Homeಮುಖಪುಟಇಂದೋರ್‌ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಹಿಂಪಡೆಯಲು ಬೆದರಿಕೆ, ಚಿತ್ರಹಿಂಸೆ ಕಾರಣ?

ಇಂದೋರ್‌ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಹಿಂಪಡೆಯಲು ಬೆದರಿಕೆ, ಚಿತ್ರಹಿಂಸೆ ಕಾರಣ?

- Advertisement -
- Advertisement -

ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದು, ಅವರನ್ನು ಬೆದರಿಸಿ ಚಿತ್ರಹಿಂಸೆ ನೀಡಿ ನಾಮಪತ್ರ ಹಿಂಪಡೆಯುವಂತೆ ಮಾಡಲಾಗಿದೆ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ ಜಿತು ಪಟ್ವಾರಿ  ಆರೋಪಿಸಿದ್ದಾರೆ.

ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ತಮ್ಮ ನಾಮಪತ್ರ ಹಿಂಪಡೆಯುವ ಮೂಲಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. ಮೂರು ದಿನಗಳ ಹಿಂದೆ, ಬಾಮ್ ವಿರುದ್ಧದ ಹಳೆಯ ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಸೆಕ್ಸನ್‌ನ್ನು ಸೇರಿಸಲಾಗಿದೆ. ಅವರಿಗೆ ಬೆದರಿಕೆ ಹಾಕಲಾಗಿದೆ. ಇಡೀ ರಾತ್ರಿ ಅವರಿಗೆ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಮತ್ತು ಇದರಿಂದಾಗಿ ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ಪಟ್ವಾರಿ ಆರೋಪಿಸಿದ್ದಾರೆ.

ಬಾಮ್ ಮತ್ತು ಅವರ ತಂದೆ ಕಾಂತಿಲಾಲ್ ಮತ್ತು ಇತರರ ವಿರುದ್ಧ ಅಕ್ಟೋಬರ್ 2007ರಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಇದೇ ಕೇಸ್‌ಗೆ ಸಂಬಂಧಿಸಿ ಓರ್ವ ಆರೋಪಿ ಪೈರಿಂಗ್‌ ಮಾಡಿದ್ದಾರೆ ಎಂದು 307 ಸೆಕ್ಸನ್‌ನ್ನು ಸೇರಿಸಲು ದೂರುದಾರೆ ಏಪ್ರಿಲ್ 5ರಂದು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ(ಜೆಎಂಎಫ್‌ಸಿ) ನ್ಯಾಯಾಲಯದ ಮೊರೆ ಹೋಗಿದ್ದರು. ಈ ಮನವಿಯನ್ನು ಏಪ್ರಿಲ್ 24ರಂದು ನ್ಯಾಯಾಲಯ ಅಂಗೀಕರಿಸಿದೆ ಮತ್ತು ಬಾಮ್ ಮತ್ತು ಅವರ ತಂದೆಯನ್ನು ಮೇ 10ರಂದು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಲು ತಿಳಿಸಲಾಗಿದೆ.

ಇದರಲ್ಲಿ ಏನು ಸಂದೇಶವಿದೆ? ಇಂದೋರ್‌ನ ಜನರಿಗೆ ತಮ್ಮ ಮತವನ್ನು ಚಲಾಯಿಸುವ ಹಕ್ಕು ಇಲ್ಲವೇ? ನಿಮಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ದಯವಿಟ್ಟು ಈ ಸರ್ವಾಧಿಕಾರದ ವಿರುದ್ಧ ಸೆಟೆದು ನಿಲ್ಲಿ. ಇದು ಕಾಂಗ್ರೆಸ್ ಮತ್ತು ಬಿಜೆಪಿ ವಿಷಯಕ್ಕಲ್ಲ. ಮತ ಚಲಾಯಿಸಲು ಮತ್ತು ಮೀಸಲಾತಿ ಮತ್ತು ಸಂವಿಧಾನವನ್ನು ಬಲವಾಗಿ ಇರಿಸಿಕೊಳ್ಳಲು ಬಯಸುವ ಯಾರಾದರೂ ಎದ್ದು ನಿಲ್ಲಬೇಕು ಎಂದು ಪಟ್ವಾರಿ ಹೇಳಿದ್ದಾರೆ.

ಗುಜರಾತ್‌ನ ಸೂರತ್‌ನಲ್ಲಿ ಇದೇ ರೀತಿಯ ಘಟನೆ ನಡೆದಿದೆ. ಸೂರತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ತನ್ನ ನಾಮಪತ್ರದಲ್ಲಿ ಮೂವರು ಅನುಮೋದಕರ ಸಹಿಯಲ್ಲಿ ಅಕ್ರಮ ಮಾಡಿದ್ದಾರೆ ಎಂದು ಅವರ ನಾಮಪತ್ರ ತಿರಸ್ಕರಿಸಲಾಗಿತ್ತು. ಇದರ ಬೆನ್ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಸಂಸದರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಬಿಜೆಪಿ ತನ್ನನ್ನು ತಾನೇ ಹೊಗಳಿಕೊಳ್ಳುತ್ತಿದೆ ಆದರೆ ತಮ್ಮ ಮತದ ಬಲದಿಂದ ಸಂಸದರನ್ನು ಆಯ್ಕೆ ಮಾಡಲು ಬಯಸಿದ ಸೂರತ್‌ನ ಜನರು ಮಾಡಿದ ತಪ್ಪೇನು? ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಬಿಜೆಪಿ ಸೇರುತ್ತಿರುವುದನ್ನು ಪ್ರಶ್ನಿಸಿದ ಪಟ್ವಾರಿ, ಆಡಳಿತ ವ್ಯವಸ್ಥೆಯು ಅಧಿಕೃತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...