Homeಮುಖಪುಟಕಾಂಗ್ರೆಸ್‌ ಜನರನ್ನು ಪ್ರಚೋದಿಸುತ್ತಿದೆ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಟೀಕೆ

ಕಾಂಗ್ರೆಸ್‌ ಜನರನ್ನು ಪ್ರಚೋದಿಸುತ್ತಿದೆ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಟೀಕೆ

ನೀವು ನಮ್ಮ ಕಡೆಯೋ ಅಥವಾ ಅವರ ಕಡೆಯೋ" ಎಂಬಂತಹ ಕಾಮೆಂಟ್‌ಗಳ ಮೂಲಕ ಸೋನಿಯಾ ಗಾಂಧಿ ಜನರನ್ನು ಪ್ರಚೋದಿಸಿದ್ದಾರೆ ಎಂದು ರವಿಶಂಕರ್‌ ಪ್ರಸಾದ್‌ ಆರೋಪಿಸಿದರು.

- Advertisement -
- Advertisement -

ಬಿಜೆಪಿಗೆ ತನ್ನ ರಾಜಧರ್ಮ (ಕರ್ತವ್ಯ) ಹೇಗಿರಬೇಕು ಎಂಬುದನ್ನು ನೆನಪಿಸಿದ್ದಕ್ಕಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಕಾಂಗ್ರೆಸ್‌ ವಿರುದ್ಧ ಟೀಕೆಗಳ ಸುರಿಮಳೆಗೈದಿದ್ದಾರೆ.

ಇಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ಗುರುವಾರ ಭೇಟಿಯಾದ ಕಾಂಗ್ರೆಸ್ ನಿಯೋಗವು ರಾಜಧರ್ಮದ ಬಗ್ಗೆ ಇತರರಿಗೆ ನೆನಪಿಸಲು ಪ್ರಯತ್ನಿಸುತ್ತಿದೆ, ಆದರೆ ಆ ಪಕ್ಷವು ಹಲವು ಸಮಸ್ಯೆಗಳ ಬಗ್ಗೆ ತನ್ನ ನಿಲುವನ್ನು ಏಕೆ ಬದಲಾಯಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾನು ಸೋನಿಯಾ ಗಾಂಧಿಯನ್ನು ಕೇಳುತ್ತೇನೆ, ನಿಮ್ಮ ಹಿರಿಯ ನಾಯಕರು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದವರ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದರು? ಇಂದಿರಾಗಾಂಧಿ ಉಗಾಂಡಾದಿಂದ ಪಲಾಯನ ಮಾಡಿದ ಜನರಿಗೆ ಸಹಾಯ ನೀಡಿದ್ದರು. ರಾಜೀವ್ ಗಾಂಧಿ ಶ್ರೀಲಂಕಾದ ತಮಿಳರಿಗೆ ಸಹಾಯ ಮಾಡಿದ್ದರು. ಪೌರತ್ವ ನೀಡಬೇಕು ಎಂದು ಮನಮೋಹನ್ ಸಿಂಗ್ ಎಲ್.ಕೆ.ಅಡ್ವಾಣಿಯನ್ನು ಒತ್ತಾಯಿಸಿದ್ದರು. ಅಶೋಕ್ ಗೆಹ್ಲೋಟ್ ಯುಪಿಎ ಮತ್ತು ಎನ್‌ಡಿಎ ಎರಡರ ಗೃಹ ಸಚಿವರಿಗೆ ಪೌರತ್ವಕ್ಕಾಗಿ ಪತ್ರ ಬರೆದಿದ್ದರು … ಹಾಗೆಯೇ ತರುಣ್ ಗೊಗೊಯ್ ಕೂಡ ಇದ್ದಾರೆ … ಹಾಗಾದರೆ ನಿಮ್ಮ ಪಕ್ಷವನ್ನು ಆಚೆಗೆ-ಈಚೆಗೆ ಮಾಡುವ ಈ ರಾಜಧರ್ಮ ಯಾವುದು ಎಂದು ಅವರು ಪ್ರಶ್ನಿಸಿದ್ದಾರೆ.

ಸಿಎಎ ವಿರೋಧಿ ರ್‍ಯಾಲಿಯಲ್ಲಿ “ನೀವು ನಮ್ಮ ಕಡೆಯೋ ಅಥವಾ ಅವರ ಕಡೆಯೋ” ಎಂಬಂತಹ ಕಾಮೆಂಟ್‌ಗಳ ಮೂಲಕ ಸೋನಿಯಾ ಗಾಂಧಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಸಚಿವರು ಆರೋಪಿಸಿದರು.

“ಇಡೀ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲಾಯಿತು, ಆದರೂ ನೀವು ಜನರನ್ನು ಏಕೆ ಪ್ರಚೋದಿಸುತ್ತಿದ್ದೀರಿ” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಪಕ್ಷದ ದಾಖಲೆಯ ಬಗ್ಗೆ ಸಾಕಷ್ಟು ಹೇಳಬಹುದು. ಗಲಭೆಯನ್ನು ರಾಜಕೀಯಗೊಳಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಬಿಜೆಪಿ ಖಂಡಿಸುತ್ತದೆ. ಕಾಂಗ್ರೆಸ್ ಮೊದಲು ಕುಟುಂಬ, ಪಕ್ಷ ಮತ್ತು ನಂತರ ದೇಶಕ್ಕೆ ಆದ್ಯತೆ ನೀಡುತ್ತದೆ,” ಪ್ರಸಾದ್ ಹೇಳಿದರು.

ನಿನ್ನೆ ಕಾಂಗ್ರೆಸ್‌ ಪಕ್ಷದ ಮುಖಂಡರು “ಗೃಹ ಸಚಿವ ಅಮಿತ್ ಶಾ ತನ್ನ ಕರ್ತವ್ಯವನ್ನು ಮರೆತಿದ್ದಕ್ಕೆ ಅವರನ್ನು ವಜಾಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಕನಿಷ್ಠ 34 ಜೀವಗಳನ್ನು ಬಲಿ ತೆಗೆದುಕೊಂಡ ಈ ಘರ್ಷಣೆಗೆ ಮೂಕ ಪ್ರೇಕ್ಷಕರಾಗಿದೆ” ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಿಯೋಗದೊಂದಿಗೆ ರಾಷ್ಟ್ರಪತಿಯನ್ನು ಭೇಟಿಯಾಗಿ ರಾಜಧರ್ಮ ಪಾಲಿಸುವಂತೆ ನೆನಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...