Homeಮುಖಪುಟಕಾಂಗ್ರೆಸ್‌ ಜನರನ್ನು ಪ್ರಚೋದಿಸುತ್ತಿದೆ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಟೀಕೆ

ಕಾಂಗ್ರೆಸ್‌ ಜನರನ್ನು ಪ್ರಚೋದಿಸುತ್ತಿದೆ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಟೀಕೆ

ನೀವು ನಮ್ಮ ಕಡೆಯೋ ಅಥವಾ ಅವರ ಕಡೆಯೋ" ಎಂಬಂತಹ ಕಾಮೆಂಟ್‌ಗಳ ಮೂಲಕ ಸೋನಿಯಾ ಗಾಂಧಿ ಜನರನ್ನು ಪ್ರಚೋದಿಸಿದ್ದಾರೆ ಎಂದು ರವಿಶಂಕರ್‌ ಪ್ರಸಾದ್‌ ಆರೋಪಿಸಿದರು.

- Advertisement -
- Advertisement -

ಬಿಜೆಪಿಗೆ ತನ್ನ ರಾಜಧರ್ಮ (ಕರ್ತವ್ಯ) ಹೇಗಿರಬೇಕು ಎಂಬುದನ್ನು ನೆನಪಿಸಿದ್ದಕ್ಕಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಕಾಂಗ್ರೆಸ್‌ ವಿರುದ್ಧ ಟೀಕೆಗಳ ಸುರಿಮಳೆಗೈದಿದ್ದಾರೆ.

ಇಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ಗುರುವಾರ ಭೇಟಿಯಾದ ಕಾಂಗ್ರೆಸ್ ನಿಯೋಗವು ರಾಜಧರ್ಮದ ಬಗ್ಗೆ ಇತರರಿಗೆ ನೆನಪಿಸಲು ಪ್ರಯತ್ನಿಸುತ್ತಿದೆ, ಆದರೆ ಆ ಪಕ್ಷವು ಹಲವು ಸಮಸ್ಯೆಗಳ ಬಗ್ಗೆ ತನ್ನ ನಿಲುವನ್ನು ಏಕೆ ಬದಲಾಯಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾನು ಸೋನಿಯಾ ಗಾಂಧಿಯನ್ನು ಕೇಳುತ್ತೇನೆ, ನಿಮ್ಮ ಹಿರಿಯ ನಾಯಕರು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದವರ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದರು? ಇಂದಿರಾಗಾಂಧಿ ಉಗಾಂಡಾದಿಂದ ಪಲಾಯನ ಮಾಡಿದ ಜನರಿಗೆ ಸಹಾಯ ನೀಡಿದ್ದರು. ರಾಜೀವ್ ಗಾಂಧಿ ಶ್ರೀಲಂಕಾದ ತಮಿಳರಿಗೆ ಸಹಾಯ ಮಾಡಿದ್ದರು. ಪೌರತ್ವ ನೀಡಬೇಕು ಎಂದು ಮನಮೋಹನ್ ಸಿಂಗ್ ಎಲ್.ಕೆ.ಅಡ್ವಾಣಿಯನ್ನು ಒತ್ತಾಯಿಸಿದ್ದರು. ಅಶೋಕ್ ಗೆಹ್ಲೋಟ್ ಯುಪಿಎ ಮತ್ತು ಎನ್‌ಡಿಎ ಎರಡರ ಗೃಹ ಸಚಿವರಿಗೆ ಪೌರತ್ವಕ್ಕಾಗಿ ಪತ್ರ ಬರೆದಿದ್ದರು … ಹಾಗೆಯೇ ತರುಣ್ ಗೊಗೊಯ್ ಕೂಡ ಇದ್ದಾರೆ … ಹಾಗಾದರೆ ನಿಮ್ಮ ಪಕ್ಷವನ್ನು ಆಚೆಗೆ-ಈಚೆಗೆ ಮಾಡುವ ಈ ರಾಜಧರ್ಮ ಯಾವುದು ಎಂದು ಅವರು ಪ್ರಶ್ನಿಸಿದ್ದಾರೆ.

ಸಿಎಎ ವಿರೋಧಿ ರ್‍ಯಾಲಿಯಲ್ಲಿ “ನೀವು ನಮ್ಮ ಕಡೆಯೋ ಅಥವಾ ಅವರ ಕಡೆಯೋ” ಎಂಬಂತಹ ಕಾಮೆಂಟ್‌ಗಳ ಮೂಲಕ ಸೋನಿಯಾ ಗಾಂಧಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಸಚಿವರು ಆರೋಪಿಸಿದರು.

“ಇಡೀ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲಾಯಿತು, ಆದರೂ ನೀವು ಜನರನ್ನು ಏಕೆ ಪ್ರಚೋದಿಸುತ್ತಿದ್ದೀರಿ” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಪಕ್ಷದ ದಾಖಲೆಯ ಬಗ್ಗೆ ಸಾಕಷ್ಟು ಹೇಳಬಹುದು. ಗಲಭೆಯನ್ನು ರಾಜಕೀಯಗೊಳಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಬಿಜೆಪಿ ಖಂಡಿಸುತ್ತದೆ. ಕಾಂಗ್ರೆಸ್ ಮೊದಲು ಕುಟುಂಬ, ಪಕ್ಷ ಮತ್ತು ನಂತರ ದೇಶಕ್ಕೆ ಆದ್ಯತೆ ನೀಡುತ್ತದೆ,” ಪ್ರಸಾದ್ ಹೇಳಿದರು.

ನಿನ್ನೆ ಕಾಂಗ್ರೆಸ್‌ ಪಕ್ಷದ ಮುಖಂಡರು “ಗೃಹ ಸಚಿವ ಅಮಿತ್ ಶಾ ತನ್ನ ಕರ್ತವ್ಯವನ್ನು ಮರೆತಿದ್ದಕ್ಕೆ ಅವರನ್ನು ವಜಾಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಕನಿಷ್ಠ 34 ಜೀವಗಳನ್ನು ಬಲಿ ತೆಗೆದುಕೊಂಡ ಈ ಘರ್ಷಣೆಗೆ ಮೂಕ ಪ್ರೇಕ್ಷಕರಾಗಿದೆ” ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಿಯೋಗದೊಂದಿಗೆ ರಾಷ್ಟ್ರಪತಿಯನ್ನು ಭೇಟಿಯಾಗಿ ರಾಜಧರ್ಮ ಪಾಲಿಸುವಂತೆ ನೆನಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...