಥಾಪನೆ ಮಾಡಿದ್ದಾರೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...