Homeಮುಖಪುಟಕಾಂಗ್ರೆಸ್‌ ಜನರನ್ನು ಪ್ರಚೋದಿಸುತ್ತಿದೆ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಟೀಕೆ

ಕಾಂಗ್ರೆಸ್‌ ಜನರನ್ನು ಪ್ರಚೋದಿಸುತ್ತಿದೆ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಟೀಕೆ

ನೀವು ನಮ್ಮ ಕಡೆಯೋ ಅಥವಾ ಅವರ ಕಡೆಯೋ" ಎಂಬಂತಹ ಕಾಮೆಂಟ್‌ಗಳ ಮೂಲಕ ಸೋನಿಯಾ ಗಾಂಧಿ ಜನರನ್ನು ಪ್ರಚೋದಿಸಿದ್ದಾರೆ ಎಂದು ರವಿಶಂಕರ್‌ ಪ್ರಸಾದ್‌ ಆರೋಪಿಸಿದರು.

- Advertisement -
- Advertisement -

ಬಿಜೆಪಿಗೆ ತನ್ನ ರಾಜಧರ್ಮ (ಕರ್ತವ್ಯ) ಹೇಗಿರಬೇಕು ಎಂಬುದನ್ನು ನೆನಪಿಸಿದ್ದಕ್ಕಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಕಾಂಗ್ರೆಸ್‌ ವಿರುದ್ಧ ಟೀಕೆಗಳ ಸುರಿಮಳೆಗೈದಿದ್ದಾರೆ.

ಇಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ಗುರುವಾರ ಭೇಟಿಯಾದ ಕಾಂಗ್ರೆಸ್ ನಿಯೋಗವು ರಾಜಧರ್ಮದ ಬಗ್ಗೆ ಇತರರಿಗೆ ನೆನಪಿಸಲು ಪ್ರಯತ್ನಿಸುತ್ತಿದೆ, ಆದರೆ ಆ ಪಕ್ಷವು ಹಲವು ಸಮಸ್ಯೆಗಳ ಬಗ್ಗೆ ತನ್ನ ನಿಲುವನ್ನು ಏಕೆ ಬದಲಾಯಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾನು ಸೋನಿಯಾ ಗಾಂಧಿಯನ್ನು ಕೇಳುತ್ತೇನೆ, ನಿಮ್ಮ ಹಿರಿಯ ನಾಯಕರು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದವರ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದರು? ಇಂದಿರಾಗಾಂಧಿ ಉಗಾಂಡಾದಿಂದ ಪಲಾಯನ ಮಾಡಿದ ಜನರಿಗೆ ಸಹಾಯ ನೀಡಿದ್ದರು. ರಾಜೀವ್ ಗಾಂಧಿ ಶ್ರೀಲಂಕಾದ ತಮಿಳರಿಗೆ ಸಹಾಯ ಮಾಡಿದ್ದರು. ಪೌರತ್ವ ನೀಡಬೇಕು ಎಂದು ಮನಮೋಹನ್ ಸಿಂಗ್ ಎಲ್.ಕೆ.ಅಡ್ವಾಣಿಯನ್ನು ಒತ್ತಾಯಿಸಿದ್ದರು. ಅಶೋಕ್ ಗೆಹ್ಲೋಟ್ ಯುಪಿಎ ಮತ್ತು ಎನ್‌ಡಿಎ ಎರಡರ ಗೃಹ ಸಚಿವರಿಗೆ ಪೌರತ್ವಕ್ಕಾಗಿ ಪತ್ರ ಬರೆದಿದ್ದರು … ಹಾಗೆಯೇ ತರುಣ್ ಗೊಗೊಯ್ ಕೂಡ ಇದ್ದಾರೆ … ಹಾಗಾದರೆ ನಿಮ್ಮ ಪಕ್ಷವನ್ನು ಆಚೆಗೆ-ಈಚೆಗೆ ಮಾಡುವ ಈ ರಾಜಧರ್ಮ ಯಾವುದು ಎಂದು ಅವರು ಪ್ರಶ್ನಿಸಿದ್ದಾರೆ.

ಸಿಎಎ ವಿರೋಧಿ ರ್‍ಯಾಲಿಯಲ್ಲಿ “ನೀವು ನಮ್ಮ ಕಡೆಯೋ ಅಥವಾ ಅವರ ಕಡೆಯೋ” ಎಂಬಂತಹ ಕಾಮೆಂಟ್‌ಗಳ ಮೂಲಕ ಸೋನಿಯಾ ಗಾಂಧಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಸಚಿವರು ಆರೋಪಿಸಿದರು.

“ಇಡೀ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲಾಯಿತು, ಆದರೂ ನೀವು ಜನರನ್ನು ಏಕೆ ಪ್ರಚೋದಿಸುತ್ತಿದ್ದೀರಿ” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಪಕ್ಷದ ದಾಖಲೆಯ ಬಗ್ಗೆ ಸಾಕಷ್ಟು ಹೇಳಬಹುದು. ಗಲಭೆಯನ್ನು ರಾಜಕೀಯಗೊಳಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಬಿಜೆಪಿ ಖಂಡಿಸುತ್ತದೆ. ಕಾಂಗ್ರೆಸ್ ಮೊದಲು ಕುಟುಂಬ, ಪಕ್ಷ ಮತ್ತು ನಂತರ ದೇಶಕ್ಕೆ ಆದ್ಯತೆ ನೀಡುತ್ತದೆ,” ಪ್ರಸಾದ್ ಹೇಳಿದರು.

ನಿನ್ನೆ ಕಾಂಗ್ರೆಸ್‌ ಪಕ್ಷದ ಮುಖಂಡರು “ಗೃಹ ಸಚಿವ ಅಮಿತ್ ಶಾ ತನ್ನ ಕರ್ತವ್ಯವನ್ನು ಮರೆತಿದ್ದಕ್ಕೆ ಅವರನ್ನು ವಜಾಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಕನಿಷ್ಠ 34 ಜೀವಗಳನ್ನು ಬಲಿ ತೆಗೆದುಕೊಂಡ ಈ ಘರ್ಷಣೆಗೆ ಮೂಕ ಪ್ರೇಕ್ಷಕರಾಗಿದೆ” ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಿಯೋಗದೊಂದಿಗೆ ರಾಷ್ಟ್ರಪತಿಯನ್ನು ಭೇಟಿಯಾಗಿ ರಾಜಧರ್ಮ ಪಾಲಿಸುವಂತೆ ನೆನಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...