Homeಮುಖಪುಟಮೇಘಾಲಯದಲ್ಲಿ ಕಾಂಗ್ರೆಸ್‌ಗೆ ಮತ್ತೇ ಸಂಕಷ್ಟ; GHADC ನ ಎಲ್ಲಾ 11 ಚುನಾಯಿತ ಪ್ರತಿನಿಧಿಗಳು ಟಿಎಂಸಿಗೆ!

ಮೇಘಾಲಯದಲ್ಲಿ ಕಾಂಗ್ರೆಸ್‌ಗೆ ಮತ್ತೇ ಸಂಕಷ್ಟ; GHADC ನ ಎಲ್ಲಾ 11 ಚುನಾಯಿತ ಪ್ರತಿನಿಧಿಗಳು ಟಿಎಂಸಿಗೆ!

- Advertisement -
- Advertisement -

ಮೇಘಾಲಯದಲ್ಲಿ ಕಾಂಗ್ರೆಸ್‌ ಶಾಸಕರು, ಇತರ ಚುನಾಯಿತ ಸದಸ್ಯರು ಮತ್ತು ಕಾರ್ಯಕರ್ತರ ದಂಡೇ ತೃಣಮೂಲ ಕಾಂಗ್ರೆಸ್‌(TMC)ಗೆ ಪಕ್ಷಾಂತರ ಆಗುತ್ತಿರುವುದು ಮುಂದುವರೆದಿದೆ. ಗರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಕೌನ್ಸಿಲ್ (GHADC) ಯ ಎಲ್ಲಾ 11 ಚುನಾಯಿತ ಸದಸ್ಯರು ಗುರುವಾರ ಸಂಜೆ ಪಕ್ಷವನ್ನು ತೊರೆದು TMC ಸೇರಿದ್ದಾರೆ. ಈ ಮೂಲಕ ಪಕ್ಷದ ಭದ್ರಕೋಟೆ ಎಂದೇ ಬಣ್ಣಿಸಲಾಗುವ ಗರೋ ಹಿಲ್ಸ್‌ನಲ್ಲಿ ಕಾಂಗ್ರೆಸ್‌‌ ಭಾರಿ ಹಿನ್ನಡೆ ಅನುಭವಿಸಿದೆ.

ಮೇಘಾಲಯದ 17 ಕಾಂಗ್ರೆಸ್ ಶಾಸಕರಲ್ಲಿ 12 ಮಂದಿ ಶಾಸಕರು ಇತ್ತೀಚೆಗಷ್ಟೇ ಟಿಎಂಸಿ ಸೇರಿದ್ದರು. ಈ ಮೂಲಕ ಟಿಎಂಸಿಯು ನಾಟಕೀಯವಾಗಿ ರಾಜ್ಯದ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂ ಓದಿ:ಕಾಂಗ್ರೆಸ್‌ಗೆ ಆಘಾತ: ಮೇಘಾಲಯದ 12 ಶಾಸಕರು ಟಿಎಂಸಿಗೆ ಸೇರ್ಪಡೆ

ಈ ನಡುವೆ 400 ಯೂತ್ ಕಾಂಗ್ರೆಸ್ ಸದಸ್ಯರು ಮತ್ತು ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುವಿನ 600 ಮಂದಿ ಕಾರ್ಯಕರ್ತರು ಸಂಘಟನೆ ತೊರೆದಿದ್ದಾರೆ. ಅವರೆಲ್ಲರೂ ಟಿಎಂಸಿಗೆ ಸೇರುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

GHADC ಅನ್ನು 1952 ರಲ್ಲಿ ಮೇಘಾಲಯವು ಅಸ್ಸಾಂನ ಭಾಗವಾಗಿದ್ದಾಗ ರಚಿಸಲಾಗಿತ್ತು. GHADC ನಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಚುನಾಯಿತ ಪ್ರತಿನಿಧಿಯನ್ನು ಹೊಂದಿಲ್ಲದಿರುವುದು ಇದೇ ಮೊದಲ ಬಾರಿಯಾಗಿದೆ. ಕಳೆದ ಏಪ್ರಿಲ್‌ನಲ್ಲಿ ನಡೆದ GHADC ಚುನಾವಣೆಯಲ್ಲಿ 30 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇದರ ನಂತರ ಒಬ್ಬ ಚುನಾಯಿತ ಸದಸ್ಯ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಾದೇಶಿಕ ಯುನೈಟೆಡ್ ಡೆಮಾಕ್ರಟಿಕ್ ಪಕ್ಷಕ್ಕೆ ಪಕ್ಷಾಂತರಗೊಂಡಿದ್ದರು.

ಗುರುವಾರ ನಡೆದ ಕಾರ್ಯಕ್ರಮದಲ್ಲಿ ಟಿಎಂಸಿ 11 ಕೌನ್ಸಿಲ್ ಸದಸ್ಯರನ್ನು ಪಕ್ಷಕ್ಕೆ ಸ್ವಾಗತಿಸಿದೆ. ಪಕ್ಷದ ಹಲವಾರು ಶಾಸಕರು ಅದರಲ್ಲಿ ಉಪಸ್ಥಿತರಿದ್ದರು. ಎರಡು ದಿನಗಳ ಹಿಂದೆಯಷ್ಟೇ, ಟಿಎಂಸಿ ರಾಜ್ಯ ನಾಯಕ, ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಅವರು ಉಳಿದ ಐದು ಕಾಂಗ್ರೆಸ್ ಶಾಸಕರಿಗೂ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ:ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...